ಪೈವಳಿಕೆ ಸಹಕಾರಿ ಬ್ಯಾಂಕ್‌ನ ಮಾಜಿ ಕಾರ್ಯದರ್ಶಿ ನಿಧನ

ಉಪ್ಪಳ: ಪೈವಳಿಕೆ ಸೇವಾ ಸಹಕಾರಿ ಬ್ಯಾಂಕ್‌ನ ಮಾಜಿ ಕಾರ್ಯದರ್ಶಿ ಪೈವಳಿಕೆ ನಿವಾಸಿ ಪರಮೇಶ್ವರ (71) ಅಲ್ಪ ಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಸ್ವ-ಗೃಹದಲ್ಲಿ ನಿಧನರಾದರು. ಇವರು ಸಿಪಿಐಯ ಸಕ್ರಿಯ ಕಾರ್ಯಕರ್ತ ನಾಗಿದ್ದರು. ಮೃತರು ಪತ್ನಿ ಸುಗುಣ, ಮಕ್ಕಳಾದ ನವೀನ್ ಕುಮಾರ್, ಪ್ರವೀಣ್ ಕುಮಾರ್, ಸೊಸೆಯಂದಿ ರಾದ ಸೌಮ್ಯ, ಶಿಲ್ಪ, ಸಹೋದರ-ಸಹೋದರಿಯರಾದ ಕೃಷ್ಣ, ರಮೇಶ, ರತ್ನ, ಭವಾನಿ, ಲಕ್ಷ್ಮಿ, ಸರಸ್ವತಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ದಿವಂಗತರಾದ ಕೋಚು ಸಾಲಿಯಾನ್-ದೇವಕಿ ದಂಪತಿಯ ಪುತ್ರನಾದ ಇವರ ಓರ್ವ ಸಹೋದರ ಅಶೋಕ …

ವ್ಯಾಪಾರಿ ಮನೆಯೊಳಗೆ ನೇಣು ಬಿಗಿದು ಸಾವು

ಕಾಸರಗೋಡು: ವ್ಯಾಪಾರಿಯೊ ಬ್ಬರು ಮನೆಯೊಳಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬೇಡಗದಲ್ಲಿ ಜೀನಸು ಅಂಗಡಿ ನಡೆಸುವ ವಲಿಯಡ್ಕಂನ ವಿನೀಶ್ ಬಾಬು (45) ಸಾವಿಗೀಡಾದ ವ್ಯಕ್ತಿ. ನಿನ್ನೆ ಮಧ್ಯಾಹ್ನ 1 ಗಂಟೆಗೆ ವಿನೀಶ್ ಬಾಬು ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಅದನ್ನು ಕಂಡ ತಾಯಿ ಬೊಬ್ಬೆ ಹಾಕಿದ್ದು, ಅಷ್ಟರಲ್ಲಿ ತಲುಪಿದ ನೆರೆಮನೆ ನಿವಾಸಿಗಳು ಬಾಬುರನ್ನು ಕೆಳಗಿಳಿಸಿ ಕೂಡಲೇ ಆಸ್ಪತ್ರೆಗೆ ತಲುಪಿ ಸಿದರೂ ಜೀವ  ರಕ್ಷಿಸಲಾಗಲಿಲ್ಲ. ಮೃತದೇಹದ ಮರಣೋತ್ತರ ಪರೀಕ್ಷೆ ಕಾಸರಗೋಡು ಜನರಲ್ ಆಸತ್ರೆಯಲ್ಲಿ ನಡೆಸಲಾಯಿತು. ಬೇಡಗಂನ …

