ಎಣ್ಮಕಜೆ ಪಂ. ನಲ್ಲಿ ಲೀಗ್ ಪದಾಧಿಕಾರಿಗಳ ರಾಜೀನಾಮೆಯನ್ನು ತಿರಸ್ಕರಿಸಿದ ಮಂಡಲ ಸಮಿತಿ: ಮುಂದುವರಿಯುತ್ತಿರುವ ವಿವಾದ

ಪೆರ್ಲ: ಎಣ್ಮಕಜೆ ಪಂಚಾಯತ್ ಮುಸ್ಲಿಂ ಲೀಗ್ ಪದಾಧಿಕಾರಿಗಳ ರಾಜೀನಾಮೆಯನ್ನು ಮಂಡಲ ಸಮಿತಿ ತಿರಸ್ಕರಿಸಿದೆ. ವಿಧಾನಸಭಾ ಚುನಾವಣೆ ಸಮೀಪದಲ್ಲೇ ಇರುವಾಗ ವಿವಾದಗಳಿಂದ ದೂರ ನಿಲ್ಲಲು ಹಾಗೂ ಸಂಘಟನೆಯನ್ನು ಬಲಪಡಿಸಲಿರುವ ಕ್ರಮಗಳಿಗೆ ಮುಂದಾಗಬೇಕೆಂದು ಪಕ್ಷದ ನೇತೃತ್ವ ಪಂಚಾಯತ್ ಪದಾಧಿಕಾರಿಗಳಲ್ಲಿ ಹಾಗೂ ಕಾರ್ಯಕರ್ತರಲ್ಲಿ ನಿರ್ದೇಶಿಸಿದೆ. 18 ಸದಸ್ಯರ ಪಂಚಾಯತ್ ಬೋರ್ಡ್‌ನಲ್ಲಿ ಕಾಂಗ್ರೆಸ್ ಹಾಗೂ ಮುಸ್ಲಿಂ ಲೀಗ್‌ಗೆ ತಲಾ ೪ರಂತೆ ಸದಸ್ಯರಿದ್ದಾರೆ. ಈ ಹಿನ್ನೆಲೆಯಲ್ಲಿ ಪಂಚಾಯತ್ ಅಧ್ಯಕ್ಷ ಸ್ಥಾನವನ್ನು ಲೀಗ್ ಆಗ್ರಹಿಸಿತ್ತು. ಆದರೆ ಆ ಹುದ್ದೆ ನೀಡಲು ಸಾಧ್ಯವಿಲ್ಲವೆಂದು, ಹಿಂದಿನ ಕಾಲದಲ್ಲಿ ನಡೆದುಕೊಂಡು …

ಕುಂಬಳೆಯಲ್ಲಿ ಬಸ್ ನಿಲ್ದಾಣ ಕಂ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಮೊದಲ ಪರಿಗಣನೆ-ಅಧ್ಯಕ್ಷ ವಿ.ಪಿ. ಅಬ್ದುಲ್ ಖಾದರ್

ಕುಂಬಳೆ: ಕುಂಬಳೆಯಲ್ಲಿ ಬಸ್ ನಿಲ್ದಾಣ ಹಾಗೂ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಮೊದಲ ಪರಿಗಣನೆ ನೀಡುವುದಾಗಿ ಕುಂಬಳೆ ಪಂಚಾಯತ್‌ನ ನೂತನ ಅಧ್ಯಕ್ಷ ವಿ.ಪಿ. ಅಬ್ದುಲ್ ಖಾದರ್ ತಿಳಿಸಿ ದ್ದಾರೆ.  ಅಧ್ಯಕ್ಷರಾಗಿ   ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಇವರು ಕಾರವಲ್‌ನೊಂದಿಗೆ ಈ ಬಗ್ಗೆ ತಿಳಿಸಿದ್ದಾರೆ. ಕುಂಬಳೆ ಪೇಟೆಯ  ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು.  ಕಾಸರಗೋಡು ಹಾಗೂ ಮಂಗಳೂರು ಮಧ್ಯೆ  ಪ್ರಧಾನ ಪೇಟೆಯಾಗಿರುವ ಕುಂಬಳೆಯಲ್ಲಿ ಹಲವು  ಅಭಿವೃದ್ಧಿ ಕಾರ್ಯಗಳು ನಡೆಯಬೇಕಾಗಿದೆ. ಬಸ್ ನಿಲ್ದಾಣ, ಶಾಪಿಂಗ್ ಕಾಂಪ್ಲೆಕ್ಸ್‌ಗೆ ಪೇಟೆಯಲ್ಲಿ ಸ್ಥಳ ಲಭ್ಯವಾಗದಿದ್ದಲ್ಲಿ ಬಿಒಟಿ …

