ಕಾಸರಗೋಡು ನಿವಾಸಿಯನ್ನು ವಿಮಾನ ನಿಲ್ದಾಣದಲ್ಲಿ ಬಂದೂಕು ತೋರಿಸಿ ಅಪಹರಣ: ಕೊಲೆ ಬೆದರಿಕೆ

ಕೊಚ್ಚಿ: ದುಬಾಯಿಯಿಂದ ನಿನ್ನೆ ಮುಂಜಾನೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕಾಸರಗೋಡು ಕಿಳಕ್ಕೇಕರೆ ತವಕ್ಕಲ್ ಮಂಜಿಲ್‌ನ ನಿವಾಸಿ ಮುಹಮ್ಮದ್ ಶಾಫಿ (40)ನನ್ನು ಬಂಧೂಕು ತೋರಿಸಿ ಅಪಹರಿಸಿಕೊಂಡು ಹೋಗಿ ಹ್ಯಾಂಡ್ ಬ್ಯಾಗ್ ಹಾಗೂ ಐಫೋನ್ ಮತ್ತು ಸಾಮಗ್ರಿಗಳನ್ನು ಅಪಹರಿಸಿದ ಘಟನೆ ನಡೆದಿದೆ. ಚಿನ್ನ ಎಲ್ಲಿದೆ ಎಂದು ಪ್ರಶ್ನಿಸಿ ಹಲ್ಲೆಗೈದ ಬಳಿಕ ೬ ಮಂದಿಯ ತಂಡ ಕಾರಿನಲ್ಲಿ ಸುತ್ತಾಟ ನಡೆಸಿ ಇವರನ್ನು ಪ್ರಶ್ನಿಸಿದ್ದು, ಬಳಿಕ ಬೆದರಿಕೆಯೂ ಒಡ್ಡಿದೆ ಎನ್ನಲಾಗಿದೆ. ಕೊನೆಗೆ ಆಲುವಾ ಪರವೂರ್‌ನಲ್ಲಿ ಕಾರಿನಿಂದ ಇವರನ್ನು ಇಳಿಸಿ ತಂಡ ಪರಾರಿಯಾಗಿದೆ. …

ಮರ ಕಡಿಯುತ್ತಿದ್ದ ವೇಳೆ ರೆಂಬೆ ದೇಹಕ್ಕೆ ಬಿದ್ದು ಗಾಯಗೊಂಡ ಯುವಕ ಸಾವು

ಕಾಸರಗೋಡು: ಮರ ಕಡಿಯುತ್ತಿದ್ದ ವೇಳೆ ಅದರ ರೆಂಬೆ ಮೈಮೇಲೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಬಂದಡ್ಕಕ್ಕೆ ಸಮೀಪದ ಕರಿವೇಡಗಂನ ಅಜಿ-ಅನಿತ ದಂಪತಿ ಪುತ್ರ ಸಜೋ ಅಜಿ (24) ಸಾವನ್ನಪ್ಪಿದ ಯುವಕ. ರೆಂಬೆ ದೇಹದ ಮೇಲೆ ಬಿದ್ದು ಗಂಭೀರ ಗಾಯಗೊಂಡ ಸಜೋ ಅಜಿಯನ್ನು ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾದೆ ಆತ ನಿಧನಹೊಂದಿದನು. ಮೃತನು ಹೆತ್ತವರ ಹೊರತಾಗಿ ಸಹೋದರ ಸಜಿತ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾನೆ.

