ಸ್ವಾತಂತ್ರ್ಯ ದಿನಾಚರಣೆ ಸಚಿವ ಕೆ.ಕೃಷ್ಣನ್ ಕುಟ್ಟಿಯವರಿಂದ ಧ್ವಜವಂದನೆ ಸ್ವೀಕಾರ

ಕಾಸರಗೋಡು:  ಕಾಸರಗೋಡು ನಗರಸಭಾ ಮೈದಾನದಲ್ಲಿ ನಡೆಯುವ ಸ್ವಾತಂತ್ರ್ಯ  ದಿನಾಚರಣೆ ಕಾರ್ಯಕ್ರಮ ದಲ್ಲಿ ಸಚಿವ ಕೆ. ಕೃಷ್ಣನ್ ಕುಟ್ಟಿ ಧ್ವಜ ವಂದನೆ ಸ್ವೀಕರಿಸುವರು. ಪರೇಡ್‌ನಲ್ಲಿ 19 ತುಕಡಿಗಳು ಭಾಗವಹಿಸುವುದು. ಎ.ಆರ್. ಕ್ಯಾಂಪ್‌ನ ಅಸಿಸ್ಟೆಂಟ್ ಕಮಾಂ ಡೆಂಟ್ ಪರೇಡ್ ನಿಯಂತ್ರಿಸುವರು. ಜಿಲ್ಲಾ  ಸಶಸ್ತ್ರ ರಿಸರ್ವ್ ಪೊಲೀಸ್, ಲೋಕಲ್ ಪೊಲೀಸ್, ಮಹಿಳಾ ಪೊಲೀಸ್, ಎಕ್ಸೈಸ್ ಎಂಬೀ ಪ್ಲಾಟೂನ್‌ಗಳು, ಇರಿಯಣ್ಣಿ ಸರಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆ, ನಾಯಮ್ಮಾರ್‌ಮೂಲೆ ತನ್‌ಬೀಹುಲ್ ಇಸ್ಲಾಂ ಹೈಯರ್ ಸೆಕೆಂಡರಿ ಶಾಲೆ, ಚೆಮ್ನಾಡ್ ಜಮಾ ಯತ್ ಹೈಯರ್ ಸೆಕೆಂಡರಿ …

ಕೊಲೆಪ್ರಕರಣದಲ್ಲಿ ಶಿಕ್ಷೆಗೊಳಗಾದ ಸಿಪಿಎಂ ಮುಖಂಡನಿಗೆ ಫೋಕ್ಲೋರ್ ಅಕಾಡೆಮಿ ಉಪಾಧ್ಯಕ್ಷ ಪದವಿ: ಕಾಂಗ್ರೆಸ್ ಖಂಡನೆ

ಕಾಸರಗೋಡು:  ಕೊಲೆ  ಪ್ರಕರಣದಲ್ಲಿ ಶಿಕ್ಷೆಗೊಳಗಾದ ಸಿಪಿಎಂ ಮುಖಂಡನನ್ನು ಫೋಕ್ಲೋರ್ ಅಕಾಡೆಮಿ ಉಪಾಧ್ಯಕ್ಷನನ್ನಾಗಿ ಸರಕಾರ ನೇಮಕಗೊಳಿಸಿರುವುದು  ಕಾನೂನಿನೊಂದಿಗಿರುವ ಸವಾಲು ಎಂದು ಡಿಸಿಸಿ ಅಧ್ಯಕ್ಷ ಪಿ.ಕೆ.ಫೈಸಲ್  ಆರೋಪಿಸಿದ್ದಾರೆ. ಕಲ್ಯೋಟ್ ಯೂತ್ ಕಾಂಗ್ರೆಸ್ ಕಾರ್ಯಕರ್ತರಾದ ಶರತ್ ಲಾಲ್, ಕೃಪೇಶ್‌ರ ಕೊಲೆ ಕೃತ್ಯದಲ್ಲಿ ಶಿಕ್ಷೆಗೊಳಗಾದ ಮಾಜಿ ಶಾಸಕ ಕೆ.ವಿ. ಕುಂಞಿರಾಮನ್‌ರನ್ನು ಅಕಾಡೆಮಿಯ ಉಪಾಧ್ಯಕ್ಷರನ್ನಾಗಿ ಸರಕಾರ ನೇಮಕಗೊಳಿಸಿರುವ ಕ್ರಮ ನ್ಯಾಯಾಲಯದೊಂದಿಗಿರುವ ಸವಾಲು ಎಂದು ಡಿಸಿಸಿ ಅಧ್ಯಕ್ಷರು ತಿಳಿಸಿದ್ದಾರೆ. ಕೊಲೆ ಕೃತ್ಯಗಳಿಗೆ ಪ್ರೋತ್ಸಾಹ ನೀಡುವ, ಸಂರಕ್ಷಣೆ ನೀಡುವ ಕ್ರಮವನ್ನು ಎಡರಂಗ ಸರಕಾರ ನಡೆಸುತ್ತಿದೆ ಎಂದೂ, ಇದು …