ಪೈವಳಿಕೆ, ಮೀಂಜ ಪಂಚಾಯತ್‌ನಲ್ಲಿ ಯುಡಿಎಫ್ ಅಧಿಕಾರಕ್ಕೆ: ಆಡಳಿತ ಸಮಿತಿ ಅಧಿಕಾರ ಸ್ವೀಕಾರ

ಪೈವಳಿಕೆ: ಪೈವಳಿಕೆ ಪಂಚಾಯತ್‌ನಲ್ಲಿ ಯುಡಿಎಫ್ ಅಧಿಕಾರಕ್ಕೇರಿದ್ದು, ಅಧ್ಯಕ್ಷರಾಗಿ 20ನೇ ವಾರ್ಡಿನ ಮುಸ್ಲಿಂಲೀಗ್ ಸದಸ್ಯೆ ಬದ್ರುನ್ನೀಸ ಸಲೀಮ್ ಹಾಗೂ ಉಪಾಧ್ಯಾಕ್ಷರಾಗಿ 9ನೇ ವಾರ್ಡ್ನ ಕಾಂಗ್ರೆಸ್ ಸದಸ್ಯ ರಾಘವೇಂದ್ರ ಭಟ್ ಆಯ್ಕೆಗೊಂಡಿದ್ದಾರೆ. ಪಂಚಾಯತ್ ಒಟ್ಟು 21 ವಾರ್ಡ್ಗಳನ್ನು ಹೊಂದಿದೆ. ಯುಡಿಎಫ್-9, ಬಿಜೆಪಿ-5, ಎಡರಂಗ-6, ಸ್ವತಂತ್ರ-1 ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ. ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಾಕ್ಷರ ಚುನಾವಣೆಯಲ್ಲಿ ಬದ್ರುನ್ನೀಸ ಸಲೀಮ್‌ರಿಗೆ ಹಾಗೂ ರಾಘವೇಂದ್ರ ಭಟ್‌ರಿಗೆ ತಲಾ 9 ಮತಗಳು, ಬಿಜೆಪಿಯಿಂದ ಅಧ್ಯಕ್ಷರ ಸ್ಥಾನಕ್ಕೆ ಸ್ಪರ್ಧಿಸಿದ ಸುಮನ.ಜಿ ಭಟ್ ಹಾಗೂ ಉಪಾಧ್ಯಾಕ್ಷರ ಸ್ಥಾನಕ್ಕೆ ಸ್ಪರ್ಧಿಸಿದ …

