ದೆಹಲಿಯಲ್ಲಿ ಕುಸಿದ 4 ಮಹಡಿ ಕಟ್ಟಡ: ಹಲವಾರು ಮಂದಿ ಅವಶೇಷಗಳಡಿಯಲ್ಲಿ ಸಿಲುಕಿದ ಶಂಕೆ

ದೆಹಲಿ: ಇಲ್ಲಿನ ಸಿಲಾಂಪುರ್‌ನಲ್ಲಿ ನಾಲ್ಕು ಮಹಡಿ ಕಟ್ಟಡ ಕುಸಿದು ಬಿದ್ದು ಬಾರೀ ದುರಂತ ಸಂಭವಿಸಿದೆ. ಹಲವಾರು ಮಂದಿ ಕಟ್ಟಡದ ಅವಶಿಷ್ಟಗಳೆಡೆಯಲ್ಲಿ ಸಿಲುಕಿಕೊಂಡಿರುವುದಾಗಿ ಮಾಹಿತಿ ಇದೆ. ನಾಲ್ಕು ಮಂದಿಯನ್ನು ಪಾರು ಮಾಡಲಾಗಿದೆ. ಇಂದು ಬೆಳಿಗ್ಗೆ ಕಟ್ಟಡ ಕುಸಿದಿದೆ. ದೊಡ್ಡ ಶಬ್ದ ಕೇಳಿ ನೋಡಿದಾಗ ಕಟ್ಟಡ ಕುಸಿದು ಬಿದ್ದಿರುವುದು ಕಂಡು ಬಂದಿದೆ ಎಂದು ಸ್ಥಳೀಯ ನಿವಾಸಿ ಪಿಟಿಐ ಸುದ್ಧಿಮಾಧ್ಯಮಕ್ಕೆ ತಿಳಿಸಿದ್ದಾರೆ. ಕುಸಿದ ಕಟ್ಟಡದ ದೃಶ್ಯಗಳು ಬಹಿರಂಗಗೊಂಡಿವೆ. ಸ್ಥಳೀಯರು ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಿ ಹುಡುಕಾಟ ಆರಂಭಿಸಿದ್ದಾರೆ. ಗಾಯಗೊಂಡ ನಾಲ್ಕು ಮಂದಿಯನ್ನು ಆಸ್ಪತ್ರೆಯಲ್ಲಿ …

ವರ್ಕಾಡಿ ಪಂಚಾಯತ್ ಬಿಜೆಪಿ ನೂತನ ಕಾರ್ಯಾಲಯ ಉದ್ಘಾಟನೆ ನಾಳೆ

ವರ್ಕಾಡಿ: ಬಿಜೆಪಿ ವರ್ಕಾಡಿ ಪಂಚಾಯತ್ ಸಮಿತಿಯ ನೂತನ ಕಾರ್ಯಾಲಯ ಕಟ್ಟಡದ ಉದ್ಘಾಟನೆ ನಾಳೆ ಬೆಳಿಗ್ಗೆ 10ಕ್ಕೆ ನಡೆಯಲಿದೆ. ವರ್ಕಾಡಿ ಸುಂಕದಕಟ್ಟೆಯಲ್ಲಿ ದಾನಿಗಳ ಸಹಾಯದಿಂದ ನಿರ್ಮಿಸಿದ ಪಕ್ಷದ ನೂತನ ಕಾರ್ಯಾಲಯದ ಉದ್ಘಾಟನೆಯಂಗವಾಗಿ ಬೆಳಿಗ್ಗೆ 8.30ಕ್ಕೆ ಗಣಹೋಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ, ಜಿಲ್ಲಾ, ಮಂಡಲ, ಪಂಚಾಯತ್ ಸಮಿತಿ ಪದಾಧಿಕಾರಿಗಳು, ಧಾರ್ಮಿಕ ಮುಖಂಡರು ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಗಲ್ಪಾಡಿಯಲ್ಲಿ ಸ್ವಾಸ್ಥ್ಯ ಸಂಕಲ್ಪ ಮಾಹಿತಿ ಕಾರ್ಯಕ್ರಮ

ಬದಿಯಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜನಜಾಗೃತಿ ವೇದಿಕೆ ಕಾಸರಗೋಡು ತಾಲೂಕು ಬದಿಯಡ್ಕ ವಲಯ ಸ್ವಾಸ್ಥ್ಯ ಸಂಕಲ್ಪ ಮಾಹಿತಿ ಕಾರ್ಯಕ್ರಮ, ಮಾದಕ ವಸ್ತುಗಳ ದುಷ್ಪರಿಣಾಮ ಎಂಬ ವಿಷಯದಲ್ಲಿ ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಶಾಲೆಯ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ಜರಗಿತು. ನಿವೃತ್ತ ಅಧ್ಯಾಪಕ ಚಂದ್ರಹಾಸ ನಂಬ್ಯಾರ್ ಉದ್ಘಾಟಿಸಿದರು. ಜನಜಾಗೃತಿ ವೇದಿಕೆ ಕಾಸರಗೋಡು ತಾಲೂಕು ಸಮಿತಿ ಅಧ್ಯಕ್ಷ ಅಖಿಲೇಶ್ ನಗುಮುಗಂ ಅಧ್ಯಕ್ಷತೆ ವಹಿಸಿದರು. ನಿವೃತ್ತ ಡೆಪ್ಯುಟಿ ತಹಶೀಲ್ದಾರ್ ನಾರಾಯಣ ಗೋಸಾಡ ಮಕ್ಕಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ತರಗತಿ …

ವೈದ್ಯನೆಂದು ನಂಬಿಸಿ ಮಹಿಳೆಗೆ ಕಿರುಕುಳ: ರಿಮಾಂಡ್‌ನಲ್ಲಿರುವ ಪೆರ್ಲ ನಿವಾಸಿ ಆರೋಪಿಯನ್ನು ಕಸ್ಟಡಿಗೆ ತೆಗೆಯಲು ಪೊಲೀಸರಿಂದ ನ್ಯಾಯಾಲಯಕ್ಕೆ ಅರ್ಜಿ

ಕಾಸರಗೋಡು: ಕಾಞಂಗಾಡ್ ನಲ್ಲಿ ಗೃಹಿಣಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಸೆರೆಗೀಡಾಗಿ ರಿಮಾಂಡ್ ನಲ್ಲಿರುವ ನಕಲಿ ವೈದ್ಯನನ್ನು ಹೆಚ್ಚಿನ ತನಿಖೆ ನಡೆಸಲು ತಮ್ಮ ಕಸ್ಟಡಿಗೆ ಬಿಟ್ಟುಕೊಡಬೇಕೆಂದು ಒತ್ತಾಯಿಸಿ ಪೊಲೀಸರು ನ್ಯಾಯಾಲಯಕ್ಕ್ಲೆ ಅರ್ಜಿ ಸಲ್ಲಿಸಿದ್ದಾರೆ. ಪೆರ್ಲ ನಿವಾಸಿಯೂ ಕಣ್ಣೂರು ಕಕ್ಕಾಟ್,  ತಳಿಪರಂಬದಲ್ಲಿ ವಾಸಿಸು ತ್ತಿದ್ದ ಶಿಹಾಬುದ್ದೀನ್ (55)ಎಂಬಾತ ನನ್ನು ಕಸ್ಟಡಿಗೆ ತೆಗೆಯಲು ಹೊಸದುರ್ಗ ಠಾಣೆ ಇನ್ ಸ್ಪೆಕ್ಟರ್ ಪಿ. ಅಜಿತ್ ಕುಮಾರ್ ಪ್ರಥಮ ದರ್ಜೆ ಮೆಜಿಸ್ಟ್ರೇಟ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕಿರುಕುಳ ಪ್ರಕರಣದಲ್ಲಿ ಸೆರೆಗೀ ಡಾದ ಆರೋಪಿ ಈಗ ರಿಮಾಂಡ್‌ನಲ್ಲಿ …