ಕುಂಬಳೆ- ಕಂಚಿಕಟ್ಟೆ- ಕೋಟೆಕಾರು ನಾಯ್ಕಾಪು ರಸ್ತೆಯಲ್ಲಿ ಅಪಾಯ ಭೀತಿ

ಕುಂಬಳೆ: ಕುಂಬಳೆಯಿಂದ ಕಂಚಿಕಟ್ಟೆ ಕೋಟೆಕಾರು ಮೂಲಕ ನಾಯ್ಕಾಪುವಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಪಾಯಕಾರಿಯಾಗಿ ಪರಿಣಮಿಸಿದೆ. ದಿನನಿತ್ಯ ನೂರಾರು ಕುಟುಂಬಗಳು ಸಂಚರಿಸುವ ಈ ಪಿಡಬ್ಲ್ಯುಡಿ ರಸ್ತೆಯತ್ತ ಅಧಿಕಾರಿಗಳು ಮಾತ್ರ ಕಣ್ಣೆತ್ತಿಯೂ ನೋಡುತ್ತಿಲ್ಲ. ಅದರ ಪರಿಣಾಮವಾಗಿಯೇ ಈ ಸ್ಥಿತಿ ಉಂಟಾಗಿದೆ ಎಂದು ನಾಗರಿಕರು ತಿಳಿಸುತ್ತಿದ್ದಾರೆ. ಕಳೆದ ಬೇಸಿಗೆ ಕಾಲದಲ್ಲೇ ರಸ್ತೆಯ ವಿವಿಧೆಡೆ ಕುಸಿಯಲಾರಂಭಿಸಿತ್ತು. ಇತ್ತೀಚೆಗೆ ಸುರಿದ ಧಾರಾಕಾರ ಮಳೆಯ ನೀರಿನ ರಭಸಕ್ಕೆ ರಸ್ತೆ ಮತ್ತಷ್ಟು ಕುಸಿದಿದೆ. ಅಗಲ ಕಿರಿದಾದ ರಸ್ತೆಯ ಬದಿ ಕುಸಿಯತೊಡಗಿರುವುದು ವಾಹನ ಚಾಲಕರು ಹಾಗೂ ಪ್ರಯಾಣಿಕರಿಗೆ ತೀವ್ರ …

ಅಪಘಾತ: ಒಂದೇ ಕುಟುಂಬದ 9 ಮಂದಿ ಸಾವು

ನವದೆಹಲಿ:  ಮಧ್ಯಪ್ರದೇಶದ ದುಬೂವ ಜಿಲ್ಲೆಯ ಮೇಘ ನಗರದಲ್ಲಿ  ವ್ಯಾನ್‌ಗೆ ಟ್ರಕ್ ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಸಂಜೇಲಿ ರೈಲ್ವೇ ಕ್ರಾಸಿಂಗ್ ನಲ್ಲಿರುವ ಮೇಲ್ಸೇತುವೆ ದಾಟುವಾಗ ಸಿಮೆಂಟ್ ಹೇರಿಕೊಂಡು ಬರುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ವ್ಯಾನ್‌ಗೆ ಢಿಕ್ಕಿ ಹೊಡೆದಿದೆ. ವ್ಯಾನ್‌ನೊಳಗಿದ್ದ ೯ ಮಂದಿ ಘಟನಾ ಸ್ಥಳದಲ್ಲೇ ಸಾವನ್ನಪ್ಪಿ ದ್ದಾರೆ. ಇಬ್ಬರನ್ನು ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವನ್ಯ ಜೀವಿಗಳ ದಾಳಿ : ಜನರ ಜೀವ, ಸೊತ್ತಿಗೆ ಸಂರಕ್ಷಣೆ ಒದಗಿಸಬೇಕು-ಎಂ.ಎಲ್. ಅಶ್ವಿನಿ

