ಪ್ರಯಾಣಿಕನ ವಿರುದ್ಧ ಕುಂಬಳೆ ಟೋಲ್‌ಗೇಟ್‌ನಲ್ಲಿ ಪೊಲೀಸ್ ಕ್ರಮ: ಶಾಸಕರಿಂದ ಮುಖ್ಯಮಂತ್ರಿಗೆ ದೂರು

ಕುಂಬಳೆ: ತಲಪಾಡಿಯಲ್ಲಿ ಟೋಲ್ ಬೂತ್ ಇರುವಾಗ ದೂರ ಮಿತಿಯನ್ನು ಉಲ್ಲಂಘಿಸಿ 22 ಕಿಲೋ ಮೀಟರ್‌ನೊಳಗೆ ಕುಂಬಳೆ ಆರಿಕ್ಕಾಡಿ ಯಲ್ಲಿ ಎರಡನೇ ಟೋಲ್ ಸ್ಥಾಪಿಸಲಾ ಗಿದ್ದು, ಅಲ್ಲಿಯೂ ಹಣ ಪಾವತಿಸಿದರೂ ವಾಹನಗಳನ್ನು ತಡೆದು ನಿಲ್ಲಿಸುವ ರಾಡ್ ಕಾರಿನ ಮೇಲೆ ಗುದ್ದಿರುವುದನ್ನು ಪ್ರಶ್ನಿಸಿದ ಪ್ರಯಾಣಿಕನನ್ನು ಕುಂಬಳೆ ಸಿಐಯ ನೇತೃತ್ವದಲ್ಲಿ ಕಾರಿನಿಂದ ಇಳಿಸಿ ಕುಟುಂಬದ ಮುಂದೆಯೇ ಅಪರಾಧಿ ಯಂತೆ ಕೊಂಡುಹೋಗಿರುವುದು ಖಂಡನೀಯವೆಂದು ಶಾಸಕ ಎಕೆಎಂ ಅಶ್ರಫ್ ನುಡಿದಿದ್ದಾರೆ. ಈ ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ. ಈ …

ಮುಂಗಡಪತ್ರದಲ್ಲಿ ಸರಕಾರಿ ನೌಕರರನ್ನು ಅವಗಣಿಸಿರುವುದಾಗಿ ಆರೋಪಿಸಿ ಎನ್‌ಜಿಒ ಅಸೋಸಿಯೇಶನ್ ಪ್ರತಿಭಟನೆ

ಕಾಸರಗೋಡು: ನಾಲ್ಕು ತಿಂಗಳ ಒಳಗೆ ಕಾಲಾವಧಿ ಮುಗಿಸುವ ಸರಕಾರ ವೇತನ ಆಯೋಗವನ್ನು ನೇಮಕಗೊಳಿಸಿ ಮೂರು ತಿಂಗಳೊಳಗೆ ವೇತನ ಪರಿಷ್ಕರಣೆ ನಡೆಸುವುದಾಗಿ ಬಜೆಟ್‌ನಲ್ಲಿ ಘೋಷಿಸಿರುವುದು ನೌಕರರ ಕಣ್ಣಿಗೆ ಮಣ್ಣು ಹಾಕಲಿರುವ ಯತ್ನವಾಗಿದೆ ಎಂದು ಎನ್‌ಜಿಒ ಅಸೋಸಿಯೇಶನ್ ಆರೋಪಿಸಿದೆ. ವೇತನ ಪರಿಷ್ಕರಣೆಯನ್ನು ಕಳೆದ ೫ ವರ್ಷದಿಂದ ಸರಕಾರ ಬುಡಮೇಲುಗೊಳಿಸಲು ಯತ್ನ ನಡೆಸಿರುವುದಾಗಿಯೂ ಎನ್‌ಜಿಒ ಅಸೋಸಿಯೇಶನ್ ಜಿಲ್ಲಾಧ್ಯಕ್ಷ ಎ.ಟಿ. ಶಶಿ ನುಡಿದರು. ರಾಜ್ಯ ಮುಂಗಡ ಪತ್ರದಲ್ಲಿ ನೌಕರರನ್ನು ಅವಗಣಿಸಿರುವು ದನ್ನು ಪ್ರತಿಭಟಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಕೇರಳ ಎನ್‌ಜಿಒ ಅಸೋಸಿ ಯೇಶನ್ …