ಸ್ಥಳೀಯಾಡಳಿತ ಚುನಾವಣೆ: ಮತದಾರರ ಯಾದಿ ನವೀಕರಿಸಲು 12ರ ವರೆಗೆ ಅವಕಾಶ

ಕಾಸರಗೋಡು: ಸ್ಥಳೀಯಾಡಳಿತ ಸಂಸ್ಥೆಗಳಿಗಿರುವ ಚುನಾವಣೆಯ  ಪೂರ್ವಭಾವಿಯಾಗಿ ಮತದಾರರ ಯಾದಿಯಲ್ಲಿ ಹೆಸರು ಸೇರಿಸುವುದಕ್ಕೆ,  ತಿದ್ದುಪಡಿ ಮಾಡುವುದಕ್ಕೆ ಇರುವ ಅರ್ಜಿಗಳು, ಆಕ್ಷೇಪಗಳನ್ನು ಸಲ್ಲಿಸಲಿರುವ ದಿನಾಂಕವನ್ನು  ಈ ತಿಂಗಳ 12ರವರೆಗೆ ಮುಂದೂಡಲಾಗಿದೆಯೆಂದು ರಾಜ್ಯ ಚುನಾವಣಾ ಆಯುಕ್ತ ಎ. ಶಾಜಹಾನ್ ತಿಳಿಸಿದ್ದಾರೆ. 2025 ಜುಲೈ 23ರಂದು ಕರಡು ಮತದಾರರ ಯಾದಿ ಪ್ರಕಟಿಸಲಾಗಿತ್ತು. ಆರೋ ಪಗಳು, ಅರ್ಜಿಗಳನ್ನು ಸಲ್ಲಿಸಲು ನಿನ್ನೆಯವರೆಗೆ ಸಮಯ ನೀಡಲಾಗಿತ್ತು.  2025 ಜನವರಿ ೧ರಂದು ಅಥವಾ ಅದಕ್ಕಿಂತ ಮುಂಚಿತ 18 ವರ್ಷ ಪೂರ್ತಿಯಾ ದವರಿಗೆ ಮತದಾರರ ಯಾದಿಯಲ್ಲಿ ಹೆಸರು ಸೇರಿಸಬಹುದು. ಮತದಾರರ …

ಪೈವಳಿಕೆಯಲ್ಲಿ ಹೊಸ ಪೊಲೀಸ್ ಠಾಣೆ ಬಗ್ಗೆ ಚರ್ಚೆ ನಡೆಸಿದ ಡಿಜಿಪಿ

ಕಾಸರಗೋಡು:  ಮಂಜೇಶ್ವರ ಮತ್ತು  ಕುಂಬಳೆ ಪೊಲೀಸ್ ಠಾಣೆಗಳನ್ನು ವಿಭಜಿಸಿ ಪೈವಳಿಕೆಯಲ್ಲಿ ಹೊಸ ಪೊಲೀಸ್ ಠಾಣೆ ಆರಂಭಿಸುವ ವಿಷಯದ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ)  ರಾವಡ ಎ ಚಂದ್ರಶೇಖರನ್ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಜಿಲ್ಲೆಯ ವರಿಷ್ಠ ಪೊಲೀಸ್ ಅಧಿಕಾರಿಗಳು ಪಾಲ್ಗೊಂಡ ಸಭಯಲ್ಲಿ ಚರ್ಚೆ ನಡೆಸಿದರು. ಪೈವಳಿಕೆ ಪೊಲೀಸ್ ಠಾಣೆ ನಿರ್ಮಿಸಲು ಬಾಯಿಕಟ್ಟೆಯಲ್ಲಿ ೫೦ ಸೆಂಟ್ಸ್ ಸ್ಥಳವನ್ನು ಕಂದಾಯ ಇಲಾಖೆ ಎರಡು ವರ್ಷಗಳ ಹಿಂದೆಯೇ ಪೊಲೀಸ್ ಇಲಾಖೆಗೆ ಹಸ್ತಾಂತ ರಿಸಿದೆ. ಆದರೆ ಇಲ್ಲಿ ಪೊಲೀಸ್ ಠಾಣೆ ನಿರ್ಮಿಸುವ …