ತುರ್ತು ಪರಿಸ್ಥಿತಿಯ ಕರಾಳ ಅಧ್ಯಾಯ: ಕಾಂಗ್ರೆಸ್‌ನ ಕೆಂಗಣ್ಣಿಗೆ ಗುರಿಯಾದ ಶಶಿ ತರೂರ್; ಪ್ರಚಾರ ಅಸ್ತ್ರವನ್ನಾಗಿ ಬಳಸಲು ಮುಂದಾದ ಬಿಜೆಪಿ

ತಿರುವನಂತಪುರ: ನೆಹರು ಮತ್ತು ಗಾಂಧಿ ಕುಟುಂಬವನ್ನು ನೇರವಾಗಿ ಗುರಿಯಾಗಿಸಿಕೊಂಡು ತುರ್ತು ಪರಿಸ್ಥಿತಿಯ ಕರಾಳ ಅವಧಿಯನ್ನು ಕಟುವಾಗಿ ಟೀಕಿಸುವ ಮೂಲಕ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತೆ ಕಾಂಗ್ರೆಸ್ಸಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮಲಯಾಳಂ ದಿನಪತ್ರಿಕೆಯಾದ ದೀಪಿಕಾದಲ್ಲಿ ಪ್ರಕಟವಾದ ಶಶಿ ತರೂರ್‌ರ ಲೇಖನವು ದೇಶದಾದ್ಯಂತ ಭಾರೀ ವೈರಲ್ ಆಗಿದೆ. ಇದರಲ್ಲಿ ಶಶಿ ತರೂರ್ ತುರ್ತು ಪರಿಸ್ಥಿತಿಯನ್ನು ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಕರಾಳ ಅಧ್ಯಾಯವೆಂದು ಹೇಳಿದ್ದಾರೆ. ಮಾತ್ರವಲ್ಲ ಆ ಸಮಯದಲ್ಲಿ ನಡೆದ ಚಿತ್ರಹಿಂಸೆ, ದೌರ್ಜನ್ಯಗಳನ್ನು ಮರೆಮಾಚಲು ಸಾಧ್ಯವೇ ಇಲ್ಲ. ಮಾಜಿ ಪ್ರಧಾನಿ …

ವ್ಯಕ್ತಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಕುಂಬಳೆ: ವ್ಯಕ್ತಿಯೋರ್ವರು ಮನೆಯೊಳಗೆ ನೇಣುಬಿಗಿದು ಸಾವಿ ಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುಂಬಳೆ ಶಾಂತಿಪಳ್ಳ ಸಚಿನ್ ನಿಲಯದ ಸುಕುಮಾರನ್ (59) ಎಂಬವರು ಮೃತಪಟ್ಟ ವ್ಯಕ್ತಿ. ನಿನ್ನೆ ಮಧ್ಯಾಹ್ನ 2.30 ರ ವೇಳೆ ಇವರು ಮನೆಯ ಬೆಡ್‌ರೂಂನಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.  ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ತಲುಪಿಸಲಾಗಿದೆ. ಇವರು ಈ ಹಿಂದೆ ಲಾರಿ ಚಾಲಕನಾಗಿದ್ದರು. ಮೃತರು ಪತ್ನಿ ಸುಜಾತ, ಮಕ್ಕಳದ ಸಚಿನ್, ಸ್ವಜನ, ಸೊಸೆ ಅಕ್ಷತಾ, ಸಹೋದರ-ಸಹೋದರಿಯರಾದ ರಾಮಚಂದ್ರ,ಕರುಣಾಕರ, ಶಶಿಧರ, ಪದ್ಮಾವತಿ, ಗಿರಿಜ, …

