ಕರ್ನಾಟಕದ ವಿದ್ಯುತ್ ಮೊಟಕು: ಕಾಸರಗೋಡಿನಲ್ಲಿ ಪವರ್ ಕಟ್

ಕಾಸರಗೋಡು: ಕರ್ನಾಟಕ ದಿಂದಿರುವ ವಿದ್ಯುತ್ ವಿತರಣೆ ಯಲ್ಲಿ ಮೊಟಕು ಉಂಟಾದ ಕಾಸರಗೋಡು, ಮಂಜೇಶ್ವರ ತಾಲೂಕುಗಳಲ್ಲಿ ಸತತವಾಗಿ ವಿದ್ಯುತ್ ಮೊಟಕಾಗುತ್ತಿದೆ. ಗುರುವಾರ ಸಂಜೆ 5 ಗಂಟೆಗೆ ಕರ್ನಾಟಕದಿಂದಿರುವ 110 ಕೆವಿ ಲೈನ್‌ನಲ್ಲಿ ಸಮಸ್ಯೆ ಕಂಡು ಬಂದಿತ್ತು. ಇದನ್ನು ಪರಿಹರಿಸಲು ಹೆಚ್ಚು ಸಮಯ ಬೇಕಾಗಬ ಹುದೆಂದು ಕರ್ನಾಟಕದ ವಿದ್ಯುತ್ ಅಧಿಕಾರಿಗಳು ತಿಳಿಸಿದ ಹಿನ್ನೆಲೆಯಲ್ಲಿ ಕೇರಳದ ವಿದ್ಯುತ್ ನ್ನು ಕಾಸರಗೋಡು ಮಂಜೇಶ್ವರ ತಾಲೂಕುಗಳಲ್ಲಿ ವಿತರಿಸಬೇಕಾಗಿ ಬಂತು. ಸ್ಥಳೀಯ ಫೀಡರ್‌ಗಳಲ್ಲಿ 15 ನಿಮಿಷದ ಅಂತರದಲ್ಲಿ ಪವರ್ ಕಟ್ ಏರ್ಪಡಿಸಿ ವಿದ್ಯುತ್ ವಿತರಿಸಲಾಗಿದೆ. ನಿನ್ನೆ …

ಮವ್ವಾರಿನಲ್ಲಿ ಕಣ್ಮುಚ್ಚಿ ಕುಳಿತ ಬೀದಿ ದೀಪ: ಸ್ಥಳೀಯರಿಗೆ ಸಮಸ್ಯೆ

ಮವ್ವಾರು: ರಾತ್ರಿ ಕಾಲಗಳಲ್ಲಿ ಜನರ ಸಂಚಾರಕ್ಕೆ ಬೆಳಕು ಲಭಿಸಲೆಂಬ ಉದ್ದೇಶದಿಂದ ರಸ್ತೆ ಬದಿಗಳಲ್ಲಿ ಸ್ಥಾಪಿಸುವ ಬೀದಿ ದೀಪಗಳು ಕಣ್ಮುಚ್ಚಿ ಕುಳಿತು ಉದ್ದೇಶವನ್ನೇ ಬುಡಮೇಲು ಗೊಳಿಸುತ್ತಿರುವುದು ಅಲ್ಲಲ್ಲಿ ಕಂಡುಬರುತ್ತಿದೆ. ಕುಂಬಳೆ-ಮುಳ್ಳೇರಿಯ ರಸ್ತೆ ಕೆಎಸ್‌ಟಿಪಿ ವತಿಯಿಂದ ದುರಸ್ತಿ ಗೊಳಿಸಿ ಉತ್ತಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇದೇ ವೇಳೆ ರಸ್ತೆ ಬದಿಯಲ್ಲಿ ವಿದ್ಯುತ್ ದೀಪ ಗಳನ್ನು ಕೂಡಾ ಅಳವಡಿಸಲಾಗಿದೆ. ಆದರೆ ಹೆಚ್ಚಿನ ಕಡೆಗಳಲ್ಲಿ ಈ ವಿದ್ಯುತ್ ದೀಪಗಳು ರಾತ್ರಿ ವೇಳೆ ಉರಿಯದೆ ಜನರಿಗೆ ಸಮಸ್ಯೆ ಉಂಟುಮಾಡುತ್ತಿದೆ. ಮವ್ವಾರು ವಿಶ್ವಕರ್ಮ ಭಜನಾ …

