ಕಣಿಪುರ ಕ್ಷೇತ್ರ ಬ್ರಹ್ಮಕಲಶೋತ್ಸವ: ಕುಂಬಳೆ ಪೇಟೆಯಲ್ಲಿ ಮೂಲಭೂತ ಸೌಕರ್ಯ ಶೀಘ್ರ ಏರ್ಪಡಿಸಲು ಬಿಜೆಪಿ ಆಗ್ರಹ
ಕುಂಬಳೆ: ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನವೀಕರಣ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಜಾತ್ರೆ ಹಿನ್ನೆಲೆಯಲ್ಲಿ ಕುಂಬಳೆ ಪೇಟೆಯಲ್ಲಿ ಮೂಲಭೂತ ಸೌಕರ್ಯ ತಕ್ಷಣ ಒದಗಿಸಬೇಕೆಂದು ಬಿಜೆಪಿ ಪಂ. ಸಮಿತಿ ಆಗ್ರಹಿಸಿದೆ. ಬ್ರಹ್ಮಕಲಶೋತ್ಸವ, ಜಾತ್ರೆ ಹಿನ್ನೆಲೆಯಲ್ಲಿ ಇಲ್ಲಿಗೆ ವಿವಿಧೆಡೆಗಳಿಂದ ಲಕ್ಷಾಂತರ ಮಂದಿ ಆಗಮಿಸುವ ನಿರೀಕ್ಷೆ ಇದ್ದು, ಈ ಹಿನ್ನೆಲೆಯಲ್ಲಿ ಪೇಟೆಯಲ್ಲಿ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಬೀದಿ ದೀಪ, ಚರಂಡಿ, ಪಾರ್ಕಿಂಗ್ ವ್ಯವಸ್ಥೆಗಳನ್ನು ಸರಿಪಡಿಸಬೇಕೆಂದು ಬಿಜೆಪಿ ತಿಳಿಸಿದೆ. ಕುಂಬಳೆ ಪೇಟೆಯ ಐಎಚ್ಆರ್ಡಿ ಕಾಲೇಜಿನ ಹಳೆಯ ಕಟ್ಟಡದ ಸಮೀಪ ಇರುವ …