ಜಿಲ್ಲೆಯ 18 ಪಂಚಾಯತ್‌ಗಳಲ್ಲಿ ಯುಡಿಎಫ್, 14ರಲ್ಲಿ ಎಲ್‌ಡಿಎಫ್, 5ರಲ್ಲಿ ಬಿಜೆಪಿ

ಕಾಸರಗೋಡು: ಜಿಲ್ಲೆಯ ಒಟ್ಟು 38 ಗ್ರಾಮ ಪಂಚಾಯತ್‌ಗಳ ಪೈಕಿ 37ರಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಶನಿವಾರ ನಡೆದಿದೆ. ಇದರಲ್ಲಿ 18 ಪಂಚಾಯತ್‌ಗಳಲ್ಲಿ ಯುಡಿಎಫ್, 14ರಲ್ಲಿ ಎಲ್‌ಡಿಎಫ್, ೫ರಲ್ಲಿ ಬಿಜೆಪಿ ಅಧಿಕಾರಕ್ಕೇರಿದೆ. ಯುಡಿಎಫ್‌ನಲ್ಲಿ 12 ಪಂಚಾಯತ್‌ಗಳಲ್ಲಿ ಅಧ್ಯಕ್ಷ ಸ್ಥಾನ ಮುಸ್ಲಿಂ ಲೀಗ್‌ಗೆ, 5 ಪಂ.ಗಳಲ್ಲಿ ಕಾಂಗ್ರೆಸ್‌ಗೆ ಲಭಿಸಿದೆ. ಇದೇ ವೇಳೆ ಯುಡಿಎಫ್‌ಗೆ ಬಹುಮತವುಳ್ಳ ದೇಲಂಪಾಡಿ ಪಂಚಾಯತ್‌ನಲ್ಲಿ ಸಿಪಿಎಂ ಬಂಡುಕೋರ ನೇತಾರ ಎ. ಮುಸ್ತಫ ಹಾಜಿ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಎಲ್‌ಡಿಎಫ್‌ಗೆ ಅಧಿಕಾರ ಲಭಿಸಿದ 14 ಪಂಚಾಯತ್‌ಗಳಲ್ಲೂ ಅಧ್ಯಕ್ಷ ಸ್ಥಾನ …

ಮೀಂಜದಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

ಮೀಯಪದವು : ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ನ 141ನೇ ಸಂಸ್ಥಾಪನಾ ದಿನವನ್ನು ಆಚರಿಸ ಲಾಯಿತು. ಮೀಂಜ ಮಂಡಲ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಮೀಯಪದವಿನ ಪಕ್ಷದ ಕಚೇರಿಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಹರ್ಷಾದ್ ವರ್ಕಾಡಿ ಕೇಕ್ ಕತ್ತರಿಸಿ ಚಾಲನೆ ನೀಡಿದರು. ಮಂಡಲ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ದಾಮೋದರ ಅಧ್ಯಕ್ಷತೆ ವಹಿಸಿದ್ದರು. ಮಂಜೇಶ್ವರ ಬ್ಲಾಕ್ ಪಂಚಾಯತ್ ಉಪಾಧ್ಯಕ್ಷೆ ಕಮಲಾಕ್ಷಿ ಕೆ, ಮೀಂಜ ಪಂಚಾಯತ್ ಉಪಾಧ್ಯಕ್ಷೆ ಉಷಾ ಪೂಂಜಾ, ಪಂಚಾಯತ್ ಸದಸ್ಯೆ ಸೌಮ್ಯ ಕಳಿಯೂರು, ವರ್ಕಾಡಿ ಸೇವಾ ಸಹಕಾರಿ ಬ್ಯಾಂಕ್ …

ಡಾ. ಕೆ. ಗಣಪತಿ ಭಟ್‌ರಿಗೆ ಕ.ಸಾ.ಪ.ದಿಂದ ಗೌರವಾರ್ಪಣೆ

ಕಾಸರಗೋಡು: ಕನ್ನಡ ಸಾಹಿತ್ಯ ಪರಿಷತ್ ಕೇರಳ ಗಡಿನಾಡ ಘಟಕದ ಪರಿಷತ್‌ನ ನಡಿಗೆ ಹಿರಿಯ ಸಾಧಕರ ಕಡೆಗೆ ಎಂಬ ಕಾರ್ಯಕ್ರಮದಂಗವಾಗಿ ಪ್ರಸಿದ್ಧ ದಂತವೈದ್ಯ ಡಾ. ಕುಳಮರ್ವ ಗಣಪತಿ ಭಟ್‌ರನ್ನು ಅವರ ನಿವಾಸದಲ್ಲಿ ಅಭಿನಂದಿಸಲಾಯಿತು. ಕ.ಸಾ.ಪ. ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಡಾ. ಕೆ. ಗಣಪತಿ ಭಟ್- ದೇವಕಿ ಭಟ್ ದಂಪತಿಯನ್ನು ಗೌರವಿಸಿದರು. ಈ ವೇಳೆ ವೈ.ಕೆ. ಗೋವಿಂದ ಭಟ್ ಅಭಿನಂದನಾ ಭಾಷಣ ಮಾಡಿದರು. ‘ಬಿಚ್ಚಿಟ್ಟ ನನ್ನ ಬದುಕು’ ಕೃತಿಯ ಮೂಲಕ ಓರ್ವ ಉತ್ತಮ ಬರಹಗಾರ …

