ಬದಿಯಡ್ಕದಲ್ಲಿ ಬಸ್ ನಿಲ್ದಾಣ, ಬೋಳುಕಟ್ಟೆ ಮೈದಾನ ಆಧುನೀಕರಣ ಸಹಿತ ವಿವಿಧ ಅಭಿವೃದ್ಧಿ ಗುರಿಯಿರಿಸಿದ  ಪಂಚಾಯತ್ ಬಜೆಟ್ ಮಂಡನೆ

ಬದಿಯಡ್ಕ: ಪೇಟೆಯಲ್ಲಿ ಆಧುನಿಕ ಸೌಕರ್ಯವಿರುವ ಬಸ್ ನಿಲ್ದಾಣ, ಬೋಳುಕಟ್ಟೆ ಮೈದಾನವನ್ನು ಆಧುನೀಕರಣಗೊಳಿಸುವುದು, ಕುಡಿಯುವ ನೀರು, ಕೃಷಿ, ರಸ್ತೆ ಸಹಿತ ಸಮಗ್ರ ಅಭಿವೃದ್ಧಿಯನ್ನು ಗುರಿಯಿರಿಸಿ ಬದಿಯಡ್ಕ ಪಂಚಾಯತ್ ಬಜೆಟ್ ಮಂಡಿಸಲಾಗಿದೆ. ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ. ವಿಕಸಿತ ಬದಿಯಡ್ಕ ಧ್ಯೇಯವಾಕ್ಯದೊಂದಿಗೆ ಮಂಡಿಸಿದ ಬಜೆಟ್‌ನಲ್ಲಿ 50,10,466,48 ರೂ. ಆದಾಯ ಹಾಗೂ 43,15,171,98 ರೂ. ಖರ್ಚು ಅಂದಾಜಿಸಲಾಗಿದೆ. 69529450 ರೂ. ಉಳಿದಾಯ ನಿರೀಕ್ಷಿಸಲಾಗಿದೆ. ವಿವಿಧ ಹೊಳೆಗಳಿಗೆ ಅಣೆಕಟ್ಟು, ಹಿರಿಯರಿಗೆ ಮನೆ ಬಾಗಿಲಿಗೆ ಚಿಕಿತ್ಸೆ ಮೊದಲಾದವು ಬಜೆಟ್‌ನ ಪ್ರಮುಖ ಅಂಶಗಳಾಗಿವೆ. ಪಂಚಾಯತ್ ಅಧ್ಯಕ್ಷ ಶಂಕರ …

ಮಲಯಾಳ ಭಾಷಾ ಮಸೂದೆಗೆ ರಾಜ್ಯಪಾಲರ ಅಂಕಿತ: ಕಳವಳಗೊಂಡಿರುವ ಕಾಸರಗೋಡು ಕನ್ನಡಿಗರಿಂದ ಪ್ರತಿಭಟನೆ ತೀರ್ಮಾನಿಸಲು 10ರಂದು ಸಭೆ

ಕಾಸರಗೋಡು : ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಒಂದರಿAದ ಹತ್ತನೇ ತರಗತಿಯ ತನಕ ಮಲಯಾಳಂ ಭಾಷೆಯನ್ನು ಕಡ್ಡಾಯಗೊಳಿಸುವ ಕೇರಳ ಸರಕಾರದ ಮಲಯಾಳ ಭಾಷಾ ಮಸೂದೆಗೆ ಕೇರಳ ರಾಜ್ಯಪಾಲರು ಸಹಿ ಹಾಕಿರುವುದಕ್ಕೆ ಕಾಸರಗೋಡಿನಲ್ಲಿ ಸೇರಿದ ವಿವಿಧ ಕನ್ನಡ ಪರ ಸಂಸ್ಥೆಗಳ ಪ್ರತಿನಿಧಿಗಳ ಸಭೆ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಮಸೂದೆಯ ವ್ಯಾಪ್ತಿಯಿಂದ ಕಾಸರಗೋಡನ್ನು ಹೊರತುಪಡಿಸಬೇಕೆಂದು ಸಭೆ ಒತ್ತಾಯಿಸಿದೆ. ಕನ್ನಡ ಮಾಧ್ಯಮ ಮಾತ್ರ ಇರುವ ಕಾಸರಗೋಡಿನ 84 ಕನ್ನಡ ಶಾಲೆಗಳ ವಿದ್ಯಾರ್ಥಿಗಳಿಗೆ ಮಲಯಾಳಂ ಹೇರಲು ಮಲಯಾಳ ಅಧ್ಯಾಪಕರನ್ನು ನೇಮಕ ಮಾಡಿರುವ …

