ವೃದ್ದೆ ವಿರುದ್ಧ ಕೊಲೆ ಬೆದರಿಕೆ : ಕೊಲೆ ಪ್ರಕರಣದಲ್ಲಿ ಆರೋಪಿಯಾದ ಪುತ್ರ ಸೆರೆ

ಕುಂಬಳೆ: ಕೊಲೆ ಪ್ರಕರಣದಲ್ಲಿ ಆರೋಪಿಯಾದ ಪುತ್ರ ಮನೆಗೆ ನುಗ್ಗಿ ಬೆದರಿಸಿರುವುದಾಗಿ ವೃದ್ದೆಯಾದ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೈವಳಿಕೆ ಕಳಾಯಿ ನಿವಾಸಿ ಬಾಲಕಬೇಬಿ(82) ನೀಡಿದ ದೂರಿನಂತೆ ಪುತ್ರ ಜಯ ಕೆ. ಅಲಿಯಾಸ್ ಜಯರಾಂ ನೋಂಡ (54)ನನ್ನು ಪೊಲೀಸರು ಕಸ್ಟಡಿಗೆ ತೆಗೆದಿದ್ದಾರೆ. ಬೇಬಿಯ ಇನ್ನೋರ್ವ ಪುತ್ರ ಪದ್ಮನಾಭ ಎಂಬವರನ್ನು  ಕೊಲೆಗೈದ ಪ್ರಕರಣದಲ್ಲಿ ಜಯರಾಮ್ ಆರೋಪಿಯಾಗಿದ್ದಾನೆ. ಕೊಲೆ ಪ್ರಕರಣದಲ್ಲಿ ಸಾಕ್ಷಿಯಾದ ತಾಯಿ ನ್ಯಾಯಾಲಯದಲ್ಲಿ ಹೇಳಿಕೆ ಬದಲಿಸಿ ಹೇಳಬೇಕೆಂದೂ, ಇಲ್ಲದಿದ್ದರೆ ಕೊಲೆಗೈಯ್ಯುವುದಾಗಿಯೂ ಬೆದರಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಇದರ ಜೊತೆ ಸೊತ್ತಿನಲ್ಲಿ ಪಾಲು …

ಮಂಜೇಶ್ವರದಲ್ಲಿ ಟ್ರಾಲಿ ಬ್ಯಾಗ್‌ನಲ್ಲಿ ಸಾಗಿಸುತ್ತಿದ್ದ 12.640 ಕಿಲೋ ಗಾಂಜಾ ಸಹಿತ ಓರ್ವ ಸೆರೆ

ಮಂಜೇಶ್ವರ: ಮಂಜೇಶ್ವರ ಅಬಕಾರಿ ಚೆಕ್‌ಪೋಸ್ಟ್‌ನಲ್ಲಿ ಬೃಹತ್ ಗಾಂಜಾ ಬೇಟೆ ನಡೆಸಲಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸಾಗಿಸುತ್ತಿದ್ದ 12.640 ಕಿಲೋ ಗ್ರಾಂ ಗಾಂಜಾ ಸಹಿತ ಯುವಕನನ್ನು ಸೆರೆ ಹಿಡಿಯಲಾಗಿದೆ. ಮಹಾರಾಷ್ಟ್ರ ನಿವಾಸಿಯಾದ ರಾಕೇಶ್ ಪ್ರಕಾಶ್ ಡೋಗ್ರಾ (37)ನನ್ನು ಸೆರೆ ಹಿಡಿಯಲಾಗಿದ್ದು, ಮಂಗಳೂರಿನಿಂದ ಕಾಸರಗೋಡಿಗೆ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಈತ ಪ್ರಯಾಣಿಸುತ್ತಿದ್ದನು. ಮಂಜೇಶ್ವರ ಅಬಕಾರಿ ಚೆಕ್‌ಪೋಸ್ಟ್‌ನಲ್ಲಿ ನಡೆದ ವಾಹನ ತಪಾಸಣೆ ಮಧ್ಯೆ ಗಾಂಜಾ  ವಶಪಡಿಸಲಾಗಿದೆ.  ಅಬಕಾರಿ ಇನ್ಸ್‌ಪೆಕ್ಟರ್ ಕೆ.ಕೆ. ಶಿಜಿನ್ ಕುಮಾರ್ ಹಾಗೂ ತಂಡ ನಡೆಸಿದ ತಪಾಸಣೆಯಲ್ಲಿ ಟ್ರೋಲಿ ಬ್ಯಾಗ್‌ನಲ್ಲಿ ಸಾಗಿಸಿದ …

