ಪೆರಿಂಗಡಿಯಲ್ಲಿ ಮುಂದುವರಿಯುತ್ತಿರುವ ಕಡಲ್ಕೊರೆತ: ಹಲವು ವಿದ್ಯುತ್ ಕಂಬಗಳು ಸಮುದ್ರ ಪಾಲು; ಸಂಕಷ್ಟದಲ್ಲಿ ಸ್ಥಳೀಯರು

ಉಪ್ಪಳ: ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯ ಪೆರಿಂಗಡಿಯಲ್ಲಿ ಕಡಲ್ಕೊರೆತ ತೀವ್ರ ರೀತಿಯಲ್ಲಿ ಮುಂದುವರಿಯುತ್ತಿದ್ದು, ನಿನ್ನೆ ಸುಮಾರು ೫ರಷ್ಟು ವಿದ್ಯುತ್ ಕಂಬಗಳು ಸಮುದ್ರ ಪಾಲಾಗಿವೆ. 20ರಷ್ಟು ಕಂಬಗಳು ಇನ್ನೂ ಅಪಾಯದಂಚಿನಲ್ಲಿದೆ. ಈ ಪರಿಸರದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿರುವ ಸುಮಾರು ೫೦ರಷ್ಟು ಮನೆಗಳು ಅಪಾಯದಂಚಿನಲ್ಲಿವೆ. ಈ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ವಿಚ್ಛೇದಿಸಲಾಗಿದೆ. ರಸ್ತೆ ಸಂಪೂರ್ಣ ಸಮುದ್ರ ಪಾಲಾಗಿದ್ದು, ಪೆರಿಂಗಡಿ ಮುಟ್ಟಂ ಪ್ರದೇಶಕ್ಕೆ ಸಂಪರ್ಕ ಕಡಿತಗೊಂಡಿದೆ. ನಿನ್ನೆ ಸಂಜೆ ಸ್ಥಳಕ್ಕೆ ಮಂಜೇಶ್ವರ ತಹಶೀಲ್ದಾರ್, ಮಂಗಲ್ಪಾಡಿ ಪಂಚಾಯತ್ ಅಧಿಕಾರಿಗಳು, ವಿದ್ಯುತ್ ಇಲಾಖೆ ಅಧಿಕಾರಿಗಳು …

ಶೂ ಧರಿಸಿದ ವಿದ್ಯಾರ್ಥಿಗೆ ಹಲ್ಲೆ: ನೀಲೇಶ್ವರದಲ್ಲಿ ಆರು ವಿದ್ಯಾರ್ಥಿಗಳ ವಿರುದ್ಧ ಕೇಸು

ಕಾಸರಗೋಡು: ಶಾಲೆಗೆ ಶೂ ಧರಿಸಿ ಬಂದರೆಂಬ ಕಾರಣದಿಂದ ವಿದ್ಯಾರ್ಥಿಯನ್ನು ತಂಡ ಸೇರಿ ಹಲ್ಲೆಗೈದ ಘಟನೆಯಲ್ಲಿ ಆರು ಸಹಪಾಠಿಗಳ ವಿರುದ್ಧ ನೀಲೇಶ್ವರ ಪೊಲೀಸರು ಕೇಸು ದಾಖಲಿಸಿದ್ದಾರೆ. ಕೋಟಪ್ಪುರಂ ಸಿ.ಎಚ್. ಸ್ಮಾರಕ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ಅಜಾನೂರು ಇಟ್ಟಮ್ಮಲ್ ನಿವಾಸಿ ಕೆ. ಮೊಹಮ್ಮದ್ ಶಹೀನ್ (16)ನಿಗೆ ಆಕ್ರಮಿಸಲಾಗಿತ್ತು. ಸೋಮವಾರ ಸಂಜೆ ಘಟನೆ ನಡೆದಿದೆ. ಶಾಲೆ ಬಿಟ್ಟ ಬಳಿಕ ನೀಲೇಶ್ವರ ಪೇಟೆಯಲ್ಲಿ ವಿದ್ಯಾರ್ಥಿಯನ್ನು ತಡೆದು ನಿಲ್ಲಿಸಿ ಆಕ್ರಮಣ ನಡೆಸಲಾಗಿತ್ತೆನ್ನಲಾಗಿದೆ.

