ಕಾಸರಗೋಡು: ಆಲ್ ಕೇರಳ ಫೋಟೋಗ್ರಾಫರ್ಸ್ ಅಸೋಸಿಯೇ ಶನ್ ಕಾಸರಗೋಡು ವಲಯ ಸಮ್ಮೇಳನ ನಿನ್ನೆ ಜರಗಿದ್ದು, ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡ ಲಾಯಿತು. ಅಧ್ಯಕ್ಷರಾಗಿ ವಾಮನ್ ಕುಮಾರ್, ಉಪಾಧ್ಯಕ್ಷರಾಗಿ ಸುಬ್ರಹ್ಮಣ್ಯ, ಕಾರ್ಯದರ್ಶಿಯಾಗಿ ಸರಿತಾ, ಜೊತೆ ಕಾರ್ಯದರ್ಶಿಯಾಗಿ ಗಣೇಶ್ ರೈ, ಕೋಶಾಧಿಕಾರಿಯಾಗಿ ಅಜಿತ್ ಕುಮಾರ್ ಆಯ್ಕೆಯಾದರು. ಸಮ್ಮೇಳನವನ್ನು ಕಾಸರಗೋಡು ಎಕ್ಸೈಸ್ ಅಸಿಸ್ಟೆಂಟ್ ಕಮಿಶನರ್ ಅನ್ವರ್ ಸಾದಾತ್ ಉದ್ಘಾಟಿಸಿದರು. ಪ್ರತಿನಿಧಿ ಸಮ್ಮೇಳನವನ್ನು ಸಂಘಟನೆಯ ಜಿಲ್ಲಾಧ್ಯಕ್ಷ ಸುಕು ನೈರಿಯ ಉದ್ಘಾಟಿಸಿದರು.