ಪಿಣರಾಯಿಯಲ್ಲಿ ಸ್ಫೋಟ ಉಂಟಾಗಿರುವುದು ರೀಲ್ಸ್ ಚಿತ್ರೀಕರಣ ವೇಳೆ

ಕಣ್ಣೂರು: ಪಿಣರಾಯಿಯಲ್ಲಿ ಇತ್ತೀಚೆಗೆ ಉಂಟಾದ ಸ್ಫೋಟ ರೀಲ್ಸ್ ಚಿತ್ರೀಕರಣ ವೇಳೆ ನಡೆದಿರುವುದಾಗಿ  ಹೇಳ ಲಾಗುತ್ತಿದೆ.  ವಿಪಿನ್‌ರಾಜ್ ಎಂಬಾತನ ಕೈಯಲ್ಲಿ ಸ್ಫೋಟಕ ವಸ್ತು ಸಿಡಿದಿದ್ದು, ಇದು ರೀಲ್ಸ್ ಚಿತ್ರೀಕರಣ ವೇಳೆ ಸಂಭವಿಸಿ ದೆಯೆಂಬುವುದನ್ನು ಸಾಬೀತುಪಡಿಸುವ ದೃಶ್ಯಗಳು ಲಭಿಸಿರುವುದಾಗಿ ವರದಿ ಯಾಗಿದೆ. ಸ್ಫೋಟಕ ವಸ್ತುವಿಗೆ ಬೆಂಕಿ ಹಚ್ಚಿದ ಬಳಿಕ ಅದನ್ನು ಎಸೆಯಲು ಯತ್ನಿಸುತ್ತಿದ್ದಾಗ ಅದು ಕೈಯಲ್ಲೇ ಸಿಡಿದಿರುವುದು ದೃಶ್ಯದಲ್ಲಿದೆಯೆನ್ನಲಾಗುತ್ತಿದೆ. ಸ್ಫೋಟದಿಂದ ಕೈಗೆ ಗಂಭೀರ ಗಾಯಗೊಂಡಿರುವ ವಿಪಿನ್ ರಾಜ್ ಪ್ರಸ್ತುತ ಆಸ್ಪತ್ರೆಯಲ್ಲಿದ್ದಾನೆ. ಕಳೆದ ಮಂಗಳವಾರ ಮಧ್ಯಾಹ್ನ ಪಿಣರಾಯಿ ಕನಾಲ್‌ಕರ ಎಂಬಲ್ಲಿ ಘಟನೆ …

ಮಾಡತ್ತಡ್ಕ ಶ್ರೀ ಹರಿಹರ ಭಜನಾ ಮಂದಿರದಲ್ಲಿ ಸಾಹಿತ್ಯ ಗಾನ ನೃತ್ಯ ವೈಭವ

ನೀರ್ಚಾಲು: ಮಾಡತ್ತಡ್ಕ ಶ್ರೀ ಹರಿಹರ ಭಜನಾ ಮಂದಿರದಲ್ಲಿ ಶ್ರೀ ಅಯ್ಯಪ್ಪ ದೀಪೋತ್ಸವದ ಅಂಗವಾಗಿ ಡಾ. ವಾಣಿಶ್ರೀ ನೇತೃತ್ವದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ ವತಿಯಿಂದ 143ನೇ ಸಾಹಿತ್ಯ ಗಾನ ನೃತ್ಯ ವೈಭವ ಕಾರ್ಯಕ್ರಮ ನಡೆಯಿತು. ಡಾ. ವಾಣಿಶ್ರೀ ಕಾಸರಗೋಡು ನಿರೂಪಿಸಿದರು. ಗಾನಾಮೃತ ಕಾರ್ಯಕ್ರಮದಲ್ಲಿ ಮೇ ಘರಾಜ್ ಆಚಾರ್ಯ ಹಾಡಿದರು. ಸಂಸ್ಥೆಯ ಸಾಧಕಿ ಪ್ರೀತಿಕಾ ಪ್ರಸಾದ್ ಅವರಿಂದ ರಿಂಗ್ ನೃತ್ಯ ಜರಗಿತು. ಪುಟಾಣಿ ಸಾಧಕಿ ಮಾನ್ವಿಸಾಗರ್ ಯೋಗ ನೃತ್ಯ ಕಾರ್ಯಕ್ರಮಕ್ಕೆ ರಂಗು ನೀಡಿತು. ಸಂಸ್ಥೆಯ ಶ್ರೇಯ ಸೂರ್ಯ, …

