ಲೋಕ ಹಿತದ ಕಾರ್ಯಕ್ಕಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು-ಕೊಂಡೆವೂರುಶ್ರೀ

ನಾರಂಪಾಡಿ:  ಪ್ರತಿಯೊಬ್ಬರೂ ಲೋಕಹಿತದ ಕಾರ್ಯಕ್ಕಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಹೇಳಿದರು. ಅವರು ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ನಡೆದ ನವೀಕರಣ ಪುನಃ ಪ್ರತಿಷ್ಠ ಅಷ್ಟಬಂಧ ಬ್ರಹ್ಮಕಲಶಾಭಿಷೇಕದಂಗವಾಗಿ ನಿನ್ನೆ ನಡೆದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಪ್ರತಿಯೊಬ್ಬರಲ್ಲೂ ಒಳ್ಳೆಯ ಭಾವನೆ ಜಾಗೃತಿಯಾಗಬೇಕು. ಇಂತಹ ಕಾರ್ಯ ಈ ಪರಿಸರದಲ್ಲಿ ನಡೆಯುತ್ತಿದೆ. ಭಗವಂತನ ಹೆಸರಲ್ಲಿ ಸಮಾಜದ ಹಿತ ಕಾರ್ಯವನ್ನು ಮಾಡಬೇಕು. ಒಳ್ಳೆಯ ಸಂಸ್ಕಾರ ಲಭಿಸುವ ಶ್ರದ್ಧಾ ಕೇಂದ್ರವಾಗಿ ಕ್ಷೇತ್ರವು  ನಮ್ಮ …

‘ಕಾಪಾ’ ಕ್ರಮ ಇನ್ನಷ್ಟು ಬಿಗಿಗೊಳಿಸಲು ತೀರ್ಮಾನ

ಕಾಸರಗೋಡು: ಕೇರಳ ಆಂಟಿ ಸೋಶ್ಯಲ್ ಆಕ್ಟಿವೇಟೀಸ್ ಪ್ರಿವೆಶ್ಶನ್ ಆಕ್ಟ್ (ಕಾಪಾ) ಕಾನೂನು ಅವಲಂ ಬಿತ ಕ್ರಮಗಳನ್ನು  ಇನ್ನಷ್ಟು ಬಿಗಿಗೊಳಿ ಸಲು ರಾಜ್ಯ ಪೊಲೀಸ್ ಇಲಾಖೆ ಮುಂದಾಗಿದೆ. ಇದಕ್ಕೆ ಹೊಂದಿಕೊಂ ಡಿರುವ ಮುಂದಿನ ಕ್ರಮಗಳನ್ನು ಪೊಲೀಸರು ಇನ್ನಷ್ಟು ಬಿಗಿ ಗೊಳಿಸಿದ್ದಾರೆ. ಕಾಪಾ ಕಾನೂನು ಪ್ರಕಾರದ ಕೇಸಿನಲ್ಲಿ ಸಿಲುಕಿ ನಿಗದಿತ ಸಮಯ ದೊಳಗಾಗಿ ತಮ್ಮ ಊರಿಗೆ ಪ್ರವೇಶಿ ಬಾರದೆಂಬ ನಿಬಂಧನೆ ಪ್ರಕಾರ ಊರಿನಿಂದ ಹೊರಹಾಕಲ್ಪಡುವ ಕಾಪಾ ಆರೋಪಿಗಳು, ಆ ನಿಬಂಧನೆಯನ್ನು ಉಲ್ಲಂಘಿಸಿ ಊರಿಗೆ ಹಿಂತಿರುಗಿದ್ದಲ್ಲಿ  ಅವರನ್ನು ಇನ್ನು ಪೊಲೀಸರು ತಕ್ಷಣ …

