16, 10 ವರ್ಷದ ಬಾಲಕಿಯರಿಗೆ ಕಿರುಕುಳ: ಮಲತಂದೆ ವಿರುದ್ಧ ಪೋಕ್ಸೋ ಕೇಸು, ಬಂಧನ

ಕುಂಬಳೆ: 16 ಹಾಗೂ 10 ವರ್ಷ ಪ್ರಾಯದ ಇಬ್ಬರು ಹೆಣ್ಮಕ್ಕಳಿಗೆ ಕಿರುಕುಳ ನೀಡಿರುವುದಾಗಿ ದೂರಲಾಗಿದೆ. ಘಟನೆಗೆ ಸಂಬಂಧಿಸಿ ಹೆಣ್ಮಕ್ಕಳ ಮಲತಂದೆಯಾದ ಕಣ್ಣೂರು ಪಾಪಿನಿಶ್ಶೇರಿ ನಿವಾಸಿ ಪ್ರಸ್ತುತ ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಕ್ವಾಟರ್ಸ್‌ವೊಂದರಲ್ಲಿ ವಾಸಿಸುವ ಮಧ್ಯವಯಸ್ಕನನ್ನು ಪೋಕ್ಸೋ ಪ್ರಕಾರ ಪೊಲೀಸರು ಬಂಧಿಸಿದ್ದಾರೆ. 2024 ಸೆಪ್ಟಂಬರ್ ತಿಂಗಳಲ್ಲಿ ನಡೆದ ಈ ಘಟನೆಗೆ ಸಂಬಂಧಿಸಿ ಬಾಲಕಿಯರು ನೀಡಿದ ದೂರಿನಂತೆ ಮಲತಂದೆ ವಿರುದ್ಧ ಎರಡು ಪೋಕ್ಸೋ ಕೇಸುಗಳನ್ನು  ದಾಖಲಿಸಿಕೊಳ್ಳಲಾಗಿದೆ. ಈ ಬಾಲಕಿಯರು ಬೋರ್ಡಿಂಗ್ ಶಾಲೆಯಲ್ಲಿ ಕಲಿಯುತ್ತಿದ್ದಾರೆ. ಓಣಂ ರಜೆಯಲ್ಲಿ  ತಾಯಿಯ ಕ್ವಾರ್ಟರ್ಸ್‌ಗೆ …

ಕಗ್ಗಂಟಾಗಿ ಮುಂದುವರಿಯುತ್ತಿರುವ ಮುಖ್ಯಮಂತ್ರಿ ಆಯ್ಕೆ

ತಿರುವನಂತಪುರ: ಮುಖ್ಯಮಂತ್ರಿ ಯಾರಾಗಬೇಕು ಎಂಬ ವಿಷಯದ ಬಗ್ಗೆ ಕಾಂಗ್ರೆಸ್ ಶಾಸಕರ ಅಭಿಪ್ರಾಯಗಳನ್ನೊಳಗೊಂಡ ವರದಿಯನ್ನು ಕಾಂಗ್ರೆಸ್ ಕೇಂದ್ರ ಸಮಿತಿಯ ವೀಕ್ಷಕರಾದ ಅಜಯ್ ಮಾಖಾನ್ ಮತ್ತು ಮುಕುಲ್ ವಾಸ್ನಿಕ್ ಇಂದು ಕಾಂಗ್ರೆಸ್ ಹೈಕಮಾಂಡ್‌ಗೆ ಸಲ್ಲಿಸುವರು. ಈ ವರದಿಯನ್ನು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಪರಿಶೀಲಿಸಿದ ಬಳಿಕ ಮುಖ್ಯಮಂತ್ರಿ  ಸ್ಥಾನ ಆಗ್ರಹಿಸುತ್ತಿರುವ ವಿ.ಡಿ. ಸತೀಶ್, ಕಾಂಗ್ರೆಸ್‌ನ ಹಿರಿಯ ನೇತಾರ ರಮೇಶ್ ಚೆನ್ನಿತ್ತಲ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಕೆ.ಸಿ. ವೇಣು ಗೋಪಾಲ್‌ರನ್ನು ನೇರವಾಗಿ …