ಪ್ರಾಕೃತಿಕ ದುರಂತ: ಮನೆಗಳ ನಾಶನಷ್ಟಕ್ಕೆ ಆರ್ಥಿಕ ನೆರವು ನೀಡಲು ಗ್ರೂಪ್ ಇನ್‌ಶೂರೆನ್ಸ್ ಯೋಜನೆ

ಕಾಸರಗೋಡು: ಪ್ರಾಕೃತಿಕ ದುರಂತದಿಂದ  ಮನೆಗಳಿಗೆ ಹಾನಿ ಅಥವಾ ನಾಶನಷ್ಟ ಉಂಟಾದಲ್ಲಿ ಅಂತಹವರಿಗೆ ಆರ್ಥಿಕ ಸುರಕ್ಷತೆ ಖಾತರಿಪಡಿಸಲು ಗ್ರೂಪ್ ಇನ್‌ಶೂರೆನ್ಸ್ ಯೋಜನೆ ಜ್ಯಾರಿಗೊಳಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ರಾಜ್ಯ ಯೋಜನಾ ಆಯೋಗದ ಸದಸ್ಯ ರವಿ ರಾಮನ್ ನೇತೃತ್ವದ ಸಮಿತಿ ಈ ಬಗ್ಗೆ ಅಧಯನ ನಡೆಸಿ ಸರಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಮಾಡಲಾದ ಶಿಫಾರಸ್ಸುಗಳನ್ನು ಅಂಗೀಕರಿಸಿ ಅದಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರಂತೆ ಮಳೆ, ಪ್ರವಾಹ, ಬಿರುಗಾಳಿ ಇತ್ಯಾದಿ ಪ್ರಾಕೃತಿಕ ದುರಂತಗ ಳಿಂದಾಗಿ ಮನೆ ನಷ್ಟಹೊಂದು ವವರಿಗೆಈ ಯೋಜನೆಯಿಂದ …

ಉಪ್ಪಳ ಅಗ್ನಿಶಾಮಕ, ರಕ್ಷಣಾ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

ಉಪ್ಪಳ: ಮಂಗಲ್ಪಾಡಿ ಪಂಚಾಯತ್‌ನ ಸೋಂಕಾಲು ಪ್ರತಾಪನಗರದಲ್ಲಿ ನಿರ್ಮಿಸಲಾದ ಉಪ್ಪಳ ಅಗ್ನಿಶಾಮಕ ದಳ ಮತ್ತು ರಕ್ಷಣಾ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ನಿನ್ನೆ ಸಂಜೆ ನಡೆಯಿತು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಲ್‌ಲೈನ್ ಮೂಲಕ ಕಟ್ಟಡದ ಉದ್ಘಾಟನೆ ನೆರವೇರಿಸಿದರು. ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಮಹಾ ನಿರ್ದೇಶಕ ನಿತಿನ್ ಅಗರ್‌ವಾಲ್ ಐಪಿಎಸ್ ಆನ್‌ಲೈನ್‌ನಲ್ಲಿ ಸ್ವಾಗತಿಸಿದರು. ಶಾಸಕ ಎ.ಕೆ.ಎಂ ಅಶ್ರಫ್ ಅಧ್ಯಕ್ಷತೆ ವಹಿಸಿ, ಕಟ್ಟಡದ ಶಿಲಾಫಲಕವನ್ನು ಅನಾವರಣಗೊಳಿಸಿ ಮಾತನಾಡಿ ದರು. ಮಂಜೇಶ್ವರ ಬ್ಲೋಕ್ ಪಂಚಾಯತ್ ಅಧ್ಯಕ್ಷ ಸೈಫುಲ್ಲ ತಂಙಳ್, ಮಂಗಲ್ಪಾಡಿ ಪಂಚಾಯತ್ …