ಕಂಚಿಕಟ್ಟೆ-ಕೊಡ್ಯಮ್ಮೆ ಸೇತುವೆ ಪುನರ್‌ನಿರ್ಮಾಣ: ನಬಾರ್ಡ್ ತಂಡದಿಂದ ಸ್ಥಳ ಸಂದರ್ಶನ

ಕುಂಬಳೆ: ಜೀರ್ಣಗೊಂಡು ಹಾನಿಯಾದ ಹಿನ್ನೆಲೆಯಲ್ಲಿ ಹಲವು ವರ್ಷಗಳಿಂದ ಸಂಚಾರ ನಿಷೇಧಿಸಿದ ಕುಂಬಳೆ ಪಂಚಾಯತ್‌ನ ಕಂಚಿಕಟ್ಟೆ – ಕೊಡ್ಯಮ್ಮೆ ಸೇತುವೆ ಪುನರ್ ನಿರ್ಮಾಣಕ್ಕೆ ಸಂಬಂಧಿಸಿ ನಬಾರ್ಡ್‌ನ ಜಿಲ್ಲೆಯ ಹಿರಿಯ ಅಧಿಕಾರಿ ಶರಣ್, ನೀರಾವರಿ ಇಲಾಖೆಯ ಅಧಿಕಾರಿಗಳ ತಂಡ ಮೈನರ್ ಇರಿಗೇಶನ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಅರ್ಜುನನ್ ಇ.ಕೆ., ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಗೋಕುಲನ್ ಟಿ., ಅಸಿಸ್ಟೆಂಟ್ ಇಂಜಿನಿಯರ್ ರಾಘವನ್ ಕೆ. ಮೊದಲಾದವರು ಸ್ಥಳ ಸಂದರ್ಶಿಸಿದರು. ಈ ವೇಳೆ ಬ್ಲೋಕ್ ಪಂಚಾಯತ್ ಸದಸ್ಯ ಪೃಥ್ವಿರಾಜ್ ಶೆಟ್ಟಿ, ನಸೀಮ ಕುಂಬಳೆ, ಪಂಚಾಯತ್ ಉಪಾಧ್ಯಕ್ಷ …

ಅಸೌಖ್ಯ: ನಿಧನ

ಬೇಳ: ಮೂಲತಃ ಅಣಂಗೂರು ನಿವಾಸಿಯಾಗಿದ್ದು, ಪ್ರಸ್ತುತ ಬೇಳ ದರ್ಭೆತ್ತಡ್ಕದಲ್ಲಿ ವಾಸವಾಗಿದ್ದ ಮೋಹನ ಕೆ. (61) ನಿಧನ ಹೊಂದಿದರು. ಇವರು ಈ ಮೊದಲು  ಕಾಸರಗೋಡಿನಲ್ಲಿ ಆಟೋ ಚಾಲಕನಾಗಿದ್ದರು. ಬಳಿಕ ಲಾಟರಿ ಮಾರಾಟ ಕೆಲಸ ನಡೆಸಿಕೊಂಡಿದ್ದರು. ಕಳೆದ ಒಂದು ವಾರದಿಂದ ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದರು. ಮೃತರು ಪತ್ನಿ ಸವಿತ, ಮಕ್ಕಳಾದ ಅಮಿತ್, ಸುಮಿತ್, ಅಂಜಿತ, ಸಹೋದರರಾದ ಸುಬ್ಬ ಕೆ, ನಾಗೇಶ, ಸತೀಶ್, ಸಹೋದರಿಯರಾದ ಲೀಲ, ಕಮಲಾಕ್ಷಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಕಾರಿನಲ್ಲಿ ಸಾಗಿಸುತ್ತಿದ್ದ ನಿಷೇಧಿತ ತಂಬಾಕು ಉತ್ಪನ್ನ ವಶ: ಓರ್ವ ಸೆರೆ