ಸೇನೆಗೆ ಆಯ್ಕೆಯಾದ ಯುವಕನಿಗೆ ಅಭಿನಂದನೆ

ಬದಿಯಡ್ಕ: ಗ್ರಾಮೀಣ ಭಾಗದ ಯುವಕ ಭಾರತೀಯ ಸೇನೆಗೆ ಆಯ್ಕೆಯಾಗಿದ್ದು, ಇವರನ್ನು ಬದಿಯಡ್ಕ ಪಂಚಾಯತ್ ವತಿಯಿಂದ ಅಭಿನಂದಿಸ ಲಾಯಿತು.  ನೀರ್ಚಾಲು ಸಮೀಪದ ದೇವರಮೆಟ್ಟು ನಿವಾಸಿ ನಾರಾಯಣ- ಶಾರದಾ ದಂಪತಿ ಪುತ್ರ ಮಧುರಾಜ್ ದೇಶಸೇವೆಗೆ ಅವಕಾಶ ಲಭಿಸಿದ್ದು, ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸಿ ದೈಹಿಕ ಮತ್ತು ಲಿಖಿತ ಪರೀಕ್ಷೆಗಳಲ್ಲಿ ಉತ್ತಮ ಅಂಕದೊಂದಿಗೆ ತೇರ್ಗಡೆ ಯಾಗಿದ್ದಾರೆ. ಇವರು ಇಂದು ಮಣಿಪುರ ದಲ್ಲಿ ನಡೆಯುವ ತರಬೇತಿಗಾಗಿ ತೆರಳಿದರು. ಕುಂಟಿಕಾನ ಹಿರಿಯ ಬುನಾದಿ ಶಾಲೆ, ಪೆರಡಾಲ ನವಜೀವನ ಶಾಲೆಯ ವಿದ್ಯಾರ್ಥಿಯಾಗಿದ್ದು, ಇವರನ್ನು ಬದಿಯಡ್ಕ ಪಂಚಾಯತ್  ಅಧ್ಯಕ್ಷ …

ಕುಂಬ್ಡಾಜೆಯಲ್ಲಿ ಹೆಣ್ಮಕ್ಕಳಿಗೆ ಎಚ್‌ಪಿವಿ ಚುಚ್ಚುಮದ್ದು ನೀಡಲು ಸಿದ್ಧತೆ ಪೂರ್ತಿ

ಕುಂಬ್ಡಾಜೆ: ಗರ್ಭಾಶಯ ಕ್ಯಾನ್ಸರ್ ಪ್ರತಿರೋಧಕ್ಕಾಗಿ 14 ವರ್ಷ ಪೂರ್ತಿಗೊಳಿಸಿದ ಹೆಣ್ಮಕ್ಕಳಿಗೆ ಉಚಿತವಾಗಿ ಹ್ಯೂಮನ್ ಹ್ಯಾಪಿ ಲೋಮ ವೈರಸ್ (ಎಚ್‌ಪಿವಿ) ವ್ಯಾಕ್ಸಿನ್ ನೀಡುವ ಯೋಜನೆಗೆ ಕುಂಬ್ಡಾಜೆ ಪಂಚಾಯತ್‌ನಲ್ಲಿ ಚಾಲನೆ ನೀಡಲಾಯಿತು. ಪಂಚಾಯತ್ ವ್ಯಾಪ್ತಿಯ 14 ವರ್ಷ ಪೂರ್ತಿಗೊ ಳಿಸಿದ ಎಲ್ಲಾ ಹೆಣ್ಮಕ್ಕಳಿಗೂ ಎರಡು ತಿಂಗಳೊಳಗೆ ವ್ಯಾಕ್ಸಿನ್ ನೀಡಿ 100 ಶೇಕಡಾ ಸಾಧನೆ ಹೊಂದಲು ಪಂಚಾಯತ್ ಜನಪ್ರತಿನಿಧಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರಿಯಾಂಕ ಅಧ್ಯಕ್ಷತೆ ವಹಿಸಿದ್ದು, ಅಧ್ಯಕ್ಷೆ ಯಶೋಧ ಉದ್ಘಾಟಿಸಿದರು. ಉಪಾಧ್ಯಕ್ಷ ರವೀಂದ್ರ ರೈ …