ಮಿತ್ರಕಲಾವೃಂದ ಮಧೂರು 50ನೇ ವಾರ್ಷಿಕ ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ

ಮಧೂರು: ಮಿತ್ರಕಲಾವೃಂದ ಮಧೂರು ಇದರ 50ನೇ ವಾರ್ಷಿಕ ಮಹಾಸಭೆ ಇತ್ತೀಚೆಗೆ ಜರಗಿತು. ಸಂಘದ ಅಧ್ಯಕ್ಷ ಸೂರ್ಯ ಎ.ಕೆ. ಉದ್ಘಾಟಿಸಿ, ಸಂಘವು ಸಾಮಾಜಿಕ, ಸಾಂಸ್ಕೃತಿಕ ಹಾಗೂ ಕ್ರೀಡಾರಂಗದಲ್ಲಿ ತೋರ್ಪಡಿ ಸಿದ ಯಶಸ್ಸಿನ ಕುರಿತು ವಿವರಿಸಿದರು. ಕಾರ್ಯದರ್ಶಿ ಕಿಶೋರ್ ಕುಮಾರ್ ವರದಿ, ಕೋಶಾಧಿಕಾರಿ ಸುಜಿತ್ ಕೆ.ಸಿ. ಲೆಕ್ಕಪತ್ರ ಮಂಡಿಸಿದರು. ಸಂಘದ ಸದಸ್ಯರಾದ ಚಂದ್ರಹಾಸ ಕೆ. ಶುಭಾಶಂ ನೆಗೈದರು. ಸಂಘದ ೫೦ನೇ ವಾರ್ಷಿ ಕೋತ್ಸವವನ್ನು ವಿವಿಧ ಕಲಾ, ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳೊಂದಿಗೆ ಒಂದು ವರ್ಷ ಕಾಲ ಆಚರಿಸಲು ತೀರ್ಮಾನಿಸಲಾಯಿತು. ಸಂಘದ ವತಿಯಿಂದ …

ಕಟ್ಟಡದಿಂದ ಕೆಳಕ್ಕೆ ದೂಡಿ ಹಾಕಿ ಗಂಭೀರ ಗಾಯಗೊಂಡಿದ್ದ ವ್ಯಾಪಾರಿ ಸಾವು: ಗುತ್ತಿಗೆದಾರ ಪೊಲೀಸ್ ಕಸ್ಟಡಿಗೆ

ಕಾಸರಗೋಡು: ಕಟ್ಟಡದಿಂದ ಕೆಳಗ್ಗೆ ದೂಡಿ ಹಾಕಿದ ಪರಿಣಾಮ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ವ್ಯಾಪಾರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಹೊಸದುರ್ಗ ವೆಳ್ಳಿಕೋತ್ತ್ ಪೇರಳ ನಿವಾಸಿ ಹಾಗೂ ವ್ಯಾಪಾರಿಯೂ ಆಗಿರುವ ರೋಯ್ ಜೋಸೆಫ್ ಎಳುಪ್ಲಾಕ್ಕಲ್ (45) ಸಾವನ್ನಪ್ಪಿದ ವ್ಯಕ್ತಿ. ಮಾವುಂಗಾಲ್ ಮೂಲಕಂಡದಲ್ಲಿ ರೋಯ್ ಜೋಸೆಫ್ ಹೊಸದಾಗಿ ಮೂರು ಅಂತಸ್ತಿನ ಕಟ್ಟಡವನ್ನು ನಿರ್ಮಿಸುತ್ತಿದ್ದು, ಆಗಸ್ಟ್ ೩ರಂದು ಅವರನ್ನು ಮಧ್ಯಾಹ್ನ ಸುಮಾರು 1.30ರ ವೇಳೆ ರೋಯ್ ಜೋಸೆಫ್‌ರನ್ನು ಆ ಕಟ್ಟಡದ ಮೂರನೇ ಅಂತಸ್ತಿನಿಂದ ಕೆಳಗೆ ದೂಡಿ ಹಾಕಲಾಗಿತ್ತು. ಅದರಿಂದ …