ಅಡೂರು:  ವನ್ಯ ಜೀವಿಗಳ ಉಪಟಳ ತೀವ್ರಗೊಂಡ ದೇಲಂಪಾಡಿ ಪಂಚಾಯತ್‌ನ ಜನರ ಜೀವ ಹಾಗೂ ಸೊತ್ತಿಗೆ ಸಂರಕ್ಷಣೆ ಒದಗಿಸಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಒತ್ತಾಯಿಸಿದ್ದಾರೆ. ಬಿಜೆಪಿ ದೇಲಂಪಾಡಿ ಏರಿಯಾ ಸಮಿತಿ ನೇತೃತ್ವದಲ್ಲಿ ಪರಪ್ಪದ ಅರಣ್ಯ ಇಲಾಖೆ ಡಿಪ್ಪೋಗೆ ನಿನ್ನೆ ನಡೆಸಿದ ಮಾರ್ಚ್ ಹಾಗೂ ಧರಣಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ವನ್ಯ ಜೀವಿಗಳ ದಾಳಿಯಿಂದ ಕೃಷಿನಾಶ ಉಂಟಾದರೆ ಅತ್ಯಲ್ಪ ನಷ್ಟ ಪರಿಹಾರ ನೀಡಲಾಗುತ್ತಿದೆ. ಅದು ಕೂಡಾ ಲಭಿಸಲು ಹಲವು ಕಾಲ ಕಾಯಬೇಕಾಗಿ ಬರುತ್ತಿದೆ.  ಈ ಸಮಸ್ಯೆಗೆ ಪರಿಹಾರ ಕಾಣಬೇಕೆಂದು …

ರೇಶನ್ ಸಾಮಗ್ರಿಗಳನ್ನು ಎಫ್‌ಸಿಐಯಿಂದ ನೇರವಾಗಿ ಅಂಗಡಿಗಳಿಗೆ ತಲುಪಿಸಲು ಒತ್ತಾಯ

ಉಪ್ಪಳ: ಗುತ್ತಿಗೆದಾರರು ಯಥಾ ಸಮಯ ರೇಶನ್ ಸಾಮಗ್ರಿಗಳನ್ನು ವಿತರಿಸುವಲ್ಲಿ ಲೋಪವೆಸಗುತ್ತಿ ದ್ದಾರೆಂದೂ ಆದ್ದರಿಂದ ರೇಶನ್ ಸಾಮಗ್ರಿಗಳನ್ನು ಸಿವಿಲ್ ಸಪ್ಲೈ ಕಚೇರಿಯನ್ನು ಹೊರತುಪಡಿಸಿ ಎಫ್‌ಸಿಐಯಿಂದ ನೇರವಾಗಿ ರೇಶನ್ ಅಂಗಡಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕೆಂದು ಮಂಜೇಶ್ವರ ತಾಲೂಕು ರೇಶನ್ ಡೀಲರ್ಸ್ ಅಸೋಸಿಯೇಶನ್ ಸಮ್ಮೇಳನ ಒತ್ತಾಯಿಸಿದೆ. ವೇತನ ಪ್ಯಾಕೇಜ್ ಪರಿಷ್ಕರಿಸಬೇಕು, ಹಲವು ವರ್ಷಗಳಿಂದ ಅಂಗಡಿ ನಡೆಸುತ್ತಿ ರುವ ತಾತ್ಕಾಲಿಕ ರೇಶನ್ ಲೈಸನ್ಸ್ ಗಳನ್ನು ಖಾಯಂಗೊಳಿ ಸಬೇಕು, ವೇತನ ಯಥಾ ಸಮಯ ಲಭ್ಯಗೊಳಿ ಸಬೇಕು ಮುಂತಾದ ಬೇಡಿಕೆಗಳನ್ನು ಸಮ್ಮೇಳನ ಮುಂದಿರಿಸಿದೆ. ರಾಜ್ಯ ಕಾರ್ಯದರ್ಶಿ …

ರಾಷ್ಟ್ರೀಯ ಹೆದ್ದಾರಿ ಮೊಗ್ರಾಲ್ ಪೇಟೆಯಲ್ಲಿ  ಪಾದಚಾರಿಗಳಿಗೆ ನಡೆದು ಹೋಗಲು ದಾರಿಯಿಲ್ಲ: ಹೆಚ್ಚಿದ ಸಮಸ್ಯೆ

