ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ :ಕೆಡೆಂಜಿ ಶ್ರೀ ಮಹಾವಿಷ್ಣು ಕ್ಷೇತ್ರದಿಂದ ಶ್ರದ್ಧಾಭಕ್ತಿಯ ಹಸಿರುವಾಣಿ ಮೆರವಣಿಗೆ
ಬದಿಯಡ್ಕ: ಸಹಸ್ರಾರು ಮಂದಿ ಭಗವದ್ಬಕ್ತರ ಶ್ರದ್ಧಾ ಭಕ್ತಿಯ ಪಾಲ್ಗೊಳ್ಳುವಿಕೆಯೊಂದಿಗೆ ಅದ್ದೂರಿಯ ಹಸಿರುವಾಣಿ ಮೆರವಣಿಗೆ ಆಗಮಿಸುವು ದರೊಂದಿಗೆ ಪೆರಡಾಲ ಶ್ರೀ ಉದನೇ ಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ನೀಡಲಾಯಿತು. ನಿನ್ನೆ ಮುಂ ಜಾನೆ ಶ್ರೀ ಕ್ಷೇತ್ರದಲ್ಲಿ ಗಣಪತಿ ಹೋಮ, ಉಗ್ರಾಣ ಮುಹೂರ್ತ ನಡೆಯಿತು. ಬಳಿಕ ಮಲ್ಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಸತ್ಯನಾರಾಯಣ ಭಟ್ ಆನೆಮಜಲು ದೀಪ ಬೆಳಗಿಸಿದರು. ಕೆಡೆಂಜಿ ಶ್ರೀ ಮಹಾವಿಷ್ಣು ದೇವಸ್ಥಾನ ದಲ್ಲಿ ಭಗವದ್ಭಕ್ತರು ಒಟ್ಟುಗೂಡಿ ಪ್ರಾರ್ಥನೆ ಸಲ್ಲಿಸಿ ಹಸಿರುವಾಣಿ …