ಶಾಹಿನಾ ಸಲೀಂ ಕಾಸರಗೋಡು ನಗರಸಭಾ ಅಧ್ಯಕ್ಷೆ, ಕೆ.ಎಂ. ಹನೀಫ ಉಪಾಧ್ಯಕ್ಷ

ಕಾಸರಗೋಡು: ಕಾಸರಗೋಡು ನಗರಸಭೆಯ ನೂತನ ಅಧ್ಯಕ್ಷೆಯಾಗಿ ಮುಸ್ಲಿಂ ಲೀಗ್ ನ ಶಾಹಿನಾ ಸಲೀಂ ಆಯ್ಕೆಗೊಂಡಿದ್ದಾರೆ. ೪೦ರ ಹರೆಯದ ಶಾಹಿನಾ ಎಂಬಿಎ ಪದವೀಧರೆಯಾಗಿದ್ದು ೨೦೧೫ರಲ್ಲಿ ಚೆಂಗಳ ಪಂಚಾಯತ್ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ ಅನುಭವವನ್ನು ಹೊಂದಿದ್ದಾರೆ. ಹತ್ತು ವರ್ಷಗಳ ಹಿಂದೆ ಇವರು ಚೆಂಗಳ ಪಂಚಾಯತ್‌ನ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸುತ್ತಿದ್ದ ವೇಳೆ  ಇವರ ತಂದೆ ಕಲ್ಲೆಟ್ರಾ ಅಬ್ದುಲ್ ಖಾದರ್ ನೆರೆಯ ಚೆಮ್ನಾಡ್ ಪಂಚಾಯತ್ ಅಧ್ಯಕ್ಷರಾಗಿದ್ದರು. ಕಾಸರಗೋಡು ನಗರಸಭೆಯ ಅಧ್ಯಕ್ಷ ಸ್ಥಾನ ವಹಿಸುತ್ತಿರುವ ಎರಡನೇ ಮಹಿಳೆಯಾಗಿದ್ದಾರೆ.  2005-10 ಮತ್ತು 2015-20ರ ಅವಧಿಯಲ್ಲಿ ಬೀಫಾತಿಮ್ಮ …

ತಾಯಿಯೊಂದಿಗೆ ಮುನಿಸು: ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ರಕ್ಷಿಸಿದ ಪೊಲೀಸರು

ಕಾಸರಗೋಡು: ತಾಯಿಯೊಂದಿಗೆ ಮುನಿಸುಗೊಂಡು ರೈಲಿನಡಿಗೆ ಹಾರಿ ಆತ್ಮಹತ್ಯೆಗೆತ್ನಿಸಿದ 27ರ ಹರೆಯದ ಯುವತಿಯನ್ನು ಮೇಲ್ಪರಂಬ ಪೊಲೀಸರು ನಡೆಸಿದ ಸಕಾಲಿ  ಕಾರ್ಯಾಚರಣೆಯಲ್ಲಿ  ರಕ್ಷಿಸಿದ ಘಟನೆ ನಡೆದಿದೆ. ಕಳನಾಡು ಗ್ರಾಮ ನಿವಾಸಿ ಹಾಗೂ ಇಬ್ಬರು ಪುಟ್ಟ ಮಕ್ಕಳ ತಾಯಿಯಾಗಿರುವ ಯುವತಿ ನಿನ್ನೆ ತಾಯಿಯೊಂದಿಗೆ ಮುನಿಸುಗೊಂಡು ಆತ್ಮಹತ್ಯೆಗೈಯ್ಯಲು ಮನೆ ಬಿಟ್ಟಿದ್ದಳು.  ಆ ಕೂಡಲೇ ಆಕೆಯ ತಾಯಿ ಮೇಲ್ಪರಂಬ  ಪೊಲೀಸರಿಗೆ  ಮಾಹಿತಿ ನೀಡಿದ್ದರು. ಅದರಂತೆ ಇನ್‌ಸ್ಪೆಕ್ಟರ್ ಎಸ್.ಪಿ ರಾಘವನ್ ನೀಡಿದ ನಿರ್ದೇಶ ಪ್ರಕಾರ ಎಸ್‌ಐ ಪಿ.ಕೆ. ಅನೀಶ್‌ರನ್ನೊಳಗೊಂಡ ಪೊಲೀಸರ ತಂಡ   ಯುವತಿಯನ್ನು ಆಕೆಯ ಮೊಬೈಲ್ …