ಬಿಎಂಎಸ್ ಕುದ್ರೆಪ್ಪಾಡಿ ಘಟಕದಿಂದ ಆಂಬುಲೆನ್ಸ್ ಹಸ್ತಾಂತರ

ಸೀತಾಂಗೋಳಿ: ಬಿಎಂಎಸ್ ಕುದ್ರೆಪ್ಪಾಡಿ ಘಟಕದ ಸಹಕಾರದಲ್ಲಿ ದಾನಿಗಳ ಬೆಂಬಲದಿಂದ ಖರೀದಿಸಿದ ಆಂಬುಲೆನ್ಸ್‌ನ್ನು ಕುದ್ರೆಪ್ಪಾಡಿ ಸ್ಕಂದ ಸೇವಾ ಟ್ರಸ್ಟ್‌ಗೆ ಹಸ್ತಾಂತರಿಸಲಾಯಿತು. ಇದರ ಲೋಕಾರ್ಪಣೆ ಕಾರ್ಯಕ್ರಮ ಕುದ್ರೆಪ್ಪಾಡಿ ರಚನಾ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಪರಿಸರದಲ್ಲಿ ಜರಗಿತು. ಸ್ಕಂದ ಸೇವಾ ಟ್ರಸ್ಟ್ ಅಧ್ಯಕ್ಷ ದಿನೇಶ್ ಬಂಬ್ರಾಣ ಅಧ್ಯಕ್ಷತೆ ವಹಿಸಿದರು. ಸೇವಾ ಭಾರತಿ ಜಿಲ್ಲಾಧ್ಯಕ್ಷ ಎಂ.ಟಿ. ದಿನೇಶ್ ಆಂಬುಲೆನ್ಸ್ ಲೋ ಕಾರ್ಪಣೆಗೈದರು. ಬಿಎಂಎಸ್ ಜಿಲ್ಲಾಧ್ಯಕ್ಷ ಉಪೇಂದ್ರ ಕೋಟೆಕಣಿ, ಆರ್‌ಎಸ್‌ಎಸ್ ಜಿಲ್ಲಾ ಸಂಪರ್ಕ್ ಪ್ರಮುಖ್ ಸುನಿಲ್ ಕುದ್ರೆಪ್ಪಾಡಿ, ಸ್ಕಂದ ಸೇವಾಟ್ರಸ್ಟ್ ಗೌರವಾಧ್ಯಕ್ಷ ಸುಕುಮಾರ್ …

ಶಾಲಾ ಕಟ್ಟಡಗಳ ಫಿಟ್‌ನೆಸ್ ಪರಿಶೀಲನೆಗೆ ವಿಶೇಷ ಸಮಿತಿ

ತಿರುವನಂತಪುರ: ರಾಜ್ಯದ ಶಾಲೆಗಳ ಫಿಟ್‌ನೆಸ್ (ದೃಢತೆ)ಗಳ ಬಗ್ಗೆ ಪರಿಶೀಲಿಸಲು ವಿಶೇಷ ಸಮಿತಿಗೆ ರೂಪು ನೀಡಲು ರಾಜ್ಯ ಸ್ಥಳೀಯಾಡಳಿತ ಇಲಾಖೆ ತೀರ್ಮಾನಿಸಿದೆ. ಶಾಲಾ ಕಟ್ಟಡಗಳ ಫಿಟ್‌ನೆಸ್‌ಗಳನ್ನು ನಿರ್ಣಯಿಸುವ ಹೊಸ ನಿರ್ದೇಶಗಳನ್ನು ಈ ಸಮಿತಿ ಸರಕಾರಕ್ಕೆ ಸಲ್ಲಿಸಲಿದೆ. ಈ ಕುರಿತಾದ ಶಿಫಾರಸ್ಸುಗಳನ್ನು ತಯಾರಿಸುವ ಹೊಣೆಗಾರಿಕೆಯನ್ನು ಸ್ಥಳೀಯಾಡಳಿತ ಇಲಾಖೆಯ ಚೀಫ್ ಇಂಜಿನಿಯರ್ ಕೆ.ಜಿ. ಸಂದೀಪ್‌ರಿಗೆ ವಹಿಸಿಕೊಡಲಾಗಿದೆ. ಇಲೆಕ್ಟ್ರಿಕಲ್ ಚೀಫ್ ಇನ್ಸ್‌ಪೆಕ್ಟರ್ ಶಾಲಾ ಮುಖ್ಯೋಪಾಧ್ಯಾಯ, ಅನುದಾನಿತ ಶಾಲೆಗಳ ಆಡಳಿತ ಸಮಿತಿ, ರಾಜ್ಯ ವಿದ್ಯುನ್ಮಂಡಳಿ ಮತ್ತು ಅಗ್ನಿಶಾಮಕ ದಳದ ಪ್ರತಿನಿಧಿಗಳನ್ನು ಈ ಸಮಿತಿಯಲ್ಲಿ ಒಳಪಡಿಸುವ …

