ಬಿಎಂಎಸ್ ನೇತಾರ ನ್ಯಾಯವಾದಿ ಸುಹಾಸ್ ಕೊಲೆ ಪ್ರಕರಣ: ಸ್ಥಾನಕ್ಕೆ ರಾಜೀನಾಮೆ ನೀಡಿದ ಸ್ಪೆಷಲ್ ಪ್ರೋಸಿಕ್ಯೂಟರ್
ಕಾಸರಗೋಡು: 2008 ಎಪ್ರಿಲ್ನಲ್ಲಿ ಇಡೀ ಕಾಸರಗೋಡು ಜಿಲ್ಲೆಯನ್ನೇ ನಡುಗಿಸಿದ ಗಲಭೆಯ ವೇಳೆ ಕಾಸರಗೋಡು ತಾಲೂಕು ಕಚೇರಿ ಪರಿಸರ ನಿವಾಸಿ ಹಾಗೂ ಬಿಎಂಎಸ್ ಜಿಲ್ಲಾ ಉಪಾಧ್ಯಕ್ಷರೂ ಆಗಿದ್ದ ನ್ಯಾಯವಾದಿ ಪಿ. ಸುಹಾಸ್ (38)ರ ಕೊಲೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿ ಸರಕಾರದ ಪರ ವಾದಿಸಲು ಸ್ಪೆಷಲ್ ಪ್ರೋಸಿಕ್ಯೂಟರ್ರನ್ನಾಗಿ ನೇಮಿಸಲಾಗಿದ್ದ ನ್ಯಾಯವಾದಿ ಜೋಸೆಫ್ ಥೋಮಸ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆರೋಗ್ಯಪರ ಕಾರಣದ ಹಿನ್ನೆಲೆಯಲ್ಲಿ ಅವರು ತಮ್ಮ ಸ್ಪೆಷಲ್ ಪ್ರೋಸಿಕ್ಯೂಟರ್ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಅವರ ಸಹೋದ್ಯೋಗಿಗಳು ತಿಳಿಸಿದ್ದಾರೆ. ಇದರಿಂದಾಗಿ …