ಕುಂಬಳೆ: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಕಂಡುಬಂದ ಲೋಪದೋಷಗಳನ್ನು ತಿಳಿಸುವಾಗ  ಮೌನ ವಹಿಸುವ ಅಧಿಕಾರಿಗಳ ನಿಲುವಿನಿಂದಾಗಿ ಮೊಗ್ರಾಲ್‌ನಲ್ಲಿ ಪಾದಚಾರಿಗಳಿಗೆ  ಸಮಸ್ಯೆ ಇನ್ನಷ್ಟು ಹೆಚ್ಚಿದೆ. ಮೊದಲು ಮಾಡಬೇಕಾದ ಕಾಮಗಾರಿಗಳನ್ನು ಕೊನೆಗೆ ನಡೆಸುವ ಕ್ರಮದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆಗಾಲದಲ್ಲಿ ಭಾರೀ ಸಮಸ್ಯೆ ಹುಟ್ಟಿಕೊಳ್ಳುತ್ತದೆ. ಚರಂಡಿ ಹಾಗೂ ಕಾಲ್ನಡೆ  ದಾರಿಯ ಅಭಾವದಿಂದಾಗಿ ಹಲವು ಕಡೆಗಳಲ್ಲಿ ಜನರಿಗೆ ನಡೆದಾಡಲು ಸಮಸ್ಯೆ ಎದುರಾಗುತ್ತದೆ. ರಾಷ್ಟ್ರೀಯ ಹೆದ್ದಾರಿಯ ಸಮೀಪ ಪ್ರದೇಶಗಳು ತೀವ್ರ ಮಳೆಗೆ  ಜಲಾವೃತವಾಗುತ್ತಿವೆ.  ಮೊಗ್ರಾಲ್ ಲೀಗ್ ಕಚೇರಿಯಿಂದ ಮುಹಿಯುದ್ದೀನ್ ಜುಮಾ ಮಸೀದಿ ವರೆಗಿನ ೫೦೦ ಮೀಟರ್ …

ಕಾನ ಮಠ ಗುರು ಭವನಕ್ಕೆ ಶಂಕುಸ್ಥಾಪನೆ

ಕುಂಬಳೆ: ಕುಂಬಳೆ ಸೀಮೆಯ ನಾಲ್ಕು ಪ್ರಧಾನ ಹವ್ಯಕ ಮಠಗಳಲ್ಲಿ ಒಂದಾದ ಕಾನ ಶ್ರೀಶಂಕರನಾರಾಯಣ ಮಠ-ಶ್ರೀಧೂಮಾವತಿ ಅಮ್ಮನವರ ದೈವಕ್ಷೇತ್ರಕ್ಕೆ ಸಂಬAಧಿಸಿ ಮಠದ ಶ್ರೀಧೂಮಾವತೀ ದೈವದ ಭಂಡಾರ ಕೊಟ್ಟಗೆಯ ಮುಂಭಾಗದಲ್ಲಿ ಮೂಡ ಕೋಣಮ್ಮೆ ವೆಂಕಟರಮಣ ಭಟ್ಟರು ದಾನವಾಗಿ ನೀಡಿದ ಭೂಮಿಯಲ್ಲಿ ಶ್ರೀ ರಾಮಚಂದ್ರಾಪುರ ಸಂಸ್ಥಾನದವರ ಮೊಕ್ಕಾಂ ಮತ್ತು ಕಾನ ಮಠದ ಭಜಕರ ಉಪಯೋಗಕ್ಕಾಗಿ ಗುರುಭವನ ಸಹಿತವಾದ ಸಭಾಭವನದ ಕಾಮಗಾರಿ ಪ್ರಾರಂಭಕ್ಕೆ ಶಂಕುಸ್ಥಾಪನೆ ನಡೆಯಿತು.ಕ್ಷೇತ್ರಾಚಾರ್ಯ ಗುಣಾಜೆ ಭಟ್ ಅವರ ನೇತೃತ್ವದಲ್ಲಿ ಗಣಪತಿ ಪೂಜೆ, ವಾಸ್ತುಪೂಜೆ, ಶಂಕುಸ್ಥಾಪನೆ ನಡೆಯಿತು. ಮುಖ್ಯ ಅರ್ಚಕÀ ಕೇಶವ …