ಮುಖ್ಯಮಂತ್ರಿ ವಿರುದ್ಧ ಫೇಸ್‌ಬುಕ್ ಪೋಸ್ಟ್: ಕೇಸು ದಾಖಲು

ಕಾಸರಗೋಡು: ಫೇಸ್ ಬುಕ್‌ನಲ್ಲಿ ಮುಖ್ಯಮಂತ್ರಿಯವರ ವಿರುದ್ಧ ಪೋಸ್ಟ್ ಮಾಡಿದುದಕ್ಕೆ ಸಂಬಂಧಿಸಿ ಓರ್ವನ ವಿರುದ್ಧ ಕಾಸರಗೋಡು ಸೈಬರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪರಪ್ಪ ಪಟ್ಲಂ ಕಮ್ಮಾಡಿ ನಿವಾಸಿ ಸಿ.ಎಚ್. ಸುಬೈರ್ ಎಂಬವರು ಈ ಬಗ್ಗೆ  ಸೈಬರ್ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ತನಿಖೆ ನಡೆಸಿ ಪರಪ್ಪಕಮ್ಮಾಡತ್ ನಿವಾಸಿ ರಜಾಕ್ ಈ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯ ಫೇಸ್ ಬುಕ್ ಮೂಲಕ ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ವಿರುದ್ಧ ಅನುಚಿತ   ವಿಷಯಗಳನ್ನು ಪೋಸ್ಟ್  ಮಾಡಿದ್ದಾನೆಂದೂ ಅದಕ್ಕೆ ಸಂಬಂಧಿಸಿ ಆತನ ವಿರುದ್ಧ ಪ್ರಕರಣ …

ರಾಜ್ಯದಲ್ಲಿ ಪ್ರತೀ ವರ್ಷ ಸರಾಸರಿ 3200 ಮಕ್ಕಳು ಹೃದ್ರೋಗಿಗಳು

ಕಾಸರಗೋಡು: ರಾಜ್ಯದ ಮಕ್ಕಳಲ್ಲಿ ಇತ್ತೀಚೆಗಿನಿಂದ ಹೃದ್ರೋಗ ಹೆಚ್ಚಾಗತೊಡಗಿದೆ. ರಾಜ್ಯ ಸರಕಾರದ ಉಚಿತ ಹೃದ್ರೋಗ ಚಿಕಿತ್ಸೆ ಯೋಜನೆಯಾದ  ಹೃದ್ಯ  ಎಂಬ ಯೋಜನೆಯಲ್ಲಿ  ನೋಂದಾಯಿ ಸಲ್ಪಟ್ಟ ಲೆಕ್ಕಾಚಾರದಲ್ಲಿ ರಾಜ್ಯದಲ್ಲಿ ಪ್ರತೀ ವರ್ಷ ಜನಿಸುವ ಸರಾಸರಿ 3200  ಮಕ್ಕಳಲ್ಲಿ  ಹೃದ್ರೋಗ ಕಾಣಿಸಿಕೊಳ್ಳುತ್ತಿದೆ. ಇದರಲ್ಲಿ 1100 ಮಕ್ಕಳು ಗಂಭೀರ ಹೃದ್ರೋಗ ಕಾಯಿಲೆಯಿಂದ ಬಳಲುತ್ತ್ತಿರುವವ ರಾಗಿದ್ದಾರೆ. ಇಂತಹ ಗಂಭೀರ ಸ್ಥಿತಿಯಲ್ಲಿ ಹೃದ್ಯ  ಯೋಜನೆ ಪ್ರಕಾರ ಅಂತಹ ಮಕ್ಕಳಿಗೆ 24 ತಾಸುಗಳೊ ಳಗಾಗಿ ಚಿಕಿತ್ಸೆ ನೀಡಲಾಗುತ್ತಿದೆ.  ಹೃದ್ಯ  ಯೋಜನೆಯಲ್ಲಿ ಕಳೆದ ಎಂಟು ವರ್ಷದಲ್ಲಿ ನವಜಾತ ಶಿಶುಗಳಿಂದ …