ಕಾಸರಗೋಡು: ಕಾರಿನಲ್ಲಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಕಣ್ಣೂರು ಮುನೀಶ್ವರ ಕೋವಿಲ್‌ನಿಂದ ಪೊಲೀಸರು ಪತ್ತೆಹಚ್ಚಿ ವಶಪಡಿಸಿದ್ದಾರೆ. ಇದಕ್ಕೆ ಸಂಬಂಧಿಸಿ ತೃಕರಿಪುರ ನೋರ್ತ್ ನಿವಾಸಿ ಪಿ.ಕೆ. ಮುಹಮ್ಮದ್ ಸಫೀರ್ (26) ಎಂಬಾತನನ್ನು ಸೆರೆಹಿಡಿದು ಪ್ರಕರಣ ದಾಖಲಿಸಲಾಗಿದೆ. ಈತ ಚಲಾಯಿಸುತ್ತಿದ್ದ ಕಾರಿನಿಂದ ೧೦ ಗೋಣಿ ಚೀಲಗಳಲ್ಲಿ ತುಂಬಿಸಿಡಲಾಗಿದ್ದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಹಲವಾರು ಲೋಡ್ ಮಣ್ಣು ಸಾಗಾಟ: ಚಂದ್ರಗಿರಿ ಕೋಟೆ ಸಂರಕ್ಷಿಸಲು ಎಂ.ಎಲ್. ಅಶ್ವಿನಿ ಆಗ್ರಹ

ಕಾಸರಗೋಡು: ಅನಧಿಕೃತವಾಗಿ ಮಣ್ಣು ಸಾಗಿಸಿದ ಹಿನ್ನೆಲೆಯಲ್ಲಿ ಅಪಾಯಕರ ಸ್ಥಿತಿಗೆ ತಲುಪಿದ ಜಿಲ್ಲೆಯ ಚೆಮ್ಮನಾಡು ಪಂಚಾಯತ್‌ನ ಕಳನಾಡುನಲ್ಲಿರುವ ಚಂದ್ರಗಿರಿ ಕೋಟೆಯನ್ನು ಸಂರಕ್ಷಿಸಲು ಜಿಲ್ಲಾ- ರಾಜ್ಯ ಆಡಳಿತ ಕೂಟಗಳು ಸಿದ್ಧವಾಗಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಆಗ್ರಹಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್. ಬಾಬುರಾಜ್, ಜಿಲ್ಲಾ ಕಾರ್ಯದರ್ಶಿ  ಕೆ.ಟಿ. ಪುರುಷೋತ್ತಮನ್, ಜಿಲ್ಲಾ ಸಮಿತಿ ಸದಸ್ಯ ಶ್ರೀನಿವಾಸನ್, ಉದುಮ ಮಂಡಲ ಉಪಾಧ್ಯಕ್ಷ ಸದಾಶಿವನ್ ಮಣಿಯಂಗಾನ, ಕಾರ್ಯದರ್ಶಿ ಸೌಮ್ಯಾ ಪದ್ಮನಾಭನ್, ಕೋಶಾಧಿಕಾರಿ ರತೀಶ್ ವಿ.ಎ., ರಾಜೇಶ್ ಕೈಂದಾರ್, ಪ್ರಮೋದ್ ಕೀಳೂರು, ಹರೀಶ್ …