ಕೇರಳ ಸ್ಟೇಟ್ ಪೆನ್ಶನರ್ಸ್ ಸಂಘ್ ರಾಜ್ಯ ಸಮ್ಮೇಳನ ಆರಂಭ

ಕಾಸರಗೋಡು: ಪಿಂಚಣಿದಾರರ ಬಾಕಿ ಉಳಿಸಿಕೊಂಡಿರುವ ಮೊತ್ತವನ್ನು ಏಕ ಕಂತಿನಲ್ಲಿ ನೀಡಬೇಕು ಎಂದು ಬಿಎಂಎಸ್ ದಕ್ಷಿಣ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಎಂ.ಪಿ. ರಾಜೀವ್ ಆಗ್ರಹಿಸಿದರು. ಕೇರಳ ಸ್ಟೇಟ್ ಪೆನ್ಶನರ್ಸ್ ಸಂಘ್‌ನ 28ನೇ ರಾಜ್ಯ ಸಮ್ಮೇಳನಕ್ಕೆ ಕಾಸರಗೋಡು ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಕೇರಳ ಸ್ಟೇಟ್ ಪೆನ್ಶನರ್ಸ್ ಸಂಘ್ ರಾಜ್ಯ ಅಧ್ಯಕ್ಷ ಬಿ. ಜಯಪ್ರಕಾಶ್ ಅಧ್ಯಕ್ಷತೆ ವಹಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಪಿ. ಜಯಭಾನು, ರಾಜ್ಯ ಕಾರ್ಯದರ್ಶಿ ಎ. ಪ್ರಕಾಶ್, ಮುಖಂಡರಾದ ಜಿ. ಗೋಪಕುಮಾರ್, …

ಮೊಬೈಲ್ ಫೋನ್ ದುರಸ್ತಿಪಡಿಸಿ ನೀಡದ ವ್ಯಥೆ :ಪಿಯುಸಿ ವಿದ್ಯಾರ್ಥಿನಿ ವಿಷ ಸೇವಿಸಿ ಸಾವಿಗೆ ಶರಣು

ಕುಂಬಳೆ: ಮೊಬೈಲ್ ಫೋನ್‌ನ ಡಿಸ್ಲೇ ರಿಪೇರಿ ಮಾಡಿ ಕೊಡದಿರುವು ದರಿಂದ ಮನನೊಂದು  17ರ ಹರೆಯದ ವಿದ್ಯಾರ್ಥಿನಿ ಇಲಿ ವಿಷ ಸೇವಿಸಿ ಸಾವಿಗೆ ಶರಣಾದ ಘಟನೆ ನಡೆದಿದೆ. ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಕಿದೂರು ಕಳತ್ತೂರು ಶರವಂಕರ ಲಕ್ಷ್ಮೀ ನಿಲಯದ ದಾಮೋದರ ಎಂಬವರ ಪುತ್ರಿ ಎಂ.ಡಿ. ಪೂಜಾ (17) ಮೃತಪಟ್ಟ ವಿದ್ಯಾರ್ಥಿನಿಯಾಗಿ ದ್ದಾಳೆ. ಈಕೆ ಮಂಗಳೂರಿನಲ್ಲಿ  ಪಿಯುಸಿ ವಿದ್ಯಾರ್ಥಿನಿಯಾಗಿದ್ದಳು. ಈ ಮಧ್ಯೆ ಹಳದಿ ಕಾಮಾಲೆ ಬಾಧಿಸಿ ದೀರ್ಘಕಾಲ ಚಿಕಿತ್ಸೆಯಲ್ಲಿದ್ದುದರಿಂದ ಶಿಕ್ಷಣ ಮೊಟಕುಗೊಂಡಿತ್ತು. ಮುಂದಿನ ವರ್ಷ ಶಿಕ್ಷಣ ಮುಂದುವರಿಸಲು ನಿರ್ಧರಿಸಿದ್ದಳೆನ್ನಲಾಗಿದೆ. …

