ಅಡುಗೆ ಅನಿಲ ಕ್ಷಾಮ : ಜಿಲ್ಲಾ ಪಂಚಾಯತ್ ಕ್ಯಾಂಟೀನ್ನಲ್ಲಿ ಸೌದೆ ಉಪಯೋಗಿಸಿ ಪರಂಪರಾಗತ ಅಡುಗೆ
ಕಾಸರಗೋಡು: ಮಧ್ಯಪ್ರಾಚ್ಯದ ಯುದ್ಧದ ಪರಿಣಾಮವಾಗಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಉಂಟಾಗಿರುವ ಸಮಸ್ಯೆ ತಾರಕಕ್ಕೇರುವ ಲಕ್ಷಣಗಳು ಗೋಚರಿಸುತ್ತಿದೆ. ಬೆಂಗಳೂರು, ಮಂಗಳೂರು ಮೊದಲಾದ ಪೇಟೆಗಳಲ್ಲಿ ವಾಣಿಜ್ಯ ಬಳಕೆಯ ಅಡುಗೆ ಅನಿಲ ಜಾಡಿಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಹೋಟೆಲ್, ರೆಸ್ಟೋರೆಂಟ್ಗಳನ್ನು ಮುಚ್ಚುವ ಪರಿಸ್ಥಿತಿ ಉಂಟಾಗಿರುವ ಮಧ್ಯೆ ಕಾಸರಗೋಡು ಜಿಲ್ಲೆಯಲ್ಲೂ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ಗೆ ಕೊರತೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕೆಲವು ಹೋಟೆಲ್ಗಳು ಸೌದೆ ಒಲೆಯತ್ತ ತಿರುಗಿವೆ. ಕಾಸರಗೋಡು ಜಿಲ್ಲಾ ಪಂಚಾಯತ್ನ ನೇತೃತ್ವದ ಕುಟುಂಬಶ್ರೀ ಕಫೆಯಲ್ಲಿ ನಿನ್ನೆಯಿಂದ ಅಡುಗೆ ಒಲೆಯಲ್ಲಿ ಮಾಡಲು ಆರಂಭಿಸಿದ್ದಾರೆ. …
Read more “ಅಡುಗೆ ಅನಿಲ ಕ್ಷಾಮ : ಜಿಲ್ಲಾ ಪಂಚಾಯತ್ ಕ್ಯಾಂಟೀನ್ನಲ್ಲಿ ಸೌದೆ ಉಪಯೋಗಿಸಿ ಪರಂಪರಾಗತ ಅಡುಗೆ”