ಪೆರಡಾಲ ಕ್ಷೇತ್ರದಲ್ಲಿ ಶಕ್ತಿ ಪಂಚಾಕ್ಷರಿ ಯಾಗ ಆ. 17ರಂದು: ಆಮಂತ್ರಣ ಪತ್ರಿಕೆ ಬಿಡುಗಡೆ

ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಅಂತಿಮ ಹಂತದಲ್ಲಿದ್ದು, ಈ ಹಿನ್ನೆಲೆಯಲ್ಲಿ ಲೋಕ ಕಲ್ಯಾಣಾರ್ಥ ಆಗಸ್ಟ್ 17ರಂದು ಶಕ್ತಿ ಪಂಚಾಕ್ಷರಿ ಯಾಗ ಕ್ಷೇತ್ರದಲ್ಲಿ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಗೊಳಿಸಲಾಯಿತು. ಆಡಳಿತ ಮೊಕ್ತೇಸರ ವಕೀಲ ವೆಂಕಟ್ರಮಣ ಭಟ್ ಚಂಬಲ್ತಿಮಾರು, ಮೊಕ್ತೇಸರ ಪಿ.ಜಿ. ಜಗನ್ನಾಥ ರೈ, ಸೀತಾರಾಮ ನವಕ್ಕಾನ, ಕೃಷ್ಣ ಬದಿಯಡ್ಕ, ಟಿ.ಕೆ. ನಾರಾಯಣ ಭಟ್ ಪಂಜಿತ್ತಡ್ಕ, ಪಿ.ಜಿ. ಚಂದ್ರಹಾಸ ರೈ, ಸೇವಾ ಸಮಿತಿ ಕಾರ್ಯದರ್ಶಿ ನಿರಂಜನ ರೈ ಪೆರಡಾಲ, ಜೀರ್ಣೋದ್ಧಾರ ಸಮಿತಿ ಕೋಶಾಧಿಕಾರಿ …

ತುಳು ಅಕಾಡೆಮಿಯಿಂದ ಪೈವಳಿಕೆಯಲ್ಲಿ ಆಟಿದ ಕೂಟ 10ರಂದು: ಸ್ವಾಗತ ಸಮಿತಿ ರೂಪೀಕರಣ

ಪೈವಳಿಕೆ: ಕೇರಳ ತುಳು ಅಕಾಡೆಮಿ ವತಿಯಿಂದ ತಾರೀಕು ಆ.10ರಂದು ಪೈವಳಿಕೆಯಲ್ಲಿ ಆಟಿ ತಿಂಗಳ ಪ್ರಯುಕ್ತ ಕಾರ್ಯಕ್ರಮವನ್ನು ನಡೆಸಲು ತೀರ್ಮಾನಿಸಲಾಗಿದೆ. ಇದರ ಯಶಸ್ವಿ ಗಾಗಿ ಪೈವಳಿಕೆ ಪಂ.ನ ಕುಟುಂಬಶ್ರೀ ಹಾಲ್‌ನಲ್ಲಿ ಸ್ವಾಗತ ಸಂಘ ರೂಪೀ ಕರಣ ಸಭೆ ನಡೆಯಿತು. ಅಕಾಡೆಮಿ ಅಧ್ಯಕ್ಷ ಕೆ. ಆರ್. ಜಯಾನಂದ ಅದ್ಯಕ್ಷತೆ ವಹಿಸಿದರು. ವಿವಿಧ ಸಮಿತಿಗಳನ್ನು ರಚಿಸಲಾಯಿತು. ಸ್ವಾಗತ ಸಂಘದ ಅಧ್ಯಕ್ಷರಾಗಿ ಪೈವಳಿಕೆ ಪಂ.ನ ಅಧ್ಯಕೆÀ್ಷ ಜಯಂತಿ ಕೆ., ಉಪಾಧ್ಯಕ್ಷರಾಗಿ ವಸಂತ ಮಾಸ್ತರ್, ಸುನೀತಾ ವಾಲ್ಟಿ ಡಿಸೋಜಾ, ಸುಜಾತಾ ಬಿ ರೈ, ಹುಸೇನ್ ಮಾಸ್ಟರ್, ಸಂಚಾಲಕರಾಗಿ …

