ವಕ್ಫ್ ತಿದ್ದುಪಡಿ ಮಸೂದೆ ನಾಳೆ ಲೋಕಸಭೆಯಲ್ಲಿ ಮಂಡನೆ
ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣಾಗಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ನಾಳೆ ಲೋಕಸಭೆ ಯಲ್ಲಿ ಮಂಡಿಸಲು ಕೇಂದ್ರ ಸರಕಾರ ಸಜ್ಜಾಗಿದೆ. ದಿ ಕೆಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿಬಿಸಿಐ) ಈ ಮಸೂದೆಗೆ ಬೆಂಬಲ ಸೂಚಿಸಿದೆ. ಅದು ಕಾಂಗ್ರೆಸ್ನ್ನು ಗೊಂದಲಕ್ಕೆ ಸಿಲುಕುವಂತೆಯೂ ಮಾಡಿದೆ. ಕೇರಳದ ವಕ್ಫ್ ಮಂಡಳಿಯು ಮುನಂಬಂ ಪ್ರದೇಶದ ೬೦೦ಕ್ಕೂ ಹೆಚ್ಚು ಕುಟುಂ ಬಗಳ ಪಿತ್ರಾರ್ಜಿತ ಆಸ್ತಿಗಳನ್ನು ವಕ್ಫ್ ಭೂಮಿ ಎಂದು ಘೋಷಿಸಿದೆ. ಅದಕ್ಕೆ ಅದು ಅಸ್ತಿತ್ವದಲ್ಲಿರುವ ಕಾನೂನನ್ನು ಬಳಸಿಕೊಂಡಿದೆ. ಕಳೆದ ಮೂರು ವರ್ಷ ಗಳಿಂದ …