 ಸಾಕುನಾಯಿ ದಾಳಿ: ಪಾದಚಾರಿಗೆ ಗಂಭೀರ ಗಾಯ

ಕುಂಬಳೆ: ಸಾಕು ನಾಯಿಯ ದಾಳಿಯಿಂದ ಗಂಭೀರ ಗಾಯ ಗೊಂಡು ಪಾದಚಾರಿಯೋರ್ವ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕುಂಬಳೆ ಬದ್ರಿಯಾನಗರದ ಮುಜೀಬ್ ರಹ್ಮಾನ್ (52) ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.  ಮಾಳಿಯಂಗರ ಪೆರ್ವಾಡು ರಸ್ತೆಯಲ್ಲಿ  ಬುಧವಾರ ಬೆಳಿಗ್ಗೆ ೭ ಗಂಟೆ ವೇಳೆ  ಮುಜೀಬ್ ರಹ್ಮಾನ್ ನಡೆದು ಹೋಗುತ್ತಿದ್ದಾಗ ಸಮೀಪದ ಮನೆಯೊಂದರ ಗೇಟ್ ಮೂಲಕ ಹೊರಗೆ ಓಡಿ ಬಂದ ನಾಯಿ ಕಚ್ಚಿ ಗಾಯಗೊಳಿ ಸಿದೆ ಎಂದು ದೂರಲಾಗಿದೆ. ನಾಯಿಯ ದಾಳಿ ವೇಳೆ ಮುಜೀಬ್ ರಹ್ಮಾನ್ ಆಯತಪ್ಪಿ ಬಿದ್ದಿದ್ದು ಅವರ ಬೊಬ್ಬೆ ಕೇಳಿ ಸ್ಥಳೀಯರು …

ಅಂಗಡಿಮೊಗರು ಒಡುವಾರು ಅಮಾನತ್ತುಲ್ ಇಸ್ಲಾಂ ಮದ್ರಸ ವಾರ್ಷಿಕ ನಾಳೆಯಿಂದ

ಕುಂಬಳೆ: ಅಂಗಡಿಮೊಗರು ಒಡುವಾರು ಅಮಾನತ್ತುಲ್ ಇಸ್ಲಾಂ ಮದ್ರಸ ವಾರ್ಷಿಕ ಹಾಗೂ ಮತ ವಿಜ್ಞಾನ ಸದಸ್ ನಾಳೆಯಿಂದ 13ರವರೆಗೆ ಒಡುವಾರು ಬದರ್ ಜುಮಾ ಮಸೀದಿಯಲ್ಲಿ ನಡೆಯಲಿದೆ ಎಂದು ಸಂಬಂಧಪಟ್ಟವರು ಸುದ್ಧಿಗೋಷ್ಠಿ ಯಲ್ಲಿ ತಿಳಿಸಿದ್ದಾರೆ. ನಾಳೆ ರಾತ್ರಿ 7 ಗಂಟೆಗೆ ಕೆ.ಎಸ್. ಆಟಕೋಯ ತಂಙಳ್ ಕುಂಬೋಳ್ ಉದ್ಘಾಟಿಸು ವರು. ಡಾ. ಫರೂಕ್ ನಯಿಮಿ ಕೊಲ್ಲಂ ಹಿಜ್ರ ಎಕ್ಸ್‌ಪೆಡಿಶನ್ ನಿರ್ವಹಿಸುವರು. ಆದಿತ್ಯವಾರ, ಸೋಮವಾರ ರಾತ್ರಿ 8 ಗಂಟೆಗೆ ಸುಬೈರ್ ಮಾಸ್ಟರ್ ತೊಟ್ಟಿಕ್ಕಲ್ ಹಾಗೂ ತಂಡದವರಿಂದ ಇಸ್ಲಾಮಿಕ ಕಥಾ ಪ್ರವಚನ ನಡೆಯಲಿದೆ. ಮಂಗಳವಾರ …

ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಹಿತ್ತಾಳೆ ಕವಚದ 18 ಮೆಟ್ಟಿಲುಗಳ ಲೋಕಾರ್ಪಣೆ 11ರಂದು

ಬದಿಯಡ್ಕ: ಬಡಗು ಶಬರಿಮಲೆಯೆಂದೇ ಪ್ರಸಿದ್ಧವಾದ ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ  ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ನಿರ್ಮಿಸಿದ  ಹಿತ್ತಾಳೆ ಕವಚದ 18 ಮೆಟ್ಟಿಲುಗಳ ಲೋಕಾರ್ಪಣೆ ಹಾಗೂ ಶ್ರೀ ದೇವರ  ಭವ್ಯ ಮಹೋತ್ಸವ ಮೇ 11ರಂದು ನಡೆಯಲಿದೆ. ಅಂದು ಸಂಜೆ 5 ಗಂಟೆಗೆ ಧಾರ್ಮಿಕ ಸಭೆ ನಡೆಯಲಿದೆ. 6.30ಕ್ಕೆ 101 ಚೆಂಡೆ ವಾದ್ಯಗಳೊಂದಿಗೆ ಹಿತ್ತಾಳೆ ಕವಚದ 18 ಮೆಟ್ಟಿಲುಗಳ ದ್ವಾರಪೂಜೆ ಹಾಗೂ ಲೋಕಾರ್ಪಣೆ ನಡೆಯಲಿರು ವುದು. ಶ್ರೀ ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶರಾದ ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನ …

ಮೀಯಪದವುನಲ್ಲಿ ಗುಡ್ಡೆ ಜರಿದು ಬೀಳುವ ಆತಂಕ: ಮಲೆನಾಡು ಹೆದ್ದಾರಿಯಲ್ಲಿ ಸಂಚಾರ ಭೀತಿ

ಮಂಜೇಶ್ವರ: ನಂದರಪದವು ಮಲೆನಾಡ ಹೆದ್ದಾರಿಯ ಮೀಯಪದವು ಪರಿಸರ ಪ್ರದೇಶದಲ್ಲಿ ಗುಡ್ಡೆ ಜರಿದು ಬೀಳುವ ಸ್ಥಿತಿಯಲ್ಲಿದ್ದು, ತಡೆಗೋಡೆ ನಿರ್ಮಿಸಿ ಭದ್ರತೆ ಒದಗಿಸಲು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಕಳೆದ ಮಳೆಗಾಲದಲ್ಲಿ ಮೀಯಪದವು ಸಮೀಪದ ತಿರುವಿನಲ್ಲಿ ಗುಡ್ಡೆ ಜರಿದು ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ನಡೆದಿತ್ತÄ.ಮಳೆಗಾಲ ಸಮೀಪಿಸುತ್ತಿದ್ದು, ಮತ್ತೆ ಗುಡ್ಡೆ ಜರಿದು ಬೀಳುವ ಆತಂಕ ಜನರನ್ನು ಕಾಡುತ್ತಿದೆ. ಸಂಬAಧಪಟ್ಟ ಇಲಾಖೆ ಅಧಿಕಾರಿಗಳು ಗುಡ್ಡೆ ಜರಿದು ಬೀಳುವ ಪ್ರದೇಶವನ್ನು ಪರಿಶೀಲಿಸಿ ಭದ್ರತೆ ಒದಗಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕುಂಬ್ಡಾಜೆಯಲ್ಲಿ ಮಳೆಗಾಲಪೂರ್ವ ಸ್ವಚ್ಛತೆಗೆ ಚಾಲನೆ