ಅಸೌಖ್ಯ: ಇಲೆಕ್ಟ್ರೀಷನ್ ನಿಧನ

ಮಧೂರು: ಅರಂತೋಡು ಬಾಬು ಪಾಟಾಳಿ ಯವರ ಪುತ್ರ ಜಯರಾಮ (49) ಮೆದುಳು ಸಂಬಂಧ ಅಸೌಖ್ಯದಿಂದ ನಿಧನ ಹೊಂದಿದರು. ಇಲೆಕ್ಟ್ರೀಶ್ಯನ್ ಆಗಿದ್ದರು. ಮೃತರು ತಂದೆ, ಪತ್ನಿ ಮಮತ, ಮಕ್ಕಳಾದ ಅಹ್‌ನ, ಅಶ್‌ನ, ಸಹೋದರ ರಾದ ಬಾಲಕೃಷ್ಣ, ಚಂದ್ರ, ಸಹೋದರಿ ಪುಷ್ಪ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಕಾಲ್ನಡೆ ಮೂಲಕ ಸಾಗಿ ಪುಸ್ತಕ ಮಾರಾಟ ಮಾಡುತ್ತಿದ್ದ ಉಪೇಂದ್ರ ಆಚಾರ್ಯ ನಿಧನ

ಕಾಸರಗೋಡು: ನಡೆದುಕೊಂಡು ಹೋಗಿ ಪುಸ್ತಕಗಳನ್ನು ಪುಸ್ತಕಪ್ರಿಯರಿಗೆ ತಲುಪಿಸುತ್ತಿದ್ದ ನಡೆದಾಡುವ ಗ್ರಂಥಾಲಯ ಎಂದೇ ಕರೆಸಿಕೊಂಡಿದ್ದ ಮೂಲತಃ ಅಣಂಗೂರು ನಿವಾಸಿ ಹಾಗೂ ಮೊಗ್ರಾಲ್ ಪುತ್ತೂರು ಬೆದ್ರಡ್ಕದ ಉಜಿತೆರೆಕೆ ಬಳಿ ವಾಸವಾಗಿದ್ದ ಉಪೇಂದ್ರ ಆಚಾರ್ಯ (80) ನಿಧನ ಹೊಂದಿದರು. ಮಕ್ಕಳ ಕಥೆಪುಸ್ತಕ, ಚಿತ್ರಕಥೆಪುಸ್ತಕಗಳು, ಸಾಮಾನ್ಯ ಜ್ಞಾನ ಪುಸ್ತಕ, ಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷಾ ಪುಸ್ತಕಗಳನ್ನು ಶಾಲಾ, ಕಾಲೇಜು, ಕಚೇರಿಗಳಿಗೆ ತೆರಳಿ ಅಗತ್ಯದವರಿಗೆ ಮಾರಾಟ ಮಾಡುತ್ತಿದ್ದ ಇವರು ಈ ಮೊದಲು ಮುದ್ರಣ ತಂತ್ರಜ್ಞರಾಗಿಯೂ ಕಾರ್ಯನಿರ್ವಹಿಸಿದ್ದರು. ಮಣಿಪಾಲ ಹಾಗೂ ಕಾಸರಗೋಡಿನ ಮುದ್ರಣಾಲ ಯದಲ್ಲಿ ಕೆಲಸ ನಿರ್ವಹಿಸಿದ್ದರು. …