ವಿಶ್ರಾಂತಿಗೆ ಬೀಗ: ಲಕ್ಷಾಂತರ ರೂ. ವೆಚ್ಚದಲ್ಲಿ ಬೀದಿ ಬದಿ ಆರಂಭಿಸಿದ ಕಟ್ಟಡ ಮುಚ್ಚುಗಡೆ

ಬೋವಿಕ್ಕಾನ: ಸಾರ್ವಜನಿಕರಿಗೆ ಹಾಗೂ ದೀರ್ಘದೂರ ಪ್ರಯಾಣಿಕರಿಗೆ ಉಪಯೋಗವಾಗುವ ರೀತಿಯಲ್ಲಿ ಬೀದಿಬದಿ ವಿಶ್ರಾಂತಿ ಕೇಂದ್ರವನ್ನು ಸ್ಥಾಪಿಸಲಾಗಿತ್ತು. ಆದರೆ ಈಗ ಆ ಕೇಂದ್ರಗಳು ನಿರುಪಯುಕ್ತವಾಗಿ ಬದಲಾಗಿದೆ. ಕಾರಡ್ಕ ಬ್ಲೋಕ್ ಪಂ.ನ ವತಿಯಿಂದ ಪೊವ್ವಲ್ ಬೆಂಚ್‌ಕೋರ್ಟ್ ಹತ್ತಿರ ೨೨ ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ಈ ರೀತಿಯ ವಿಶ್ರಾಂತಿ ಕೇಂದ್ರವೊಂದು ಈಗ ಬೀಗ ಜಡಿದ ರೀತಿಯಲ್ಲಿ ಕಂಡು ಬರುತ್ತಿದೆ. ೨೦೨೪ ಡಿಸೆಂಬರ್ ತಿಂಗಳಲ್ಲಿ ಈ ಕೇಂದ್ರವನ್ನು ಉದ್ಘಾಟಿಸಲಾಗಿತ್ತು. ಚೆರ್ಕಳ- ಜಾಲ್ಸೂರು ರಸ್ತೆಯ ಪೊವ್ವಲ್ ಬಳಿ ನಿರ್ಮಿಸಿದ ಈ ವಿಶ್ರಾಂತಿ ಕೇಂದ್ರದ ಪರಿಸರದಲ್ಲಿ …

70ರ ವೃದ್ದೆ ಮನೆಯೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ: ಕೊಲೆ ಶಂಕೆ

ಕೊಚ್ಚಿ: ಇಡಪ್ಪಳ್ಳಿಯಲ್ಲಿನ ನಿವೃತ್ತ ಅಧ್ಯಾಪಿಕೆಯ ಸಾವು ಕೊಲೆ ಕೃತ್ಯವೆಂದು ಶಂಕಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪೋನೇಕರ ನಿವಾಸಿ ವನಜ (70) ಸಾವಿಗೀಡಾದ ಮಹಿಳೆ. ಶುಕ್ರವಾರ ರಾತ್ರಿ ವನಜ ನಿಗೂಢವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ದೇಹದಲ್ಲಿ ಗಾಯಗಳಿತ್ತೆನ್ನಲಾಗಿದೆ. ಮಲಗುವ ಕೊಠಡಿಯಲ್ಲಿ ರಕ್ತ ಕಂಡುಬಂದಿದೆ. ಮೃತದೇಹದ ಸಮೀಪದಲ್ಲೇ ಒಂದು ಕತ್ತಿಯನ್ನು ಕೂಡಾ ಪತ್ತೆಹಚ್ಚಲಾಗಿದೆ. ಪ್ರಾಥಮಿಕ ತಪಾಸಣೆಯಲ್ಲಿ ಕೊಲೆಕೃತ್ಯ ವೆಂದು ಶಂಕಿಸುತ್ತಿರುವುದಾಗಿ ಎಳಮಕ್ಕರ ಪೊಲೀಸರು ತಿಳಿಸಿದ್ದಾರೆ. ಶ್ವಾನದಳ ರಾತ್ರಿಯೇ ಸ್ಥಳಕ್ಕೆ ತಲುಪಿದೆ. ಸಮೀಪದ ಸಿಸಿ ಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಘಟನೆ ನಡೆಯು …