ಕುಂಬಳೆಯಲ್ಲಿ ಮನೆ ಕಳವು: ಬೆರಳಚ್ಚು ಲಭ್ಯ

ಕುಂಬಳೆ: ಆರಿಕ್ಕಾಡಿ ಶ್ರೀ ಹನು ಮಾನ್ ಕ್ಷೇತ್ರ ಬಳಿಯ ನಿವಾಸಿ ನಫೀಸ ಎಂಬವರ ಮನೆಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ತನಿಖೆ ತೀವ್ರಗೊಳಿಸಿರುವುದಾಗಿ ಕುಂಬಳೆ ಪೊಲೀಸರು ತಿಳಿಸಿದ್ದಾರೆ. ಮನೆಯಲ್ಲಿ ನಡೆಸಿದ ಪರಿಶೀಲನೆ ವೇಳೆ ಕೆಲವು ಬೆರಳಚ್ಚುಗಳು ಲಭಿಸಿವೆಯೆಂದು ಪೊಲೀಸರು ತಿಳಿಸಿದ್ದಾರೆ. ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಬೆಲೆಬಾಳುವ ಒಂದು ವಾಚ್ ಹಾಗೂ ಸಿಸಿ ಟಿವಿಯ ಉಪಕರಣಗಳನ್ನು ದೋಚಿದ್ದರು. ಎರಡು ದಿನಗಳ ಹಿಂದೆ ಸಂಬಂಧಿಕರ ಮನೆಗೆ ತೆರಳಿದ್ದ ನಫೀಸ ಹಾಗೂ ಕುಟುಂಬ ನಿನ್ನೆ ಮುಂಜಾನೆ ಮರಳಿ ಬಂದಾಗಲೇ …

ಸ್ಕೂಟರ್‌ನಲ್ಲಿ ತಲುಪಿದ ಬಾಲಕನ ಸೆರೆ ಹಿಡಿದ ವೀಡಿಯೋ ರೀಲ್ಸ್ ಮಾಡಿದ ಪೊಲೀಸ್‌ಗೆ ಅಮಾನತು

ಕಾಸರಗೋಡು: 250 ವಾಟ್ಸ್‌ಗಿಂತ ಕೆಳಗಿನ ಮೋಟಾರು ಹೊಂದಿದ ಇಲೆಕ್ಟ್ರಿಕ್ ಸ್ಕೂಟರ್ ಚಲಾಯಿಸಿದ ವಿದ್ಯಾರ್ಥಿಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಪಡಿಸಿದ ಸಿವಿಲ್ ಪೊಲೀಸ್ ಆಫೀಸರ್‌ಗೆ ಅಮಾನತು ಲಭಿಸಿದೆ. ಕಾಸರಗೋಡು ಎಆರ್ ಕ್ಯಾಂಪ್‌ನ ಸಿವಿಲ್ ಪೊಲೀಸ್ ಆಫೀಸರ್ ಕೆ. ಸಜೇಶ್‌ನನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ವಿ. ವಿಜಯ್ ಭಾರತ್ ರೆಡ್ಡಿ ಅಮಾನತು ಮಾಡಿದ್ದಾರೆ. ಲೈಸನ್ಸ್, ನಂಬರ್ ಪ್ಲೇಟ್ ಇಲ್ಲದೆ ಚಲಾಯಿಸಲು ಸಾಧ್ಯವಿರುವ ವಿಭಾಗಕ್ಕೆ ಸೇರಿದ ಸ್ಕೂಟರ್ ಓಡಿಸಿದ ಬಾಲಕನನ್ನು ತಡೆದ ಪೊಲೀಸ್ ಹೆಲ್ಮೆಟ್ ಖರೀದಿಸುವಂತೆ ಒತ್ತಾಯಿಸಿ 3 ಗಂಟೆಗಳ ಕಾಲ …