ರೈಲ್ವೇಯ ಸ್ಥಳದಿಂದ ಮರ ಕಡಿದು ಸಾಗಾಟ: ನಾಲ್ಕು ಮಂದಿ ಸೆರೆ

ಉಪ್ಪಳ: ರೈಲ್ವೇ ಇಲಾಖೆಯ ಸ್ವಾಧೀನದಲ್ಲಿರುವ  ಸ್ಥಳದಿಂದ ತೇಗು ಸಹಿತ 11 ಮರಗಳನ್ನು ಕಡಿದು ಸಾಗಿಸಿದ ಪ್ರಕರಣದಲ್ಲಿ ಉಪ್ಪಳ ನಿವಾಸಿಗಳಾದ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ. ರೋಶನ್ ಸಮೀರ್, ದಾದಪೀರ್, ಅಬ್ದುಲ್ಲ ಕುಂಞಿ, ರಾಜೇಶ್ ಎಂಬಿವರನ್ನು ಆರ್‌ಪಿಎಫ್‌ನ ಮಂಗಳೂರು ಇನ್‌ಸ್ಪೆಕ್ಟರ್ ಮನೋಜ್ ಕುಮಾರ್‌ರ ನೇತೃತ್ವದಲ್ಲಿ ಸೆರೆಹಿಡಿಯಲಾಗಿದೆ. ಕಡಿದ  ಮರಗಳನ್ನು, ಅವುಗಳನ್ನು ಸಾಗಿಸಲು ಉಪಯೋಗಿಸಿದ ವಾಹನ ಹಾಗೂ ಮರ ಕತ್ತರಿಸಲು  ಬಳಸಿದ ಯಂತ್ರಗಳನ್ನು ಆರ್‌ಪಿಎಫ್ ವಶಪಡಿಸಿಕೊಂಡಿದೆ. ಉಪ್ಪಳ ರೈಲ್ವೇ ನಿಲ್ದಾಣದ ಅಧೀನತೆಯಲ್ಲಿರುವ ಮರಗಳನ್ನು ಕಡಿದು ಸಾಗಿಸಲಾಗಿತ್ತು.  ರೈಲ್ವೇಯ ಸ್ಥಳಕ್ಕೆ ಹೊಂದಿಕೊಂಡಿರುವ ಆರೋಪಿಗಳ …

ಅಸೌಖ್ಯ ಬಾಧಿಸಿ ಚಿಕಿತ್ಸೆಯಲ್ಲಿದ್ದ ಯುವಕ ಮೃತ್ಯು

ನೀರ್ಚಾಲು: ಬ್ರೈನ್ ಹ್ಯೂಮ ರೇಜ್ ಅಸೌಖ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಫಿನಾನ್ಸ್ ಕಂಪೆನಿ ನೌಕರ ಮೃತಪಟ್ಟರು.  ಆರ್.ಎಸ್.ಎಸ್.ನ ಸಕ್ರಿಯ ಕಾರ್ಯಕರ್ತನಾಗಿದ್ದ   ಕಿಳಿಂಗಾರು ಮುಂಡಾನ್‌ತ್ತಡ್ಕದ  ಲೋಕೇಶ್ (48) ಮೃತಪಟ್ಟ ಯುವಕನಾಗಿದ್ದಾರೆ. ಶ್ರೀರಾಂ ಫಿನಾನ್ಸ್ ಕಂಪೆನಿಯ ನೌಕರನಾಗಿದ್ದ ಲೋಕೇಶ್ ಡಿಸ್ಕ್ ಸಂಬಂಧ ಅಸೌಖ್ಯ ಬಾಧಿಸಿ ಮನೆಯಲ್ಲಿ ಚಿಕಿತ್ಸೆಯಲ್ಲಿದ್ದರು. ನಿನ್ನೆ ಅಸೌಖ್ಯ ಉಲ್ಭಣಗೊಂಡ ಹಿನ್ನೆಲೆಯಲ್ಲಿ ಇವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ರಾತ್ರಿ ವೇಳೆ ನಿಧನ ಸಂಭವಿಸಿದೆ. ಇವರು ಮಜೀರ್ಪಳ್ಳಕಟ್ಟೆ ಶ್ರೀ ಅಯ್ಯಪ್ಪ ಭಜನಾ ಮಂದಿರದ ಸಕ್ರಿಯ ಕಾರ್ಯಕರ್ತ, ಯುವಕೇಸರಿ ಫ್ರೆಂಡ್ಸ್ …