ಬದಿಯಡ್ಕ: ಆರೋಗ್ಯ ಜಾಗೃತಿಯಂಗವಾಗಿ ಕುಂಬ್ಡಾಜೆ ಪಂಚಾಯತ್, ಕುಟುಂಬ ಆರೋಗ್ಯ ಕೇಂದ್ರದ ಜಂಟಿ ಆಶ್ರಯದಲ್ಲಿ ನಿನ್ನೆ ಮಾರ್ಪನಡ್ಕ ಪಾಂಚಜನ್ಯ ಸಭಾಂಗಣದಲ್ಲಿ ಆರೋಗ್ಯ ವಿಚಾರ ಸಂಕಿರಣ ಮತ್ತು ಪೇಟೆ ಶುಚೀಕರಣ ಕಾರ್ಯಕ್ರಮ ನಡೆಯಿತು.ಕುಂಬ್ಡಾಜೆ ಪಂ.ನ ೧೪ ವಾರ್ಡ್ ಗಳಲ್ಲಿ ೧೪ರವರೆಗೆ ವಾರ್ಡ್ ಮಟ್ಟ ದಲ್ಲಿ ಜನಪ್ರತಿನಿದಿsಗಳ ನೇತೃತ್ವದಲ್ಲಿ ಸ್ವಚ್ಛತಾ ಸಪ್ತಾಹವನ್ನು ಆಚರಿಸ ಲಾಗುವುದು. ಇದರಂಗವಾಗಿ ನಡೆದ ವಿಚಾರ ಸಂಕಿರಣ, ಸಭೆ ಮತ್ತು ಗುಂಪು ಚರ್ಚೆಯಲ್ಲಿ ೨೦೦ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.ಕುಂಬ್ಡಾಜೆ ಪಂ. ಆರೋಗ್ಯ ಮತ್ತು ಶಿಕ್ಷಣ ವ್ಯವಹಾರಗಳ ಸಮಿತಿ ಅಧ್ಯಕ್ಷೆ …

ಮುಸ್ಲಿಂಲೀಗ್‌ಗೆ ನಾಲ್ಕು ಸಚಿವ ಸ್ಥಾನ: ಪಟ್ಟಿ ಸಿದ್ಧ

ತಿರುವನಂತಪುರ: ಹತ್ತು ವರ್ಷದ ಬಳಿಕ ಕೇರಳದಲ್ಲಿ ಮತ್ತೆ ಅಧಿಕಾರಕ್ಕೇರಲಿರುವ ಯುಡಿಎಫ್ ಸರಕಾರದಲ್ಲಿ ಸಚಿವರಾಗುವ ಮುಸ್ಲಿಂ ಲೀಗ್‌ನ ನೇತಾರರಾದ ಯಾದಿಯನ್ನು ಮುಸ್ಲಿಂ ಲೀಗ್ ರಾಜ್ಯ ನೇತೃತ್ವ ಈಗಾಗಲೇ ತಯಾರಿಸಿದೆ. ಇದರಂತೆ ಮುಸ್ಲಿಂ ಲೀಗ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಕೆ. ಕುಂಞಾಲಿಕುಟ್ಟಿ, ಪಿ.ಕೆ ಬಶೀರ್, ಎಂ.ಕೆ. ಶಾಜಿ ಮತ್ತು ಎನ್. ಶಂಸುದ್ದೀನ್ ಎಂಬವರ ಪಟ್ಟಿಯನ್ನು  ಸಚಿವ ಸ್ಥಾನಕ್ಕಾಗಿ ಮುಸ್ಲಿಂ ಲೀಗ್ ಸಿದ್ಧಪಡಿಸಿದೆ. ಯುಡಿಎಫ್ ಸಚಿವ ಸಂಪುಟದಲ್ಲಿ ಮುಸ್ಲಿಂ ಲೀಗ್‌ಗೆ ನಾಲ್ಕು ಸಚಿವ ಸ್ಥಾನ ನೀಡುವ ತೀರ್ಮಾನವನ್ನು ಯುಡಿಎಫ್ ಈಗಾಗಲೇ ಕೈಗೊಂಡಿದೆ. …

