ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಸಹಕಾರಿ ಸಂಗಮ
ಕಾಸರಗೋಡು: ಸಹಕಾರ ಭಾರತಿ ಜಿಲ್ಲಾ ಸಮಿತಿ ಆಶ್ರಯದಲ್ಲಿ ಕಾಸರಗೋಡು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಜಿಲ್ಲೆಯ ಸಹಕಾರಿಗಳ ಸಹಕಾರಿ ಸಂಗಮ ನಡೆಯಿತು. ಸಹಕಾರ ಭಾರತಿ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಡಾ. ಉದಯ್ ಜೋಶಿ ಉದ್ಘಾಟಿಸಿ ಮಾತನಾಡಿ ದರು. ಸಹಕಾರ ಭಾರತಿ ಈ ದೇಶದಲ್ಲಿ ಸಹಕಾರಿ ಕ್ಷೇತ್ರದಲ್ಲಿ ತನ್ನದೇ ಆದ ರೀತಿಯಲ್ಲಿ ಕಾರ್ಯ ನಡೆಸುತ್ತಿದ್ದು ಮುನ್ನಡೆಯುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಸಹಕಾರ ಭಾರತೀಯ ಎಲ್ಲ ನಿರ್ದೇಶಗಳನ್ನು ಅಂಗೀಕರಿಸಿದೆ ಎಂದು ಅವರು ಹೇಳಿದರು. ರಾಷ್ಟ್ರೀಯ ಸಮಿತಿ ಸದಸ್ಯರಾದ ಕರುಣಾಕರನ್ …