ಕಾಸರಗೋಡು: ಓಣಂ ಸ್ಪೆಷಲ್ ಡ್ರೈವ್ನಂತೆ ಕಾಸರಗೋಡು ಎಕ್ಸೈಸ್ ರೇಂಜ್ ಎಕ್ಸೈಸ್ ಇನ್ಸ್ಪೆಕ್ಟರ್ ಸೂರಜ್ ಎನ್ ನೇತೃತ್ವದ ಅಬಕಾರಿ ತಂಡ ಕೂಡ್ಲು ಮೀಪುಗುರಿಯಲ್ಲಿ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ 8.64 ಲೀಟರ್ ಕರ್ನಾಟಕ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಮೀಪುಗುರಿಯ ಹರೀಶ್ ಬಿ (50) ಎಂಬಾತನನ್ನು ಇದಕ್ಕೆ ಸಂಬಂಧಿಸಿ ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಪ್ರಿವೆಂಟೀವ್ ಆಫೀಸರ್ ರಂಜಿತ್ ಕೆ.ವಿ, ಸಿವಿಲ್ ಎಕ್ಸೈಸ್ ಆಫೀಸರ್ಗಳಾದ ಪ್ರಶಾಂತ್ ಕುಮಾರ್, ಅಮಲ್ಜಿತ್ ಎಂ.ಸಿ, ಸಂಶುದ್ದೀನ್ ವಿ.ಟಿ ಮತ್ತು ಅಶ್ವತಿ ವಿ ಎಂಬವರು ಈ ಕಾರ್ಯಾಚರಣೆ ನಡೆಸಿದ ಅಬಕಾರಿ ತಂಡದಲ್ಲಿ ಒಳಗೊಂಡಿದ್ದರು.