ಉಪ್ಪಳ ಶ್ರೀ ಭಗವತೀ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವ ಆರಂಭ

ಉಪ್ಪಳ: ಉಪ್ಪಳ ಶ್ರೀ ಭಗವತೀ ಕ್ಷೇತ್ರದಲ್ಲಿ ವರ್ಷಾವಧಿ ಕಳಿಯಾಟ ಮಹೋತ್ಸವ ಆರಂಭಗೊಂಡಿದೆ. ಬೆಳಿಗ್ಗೆ ಭಂಡಾರ ಕ್ಷೇತ್ರದಲ್ಲಿ ಗಣಹೋಮ, ಕಳಿಯಾಟ ಮಹೋತ್ಸವಕ್ಕೆ ಗೊನೆ ಮುಹೂರ್ತ, ಚಪ್ಪರ ಮುಹೂರ್ತ, ಶ್ರೀ ನಾಗ ಸನ್ನಿಧಿಯಲ್ಲಿ ನಾಗತಂಬಿಲ, ಭಜನೆ, ಭಂಡಾರ ಆಗಮನ, ನಡಾವಳಿ ಉತ್ಸವದೊಂದಿಗೆ ನಿನ್ನೆ ಮೊದಲ ಕಳಿಯಾಟ ನಡೆಯಿತು. ಇಂದು ನಡು ಕಳಿಯಾಟ ಆರಂಭಗೊಂಡಿದೆ. ಫೆ.1ರಂದು ರಾತ್ರಿ 12ರಿಂದ ಹೂ ಮುಡಿ ದೈವ, ಭಗವತೀ ದರ್ಶನ, ಕೆಂಡಸೇವೆ, ಬಲಿ ಉತ್ಸವ, ವಿಷ್ಣುಮೂರ್ತಿ ದೈವ, ಭಂಡಾರ ನಿರ್ಗಮನದೊಂದಿಗೆ ಕಳಿಯಾಟ ಮಹೋತ್ಸವ ಸಮಾಪ್ತಿಗೊಳ್ಳಲಿದೆ.

ಪ್ರತಾಪನಗರ ಒಳ ರಸ್ತೆಯಲ್ಲಿ ಚರಂಡಿ, ಸ್ಲ್ಯಾಬ್ ನಿರ್ಮಾಣ: ಸ್ಥಳೀಯರಿಗೆ ನೆಮ್ಮದಿ

ಮಂಗಲ್ಪಾಡಿ: ಮಂಗಲ್ಪಾಡಿ ಪಂಚಾಯತ್‌ನ 7ನೇ ವಾರ್ಡ್ ಪ್ರತಾಪನಗರ ಒಳ ರಸ್ತೆಯಲ್ಲಿ ವ್ಯವಸ್ಥಿತ ಚರಂಡಿ ಹಾಗೂ ಸ್ಲಾಬ್ ನಿರ್ಮಿಸಲಾಗಿದ್ದು, ಸ್ಥಳೀಯರಲ್ಲಿ ಆತಂಕ ದೂರವಾಗಿದೆ. ಈ ಪರಿಸರದಲ್ಲಿ ಮಳೆ ನೀರು ರಸ್ತೆಯಲ್ಲಿ ಹರಿದು ಶೋಚನೀಯÁವಸ್ಥೆ ಉಂಟಾಗುತ್ತಿತ್ತು. ತೆರೆದ ಸ್ಥಿತಿಯಲ್ಲಿದ್ದ ಚರಂಡಿಯಿAದ ವಾಹನ ಸಂಚಾರಕ್ಕೆ ಸಮಸ್ಯೆ ಹಾಗೂ ಅಪಘಾತಕ್ಕೆ ಕಾರಣವಾಗುತ್ತಿತ್ತು. ಸೂಕ್ತ ಚರಂಡಿ ನಿರ್ಮಾಣಕ್ಕೆ ಈ ಹಿಂದೆ ಊರವರು ಒತ್ತಾಯಿಸಿದ್ದರು. ಇದಕ್ಕೆ ಸ್ಪಂದಿಸಿದ ಈ ಹಿಂದಿನ ವಾರ್ಡ್ ಸದಸ್ಯೆ ಸುಧಾ ಗಣೇಶ್‌ರ ಮುತುವರ್ಜಿಯಿಂದ ಪಂಚಾಯತ್ ನಿಂದ ಮಂಜೂರುಗೊAಡ ಸುಮಾರು 5ಲಕ್ಷ ರೂ …