ಮುಳ್ಳೇರಿಯ: ತಂಡದಿಂದ ಹಲ್ಲೆ; ಇಬ್ಬರು ಆಸ್ಪತ್ರೆಯಲ್ಲಿ ದಾಖಲು

ಮುಳ್ಳೇರಿಯ: ಮುಳ್ಳೇರಿಯದಲ್ಲಿ ನಿನ್ನೆ ನಡೆದ ಘರ್ಷಣೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಇವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆದೂರು ಸಿಎ ನಗರ ನಿವಾಸಿ ಹಾಶಿಫ್ (28), ಮುಳ್ಳೇರಿಯ ಪೂತಪ್ಪಲದ ರಹೀಸ್ (18) ಎಂಬಿವರು ಗಾಯಗೊಂಡಿದ್ದು, ಇವರು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ನಿನ್ನೆ ರಾತ್ರಿ ೭ ಗಂಟೆ ವೇಳೆ ಮುಳ್ಳೇರಿಯದ ಮಸೀದಿಯಿಂದ ಮರಳುತ್ತಿದ್ದ ವೇಳೆ ತಂಡವೊಂದು ಹಲ್ಲೆಗೈದು ಗಾಯಗೊಳಿಸಿರುವುದಾಗಿ ಗಾಯಾಳುಗಳು ಆರೋಪಿಸಿದ್ದಾರೆ. ಪೂರ್ವದ್ವೇಷದಿಂದ ತಂಡ ತಡೆದು ನಿಲ್ಲಿಸಿ ವಿನಾಕಾರಣ ಹಲ್ಲೆಗೈದಿದೆ ಎಂದೂ ದೂರಲಾಗಿದೆ.

ಸುಖೋಯ್ ಫೈಟರ್ ಜೆಟ್ ಪಥನ: ಇಬ್ಬರು ಪೈಲಟ್‌ಗಳ ದುರ್ಮರಣ  

ನವದೆಹಲಿ: ಅಸ್ಸಾಂನ ಕರ್ಬಿ ಆಂಗ್ಲಾಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆದ ಸುಖೋಯ್  30  ಜೆಟ್ ವಿಮಾನ ಪಥನಗೊಂಡು ಅದರಲ್ಲಿದ್ದ ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದ್ದಾರೆ. ನಿನ್ನೆ ಸಂಜೆ ಈ ಜೆಟ್ ವಿಮಾನ ಜೋಹರ್ಟ್‌ನಿಂದ ಟೇಕ್ ಆಫ್ ಆದ ಸ್ವಲ್ಪ ಸಮ ಯದ  ಬಳಿಕ ವಿಮಾನ ರಾಡರ್ ಸಂಪರ್ಕ ಕಳೆದುಕೊಂಡಿತ್ತು. ನಂತರ ಆ ಬಗ್ಗೆ ಶೋಧ ನಡೆಸಿದಾಗ ವಿಮಾನ ಸುಮಾರು 60 ಕಿ.ಮೀ. ದೂರದಲ್ಲಿರುವ ಅಂಗ್ಲಾಂಗ್‌ನಲ್ಲಿ ಪಥನಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅದರ ಪೈಲೆಟ್‌ಗಳಾದ ಸ್ಕ್ವಾಡನ್ ಲೀಡರ್ ಅನುಜ್ ಮತ್ತು ಫ್ಲೈಟ್ ಲೆಫ್ಟಿನೆಂಟ್ …