ಮಾದಕವಸ್ತು ಕೈವಶವಿರಿಸಿದ್ದ ವ್ಯಕ್ತಿ ಸೆರೆ

ಕುಂಬಳೆ: ಮಾದಕವಸ್ತುವಾದ ಎಂಡಿಎಂಎ ಕೈವಶವಿರಿಸಿಕೊಂಡಿದ್ದ ಓರ್ವನನ್ನುಕುಂಬಳೆ ಅಬಕಾರಿ ರೇಂಜ್ ಇನ್‌ಸ್ಪೆಕ್ಟರ್ ಶ್ರಾವಣ್ ಕೆ.ವಿ ನೇತೃತ್ವದ ತಂಡ ಬಂಧಿಸಿದೆ. ಉಪ್ಪಳ ಮಣಿಮುಂಡ ನಿವಾಸಿ ಮುಹಮ್ಮದ್ ಸಕೀರ್ (50) ಎಂಬಾತ ಬಂಧಿತ ಆರೋಪಿಯಾಗಿ ದ್ದಾನೆ. ಈತನ ಕೈಯಿಂದ 0.346 ಗ್ರಾಂ ಎಡಿಎಂಎ ವಶಪಡಿಸಲಾಗಿದೆ. ಮೊನ್ನೆ ಸಂಜೆ 4.30ಕ್ಕೆ ಕಂiರು ವಿಲ್ಲೇಜ್‌ನ ಕೊಕ್ಕೆಚ್ಚಾಲ್ ಜಂಕ್ಷನ್‌ಗೆ ತೆರಳುವ ರಸ್ತೆ ಬದಿ ನಿಂತಿದ್ದ ಮುಹಮ್ಮದ್ ಸಕೀರ್‌ನನ್ನು ಸಂಶಯದ ಮೇರೆಗೆ ತಪಾಸಣೆ ನಡೆಸಿದಾಗ ಮಾದಕವಸ್ತು ಪತ್ತೆಯಾಗಿದೆಯೆಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಅಬಕಾರಿ …

ವಿದ್ಯುತ್ ಸಬ್ಸಿಡಿ ರದ್ದು ಸಾಧ್ಯತೆ

ತಿರುವನಂತಪುರ: ರಾಜ್ಯದಲ್ಲಿ ತಿಂಗಳಿಗೆ 240 ಯೂನಿಟ್ಗಿಂತ ಕಡಿಮೆ ವಿದ್ಯುತ್ ಉಪಯೋಗಿಸುವ ಬಳಕೆದಾರರಿಗೆ ನೀಡಲಾಗುತ್ತಿರುವ ಸಬ್ಸಿಡಿಯನ್ನು ರದ್ದುಗೊಳಿಸಲು ಸರಕಾರ ಚಿಂತನೆ ನಡೆಸಿದೆ. ಇದು ಜ್ಯಾರಿಗೊಂಡಲ್ಲಿ ರಾಜ್ಯದಲ್ಲಿ 240 ಯೂನಿಟ್ಗಿಂತ ಕಡಿಮೆ ವಿದ್ಯುತ್ ಬಳಸುವ ಬಳಕೆದಾರರಿಗೆ ಪ್ರತೀ ಎರಡು ತಿಂಗಳ ವಿದ್ಯುತ್ ಬಿಲ್ನಲ್ಲಿ ನೀಡಲಾಗುವ ತಲಾ 148 ರೂ. ಸಬ್ಸಿಡಿ ಇಲ್ಲದಾಗಲಿದೆ. 240 ಯೂನಿಟ್ಗಿಂತಲೂ ಕಡಿಮೆ ವಿದ್ಯುತ್ ಉಪಯೋಗಿಸುವ 65 ಲಕ್ಷದಷ್ಟು ಕುಟುಂಬಗಳು ರಾಜ್ಯದಲ್ಲಿದ್ದು ಅವರ ಮೇಲೆ ಇದು ಪರಿಣಾಮ ಬೀರಲಿದೆ. ವಿದ್ಯುತ್ ಬಳಕೆದಾರರಿಂದ ವಸೂಲಿ ಮಾಡಲಾಗುವ ಇಲೆಕ್ಟ್ರಿಸಿಟಿ ಡ್ಯೂಟಿ …