ಅನಧಿಕೃತ ಹಣ ವ್ಯವಹಾರ: ರಾಜ್ಯದಲ್ಲಿ ಆಪರೇಶನ್ ಸೈಬರ್ ಹಂಟ್‌ಗೆ ಚಾಲನೆ

ಕಾಸರಗೋಡು: ಡಿಜಿಟಲ್ ಪ್ಲಾಟ್ ಫಾಂ ಮೂಲಕ ಅನಧಿಕೃತ ವಾಗಿ ಹಣ ಹಸ್ತಾಂತರಿಸುವುದನ್ನು ಪತ್ತೆಹಚ್ಚಲು ರಾಜ್ಯದಲ್ಲಿ  ಪ್ರತ್ಯೇಕ ಕಾರ್ಯಾಚರಣೆ ಆರಂಭಿಸಲಾಗಿದೆ. ‘ಸೈಬರ್ ಹಂಟ್’ ಎಂಬ ಹೆಸರಲ್ಲಿ ನಡೆಯುವ ಈ ಕಾರ್ಯಾಚರಣೆಗೆ ಇಂದು ಬೆಳಿಗ್ಗೆ ಚಾಲನೆ ನೀಡಲಾಗಿದೆ. ರಾಜ್ಯದಲ್ಲಿ ಏಕ ಕಾಲದಲ್ಲಿ ನಡೆಯುತ್ತಿರುವ ಕಾರ್ಯಾ ಚರಣೆಗೆ ಸೈಬರ್ ಪೊಲೀಸರು ನೇತೃತ್ವ ನೀಡುತ್ತಿದ್ದಾರೆ. ಆದರೆ ಇದುವರೆಗೆ ಎಲ್ಲಿಯೂ ಕೇಸು ದಾಖಲಿಸಿಕೊಂಡ ಬಗ್ಗೆ ಮಾಹಿತಿ ಲಭಿಸಿಲ್ಲ.  ಈ ಹಿಂದೆ ಕರೆನ್ಸಿಯಾಗಿ ಅನಧಿಕೃತ ಹಣ ಹಸ್ತಾಂತರ ನಡೆಯುತ್ತಿತ್ತು. ಇದು ಪತ್ತೆಹಚ್ಚಲ್ಪಡುವ ಹಿನ್ನೆಲೆಯಲ್ಲಿ ಡಿಜಿಟಲ್ ಪ್ಲಾಟ್ …

ತಂದೆಯ ಅಪರಿಮಿತ ಮದ್ಯಪಾನ: ಪ್ಲಸ್‌ವನ್ ವಿದ್ಯಾರ್ಥಿನಿ ಕೈಯ ನರ ಕತ್ತರಿಸಿ ಆಸ್ಪತ್ರೆಯಲ್ಲಿ ದಾಖಲು

ಕಾಸರಗೋಡು: ತಂದೆಯ ಅಪರಿಮಿತ ಮದ್ಯಪಾನದಿಂದ ಮನನೊಂದು ಪ್ಲಸ್‌ವನ್ ವಿದ್ಯಾರ್ಥಿನಿ ಆತ್ಮಹತ್ಯೆಗೆತ್ನಿಸಿ ಆಸ್ಪತ್ರೆಯಲ್ಲಿ ದಾಖಲಾದ ಘಟನೆ ನಡೆದಿದೆ.  ಮೇಲ್ಪರಂಬ ಪೊಲೀಸ್ ಠಾಣೆಯಲ್ಲಿ ವಾಸಿಸುವ ೧೬ರ ಹರೆಯದ ಬಾಲಕಿ ಕೈಯ ನರ ಕತ್ತರಿಸಿ ಅಸ್ವಸ್ಥಗೊಂಡಿದ್ದು, ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾಳೆ. ಬಾಲಕಿ ಅಪಾಯದಿಂದ ಪಾರಾಗಿದ್ದಾಳೆಂದು  ಆಸ್ಪತ್ರೆ ಮೂಲಗಳು ತಿಳಿಸಿವೆ. ಕಳೆದ ದಿನ ರಾತ್ರಿ ಈ ಘಟನೆ ನಡೆದಿದೆ.  ತಂದೆ  ಅಪರಿಮಿತವಾಗಿ ಮದ್ಯ ಸೇವಿಸುತ್ತಿರುವುದರಿಂದ ಕುಟುಂಬದಲ್ಲಿ ಉಂಟಾಗುವ ಸಮಸ್ಯೆಗಳನ್ನು ನೆನೆದು  ಬಾಲಕಿ ತೀವ್ರವಾಗಿ ನೊಂದುಕೊಂಡಿ ದ್ದಳೆನ್ನಲಾಗಿದೆ.  ಮದ್ಯ ಸೇವಿಸದಂತೆ ಹಲವು ಬಾರಿ …