ಕೃಷಿಕೆ ನಿಧನ

ಪೈವಳಿಕೆ: ಖ್ಯಾತ ಯಕ್ಷಗಾನ ಕಲಾವಿದರಾಗಿದ್ದ ದಿ| ಕರುವೋಳು ದೇರಣ್ಣ ಶೆಟ್ಟಿಯವರ ಪತ್ನಿ ರಾಧಮ್ಮ (86) ನಿಧನ ಹೊಂದಿದರು. ಕೃಷಿಕೆಯಾ ಗಿದ್ದರು. ಮೃತರು ಮಕ್ಕಳಾದ ಯಶೋಧ, ವಿಶಾಲಾಕ್ಷಿ, ಸುಮತಿ, ದಿನೇಶ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ನಿಧನಕ್ಕೆ ಪೈವಳಿಕೆ ಸಿಪಿಎಂ ಲೋಕಲ್ ಸಮಿತಿ, ಶಿರಂತಡ್ಕ ಕಾಡೂರು ಕುರುಡಪದವು ಬ್ರಾಂಚ್ ಸಮಿತಿ, ಕಿಸಾನ್ ಸಭಾ, ಸಿಐಟಿಯು, ಮಹಿಳಾ ಅಸೋಸಿಯೇಶನ್, ಡಿವೈಎಫ್‌ಐ ಘಟಕಗಳು, ಲಕ್ಕಿ ಸ್ಟಾರ್ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಗೋಳಿಕಟ್ಟೆ ಸಂತಾಪ ಸೂಚಿಸಿದೆ. ಮೃತರ …

ರಾಜ್ಯಕ್ಕೆ ತಲುಪಿದ ಶೃಂಗೇರಿಶ್ರೀಗಳಿಗೆ ಸ್ವರ್ಗದಲ್ಲಿ ಗಾರ್ಡ್ ಆಫ್ ಆನರ್

ಪೆರ್ಲ: ಶೃಂಗೇರಿ ಮಠದ ಕಿರಿಯ ಮಠಾಧೀಶ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಏಳು ದಿನಗಳ ಕೇರಳ ಭೇಟಿಗಾಗಿ ನಿನ್ನೆ ಸಂಜೆ ಪುತ್ತೂರು ಪಾಣಾಜೆ ಮೂಲಕ ಗಡಿ ಭಾಗವಾದ ಸ್ವರ್ಗಕ್ಕೆ ಆಗಮಿಸಿದಾಗ ರಾಜ್ಯ ಪೊಲೀಸ್ ವರಿಷ್ಠಾಧಿಕಾರಿ ಡಿಜಿಪಿ ರಾವಡ ಆಜಾದ್ ಚಂದ್ರಶೇಖರ್‌ರ ನೇತೃತ್ವದಲ್ಲಿ ರಾಜ್ಯ ಸರಕಾರದ ಪರವಾಗಿ ಗಾರ್ಡ್ ಆಫ್ ಆನರ್ ನೀಡಿ ಗೌರವಿಸಲಾಯಿತು. ಡಿಐಜಿ ಯತೀಶ್ಚಂದ್ರ ಐಪಿಎಸ್ ಸಹಿತ ಉನ್ನತ ಪೊಲೀಸ್ ಅಧಿಕಾರಿಗಳು ಸ್ವರ್ಗಕ್ಕೆ ತಲುಪಿದ್ದರು. ಕಜಂಪಾಡಿ ಸುಬ್ರಹ್ಮಣ್ಯ ಭಟ್, ಪಡ್ರೆ ಶ್ರೀ ಜಟಾಧಾರಿ ಮೂಲಸ್ಥಾನದ ಅರ್ಚಕ …