ಶಿಕ್ಷಣ ಸಚಿವ ಶಿವನ್ ಕುಟ್ಟಿ 14, 15ರಂದು ಜಿಲ್ಲೆಯಲ್ಲಿ

ಕಾಸರಗೋಡು: ರಾಜ್ಯ ಶಿಕ್ಷಣ ಸಚಿವ ವಿ. ಶಿವನ್ ಕುಟ್ಟಿ ಈ ತಿಂಗಳ 14ರಂದು ಕಾಸರಗೋಡಿಗೆ ಆಗಮಿಸಿ ಜಿಲ್ಲೆಯಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಫೆ.14ರಂದು ಬೆಳಿಗ್ಗೆ 9.15ಕ್ಕೆ ಮಂಜೇಶ್ವರ ಕುಂಜತ್ತೂರು ಜಿಎಲ್ಪಿ ಶಾಲೆಗಾಗಿ ಕಣ್ವತೀರ್ಥದಲ್ಲಿ ನಿರ್ಮಿಸಲಾಗಿರುವ ಹೊಸ ಕಟ್ಟಡದ ಉದ್ಘಾಟನೆಯನ್ನು ಸಚಿವರು ನೆರವೇರಿಸುವರು. 10.15ಕ್ಕೆ ಉಪ್ಪಳ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಹೊಸ ಕಟ್ಟಡ, 11.15ಕ್ಕೆ ಬಂಬ್ರಾಣ ಜಿಎಲ್ಸಿ ಶಾಲೆಯ ಕಟ್ಟಡಗಳನ್ನು ಸಚಿವರು ಉದ್ಘಾಟಿಸುವರು.ಮಧ್ಯಾಹ್ನ 2 ಗಂಟೆಗೆ ಮೊಗ್ರಾಲ್ ಕಂಬಾರ್ ಸರಕಾರಿ ಎಲ್ಪಿ ಶಾಲೆಯ ವಾರ್ಷಿಕೋತ್ಸವವನ್ನು ಉದ್ಘಾಟಿಸುವರು. …

ಏತಡ್ಕ ಶ್ರೀ ಸದಾಶಿವ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಇಂದಿನಿಂದ

ಬದಿಯಡ್ಕ: ಏತಡ್ಕ ಶ್ರೀ ಸದಾಶಿವ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲ ಶೋತ್ಸವ ಇಂದು ಆರಂಭವಾಯಿತು. ಬೆಳಿಗ್ಗೆ ಭಜನಾರ್ಪಣಮ್ ಉದ್ಘಾಟನೆಗೊಳ್ಳಲಿದೆ.  ರಾಮಕೃಷ್ಣ ಕಾಟುಕುಕ್ಕೆ ದೀಪ ಬೆಳಗಿಸಿ ಭಜನೆಗೆ ಚಾಲನೆ ನೀಡಿದರು. ವಿವಿಧ  ತಂಡಗಳಿಂದ ಭಜನೆ ನಡೆಯಿತು. ಹಸಿರುವಾಣಿ ಏತಡ್ಕ ಪೇಟೆಯಿಂದ ಹೊರೆಕಾಣಿಕೆ ಮೆರವಣಿಗೆ, ಉಗ್ರಾಣ ಮುಹೂರ್ತ ನಡೆಯಿತು.  ಸಂಜೆ 4.30ಕ್ಕೆ ಎಡನೀರು ಮಠಾಧೀಶ  ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಇವರಿಗೆ ಪೂರ್ಣಕುಂಭ ಸ್ವಾಗತ, ಶೋಭಾಯಾತ್ರೆ ನಡೆಯಲಿದೆ.  ಕೆ.ಕೆ. ಶೆಟ್ಟಿ, ವಸಂತ ಪೈ …

