ಜಿಲ್ಲಾ ಮೊಗೇರ ಸಂಘದಿಂದ ಪ್ರತಿಭಾ ಪುರಸ್ಕಾರ
ಬದಿಯಡ್ಕ: ಕಾಸರಗೋಡು ಜಿಲ್ಲಾ ಮೊಗೇರ ಸಂಘದ ನೇತೃತ್ವದಲ್ಲಿ ಇತ್ತೀಚೆಗೆ ಪ್ರತಿಭಾ ಪುರಸ್ಕಾರ ಕಾರ್ಯ ಕ್ರಮ ಜರಗಿತು. ಬದಿಯಡ್ಕ ಸಂಸ್ಕೃತಿ ಭವನದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಕಿಶನ್ರಾಜ್ ಕೆ ಕೆ, ಧನ್ಯಶ್ರೀ ಎ.ಕೆ., ಹಾಗೂ +2ವಿನಲ್ಲಿ ಅತ್ಯದಿsಕ ಅಂಕ ಗಳಿಸಿದ ಜ್ಯೋತಿಕ ಮಜೀರ್ಪಳ್ಳಕಟ್ಟೆ ಇವರನ್ನು ಅಭಿನಂದಿ ಸಲಾಯಿತು. ಬದಿಯಡ್ಕ ಪಂ. ಸದಸ್ಯ ಶಂಕರ ಡಿ ಉದ್ಘಾಟಿಸಿದರು. ಜಿಲ್ಲಾ ಅಧ್ಯಕ್ಷ ನಿಟ್ಟೋಣಿ ಬಂದ್ಯೋಡು ಅಧ್ಯಕ್ಷತೆ ವಹಿಸಿದ್ದರು. ಮದರು ಮಹಾಮಾತೆ ಅಧ್ಯಕ್ಷ ವಸಂತ ಅಜಕೊಡು, ಅಂಬೇಡ್ಕರ್ …