ಕುತ್ತಿಕ್ಕೋಲ್ ನಿವಾಸಿಯ ನಿಗೂಢ ಸಾವು : ಮೃತದೇಹ ಪರಿಯಾರಂಗೆ; ಆರೋಪಿತ ಪಾಂಡಿ ನಿವಾಸಿ ಪೋಕ್ಸೋ ಪ್ರಕರಣದಲ್ಲಿ ಸೆರೆ
ಕಾಸರಗೋಡು: ಕುತ್ತಿಕ್ಕೋಲ್ ವೆಳ್ಳಾಲದ ನಾರಾಯಣ್ರ ಪುತ್ರ ರಾಜೇಶ್ (25)ರ ಮೃತದೇಹವನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡುಹೋಗಲಾಗಿದೆ. ಸಾವಿನಲ್ಲಿ ಸಂಬಂಧಿಕರು ಶಂಕೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮೃತದೇಹದಲ್ಲಿ ಗಾಯಗಳು ಕಂಡು ಬಂದಿರುವುದು ಶಂಕೆಗೆ ಕಾರಣವಾಗಿತ್ತು. ಪೋಸ್ಟ್ ಮಾರ್ಟಂ ನಡೆಸಿದರೆ ಮಾತ್ರವೇ ಸಾವಿನಲ್ಲಿನ ನಿಗೂಢತೆ ನೀಗಲಿದೆ ಎಂದು ಆದೂರು ಪೊಲೀಸರು ತಿಳಿಸಿದ್ದಾರೆ. ಆದಿತ್ಯವಾರ ಸಂಜೆ ಪಯಸ್ವಿನಿ ಹೊಳೆಯ ಅತ್ತನಾಡಿಯಲ್ಲಿ ರಾಜೇಶ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಶನಿವಾರ ಬೆಳಿಗ್ಗೆ ಫೋನ್ ಕಾಲ್ ಬಂದ ಹಿನ್ನೆಲೆಯಲ್ಲಿ ಹೊರ ಹೋಗಿದ್ದ …