ಮತ್ತೆ ಕಾಡಾನೆ ಆಕ್ರಮಣ:ವಯನಾಡಿನಲ್ಲಿ ಯುವಕನಿಗೆ ಜೀವಹಾನಿ

ಕಲ್ಪೆಟ್ಟ: ವಯನಾಡಿನಲ್ಲಿ ಮತ್ತೆ ಕಾಡಾನೆ ಆಕ್ರಮಣ ನಡೆಸಿದೆ. ಇದರಲ್ಲಿ ಯುವಕ ದಾರುಣವಾಗಿ ಮೃತಪಟ್ಟಿದ್ದಾರೆ. ಸುಲ್ತಾನ್ ಬತ್ತೇರಿ ನೂಲ್ಪುಳ ನಿವಾಸಿ ಮನು (25) ಮೃತಪಟ್ಟ ಯುವಕ. ನಿನ್ನೆ ರಾತ್ರಿ ಘಟನೆ ನಡೆದಿದೆ. ಅಂಗಡಿಗೆ ಪತ್ನಿ ಸಹಿತ ತೆರಳಿ ಹಿಂತಿರುಗುತ್ತಿದ್ದ ಮಧ್ಯೆ ಬಯಲು ಪ್ರದೇಶದಲ್ಲಿ ಕಾಡಾನೆ ಆಕ್ರಮಿಸಿದೆ. ಇವರಿಬ್ಬರು ನಾಪತ್ತೆಯಾದ ಹಿನ್ನೆಲೆಯಲ್ಲಿ ಹುಡುಕಾಟ ಆರಂಭಿಸಲಾಗಿತ್ತು. ಇಂದು ಬೆಳಿಗ್ಗೆ ಮನುರ ಮೃತದೇಹ ಕಂಡು ಬಂದಿದೆ. ಬಳಿಕ ಪತ್ನಿಗಾಗಿ ಹುಡುಕಾಡಿದ ಪೊಲೀಸರು ಆಕೆಯನ್ನು ಪತ್ತೆಹಚ್ಚಿ ಠಾಣೆಗೆ ತಲುಪಿಸಿದ್ದಾರೆ. ಮಾಹಿತಿ ತಿಳಿದು ಅರಣ್ಯ ಇಲಾಖೆ …

ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣದಲ್ಲಿ ನಾಲ್ಕು ಪಟ್ಟು ಏರಿಕೆ

ಕಾಸರಗೋಡು: ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ರಾಜ್ಯ ಆರ್ಥಿಕ ಅವಲೋಕನಾ ಸಭೆಯ ವರದಿಯಲ್ಲಿ ಸೂಚಿಸಲಾಗಿದೆ. 2023-24ನೇ ವರ್ಷದಲ್ಲಿ ಸೈಬರ್ ಅಪರಾಧ ಕೃತ್ಯಗಳಿಗೆ ಸಂಬAಧಿಸಿ ರಾಜ್ಯದಲ್ಲಿ 3,38,2 ಪ್ರಕರಣಗಳು ರಾಜ್ಯದ ಸೈಬರ್ ಸೆಲ್ನಲ್ಲಿ ದಾಖಲು ಗೊಂಡಿವೆ. ಈ ಹಿಂದಿನ ವರ್ಷಗಳೊಂದಿಗೆ ಇದನ್ನು ಹೋಲಿಸಿ ನೋಡಿದಲ್ಲಿ ಇದು ನಾಲ್ಕು ಪಟ್ಟು ಹೆಚ್ಚಾಗಿದೆ.2023-24ನೇ ವರ್ಷದಲ್ಲಿ ಆನ್ಲೈನ್ ಮೂಲಕ ಹಣ ವಂಚನೆಗೆ ಸಂಬAಧಿಸಿ ಮಾತ್ರವಾಗಿ 2,772 ಪ್ರಕರಣಗಳು ರಾಜ್ಯದಲ್ಲಿ ದಾಖಲುಗೊಂಡಿದೆ. ಆ ಮೂಲಕ ಇಂತಹ ಸೈಬರ್ …

