ರಾಷ್ಟ್ರದ ಧ್ವಜ ಹಾರಾಡಲು ಹುತಾತ್ಮ ಯೋಧರ ಉಸಿರೇ ಕಾರಣ- ಕೊಂಡೆವೂರು, ಕಾರ್ಗಿಲ್ ವಿಜಯ ದಿವಸ್ನಲ್ಲಿ ಅಜಿತ್ ಹನುಮಕ್ಕನವರ್
ಉಪ್ಪಳ: ಭಾರತದ ಸಾರ್ವ ಭೌಮತೆ, ಶಾಂತಿ, ಸಮಾಧಾನಗಳು ನೆಲೆಗೊಳ್ಳಲು, ಭಾರತೀಯ ತ್ರಿವರ್ಣ ಧ್ವಜ ಸ್ವಚ್ಛಂದವಾಗಿ ಹಾರಾಡಲು ವೀರ ಹುತಾತ್ಮ ಸೈನಿಕರ ಉಸಿರು ಕಾರಣ ಎಂದು ರಾಷ್ಟಿçÃಯ ಚಿಂತಕ ಅಜಿತ್ ಹನುಮಕ್ಕನವರ್ ಅಭಿಪ್ರಾಯ ಪಟ್ಟರು. ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಶನಿವಾರ ನಡೆದ ‘ಕಾರ್ಗಿಲ್ ವಿಜಯ್ ದಿವಸ್’ ಆಚ ರಣೆ ಸಮಾರಂಭದಲ್ಲಿ ದಿಕ್ಸೂಚಿ ಭಾಷಣಗೈದು ಅವರು ಮಾತನಾಡಿ ದರು. ಕಾರ್ಗಿಲ್ ಯುದ್ದದ ಮೊದಲ ಹುತಾತ್ಮ ಕ್ಯಾಪ್ಟನ್ ಸೌರಬ್ ಕಾಲಿಯಾ ರನ್ನು ಚಿತ್ರಹಿಂಸೆಗೊಳಪಡಿಸಿದ ಮೃತದೇಹವನ್ನು ಪಾಕಿಸ್ತಾನೀಯರು ಭಾರತಕ್ಕೆ ಹಿಂತಿರುಗಿಸಿದ್ದರು. ಆದರೆ …