ಉತ್ತಮ ಬೂತ್ ಲೆವೆಲ್ ಆಫೀಸರ್ ರಾಜೇಶ್ ಸಿ.ಎಚ್‌ಗೆ ಜಿಲ್ಲಾಧಿಕಾರಿ ಅಭಿನಂದನೆ

ಕಾಸರಗೋಡು: ಎಸ್‌ಐಆರ್ ಚಟುವಟಿಕೆಗೆ ಸಂಬಂಧಿಸಿ ಅತ್ಯುತ್ತಮ ಬೂತ್ ಲೆವೆಲ್ ಆಫೀಸರ್ ಆಗಿ ಆಯ್ಕೆಯಾದ ನೆಕ್ರಾಜೆ ನಿವಾಸಿ ರಾಜೇಶ್ ಸಿ.ಎಚ್.ರನ್ನು ಜಿಲ್ಲಾಧಿಕಾರಿ ಕೆ. ಇಂಭ ಶೇಖರ್ ಗೌರವಿಸಿದರು. ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಗೌರವಿಸಿದ್ದು, ಇವರು ಕಾಸರಗೋಡು ವಿಧಾನಸಭಾ ಕ್ಷೇತ್ರದ ೧೪೨ನೇ ಬೂತ್ ಲೆವೆಲ್ ಆಫೀಸರ್ ಆಗಿದ್ದಾರೆ. ಎಸ್‌ಐಆರ್‌ಗೆ ಸಂಬಂಧಿಸಿ ಎನ್ಯುಮರೇಶನ್ ಫಾರ್ಮ್ ವಿತರಿಸಿ ಭರ್ತಿ ಗೊಳಿಸಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದವರಲ್ಲಿ ಇವರು ಪ್ರಥಮರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇವರಿಗೆ ಅಭಿನಂದನೆ ಸಲ್ಲಿಸಲಾಗಿದೆ.

ರಾಜ್ಯ ಬಜೆಟ್ ಮಂಡನೆ: ಕಾಸರಗೋಡು ಪ್ಯಾಕೇಜ್‌ಗೆ 80 ಕೋಟಿ ರೂ. ಮೀಸಲು ; 12ನೇ ತರಗತಿ ತನಕದ ವಿದ್ಯಾರ್ಥಿಗಳಿಗೆ ವಿಮೆ ಯೋಜನೆ

ತಿರುವನಂತಪುರ: ಪಿಣರಾಯಿ ವಿಜಂiiನ್ ನೇತೃತ್ವದ ಎರಡನೇ ಎಡರಂಗ ಸರಕಾರದ ಕೊನೆಯ ಹಾಗೂ 2026-27 ನೇ ಹಣಕಾಸು ವರ್ಷದ ಮುಂಗಡಪತ್ರವನ್ನು ಹಣಕಾಸು ಸಚಿವ  ಕೆ.ಎನ್. ಬಾಲಗೋಪಾಲ್ ಇಂದು ಬೆಳಿಗ್ಗೆ ವಿಧಾನಸಭೆಯಲ್ಲಿ ಮಂಡಿಸಿದರು.   ಇದು ಅವರು ಮಂಡಿಸುವ 6ನೇ ರಾಜ್ಯ ಬಜೆಟ್ ಆಗಿದೆ.  ಹಿರಿಯ ನಾಗರಿಕರ ಸಮಗ್ರ ಕಲ್ಯಾಣಕ್ಕಾಗಿರುವ ‘ಎಲ್ಡರ್ಲಿ’ ಬಜೆಟ್ ಇದಾಗಿದೆಯೆಂದು ಸಚಿವ ಬಜೆಟ್ ಮಂಡನೆ ಆರಂಭಿಸುತ್ತಿದ್ದಂತೆ   ತಿಳಿಸಿದ್ದಾರೆ. ನಿರೀಕ್ಷೆಯಂತೆಯೇ ವಿವಿಧ ವಲಯಗಳಿಗೆ ಹೆಚ್ಚಿನ ಆದ್ಯತೆಯನ್ನು ಈ ಬಜೆಟ್‌ನಲ್ಲಿ ಕಲ್ಪಿಸಲಾಗಿದೆ. ಕಾಸರಗೋಡು ಅಭಿವೃದ್ಧಿ ಯೋಜನೆಗಾಗಿ ಬಜೆಟ್‌ನಲ್ಲಿ 80 ಕೋಟಿ …