ಕ.ಸಾ.ಪದಿಂದ ಸೀತಾಂಗೋಳಿಯಲ್ಲಿ ಕೃಷ್ಣರಾಜ ಒಡೆಯರ 141ನೇ ಜನ್ಮದಿನಾಚರಣೆ

ಸೀತಾಂಗೋಳಿ: ಮೈಸೂರು ಸಂಸ್ಥಾನ ಸರ್ವಾಂಗೀಣ ಪ್ರಗತಿ ಹೊಂದಲು,ವಿಶ್ವಮಾನ್ಯವಾಗಲು ಕಾರಣೀಭೂತರಾದವರು ನಾಲ್ವಡಿ ಕೃಷ್ಣರಾಜ ಒಡೆಯರು. ಅವರು ಕರುನಾಡಿನ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ಧೀಮಂತ ವ್ಯಕ್ತಿ.ಒಡೆಯರ ಆಳ್ವಿಕೆಯು ಮೈಸೂರು ಸಂಸ್ಥಾನದ ಸುವರ್ಣ ಯುಗವಾಗಿತ್ತು ಎಂದು ನ್ಯಾಯವಾದಿ, ಸಾಹಿತಿ ಥೋಮಸ್ ಡಿ’ಸೋಜ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಸೀತಾಂಗೋಳಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ 141ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾಲ್ವಡಿ ಕೃಷ್ಣರಾಜ ಒಡೆಯರ ದೂರದೃಷ್ಟಿ, …

ರಾಷ್ಟ್ರೀಯ ಹೆದ್ದಾರಿ ಷಟ್ಪಥ ಯೋಜನೆ ಡಿಸೆಂಬರ್‌ನಲ್ಲಿ ಪೂರ್ತೀಕರಿಸಲಾಗುವುದು-ಕೇಂದ್ರ ಸಚಿವ ಗಡ್ಕರಿ

ತಿರುವನಂತಪುರ: ಕೇರಳದ ರಾಷ್ಟ್ರೀಯ ಹೆದ್ದಾರಿಯನ್ನು ಷಟ್ಪಥವಾಗಿ ಅಭಿವೃದ್ಧಿಗೊಳಿಸುವ ಯೋಜನೆಯನ್ನು ಈವರ್ಷ ಡಿಸೆಂಬ ರ್‌ನೊಳಗಾಗಿ ಪೂರ್ತೀಕರಿಸಲಾಗು ವುದೆಂದು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ರಾಜ್ಯ ಲೋಕೋಪಯೋಗಿ ಖಾತೆ ಸಚಿವರನ್ನೊಳಗೊಂಡ ನಿಯೋಗ ದಿಲ್ಲಿಯಲ್ಲಿ ನಿನ್ನೆ ಕೇಂದ್ರ ಭೂಸಾರಿಗೆ ಸಚಿವರನ್ನು ಭೇಟಿಯಾಗಿ ಕೇರಳದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆ ಬಗ್ಗೆ ನಡೆಸಿದ ಚರ್ಚೆಯ ವೇಳೆ ಕೇಂದ್ರ ಸಚಿವರು ಈ ಭರವಸ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆ ನಡೆಸುತ್ತಿರುವ ಕೆಲವು ರೀಚ್‌ಗಳಲ್ಲಿ ಸಮಸ್ಯೆಗಳು …