ಸಾರ್ವಜನಿಕ ಸ್ಥಳಗಳಲ್ಲಿನ ಮಹಿಳೆಯರ ಸಮಸ್ಯೆ ಪರಿಹರಿಸಲು ಮಹಿಳಾ ಆಯೋಗದ ನೇತೃತ್ವದಲ್ಲಿ ಯೋಜನೆ ಆವಿಷ್ಕಾರ- ಪಿ. ಕುಂಞಾಯಿಷ

ಕಾಸರಗೋಡು: ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ಕಂಡುಬರುವ ಸಮಸ್ಯೆಗಳನ್ನು ಪರಿಹರಿಸಲು ಮಹಿಳಾ ಆಯೋಗದ ನೇತೃತ್ವದಲ್ಲಿ ಯೋಜನೆ ಗಳನ್ನು ಆವಿಷ್ಕರಿಸಲಾಗುವುದೆಂದು ಕೇರಳ ಮಹಿಳಾ ಆಯೋಗದ ಸದಸ್ಯೆ ನ್ಯಾಯವಾದಿ ಪಿ. ಕುಂಞಾಯಿಷ ನುಡಿ ದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅದಾಲತ್‌ನಲ್ಲಿ ದೂರು ಆಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾ ಡುತ್ತಿದ್ದರು. ಇದರ ಮುಂಚಿತವಾಗಿ ಸಮಸ್ಯೆಗಳನ್ನು ತಿಳಿದು ನಿರ್ದೇಶಗಳನ್ನು ಸಮರ್ಪಿಸುವುದಕ್ಕಾಗಿ ಜನವರಿಯಿಂದ ವಿಚಾರಗೋಷ್ಠಿಗಳನ್ನು ಆರಂಭಿಸುವು ದಾಗಿಯೂ ಅವರು ನುಡಿದರು. ಮಹಿಳೆಯರ ವಿರುದ್ಧವಿರುವ ಆಕ್ರಮಣವನ್ನು ತಡೆಯುವುದಕ್ಕೆ ಪ್ರಯಾಣ ವೇಳೆಗಳಲ್ಲಿ, …

ಮಂಜೇಶ್ವರ ಮಂಡಲದಲ್ಲಿ ಯುಡಿಎಫ್ ಆಕ್ರಮಣ: ನಿಲ್ಲಿಸದಿದ್ದರೆ ಪ್ರತಿಭಟನೆಗೆ ಮುಂದಾಗುವುದಾಗಿ ಎಲ್‌ಡಿಎಫ್

ಮಂಜೇಶ್ವರ: ಚುನಾವಣೆ ಕಳೆದ ಬಳಿಕ ಮಂಜೇಶ್ವರ ಮಂಡಲದ ವಿವಿಧ ಪ್ರದೇಶಗಳಲ್ಲಿ ಐಕ್ಯರಂಗದ ನೇತೃತ್ವದಲ್ಲಿ ಎಡರಂಗ ಕಾರ್ಯಕರ್ತರ ವಿರುದ್ಧ ಆಕ್ರಮಣ ನಡೆಸಲಾಗುತ್ತಿರುವುದಾಗಿ ಸಿಪಿಎಂ ಮಂಜೇಶ್ವರ ಏರಿಯಾ ಸಮಿತಿ ಕಾರ್ಯದರ್ಶಿ ಕೆ.ಆರ್. ಜಯಾನಂದ ಆರೋಪಿಸಿದ್ದಾರೆ. ಮಂಜೇಶ್ವರದ ಶಾಸಕರ ಬೆಂಬಲದೊಂದಿಗೆ ಈ ತಂಡ ವಿನಾಕಾರಣ ಆಕ್ರಮಣ ನಡೆಸುತ್ತಿರು ವುದಾಗಿ ಅವರು ದೂರಿದ್ದು, ಜನಪ್ರತಿನಿಧಿ ಗಳು ಈ ರೀತಿಯ ಆಕ್ರಮಣಗಳಿಗೆ ನೇತೃತ್ವ ನೀಡುತ್ತಿರುವುದು ಈ ಪರಿಸರದ ಜನರ ನೆಮ್ಮದಿಯನ್ನು ಹಾಳುಮಾಡಲಿದೆ ಎಂದು ಅವರು ತಿಳಿಸಿದ್ದಾರೆ. ಪ್ರದೇಶದಲ್ಲಿ ಗೂಂಡಾ ರಾಜ್ಯ ಸ್ಥಾಪಿಸಲು ಮುಸ್ಲಿಂ ಲೀಗ್ …