ನೆಟ್ಟಣಿಗೆ ಕ್ಷೇತ್ರದ ಜಾತ್ರಾ ಮಹೋತ್ಸವ ನಾಳೆಯಿಂದ: ಅನ್ನಛತ್ರ ಲೋಕಾರ್ಪಣೆ

ಬೆಳ್ಳೂರು: ನೆಟ್ಟಣಿಗೆ ಮಹ ತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ಜಾತ್ರಾ ಮಹೋತ್ಸವ ನಾಳೆಯಿಂದ 16ರ ವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ನಾಳೆ ಬೆಳಿಗ್ಗೆ 9.15ರಿಂದ ಧ್ವಜಾ ರೋಹಣ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ೮ಕ್ಕೆ ದೇವರ ಶೃಂಗಾರ ಉತ್ಸವಬಲಿ, 13ರಂದು ಬೆಳಿಗ್ಗೆ 7ಕ್ಕೆ ಶ್ರೀ ದೇವರ ಉತ್ಸವಬಲಿ, ತುಲಾಭಾರಸೇವೆ, ರಾತ್ರಿ ೮ಕ್ಕೆ ಶ್ರೀ ದೇವರ ಶೃಂಗಾರ ಉತ್ಸವಬಲಿ, 14ರಂದು ಬೆಳಿಗ್ಗೆ  7ಕ್ಕೆ ಶ್ರೀ ದೇವರ ಉತ್ಸವಬಲಿ, ತುಲಾಭಾರಸೇವೆ, ರಾತ್ರಿ ೮ಕ್ಕೆ ಶ್ರೀ ದೇವರ ನಡು ದೀಪೋತ್ಸವ ನಡೆಯಲಿದೆ. …

ತಾಯಿಯೊಂದಿಗೆ ಜಗಳ: ಪ್ರಶ್ನಿಸಿದ ತಮ್ಮನಿಗೆ ಅಣ್ಣನಿಂದ ಇರಿತ ; ಆರೋಪಿ ಸೆರೆ

ಕುಂಬಳೆ: ತಾಯಿಯೊಂದಿಗೆ ಜಗಳಕ್ಕಿಳಿದಿದ್ದನ್ನು ಪ್ರಶ್ನಿಸಿದ ದ್ವೇಷದಿಂದ ತಮ್ಮನಿಗೆ ಕತ್ತರಿಯಿಂದ ಇರಿದು ಕೊಲೆಗೈಯ್ಯಲು ಯತ್ನಿಸಿದ ಅಣ್ಣನನ್ನು ಪೊಲೀಸರು ಬಂಧಿಸಿದ್ದಾರೆ. ಕಿದೂರು ಪಂಜಿಕ್ಕಲ್ ನಿವಾಸಿ ಜೋಸೆಫ್ (31) ಎಂಬಾತನ್ನು ಕುಂ ಬಳೆ ಠಾಣೆ ಇನ್‌ಸ್ಪೆಕ್ಟರ್ ಕೆ.ಪಿ. ವಿನೋ ದ್ ಕುಮಾರ್, ಎಸ್.ಐ ರಾಜೇಶ್ ಒಳಗೊಂಡ ತಂಡ ಬಂಧಿಸಿದೆ.  ಜೋಸೆಫ್‌ನ ಸಹೋದರ ಜೋಯ್ ಕಿಶೋರ್ (26) ನೀಡಿದ ದೂರಿನ ಮೇರೆಗೆ ಪೊಲೀಸರು ಕೇಸು ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ವೆಲ್ಡಿಂಗ್ ಕೆಲಸಕ್ಕೆ ತೆರಳಿ ಮರಳಿ ಮನೆಗೆ ಬಂದಾಗ ಸಹೋದರ ಜೋಸೆಫ್ ತಾಯಿ ಯೊಂದಿಗೆ …

ಅರ್ಧ ಬೆಲೆಗೆ ವಾಹನ, ಇತರ ಸಾಮಗ್ರಿಗಳ ಭರವಸೆ: ಕುಂಬ್ಡಾಜೆ ಸಹಿತ ಜಿಲ್ಲೆಯಿಂದಲೂ ಹಲವರಿಂದ ಹಣ ಪಡೆದು ವಂಚನೆ

