ವಿದ್ಯುತ್ ತಂತಿ, ಮರ ದೇಹದ ಮೇಲೆ ಬಿದ್ದು ಗಾಯಗೊಂಡ ವಲಸೆ ಕಾರ್ಮಿಕ ಮೃತ್ಯು

ಮಂಜೇಶ್ವರ: ವಿದ್ಯುತ್ ತಂತಿ ಹಾಗೂ ಮರ ತುಂಡಾಗಿ ದೇಹದ ಮೇಲೆ ಬಿದ್ದು ಗಾಯಗೊಂಡು ಗಂಭೀರಾವಸ್ಥೆಯಲ್ಲಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದ ವಲಸೆ ಕಾರ್ಮಿಕ  ಸಾವನ್ನಪ್ಪಿದ ಘಟನೆ ನಡೆದಿದೆ. ಉತ್ತರ ಪ್ರದೇಶ ಬಹ್‌ರೈಚ್, ಪಿಪ್ರಾ ಗೌರಾ ನಿವಾಸಿ ಗುಲಾಬ್ ಎಂಬವರ ಪುತ್ರ ವೀರೇಂದ್ರ (44) ಸಾವನ್ನಪ್ಪಿದ ದುರ್ದೈವಿ. ಇವರು ಉಪ್ಪಳ ರೈಲು ನಿಲ್ದಾಣ ಬಳಿ ಬಾಡಿಗೆ ಮನೆಯಲ್ಲಿ ವಾಸಿಸಿ ಕೆಲಸ ನಿರ್ವಹಿಸುತ್ತಿದ್ದರು. ಜನವರಿ 12ರಂದು ಮಧ್ಯಾಹ್ನ 2 ಗಂಟೆಗೆ ತೂಮಿನಾಡು ಲಕ್ಷಂವೀಡ್ ಕಾಲನಿಯ ಸಮೀಪದ ಮನೆಯಲ್ಲಿ ಕಾಂಕ್ರೀಟ್ ಕೆಲಸದಲ್ಲಿ ನಿರತರಾಗಿದ್ದ …

ಚೆರ್ಕಳ-ಉಕ್ಕಿನಡ್ಕ ಅಂತಾರಾಜ್ಯ ರಸ್ತೆ ದುರಸ್ತಿಗೊಳಿಸದಿದ್ದಲ್ಲಿ 19ರಿಂದ ಖಾಸಗಿ ಬಸ್‌ಗಳ ಅನಿರ್ದಿಷ್ಟಾವಧಿ ಮುಷ್ಕರ

ಕಾಸರಗೋಡು: ಚೆರ್ಕಳ-ಉಕ್ಕಿ ನಡ್ಕ ರಸ್ತೆಯ ಶೋಚನೀಯಾವಸ್ಥೆಯನ್ನು ಪರಿಹರಿಸಲು ಕೂಡಲೇ ಕ್ರಮ ಕೈಗೊಳ್ಳದಿದ್ದಲ್ಲಿ ಈ ತಿಂಗಳ 19ರಿಂದ ಚೆರ್ಕಳ- ಕಲ್ಲಡ್ಕ ಅಂತಾರಾಜ್ಯ ರಸ್ತೆಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳು ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿವೆ ಎಂದು ಪ್ರೈಡ್ ಬಸ್ ಕಾರ್ಮಿಕರ ಯೂನಿಯನ್ ವಲಯ ಅಧ್ಯಕ್ಷ ಹಾರಿಸ್ ಪಿ.ಎಂ.ಎಸ್. ತಿಳಿಸಿದ್ದಾರೆ. ಈ ರಸ್ತೆಯಲ್ಲಿ ಚೆರ್ಕಳದಿಂದ ಉಕ್ಕಿನಡ್ಕವರೆಗಿನ ೧೯ ಕಿಲೋ ಮೀಟರ್ ಹೊಂಡಗಳಿಂದ ತುಂಬಿಕೊಂಡು ಒಂದು ವರ್ಷ ಕಳೆಯಿತು. ವಾಹನಗಳು ಹೊಂಡಕ್ಕೆ ಬಿದ್ದು ಎದ್ದು ಸಂಚರಿಸುತ್ತಿರುವುದರಿಂದ ವಿದ್ಯಾರ್ಥಿಗಳ ಸಹಿತ ಪ್ರಯಾಣಿಕರು ತೀವ್ರ ನೋವು ಎದುರಿಸಬೇಕಾಗಿ …