ಜ್ಯುವೆಲ್ಲರಿ ಮಾಲಕ ನಿಧನ

ಉಪ್ಪಳ: ಕುಂಬಳೆ ಶ್ರೀ ಗೋಪಾಲಕೃಷ್ಣ ಕ್ಷೇತ್ರ ರಸ್ತೆಯಲ್ಲಿ ಸುಮಾರು 45 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಗೀತಾ ಜ್ಯುವೆಲ್ಲರಿ ಮಾಲಕ ಕುಂಬಳೆ ಹೈಸ್ಕೂಲ್ ಬಳಿಯ ನಿವಾಸಿ ಕೆ.ಜನಾರ್ದನ ಆಚಾರ್ಯ (86) ನಿಧನ ಹೊಂದಿದರು. ನಿನ್ನೆ ಸಂಜೆ ಮನೆಯಿಂದ ಕುಂಬಳೆ ಪೇಟೆಗೆ ತಲುಪಿದ್ದ ಇವರಿಗೆ ಹೃದಯÁ ಘಾತ ಉಂಟಾಗಿದ್ದು, ಕೂಡಲೇ ಸ್ಥಳೀಯರು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಗೆ ತಲುಪಿಸಿದರೂ ಅಷ್ಟರಲ್ಲಿ ನಿಧನ ಸಂಭವಿಸಿದೆ. ಇವರು ಆರ್.ಎಸ್.ಎಸ್ ಹಿರಿಯ ಸ್ವಯಂ ಸೇವಕರಾಗಿದ್ದರು. ಬಂಗ್ರಮAಜೇಶ್ವರ ಶ್ರೀ ಕಾಳಿಕಾಪರಮೇಶ್ವರೀ ಕ್ಷೇತ್ರದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.ಮೃತರು …

ಮಜಿಬೈಲು ಬಳಿ ಜುಗಾರಿ ದಂಧೆ: ಓರ್ವ ಸೆರೆ; ಹಲವರು ಪರಾರಿ

ಮಂಜೇಶ್ವರ: ಜುಗಾರಿ ಕೇಂದ್ರಕ್ಕೆ ಮಂಜೇಶ್ವರ ಪೊಲೀಸರು ದಾಳಿ ನಡೆಸಿ ಓರ್ವನನ್ನು ಸೆರೆಹಿಡಿದಿದ್ದಾರೆ. ಈ ವೇಳೆ ಹಲವರು ಓಡಿ ಪರಾರಿಯಾಗಿದ್ದಾರೆ. ಕಡಂಬಾರು ದುರ್ಗಿಪಳ್ಳ ಚೇತನ್ ನಗರದ ಪ್ರಶಾಂತ್ ಕುಮಾರ್ ಟಿ (38) ಬಂಧಿತ ವ್ಯಕ್ತಿಯಾಗಿದ್ದಾನೆ. ಜುಗಾರಿ ಸ್ಥಳದಿಂದ 3540 ರೂ. ವಶಪಡಿಸಿರುವುದಾಗಿ ಪೊಲೀಸರು  ತಿಳಿಸಿದ್ದಾರೆ.  ಮಜಿಬೈಲು ಪಟ್ಟತ್ತೂರು ಕ್ಷೇತ್ರ ಸಮೀಪದ ಹಿತ್ತಿಲಲ್ಲಿ ಇಂದು ಮುಂಜಾನೆ 4.30ರ ವೇಳೆ ಜುಗಾರಿ ದಂಧೆ ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಎಸ್‌ಐ ವೈಷ್ಣವ್ ನೇತೃತ್ವದ ಪೊಲೀಸರು ಅಲ್ಲಿಗೆ ದಾಳಿ …