ಪ್ರಯಾಣಿಕನನ್ನು ರಕ್ಷಿಸಿದ ಕಾಸರಗೋಡು ಪೊಲೀಸಗೆ ಅಭಿನಂದನೆ

ಕಣ್ಣೂರು: ರೈಲು ನಿಲ್ದಾಣ ಹಾಗೂ ರೈಲಿನ ಪ್ಲಾಟ್‌ಫಾರ್ಮ್ ಮಧ್ಯೆ ಮರಣವನ್ನು ಎದುರು ನೋಡುತ್ತಿದ್ದ ಪ್ರಯಾಣಿಕನನ್ನು ಬದುಕಿಗೆ ಕೈ ಹಿಡಿದು ಎತ್ತಿದ ಕಾಸರಗೋಡು ಪೊಲೀಸ್ ಅಧಿಕಾರಿಗೆ ಅಭಿನಂದನೆ ಪ್ರವಾಹ ಸೋಮವಾರ ಸಂಜೆ ೪.೪೫ಕ್ಕೆ ಘಟನೆ ನಡೆದಿದೆ. ಎಕ್ಸ್‌ಪ್ರೆಸ್ ಕಣ್ಣೂರು ರೈಲ್ವೇ ನಿಲ್ದಾಣದ 3ನೇ ಪ್ಲಾಟ್‌ಫಾರ್ಮ್‌ನಿಂದ ಹೊರಡಲು ಆರಂಭಿಸಿದಾಗ ರೈಲಿಗೆ ಓಡಿ ಹತ್ತಲೆತ್ನಿಸಿದ ಕನ್ಯಾಕುಮಾರಿ ನಿವಾಸಿ ಶೈನ್‌ರಿಗೆ ಅಪಾಯ ಸಂಭವಿಸಿತ್ತು. ಲಗೇಜ್‌ನ ಭಾರದಿಂದಾಗಿ ಬ್ಯಾಲೆನ್ಸ್ ತಪ್ಪಿ ಪ್ಲಾಟ್‌ಫಾರ್ಮ್ ಹಾಗೂ ರೈಲಿನ ಮಧ್ಯೆ ಇವರು ಬಿದ್ದರು. ಜನರು ಬೊಬ್ಬಿಡುತ್ತಿದ್ದ ಮಧ್ಯೆ ಪ್ಲಾಟ್‌ಫಾರ್ಮ್‌ನಲ್ಲಿದ್ದ …

ವಾರೀಸುದಾರರಿಲ್ಲದ ಮೃತದೇಹಕ್ಕೆ ಸೇವಾ ಭಾರತಿಯಿಂದ ಅಂತ್ಯಸಂಸ್ಕಾರ

ಉಪ್ಪಳ: ದೈಗೋಳಿ ಸತ್ಯಸಾಯಿ ಸೇವಾಶ್ರಮದಲ್ಲಿದ್ದ ರಾಮಕೃಷ್ಣ (72) ಇತ್ತೀಚೆಗೆ ನಿಧನ ಹೊಂದಿದ್ದು, ಇವರ ಮೃತದೇಹದ ಅಂತ್ಯ ಸಂಸ್ಕಾರವನ್ನು ನಿನ್ನೆ ಸೇವಾಭಾರತಿ ಕಾರ್ಯಕರ್ತರು ಚೆರುಗೋಳಿ ರುದ್ರಭೂಮಿಯಲ್ಲಿ   ನಡೆಸಿದರು. ಹಲವು ವರ್ಷಗಳ ಹಿಂದೆ ಸುಬ್ರಹ್ಮಣ್ಯ ಪರಿಸರದ ರಸ್ತೆಯಲ್ಲಿ ತಿರುಗಾಡುತ್ತಿದ್ದ ಇವರನ್ನು ದೈಗೋಳಿ ಸೇವಾಶ್ರಮಕ್ಕೆ ಕರೆತರಲಾಗಿತ್ತು.