ಅಡೂರು ಕ್ಷೇತ್ರದಲ್ಲಿ ಮಕರಸಂಕ್ರಮಣ ಉತ್ಸವದಂದು ಸೋಲಾರ್ ಪವರ್ ಸಿಸ್ಟಂ ಉದ್ಘಾಟನೆ

ಅಡೂರು: ಅಡೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರಸಂಕ್ರಮಣ ಉತ್ಸವ, ಸಹಸ್ರ ಕುಂಭಾಭಿಷೇಕ, ಉತ್ಸವ ಬಲಿ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಿತು. ಇದೇ ವೇಳೆ ಸೋಲಾರ್ ಪವರ್ ಸಿಸ್ಟಂ ವ್ಯವಸ್ಥೆಯನ್ನು ಬ್ರಹ್ಮಶ್ರೀ ರವೀಶ ತಂತ್ರಿ ಉದ್ಘಾಟಿಸಿದರು. ಕರ್ನಾಟಕ ಬ್ಯಾಂಕ್ ಮಂಗಳೂರು ಸಿಒಒ ರಾಜ ಬಿ.ಎಸ್, ಸೆಲ್ಕೋ ಸೋಲಾರ್ ಲೈಟ್‌ನ  ಅಧಿಕಾರಿಗಳು ಉಪಸ್ಥಿತರಿದ್ದರು.  ಕಂಪ್ಯೂಟರ್ ಬಿಲ್ಲಿಂಗ್ ಸಿಸ್ಟಂನ್ನು ಕೇರಳ ಗ್ರಾಮೀಣ ಬ್ಯಾಂಕ್ ಕಾಸರಗೋಡು ರೀಜನಲ್ ಮೆನೇಜರ್ ಕೆ. ಗೋಪಕುಮಾರ್ ಉದ್ಘಾಟಿಸಿದರು. ಅಡೂರು ಶಾಖೆಯ ಮೆನೇಜರ್ ಸಿ. ರಿಜಿನ್ ಉಪಸ್ಥಿತರಿದ್ದರು. ಕ್ಷೇತ್ರ ಕಾರ್ಯನಿರ್ವಹಣಾಧಿಕಾರಿ …

ಶಾಸಕ ಅಶ್ರಫ್‌ರ ಮುಷ್ಕರ ಜನರ ಕಣ್ಣಿಗೆ ಮಣ್ಣೆರಚಲು ಆರಿಕ್ಕಾಡಿ ಟೋಲ್ ಬೂತ್: ಬಿಜೆಪಿ ಪರಿಹಾರ ಕಾಣಲಿದೆಯೆಂದು ಅಶ್ವಿನಿ

ಕಾಸರಗೋಡು:  ಆರಿಕ್ಕಾಡಿ ಟೋಲ್ ಬೂತ್ ಹೆಸರಲ್ಲಿ ಶಾಸಕ ಎಕೆಎಂ ಅಶ್ರಫ್ ನಡೆಸುತ್ತಿರುವುದು ಜನರ ಕಣ್ಣಿಗೆ ಮಣ್ಣೆರಚಲಿರುವ ಯತ್ನ ಮಾತ್ರವಾಗಿದೆಯೆಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಆರೋಪಿಸಿದರು. ಆರಿಕ್ಕಾಡಿ ಟೋಲ್ ಬೂತ್‌ನ್ನು ಕೂಡಲೇ ತೆರವುಗೊಳಿಸಬೇಕೆಂದು, ಅದಕ್ಕಾಗಿ ಬಿಜೆಪಿ ಜಿಲ್ಲಾ, ರಾಜ್ಯ, ಕೇಂದ್ರ ನಾಯಕತ್ವ ಕೇಂದ್ರದ ಸಾರಿಗೆ ಸಚಿವಾಲಯವನ್ನು ಸಮೀಪಿಸಿರುವುದಾಗಿಯೂ ಅವರು ನುಡಿದರು.  ಆರಿಕ್ಕಾಡಿಯ ಟೋಲ್ ಬೂತ್ ಕಾನೂನು ವಿರುದ್ಧ ಹಾಗೂ  ಕೇಂದ್ರ ಸಾರಿಗೆ ಸಚಿವಾಲಯದ ನಿಲುವಿಗೆ ವಿರುದ್ಧವಾಗಿದೆಯೆಂದು ಬಿಜೆಪಿ ಜಿಲ್ಲಾ ಸಮಿತಿ  ಈ ಮೊದಲೇ  ಕೇಂದ್ರ ನಾಯಕತ್ವಕ್ಕೆ ತಿಳಿಸಿರುವುದಾಗಿಯೂ …

