ಕರ್ನಾಟಕ ಬ್ಯಾಂಕ್ನ ಮಂಗಲ್ಪಾಡಿ ಶಾಖೆಯಲ್ಲಿ ಅಡವಿರಿಸಿದ 227 ಗ್ರಾಂ ಚಿನ್ನ ನಕಲಿ ಚಿನ್ನವಾಗಿ ಮಾರ್ಪಾಡು: ಪೊಲೀಸ್ ತನಿಖೆ ಆರಂಭ
ಉಪ್ಪಳ: ಕರ್ನಾಟಕ ಬ್ಯಾಂಕ್ನ ಮಂಗಲ್ಪಾಡಿ ಶಾಖೆಯಲ್ಲಿ ಅಡವಿರಿಸಿದ 227 ಗ್ರಾಂ ಚಿನ್ನ ನಕಲಿ ಚಿನ್ನವಾಗಿ ಬದಲಾಗಿದೆ. ಅಡವಿರಿಸಿದ ಚಿನ್ನವನ್ನು ಮರಳಿ ಪಡೆಯಲು ತಲುಪಿದಾಗ ಈ ವಿದ್ಯಮಾನ ಬೆಳಕಿಗೆ ಬಂದಿದೆ. ಈ ಬಗ್ಗೆ ಕರ್ನಾಟಕ ಬ್ಯಾಂಕ್ನ ಮಂಗಳೂರು ಡೆಪ್ಯುಟಿ ರೀಜ್ಯನಲ್ ಹೆಡ್ ಶ್ರೀಶ ಎಂಬವರು ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ನವೆಂಬರ್ 26 ಹಾಗೂ ಡಿಸೆಂಬರ್ 6ರ ಮಧ್ಯೆ ಅಡವಿರಿಸಿ 31,50,066 ರೂಪಾಯಿ ಸಾಲ ಪಡೆದ ಚಿನ್ನ ನಕಲಿ ಚಿನ್ನವಾಗಿ ಬದಲಾಗಿದೆ. ಯಥಾರ್ಥ …