ಮನೆಗೆ ಅತಿಕ್ರಮಿಸಿ ನುಗ್ಗಿ ನಿದ್ರಿಸುತ್ತಿದ್ದ ಯುವತಿಯ ಮಾನಭಂಗಕ್ಕೆತ್ನ : ಆರೋಪಿ ಬಂಧನ

ಕಾಸರಗೋಡು: ಮನೆಗೆ ಅತಿ ಕ್ರಮಿಸಿ ನುಗ್ಗಿ ಯುವತಿಯನ್ನು ಮಾನ ಭಂಗಗೈಯ್ಯಲು ಯುವಕನೋರ್ವ ಯತ್ನಿಸಿದ ಬಗ್ಗೆ ದೂರಲಾಗಿದೆ. ಘಟನೆಗೆ ಸಂಬಂಧಿಸಿ ಕೇಸು ದಾಖಲಿ ಸಿಕೊಂಡ ಚಿಟ್ಟಾರಿ ಕಲ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಲಿನೇಶ್ (41) ಎಂಬಾತ ಸೆರೆಗೀಡಾದ ಆರೋಪಿಯೆಂದು ಪೊಲೀಸರು ತಿಳಿಸಿದ್ದಾರೆ. ಕಳೆದ ದಿನ ಮುಂಜಾನೆ ೧.೩೦ರ ವೇಳೆ ಚಿಟ್ಟಾರಿಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮದ್ಯ ದಮಲಿನಲ್ಲಿದ್ದ ಲಿನೇಶ್ ಮನೆಗೆ ಅತಿಕ್ರಮಿಸಿ ನುಗ್ಗಿ ನಿದ್ರಿಸುತ್ತಿದ್ದ ೪೫ರ ಹರೆಯದ ಯುವತಿಯನ್ನು  ಅಪ್ಪಿಕೊಂಡಿದ್ದಾನೆನ್ನಲಾಗಿದೆ. ಈವೇಳೆ ಯುವತಿ ಬೊಬ್ಬೆ ಹಾಕಿದ್ದು …

ಸ್ಥಳೀಯಾಡಳಿತ ಇಲಾಖೆ ಪ್ರೊಜೆಕ್ಟ್ ಡೈರೆಕ್ಟರ್ ಅಮಾನತು

ಕಾಸರಗೋಡು: ಸ್ಥಳೀ ಯಾಡಳಿತ ಇಲಾಖೆಯ ಜಿಲ್ಲಾ ಜೋಯಿಂಟ್ ಡೈರೆಕ್ಟರ್ ಕಚೇರಿಯ ಪ್ರೊಜೆಕ್ಟ್ ಡೈರೆಕ್ಟರ್ ಪಿ.ಐ. ಜಸ್ಟಿನ್‌ರನ್ನು ತನಿಖಾ ವಿದೇಯಗೊಳಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಕಾಸರಗೋಡು ನಗರಸಭೆಯ ಈ ಹಿಂದಿನ ಕಾರ್ಯದರ್ಶಿಯಾಗಿದ್ದ ವೇಳೆ ಅವರು ಆ ಅವಧಿಯಲ್ಲಿ ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿಲ್ಲವೆಂದು ಆರೋಪಿಸಿ ನಗರಸಭಾ ಅಧ್ಯಕ್ಷರು ನೀಡಿದ ದೂರಿನಂತೆ ಈ ಅಮಾನತು ಕ್ರಮ ಕೈಗೊಳ್ಳಲಾಗಿದೆ.