ಕಣಿಪುರ ಕ್ಷೇತ್ರ ಜಾತ್ರೆ: ಸಹಸ್ರಾರು ಭಕ್ತರಿಂದ ದೇವರ ದರ್ಶನ

ಕುಂಬಳೆ: ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿರುವ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನಾಡಿನ ವಿವಿಧ ಭಾಗಗಳಿಂದ ಸಹಸ್ರಾರು ಮಂದಿ ಭಕ್ತಾದಿಗಳು ತಲುಪಿ ದೇವರ ದರ್ಶನ ಪಡೆಯುತ್ತಿದ್ದಾರೆ. ಮಹೋತ್ಸವದ ಮೂರನೇ ದಿನವಾದ ಇಂದು ಬೆಳಿಗ್ಗೆ ಉತ್ಸವ ಶ್ರೀಬಲಿ, ಬಳಿಕ ತುಲಾಭಾರ ಸೇವೆ ನಡೆಯಿತು. ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಶ್ರೀ ಬಲಿ ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ. ಅಪರಾಹ್ನ ಗಂಟೆ ೨ರಿಂದ ಶೇಡಿಕಾವು ಪಾರ್ತಿಸುಬ್ಬ ಯಕ್ಷಗಾನ ಕಲಾಸಂಘದವರಿಂದ ‘ಶ್ರೀಕೃಷ್ಣ ಸಂದಾನ’ ಯಕ್ಷಗಾನ ತಾಳಮದ್ದಳೆ, ಸಂಜೆ 4.30ರಿಂದ ವೈಷ್ಣವಿ ನಾಟ್ಯಾಲಯ ಪುತ್ತೂರು …

ಕುಸಿದು ಬಿದ್ದು ಮಹಿಳೆ ನಿಧನ

ಮಂಗಲ್ಪಾಡಿ: ಪ್ರತಾಪನಗರ ಬೀಟಿಗದ್ದೆ ನಿವಾಸಿ ದಿ| ದಿವಾಕರ ಪೂಜಾರಿಯವರ ಪತ್ನಿ ದೇವಕಿ (63) ನಿಧನ ಹೊಂದಿದರು. ಇವರು ನಿನ್ನೆ ಸಂಜೆ ಮನೆಯಲ್ಲಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಉಪ್ಪಳದ ಖಾಸಗಿ ಆಸ್ಪತ್ರೆಗೆ ತಲುಪಿಸಿದರೂ ಅಷ್ಟರಲ್ಲಿ ನಿಧನ ಹೊಂದಿದರು.ಮೃತರು ಮಕ್ಕಳಾದ ಉಷಾ, ಉದಯ, ಅನಿಲ್, ಸೊಸೆ ರಕ್ಷಿತಾ, ಅಳಿಯ ಹರೀಶ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಮನೆಗೆ ಸಂಘ ಪರಿವಾರದ ಮುಖಂಡರು, ಕಾರ್ಯಕರ್ತರ ಸಹಿತ ಹಲವಾರು ಮಂದಿ ಭೇಟಿ ನೀಡಿ ಅಂತಿಮನಮನ ಸಲ್ಲಿಸಿದರು. ನಿಧನಕ್ಕೆ ಪ್ರತಾಪನಗರ …

ನಗರಸಭೆಯ ಮೊದಲ ಮಹಿಳಾ ಕೌನ್ಸಿಲರ್ ನಿಧನ

ಕಾಸರಗೋಡು: ನಗರಸಭಾ ಮಾಜಿ ಕೌನ್ಸಿಲರ್, ನೆಲ್ಲಿಕುಂಜೆ ನಿವಾಸಿ ದಿ| ಗಣೇಶ್‌ಅಬ್ದುಲ್ಲಕುಂಞಿಯವರ ಪತ್ನಿ ಸೌದಾಬಿ ಅಬ್ದುಲ್ಲಕುಂಞಿ (84) ನಿಧನ ಹೊಂದಿದರು.  ನೆಲ್ಲಿಕುಂಜೆ ವಾರ್ಡನ್ನು ಪ್ರತಿನಿಧೀಕರಿಸಿ ನಗರಸಭೆಗೆ ತಲುಪಿದ ಮೊದಲ ಮಹಿಳಾ ಸದಸ್ಯೆಯಾಗಿದ್ದರು. ಮೃತರು ಮಕ್ಕಳಾದ ರಹೀಂ, ಸಾದಿಕ್, ನಸೀರ್, ಸಾಹಿರ, ಖದೀಜ, ಸಮೀರ, ಸಲ್ಮಾ, ಅಳಿಯಂದಿರಾದ ಮೊಹಮ್ಮದ್ ಕುಂಞಿ, ಬಶೀರ್ ಸೂಫಿ ತಳಂಗರೆ, ಅಬ್ದುಲ್ಲ ಕುಂಞಿ ಚೆರ್ಕಳ, ಅಬ್ದುಲ್ಲ ಕುಂಞಿ ಮೊಗ್ರಾಲ್, ಸೊಸೆಯಂದಿರಾದ ಸೌದಾ, ನಬೀಸ, ಮರಿಯಾಂಬಿ, ಫೌಸಿಯ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಓರ್ವ ಪುತ್ರ ಬಶೀರ್ …