ಕುಂಬಳೆ ಟೋಲ್ ಬೂತ್‌ನಲ್ಲಿ ಸ್ಪೋಟ್ ಟೋಲ್ ಸಂಗ್ರಹ ನಿಲುಗಡೆ: ಯುಡಿಎಫ್‌ನಿಂದ ಇಂದು ಸಂಜೆ ಪೊಲೀಸ್ ಠಾಣೆಗೆ ಮಾರ್ಚ್

ಕುಂಬಳೆ: ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಟೋಲ್ ಪ್ಲಾಸಾದಲ್ಲಿ  ಸ್ಪೋಟ್ ಟೋಲ್ ಸಂಗ್ರಹವನ್ನು ತಾತ್ಕಾಲಿಕವಾಗಿ ನಿಲುಗಡೆಗೊಳಿಸಲಾಗಿದೆ. ನಿನ್ನೆ ರಾತ್ರಿ ನಡೆದ ಅಹಿತಕರ ಘಟನೆಗಳು ಹಾಗೂ  ರಾತ್ರಿ ಕ್ರಿಯಾ ಸಮಿತಿ ಪದಾಧಿಕಾರಿ ಗಳು ಟೋಲ್ ಬೂತ್‌ಗೆ ತಲುಪಿ ನೀಡಿದ ತಾಕೀತನ್ನು ಪರಿಗಣಿಸಿ ಟೋಲ್ ಸಂಗ್ರಹವನ್ನು ನಿಲ್ಲಿಸಲಾಗಿದೆ. ಇದೇ ವೇಳೆ ಫಾಸ್ಟ್ ಟ್ಯಾಗ್ ಮೂಲಕದ ಟೋಲ್ ಸಂಗ್ರಹ ಮುಂದುವರಿಯುತ್ತಿದೆ. ಟೋಲ್ ಸಂಗ್ರಹ ವಿರುದ್ದ ಕ್ರಿಯಾ ಸಮಿತಿ ನೀಡಿದ ಅರ್ಜಿ ಪರಿಗಣಿಸುವುದನ್ನು ಹೈಕೋರ್ಟ್ ನಿನ್ನೆ ಮುಂದೂಡಿತ್ತು. ರಾಷ್ಟ್ರೀಯ ಹೆದ್ದಾರಿಯ ನ್ಯಾಯವಾದಿ ಹಾಜರಾಗದ ಹಿನ್ನೆಲೆಯಲ್ಲಿ  …

ಆಟೋ ಚಾಲಕ ರಿಕ್ಷಾದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ: ಆಸ್ಪತ್ರೆಗೆ  ತಲುಪಿಸಿದರೂ ನಿಧನ

ಕಾಸರಗೋಡು: ಆಟೋರಿಕ್ಷಾದಲ್ಲಿ  ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಹಚ್ಚಿದ ಆಟೋ ಚಾಲಕನನ್ನು ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಬದಿಯಡ್ಕದ ತೊಟ್ಟಿ ಆಟೋ ಚಾಲಕ ಬಾರಡ್ಕ ನಿವಾಸಿ ಅರವಿಂದ ಯಾನೆ ರವಿ (47) ಮೃತಪಟ್ಟ ವ್ಯಕ್ತಿ. ಬದಿಯಡ್ಕ ನೋಂದಾವಣೆ ಕಚೇರಿಯ ಮುಂಭಾಗದ ಕ್ವಾರ್ಟರ್ಸ್‌ನಲ್ಲಿ ವಾಸವಾಗಿದ್ದರು. ನಿನ್ನೆ ರಾತ್ರಿ ಬದಿಯಡ್ಕದ ಹೋಟೆಲ್‌ವೊಂದರ ಬಳಿ ನಿಲುಗಡೆಗೊಳಿಸಿದ್ದ ಆಟೋದಲ್ಲಿ ಗೆಳೆಯರು ರವಿಯನ್ನು ಅರೆ ಪ್ರಜ್ಞಾವಸ್ಥೆಯಲ್ಲಿ ಪತ್ತೆಹಚ್ಚಿದ್ದರು. ಅವರು ಕೂಡಲೇ ಖಾಸಗಿ ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಆದರೆ ಮರಣಕ್ಕೆ ಕಾರಣ ಸ್ಪಷ್ಟವಾಗಿಲ್ಲ. ತಂದೆ …