ಶೆಡ್‌ನಲ್ಲಿ ಇರಿಸಿದ್ದ ತೆಂಗಿನಕಾಯಿ ಕದ್ದ ಆರೋಪಿಗಳಿಬ್ಬರು ಸೆರೆ

ಕಾಸರಗೋಡು: ಶೆಡ್‌ನಲ್ಲಿ ಇರಿಸಲಾಗಿದ್ದ 200 ತೆಂಗಿನ ಕಾಯಿಗಳನ್ನು ಕಳವುಗೈದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಪಡನ್ನಕ್ಕಾಡ್ ತೀರ್ಥಂಕರ ಕನ್ನಿಚ್ಚಿರ ನಿವಾಸಿ ಕೆ. ರಾಜೇಶ್ (42), ಕೆ. ರತೀಶ್ (45) ಎಂಬಿವರನ್ನು ಹೊಸದುರ್ಗ ಪೊಲೀಸ್ ಇನ್ಸ್‌ಪೆಕ್ಟರ್ ಪಿ. ಅಜಿತ್ ಕುಮಾರ್ ಹಾಗೂ ತಂಡ ಬಂಧಿಸಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇತ್ತೀಚೆಗೆ ತೀರ್ಥಂಕರದ ಒಂದು ಶೆಡ್‌ನಲ್ಲಿ ಇರಿಸಲಾಗಿದ್ದ ೨೦೦ ತೆಂಗಿನಕಾಯಿಗಳನ್ನು ಆರೋಪಿಗಳು ಕಳವುಗೈದು ಮಾರಾಟ ಮಾಡಿದ್ದರು. ಅಂಗಡಿ ಮಾಲಕ ಎಲ್ಲಿಂದ ತೆಂಗಿನ ಕಾಯಿ ಲಭಿಸಿರುವುದಾಗಿ ಪ್ರಶ್ನಿಸಿದಾಗ ಹೊಳೆಯಲ್ಲಿ ಹರಿದು ಬಂದ …

ಪೆಟ್ರೋಲ್ ಬಂಕ್‌ನಿಂದ 1.5 ಲಕ್ಷ ರೂ. ಕಳವು: ಆರೋಪಿ ಗುರುತು ಪತ್ತೆ

ಕಾಸರಗೋಡು:  ಜನರು ನೋಡಿ ನಿಂತಿರುವಂತೆಯೇ ಪೆಟ್ರೋಲ್ ಖರೀದಿಸುವ ಸೋಗಿನಲ್ಲಿ ಬಂದ ಓರ್ವ ಪೆಟ್ರೋಲ್ ಬಂಕ್‌ನಿಂದ 1.5 ಲಕ್ಷ ರೂ. ಕಳವುಗೈದು ಪರಾರಿಯಾದ ಘಟನೆ ನಡೆದಿದೆ. ನೀಲೇಶ್ವರ ರಾಜಾ ರಸ್ತೆಯ ವಿಷ್ಣು ಎಜನ್ಸೀಸ್ ಎಂಬ ಹೆಸರಿನ ಪೆಟ್ರೋಲ್ ಬಂಕ್‌ನಲ್ಲಿ ಈ ಕಳವು ನಡೆದಿದೆ. ನೀಲ ಬಣ್ಣದ ಅಂಗಿ ಮತ್ತು ಧೋತಿ ಧರಿಸಿದ ವ್ಯಕ್ತಿ ನಿನ್ನೆ ಸಂಜೆ ಮುಖ ಕಾಣಿಸದ ಹಾಗೆ ಕೈಯಲ್ಲಿ ಕೊಡೆ ಹಿಡಿದು ಪೆಟ್ರೋಲ್ ಬಂಕ್‌ಗೆ ಬಂದಿದ್ದನು. ಪೆಟ್ರೋಲ್ ಖರೀದಿಸಲು ಆತ ಬಂದಿರಬಹುದೆಂದು ಪೆಟ್ರೋಲ್ ಬಂಕ್‌ನ ಸಿಬ್ಬಂದಿಗಳು …