ಶಬರಿಮಲೆ ಮಂಡಲಪೂಜೆ ಸಂಪನ್ನ

ಶಬರಿಮಲೆ: ಮಂಡಲ ಪೂಜೆ ಮಹೋತ್ಸವ ಇಂದು ಬೆಳಿಗ್ಗೆ ನಡೆದಿದ್ದು, ಶಬರಿಮಲೆ ಹಾಗೂ ಪರಿಸರ ಭಕ್ತರಿಂದ ತುಂಬಿ ತುಳುಕುತ್ತಿದೆ. ತಂಗಅಂಗಿ ಸಮರ್ಪಿಸಿ ಧರ್ಮಶಾಸ್ತನಿಗೆ ಇಂದು ದೀಪಾರಾಧನೆವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 11 ಗಂಟೆಗೆ ನಡೆ ಬಾಗಿಲು ಮುಚ್ಚಿದರೆ ಮತ್ತೆ ಮಕರಜ್ಯೋತಿ ಮಹೋತ್ಸವಕ್ಕೆ 30ರಂದು ತೆರೆಯಲಾಗುವುದು. ನಿನ್ನೆ ಚಿನ್ನಾಭರಣ ಶೋಭಾಯಾತ್ರೆ ಶಬರಿಮಲೆಗೆ ತಲುಪಿತ್ತು.

ರೈಲಿನಿಂದಿಳಿದು ಹಳಿ ದಾಟುತ್ತಿದ್ದ ವ್ಯಕ್ತಿ ರೈಲು ಢಿಕ್ಕಿ ಹೊಡೆದು ಮೃತ್ಯು

ಕಾಸರಗೋಡು: ರೈಲಿನಿಂದಿಳಿದು ಸುಲಭದಲ್ಲಿ ಫ್ಲಾಟ್ ಫಾಂಗೆ ಹತ್ತಲು ಹಳಿ ದಾಟುತ್ತಿದ್ದಾಗ ಬಂದ ಗೂಡ್ಸ್ ರೈಲು ಢಿಕ್ಕಿ ಹೊಡೆದು ಯುವಕ ಮೃತಪಟ್ಟ ಘಟನೆ ಸಂಭವಿಸಿದೆ. ನಿನ್ನೆ ಮಧ್ಯಾಹ್ನ ಕಾಸರಗೋಡು  ರೈಲ್ವೇ ನಿಲ್ದಾಣದಲ್ಲಿ ಈ ದುರ್ಘಟನೆ ಉಂಟಾಗಿದೆ. ಮೃತಪಟ್ಟ ವ್ಯಕ್ತಿ ಕರ್ನಾಟಕದ ಕೊಡಗು ನಿವಾಸಿ  ರಾಜೇಶ್ (35) ಎಂಬವರೆಂದು ಗುರುತಿಸಲಾಗಿದೆ.  ಮೃತ ವ್ಯಕ್ತಿ ಧರಿಸಿದ್ದ ಅಂಗಿಯ ಜೇಬಿನಲ್ಲಿ ಲಭಿ ಸಿದ ಆಧಾರ್ ಕಾರ್ಡ್‌ನ ವಿಳಾಸ ದಿಂದ ವ್ಯಕ್ತಿಯ ಗುರುತು ಹಚ್ಚಲಾ ಗಿದೆ.  ಆಧಾರ್ ಕಾರ್ಡ್‌ನಲ್ಲಿ ವ್ಯಕ್ತಿ ಯ ತಂದೆ ಕರ್ನಾಟಕದ …