ಅಂತಾರಾಜ್ಯ ಮದ್ಯ ಸಾಗಾಟ ಸೂತ್ರಧಾರ ಬಂಧನ

ಕುಂಬಳೆ: ರಾಜ್ಯಕ್ಕೆ ಹೊರಗಿನಿಂದ ಮದ್ಯ ಸಾಗಾಟ ನಡೆಸುವ ದಂಧೆಯ ಸೂತ್ರಧಾರನನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಕರ್ನಾಟಕದ ಹೊನ್ನಾವರ ಬಜಾರ್ ರೋಡ್‌ನ ರಾಧಾಕೃಷ್ಣ ಎಸ್ ಕಮ್ಮತ್(61) ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. 2023 ಜುಲೈ 9ರಂದು ಮಿನಿ ಲಾರಿಯಲ್ಲಿ  2484 ಲೀಟರ್ ಗೋವಾ ಮದ್ಯವನ್ನು ಕೇರಳಕ್ಕೆ ಸಾಗಿಸಿದ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದಾನೆ. ಈತನ ವಿರುದ್ಧ ಕರ್ನಾಟಕ ಹಾಗೂ ಗೋವಾದಲ್ಲಿ ಮದ್ಯ ಸಾಗಿಸಿದ ಆರೋಪದಂತೆ ಕೇಸುಗಳಿರುವುದಾಗಿ ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಮಂಜೇಶ್ವರ ಎಕ್ಸೈಸ್ ಅಬಕಾರಿ ಚೆಕ್ ಪೋಸ್ಟ್‌ನಲ್ಲಿ ಗೋವಾ ಮದ್ಯ ವಶಪಡಿಸಿದ …

ತ್ಯಾಜ್ಯ ನೀರನ್ನು ಚರಂಡಿಗೆ ಹರಿಯಬಿಟ್ಟ ಹೋಟೆಲ್‌ಗೆ 5೦ ಸಾವಿರ ರೂ. ದಂಡ

ಕುಂಬಳೆ: ಹೋಟೆಲ್‌ನ ತ್ಯಾಜ್ಯ ನೀರನ್ನು ಸಮೀಪದ ಚರಂಡಿಗೆ ಹರಿಯಬಿಟ್ಟಿರುವುದನ್ನು ಪತ್ತೆಹಚ್ಚಿದ  ಪಂಚಾಯತ್ ಅಧಿಕಾರಿಗಳು  ಕುಂಬಳೆಯ ಶ್ರೀಕೃಷ್ಣ ಹೋಟೆಲ್‌ಗೆ  50 ಸಾವಿರ ರೂಪಾಯಿ ದಂಡ ವಿಧಿಸಿ ನೋಟೀಸು ನೀಡಿದ್ದಾರೆ. ರಾತ್ರಿ ಹೊತ್ತಿನಲ್ಲಿ ಮೋಟಾರು ಉಪಯೋಗಿಸಿ ಚರಂಡಿಗೆ ತ್ಯಾಜ್ಯ ನೀರನ್ನು ಹರಿಯಬಿಡುತ್ತಿರುವುದಾಗಿ ದೂರು ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಪಂಚಾಯತ್ ಅಧಿಕಾರಿಗಳು ನಡೆಸಿದ ತಪಾಸಣೆಯಲ್ಲಿ ಹೋಟೆಲ್‌ನಿಂದ ತ್ಯಾಜ್ಯ ನೀರನ್ನು ಚರಂಡಿಗೆ ಬಿಡುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ‘ಕಾರವಲ್ ಮೀಡಿಯ’ ನಿನ್ನೆ ಚಿತ್ರ ಸಹಿತ ವರದಿ ಪ್ರಕಟಿಸಿತ್ತು. ತ್ಯಾಜ್ಯ ನೀರನ್ನು ಚರಂಡಿಗೆ ಹರಿಯಬಿಡುವುದರಿಂದ …