ಪತ್ನಿ ನೀಡಿದ ವಿವಾಹ ವಿಚ್ಛೇಧನ ಪ್ರಕರಣ ನಾಳೆ ಪರಿಗಣಿಸಲಿರುವಂತೆ ಯುವಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಪೈವಳಿಕೆ: ಕಯ್ಯಾರಿನಲ್ಲಿ ಯುವಕನೋರ್ವ ಮನೆ ಸಮೀಪದ ಮರದಲ್ಲಿ ನೇಣುಬಿಗಿದು ಸಾವಿಗೀಡಾ ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಪಿಲಿಯನ್ನೂರಿನ ಬಾಲಚಂದ್ರ (44) ಮೃತಪಟ್ಟ ವ್ಯಕ್ತಿ. ನಿನ್ನೆ ಮಧ್ಯಾಹ್ನ ಮನೆ ಸಮೀಪದ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ವಿವಾಹ ವಿಚ್ಛೇಧನ ಆಗ್ರಹಿಸಿ ಪತ್ನಿ ದೀಪಿಕಾ ನೀಡಿದ ಪ್ರಕರಣವನ್ನು ನಾಳೆ ಪರಿಗಣಿಸಲಿರುವಂತೆ ಬಾಲಚಂದ್ರ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುಂಬಳೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.  ಬಾಲಚಂದ್ರರ ತಾಯಿ ಲಲಿತ ಈ ಹಿಂದೆ ನಿಧನರಾಗಿದ್ದರು. ಪತ್ನಿ ಹಾಗೂ ನಾಲ್ಕು …

ಉಪ್ಪಳದಲ್ಲಿ ವೈದ್ಯರಿಗೆ ಹಲ್ಲೆ: ಮೂರು ಮಂದಿ ವಿರುದ್ಧ ಕೇಸು

ಉಪ್ಪಳ: ಉಪ್ಪಳದ ಖಾಸಗಿ ಆಸ್ಪತ್ರೆಯೊಂದರ ಆವರಣದೊಳಗೆ ನುಗ್ಗಿದ ತಂಡ ವೈದ್ಯರಿಗೆ ಹಲ್ಲೆಗೈದ ಬಗ್ಗೆ ದೂರಲಾಗಿದೆ. ಉಪ್ಪಳ ರೈಲು ನಿಲ್ದಾಣ ರಸ್ತೆಯಲ್ಲಿರುವ ದೇವಿ ಪ್ರಸಾದ್ ಮಾವೆ ಆಸ್ಪತ್ರೆಯ ವೈದ್ಯ ಕುಮಾರ್ ಶಾಶ್ವತ್ (42) ಅವರಿಗೆ   ತಂಡ ಹಲ್ಲೆಗೈದಿದೆ. ಬಿಹಾರ್ ನಿವಾಸಿಯಾದ ಡಾ| ಕುಮಾರ್ ಶಾಶ್ವತ್ ಪ್ರಸ್ತುತ ಮಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಹಲ್ಲೆಗೆ ಸಂಬಂಧಿಸಿ ವೈದ್ಯ ನೀಡಿದ ದೂರಿನಂತೆ ಮೂರು ಮಂದಿ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿಕೊಂಡಿ ದ್ದಾರೆ. ಬುಧವಾರ ರಾತ್ರಿ ೮.೩೦ರ ವೇಳೆ ಘಟನೆ ನಡೆದಿದೆ. ಆಸ್ಪತ್ರೆ ಆವರಣದೊಳಗೆ …