ವರ್ಕಾಡಿ ಬಿಜೆಪಿ ನೂತನ ಕಾರ್ಯಾಲಯ ಉದ್ಘಾಟನೆ
ವರ್ಕಾಡಿ: ಸುಂಕದಕಟ್ಟೆಯಲ್ಲಿ ನೂತನವಾಗಿ ಆರಂಭಗೊಂಡ ಬಿಜೆಪಿ ಕಾರ್ಯಾಲಯವನ್ನು ಜಿಲ್ಲಾ ಮಾಜಿ ಅಧ್ಯಕ್ಷ ರವೀಶ ತಂತ್ರಿ ಕುಂಟಾರು ಉದ್ಘಾಟಿಸಿದರು. ಅವರು ಮಾತನಾಡಿ ಕಾರ್ಯಕರ್ತರು ನಾಯಕರಾಗಿ ಬೆಳೆಯಬೇಕು. ಸಂಘಟನೆ, ಕಾರ್ಯ ಕರ್ತರಿಗೆ ಪಕ್ಷದ ಕಾರ್ಯಾಲಯ ದೇವಾಲಯದಂತೆ ಪವಿತ್ರವಾದದ್ದು ಎಂದು ನುಡಿದರು. ಬಿಜೆಪಿ ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್ ಧ್ವಜಾರೋಹಣ ಗೈದರು. ಅವರು ಮಾತನಾಡಿ ಕಾರ್ಯ ಕರ್ತರ ಕನಸು ಈಗ ಸಾಕ್ಷಾತ್ಕಾರ ಗೊಳಿಸಲಾಗಿದೆ. ಸ್ಥಳೀಯಾಡಳಿತ ಚುನಾವಣೆಯಲ್ಲಿ ವರ್ಕಾಡಿ ಪಂಚಾಯತ್ನಲ್ಲಿ ಬಿಜೆಪಿ ಆಡಳಿತಕ್ಕೇರಲಿದೆಯೆಂದರು. ವರ್ಕಾಡಿ ಪಂಚಾಯತ್ ಸಮಿತಿ ಅಧ್ಯಕ್ಷ ಭಾಸ್ಕರ ಪೊಯ್ಯೆ ಅಧ್ಯಕ್ಷತೆ ವಹಿಸಿದರು. …