ನಿಧನ

ಕಾಸರಗೋಡು: ಆನೆಬಾಗಿಲು ನಿವಾಸಿ ಗಣೇಶ ಆಚಾರ್ಯ (62) ನಿನ್ನೆ ನಿಧನ ಹೊಂದಿದರು. ಇವರು ವಿಶ್ವಕರ್ಮ ಯುವಕಸಂಘದ ಕಾರ್ಯ ದರ್ಶಿಯಾಗಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಾಸರಗೋಡಿನಲ್ಲಿ ಭಜನಾಮಂದಿರ, ಕಲ್ಯಾಣ ಮಂಟಪ ಯೋಜನೆಯಲ್ಲಿ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಶ್ರೀವಳ್ಳಿ (ಯುಗಪುರುಷ ನರೇಂದ್ರ ಮೋದಿ ವಿದ್ಯಾಲಯದ ಮುಖ್ಯೋಪಾ ಧ್ಯಾಯಿನಿ), ಮಕ್ಕಳಾದ ಶ್ರೇಷ್ಠ, ವರ್ಷ, ಸಹೋದರ-ಸಹೋದರಿಯರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ನಿಧನಕ್ಕೆ ಕಾಸರಗೋಡು ಶ್ರೀ ವಿಶ್ವಬ್ರಾಹ್ಮಣ ಸಮಾಜಸೇವಾಸಂಘ, ಶ್ರೀ ವಿಶ್ವಕರ್ಮ ಯುವಕಸಂಘ, ಶ್ರೀ ವಿಶ್ವಕರ್ಮ ಮಹಿಳಾ ಸಂಘ ಸಂತಾಪ …

ನಿವೃತ್ತ ಅಧ್ಯಾಪಕ ನಿಧನ

ಬದಿಯಡ್ಕ: ನಿವೃತ್ತ ಅಧ್ಯಾಪಕ ಉಪ್ಪಂಗಳ ಭಸ್ಮಾಜೆ ಪಿ. ಗೋಪಾಲ ಕೃಷ್ಣ ಭಟ್ (86) ನಿಧನಹೊಂದಿ ದರು. ಇವರು ಪೈಕ ಎಯುಪಿ ಶಾಲೆ ಯಲ್ಲಿ ಅಧ್ಯಾಪಕರಾಗಿ ನಿವೃತ್ತರಾಗಿದ್ದರು. ಮೃತರು ಪತ್ನಿ ಇಂದಿರ, ಮಕ್ಕಳಾದ  ವಿಜಯಲಕ್ಷ್ಮಿ, ಭಾರತಿ, ರಂಜಿನಿ, ಅಳಿಯಂದಿರಾದ ಸುಬ್ರಹ್ಮ ಣ್ಯ ಮುಂಡುಗಾರು, ವೆಂಕಟ್ರಮಣ ಭಟ್ ವಡ್ಯದಗಯ, ಶ್ರೀಪತಿ ಸೂರ್ಡೇಲು ಹಾಗೂ  ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.