ಕಟ್ಟಡದಿಂದ ದೂಡಿ ಹಾಕಿದ ಪರಿಣಾಮ ವ್ಯಾಪಾರಿ ಸಾವನ್ನಪ್ಪಿದ ಪ್ರಕರಣ: ಗುತ್ತಿಗೆದಾರನ ಬಂಧನ
ಕಾಸರಗೋಡು: ಹೊಸದುರ್ಗ ಮಾವುಂಗಾಲ್ ಮೂಲಕಂಡದಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ಕಟ್ಟಡದಿಂದ ದೂಡಿ ಹಾಕಿದ ಪರಿಣಾಮ ಕೆಳಕ್ಕೆ ಬಿದ್ದು ವ್ಯಾಪಾರಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. ಕಟ್ಟಡ ಗುತ್ತಿಗೆದಾರನೂ ಪುಲ್ಲೂರು ನಿವಾಸಿಯಾದ ನರೇಂದ್ರನ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತನ ವಿರುದ್ಧ ಪೊಲೀಸರು ಮನಃಪೂರ್ವಕವಲ್ಲದ ನರಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹೊಸದುರ್ಗ ಮಾವುಂಗಾಲ್ ಮೂಲಕಂಡದಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ಮೂರಂತಸ್ತಿನ ಕಟ್ಟಡದಿಂದ ದೂಡಿ ಹಾಕಿದ ಪರಿಣಾಮ ಕೆಳಕ್ಕೆ ಬಿದ್ದು ಹೊಸದುರ್ಗ ಮಡಿಯನ್ನಲ್ಲಿ ಅಲ್ಯುಮಿನಿಯಂ ಸಾಮಗ್ರಿಗಳ ವ್ಯಾಪಾರ ನಡೆಸುವ ಹೊಸದುರ್ಗ ವೆಳ್ಳಿಕೋತ್ …
Read more “ಕಟ್ಟಡದಿಂದ ದೂಡಿ ಹಾಕಿದ ಪರಿಣಾಮ ವ್ಯಾಪಾರಿ ಸಾವನ್ನಪ್ಪಿದ ಪ್ರಕರಣ: ಗುತ್ತಿಗೆದಾರನ ಬಂಧನ”