ಅಗ್ನಿ ಫ್ರೆಂಡ್ಸ್ ಬದಿಯಡ್ಕದ ಆಂಬುಲೆನ್ಸ್ ಲೋಕಾರ್ಪಣೆ

ಬದಿಯಡ್ಕ: ಅಗ್ನಿ ಫ್ರೆಂಡ್ಸ್ ಬದಿಯಡ್ಕ ಇದರ ಆಶ್ರಯದಲ್ಲಿ ನೂತನ ಆಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ತಿರುವೋಣಂ ದಿನವಾದ ನಿನ್ನೆ ಬದಿಯಡ್ಕದಲ್ಲಿ ಜರಗಿತು. ಆರ್‌ಎಸ್‌ಎಸ್ ಬದಿಯಡ್ಕ ಖಂಡ ಸಂಘಚಾಲಕ್ ರಮೇಶ್ ಕಳೇರಿ ಉದ್ಘಾಟಿಸಿದರು. ಅಗ್ನಿ ಫ್ರೆಂಡ್ಸ್ ಅಧ್ಯಕ್ಷ ಅನಿಲ್ ಕುಟ್ಟನ್ ಅಧ್ಯಕ್ಷತೆ ವಹಿಸಿದರು. ಬಿಜೆಪಿ ಜಿಲ್ಲಾ ಸಮಿತಿ ಅಧ್ಯಕ್ಷೆ ಅಶ್ವಿನಿ ಎಂ.ಎಲ್, ಜಿಲ್ಲಾ ಕಾರ್ಯದರ್ಶಿ ಸುನಿಲ್ ಪಿ.ಆರ್, ಮಂಡಲ ಅಧ್ಯಕ್ಷ ಗೋಪಾಲಕೃಷ್ಣ ಎಂ, ಧಾರ್ಮಿಕ ಮುಂದಾಳು ಗೋಪಾಲಕೃಷ್ಣ ವಾಂತಿಚ್ಚಾಲು, ಹರೀಶ್ ನಾರಂಪಾಡಿ, ಹರೀಶ್ ಗೋಸಾಡ, ಹರಿಪ್ರಸಾದ್ ಪುತ್ರಕಳ, ವಿ. ಬಾಲಕೃಷ್ಣ ಶೆಟ್ಟಿ, ಗಂಗಾಧರ ಪಳ್ಳತ್ತಡ್ಕ, ದಾಮೋದರ ಟೈಲರ್ ಉಪಸ್ಥಿತರಿದ್ದರು. ಅವಿನಾಶ್ ವಿ. ರೈ ಸ್ವಾಗತಿಸಿ, ಅಗ್ನಿ ಝಾನ್ಸಿಕ್ಲಬ್ ಅಧ್ಯಕ್ಷೆ ಭುವನೇಶ್ವರಿ ವಂದಿಸಿದರು.

RELATED NEWS

You cannot copy contents of this page