ಕಾಸರಗೋಡು: ದ್ವಿಚಕ್ರ ವಾಹನಗಳು, ಲ್ಯಾಪ್‌ಟಾಪ್, ಹೊಲಿಗೆ ಯಂತ್ರ ಎಂಬಿವುಗಳನ್ನು ಅರ್ಧ ಬೆಲೆಗೆ ನೀಡುವುದಾಗಿ ತಿಳಿಸಿ ತೊಡುಪುಳ ನಿವಾಸಿ ಅನಂತುಕೃಷ್ಣ ಹಾಗೂ ತಂಡ ಕಾಸರಗೋಡು ಜಿಲ್ಲೆಯ ವಿವಿಧೆಡೆಗಳಿಂದಲೂ ಒಂದು ಕೋಟಿ ರೂಪಾಯಿಗಿಂತ ಹೆಚ್ಚು ಮೊತ್ತ ಲಪಟಾಯಿಸಿರುವುದಾಗಿ ದೂರಲಾಗಿದೆ. ಸಾಯಿಗ್ರಾಮಂ ಗ್ಲೋಬಲ್ ಟ್ರಸ್ಟ್ ಡೈರೆಕ್ಟರ್ ಅನಂತಕುಮಾರ್  ಮುಖಾಂತರ ಅನಂತಕೃಷ್ಣನನ್ನು ಪರಿಚಯಗೊಂಡ ಕಾಸರಗೋಡು ಜಿಲ್ಲೆಯ ಮೂರು ಸಾಮಾಜಿಕ ಸಂಘಟನೆಗಳು ವಂಚ ಗೀಡಾಗಿವೆ. ಕುಂಬ್ಡಾಜೆಯ ಮೈತ್ರಿ ವಾಚನಾಲಯ, ಕಾಞಂಗಾಡ್ ಮೋನಾಚದ ಸೋಶ್ಟೊ ಎಕಾನೋಮಿಕ್ ಡೆವಲಪ್‌ಮೆಂಟ್ ಸೊಸೈಟಿ, ಕಾಸರಗೋಡು ನಗರ ಕೇಂದ್ರೀಕರಿಸಿ ಕಾರ್ಯಾಚರಿಸುವ ಒಂದು …

ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಕಲಬೆರಕೆ: ನಾಲ್ವರ ಬಂಧನ

ತಿರುವನಂತಪುರ: ಹಿಂದೂಗಳ ಪವಿತ್ರ ಧಾರ್ಮಿಕ ಕೇಂದ್ರಗಳಲ್ಲೊಂ ದಾಗಿರುವ ತಿರುಪತಿ (ತಿರುಮಲ) ಕ್ಷೇತ್ರದಲ್ಲಿ  ಲಡ್ಡು ಪ್ರಸಾದ ತಯಾರಿಸಲು ಬಳಸುವ ಹಸುವಿನ ತುಪ್ಪದಲ್ಲಿ ಇತರ ಪ್ರಾಣಿಗಳ ಕೊಬ್ಬು ಕಲಬೆರಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖಾ ತಂಡ ನಾಲ್ವರನ್ನು ಬಂಧಿಸಿದೆ. ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕರಾದ ವಿಪಿನ್ ಜೈನ್ ಮತ್ತು  ಪೊಮಿನ್ ಜೈನ್ (ರೂರ್ಕಿ, ಉತ್ತರಾಖಂಡ್), ವೈಷ್ಣವಿ ಡೈರಿಯ (ಪೂನಂಬಾಕ್ಕ), ಸಿಇಒ ಅಪೂರ್ವ ವಿನಯಾ ಕಾಂತ್ ಚಾವ್ಡಾ ಮತ್ತು ಎ.ಆರ್ ಡೈರಿ (ದುಂಡಿಗಲ್) ಮೆನೇಜಿಂಗ್ ಡೈರೆಕ್ಟರ್  ರಾಜು ಶೇಖರನ್ …