ಬದಿಯಡ್ಕದಲ್ಲಿ ಬಂಟೆರೆ ಆಟಿದ ಕೂಟ ಆ. 3ರಂದು

ಬದಿಯಡ್ಕ: ಬಂಟರ ಸಂಘ ಬದಿಯಡ್ಕ ಇದರ ಆಶ್ರಯದಲ್ಲಿ ಬಂಟೆರೆ ಆಟಿದ ಕೂಟ ಆಗಸ್ಟ್ 3ರಂದು ಬೆಳಿಗ್ಗೆ 9ರಿಂದ ಇರ ಸಭಾ ಭವನದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ನಿರಂಜನ ರೈ ಪೆರಡಾಲ ಅಧ್ಯಕ್ಷತೆ ವಹಿಸುವರು. ಉದ್ಯಮಿ ಡಾ. ಸದಾಶಿವ ಶೆಟ್ಟಿ ಕುಳೂರು ಕನ್ಯಾನ ಉದ್ಘಾಟಿಸುವರು. ಕೆ.ಕೆ. ಶೆಟ್ಟಿ ಕುತ್ತಿಕಾರ್, ನ್ಯಾಯವಾದಿ ಸುಬ್ಬಯ್ಯ ರೈ, ಚಂದ್ರಹಾಸ ರೈ ಪೆರಡಾಲಗುತ್ತು, ಸಂತೋಷ್ ಶೆಟ್ಟಿ ಬಜದಗುತ್ತು ಸಹಿತ ಹಲವರು ಭಾಗವಹಿಸುವರು. ದೇವಿಪ್ರಸಾದ್ ಶೆಟ್ಟಿ ಬೆಜ್ಜ ಮಾತ ನಾಡುವರು. ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ, …

ಶಬರಿಮಲೆಗೆ ತೆರಳುತ್ತಿದ್ದ ಕಾರಿಗೆ ಬೆಂಕಿ: ಪ್ರಯಾಣಿಕರು ಪಾರು

ಪತ್ತನಂತಿಟ್ಟ: ಶಬರಿಮಲೆಗೆ ತೆರಳುತ್ತಿದ್ದವರು ಸಂಚರಿಸುತ್ತಿದ್ದ ಕಾರಿಗೆ ಬೆಂಕಿ ತಗಲಿದೆ. ಕಾರಿನಲ್ಲಿದ್ದ ಆರು ಮಂದಿ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಪಾಲಕ್ಕಾಡ್ ನಿವಾಸಿಗಳು ಸಂಚರಿಸುತ್ತಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗಲಿದೆ. ಪಂಪಾಕ್ಕಿರುವ ಪ್ರಯಾಣ ಮಧ್ಯೆ ಈ ದುರಂತ ಸಂಭವಿಸಿದೆ.  ಬೆಂಕಿ ತಗಲಿರುವುದು ತಿಳಿದ ಪ್ರಯಾಣಿಕರು ಕಾರನ್ನು ನಿಲ್ಲಿಸಿ ಇಳಿದು ಓಡಿದರು. ಕೂಡಲೇ ಮಾಹಿತಿ ತಿಳಿದು ಅಗ್ನಿಶಾಮಕ ದಳ ತಲುಪಿ ಬೆಂಕಿ ನಂದಿಸಿದೆ. ಇಂದು ಬೆಳಿಗ್ಗೆ ಶಬರಿಮಲೆಯಲ್ಲಿ ನಡೆದ ಹುತ್ತರಿ ಆಚರಣೆಯಲ್ಲಿ ಭಾಗವಹಿಸರು ಕಾರಿನಲ್ಲಿದ್ದವರು ತೆರಳುತ್ತಿದ್ದರು.