ಮುಖ್ಯಮಂತ್ರಿಯ ವಿದೇಶ ಯಾತ್ರೆಗೆ ಎರಡು ವರ್ಷದಲ್ಲಿ ವಿಮಾನ ಖರ್ಚು 41.57 ಲಕ್ಷ ರೂ.

ತಿರುವನಂತಪುರ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ 2022-23ರಲ್ಲಿ ನಡೆಸಿದ ವಿಮಾನ ಯಾತ್ರೆಗಳ ಖರ್ಚಿನ ವತಿಯಿಂದ 41.57 ಲಕ್ಷ ರೂ. ಪಡೆದಿದ್ದಾರೆ. 2022 ಜನವರಿ 15ರಿಂದ ಕಳೆದ ವರ್ಷ ಡಿಸೆಂಬರ್ ತನಕದ ಅವಧಿಯಲ್ಲಿ ಮುಖ್ಯಮಂತ್ರಿ ಗಲ್ಫ್ ರಾಷ್ಟ್ರಗಳಿಗೆ ಯಾತ್ರೆ ಮಾತ್ರವಲ್ಲ, ಅಮೇರಿಕ, ಬ್ರಿಟನ್, ಕ್ಯೂಬಾ ಸೇರಿದಂತೆ ಒಟ್ಟು 16 ರಾಷ್ಟ್ರಗಳಿಗೆ ಯಾತ್ರೆ ನಡೆಸಿದ್ದಾರೆ.  ಹೀಗೆ ನಡೆಸಲಾದ ವಿದೇಶಯಾತ್ರೆಯ ವಿಮಾನ ಶುಲ್ಕದ ವತಿಯಿಂದ ಅವರು 2022 ಮತ್ತು 2023ರಲ್ಲಿ ಒಟ್ಟು 41.57 ಲಕ್ಷ ರೂ. ಪಡೆದಿದ್ದಾರೆಂದು ಮಾಹಿತಿ ಹಕ್ಕು ಕಾನೂನುಪ್ರಕಾರ ರಾಜ್ಯ …

ಕೇರಳದ ಅರ್ಜಿ ಪರಿಗಣಿಸಿ ಸುಪ್ರೀಂಕೋರ್ಟ್ ನಿರ್ದೇಶ: ಎಸ್‌ಐಆರ್ ಸಮಯ ವ್ಯಾಪ್ತಿ ಇನ್ನೂ ಎರಡು ವಾರಗಳ ತನಕ ವಿಸ್ತರಣೆ

ತಿರುವನಂತಪುರ: ಮತದಾರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆಗಾಗಿ ಕೇರಳದಲ್ಲಿ ನಿಗದಿಪಡಿಸಲಾಗಿರುವ ಸಮಯಾವ ಕಾಶವನ್ನು ಇನ್ನೂ ಎರಡು ವಾರಗಳ ತನಕ ವಿಸ್ತರಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶ ನೀಡಿದೆ.  ಎಸ್‌ಐಆರ್ ವಿಷಯದಲ್ಲಿ  ಜನರು ಎದುರಿಸುತ್ತಿರುವ ಸಂಕಷ್ಟಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಕೇರಳ ಸೇರಿದಂತೆ ಇತರ ರಾಜ್ಯದಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ಸುಪ್ರೀಂಕೋರ್ಟ್ ಈ ನಿರ್ದೇಶ ನೀಡಿದೆ.  ಎಸ್‌ಐಆರ್ ಕ್ರಮಗಳನ್ನು ಈ ತಿಂಗಳ 22ರೊಳಗೆ ಪೂರ್ತೀಕರಿಸುವಂತೆ ಆಯೋಗ ಈ ಹಿಂದೆ ಅಂತಿಮ ಗಡು ನೀಡಿತ್ತು. ಈಗ ಸುಪ್ರೀಕೋರ್ಟ್ ನೀಡಿರುವ ನಿರ್ದೇಶ …