ಚೇವಾರು, ಕುಳೂರು ಶಾಲೆಯಲ್ಲಿ ಮಕ್ಕಳ ದಿನಾಚರಣೆ
ಪೈವಳಿಕೆ: ಚೇವಾರು ಶ್ರೀ ಶಾರದಾ ಎಯುಪಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಜರಗಿತು. ಪಿಟಿಎ ಅಧ್ಯಕ್ಷ ಅಬ್ದುಲ್ ಅಸೀಸ್ ಚೇವಾರು ಉದ್ಘಾಟಿಸಿದರು. ಮುಖ್ಯೋಪಾಧ್ಯಾಯ ಶ್ಯಾಮ್ ಭಟ್ ಅಧ್ಯಕ್ಷತೆ ವಹಿಸಿದರು. ಶಿಕ್ಷಕಿ ರಾಜೇಶ್ವರಿ ಶುಭ ಕೋರಿದರು. ಉಪಜಿಲ್ಲಾ ಮಟ್ಟದ ವಿದ್ಯಾರಂಗ, ವಿಜ್ಞಾನೋತ್ಸವ, ಕ್ರೀಡಾಕೂಟ , ಕಲೋತ್ಸವಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ, ಟ್ರೋಫಿ, ಪ್ರಶಸ್ತಿ ಪತ್ರ ವಿತರಿಸಲಾಯಿತು. ರವಿಕುಮಾರ್ ಸ್ವಾಗತಿಸಿ, ಪ್ರಸಾದ್ ರೈ ವಂದಿಸಿದರು. ರಾಜೇಶ್ವರಿ ಟೀಚರ್ ಸಿಹಿ ಹಂಚಿಸಿದರು. ಪ್ರಮೀಳಾ ಡಿ.ಎನ್., ಗೀತಾಂಜಲಿ, ಸಾತ್ವಿಕ್ ಎನ್., ಹಾರೀಸ್ ಟಿ., ಫಾಯಸ್, …