ಶೇಡಿಗದ್ದೆ-ನಾರಾಯಣಮಂಗಲ ಕಾಂಕ್ರೀಟ್ ರಸ್ತೆ ಉದ್ಘಾಟನೆ
ಕುಂಬಳೆ: ಶೇಡಿಗದ್ದೆ ಮುಂಗಿಲ ನಾರಾಯಣಮಂಗಲ ಕಾಂಕ್ರೀಟ್ ರಸ್ತೆಯನ್ನು ನಾಡಿಗೆ ಸಮರ್ಪಿಸ ಲಾಯಿತು. ಕಾಸರಗೋಡು ಬ್ಲೋಕ್ ಪಂಚಾಯತ್ನ ವಾರ್ಷಿಕ ಯೋಜನೆಯಲ್ಲಿ ಸೇರಿಸಿ ನವೀಕರಿಸಿದ ಕುಂಬಳೆ ಪಂಚಾಯತ್ ವ್ಯಾಪ್ತಿಯ ಈ ರಸ್ತೆಯನ್ನು ಶಾಸಕ ಎ.ಕೆ.ಎಂ. ಅಶ್ರಫ್ ನಾಡಿಗೆ ಸಮರ್ಪಿಸಿದರು. ಬ್ಲೋಕ್ ಪಂಚಾಯತ್ ಅಧ್ಯಕ್ಷ ಅಬ್ದುಲ್ಲ ಕುಂಞಿ ಚೆರ್ಕಳ ಅಧ್ಯಕ್ಷತೆ ವಹಿಸಿದರು. ಬ್ಲೋಕ್ನ ಸ್ಥಾಯೀ ಸಮಿತಿ ಅಧ್ಯಕ್ಷ ಅಶ್ರಫ್ ಕಾರ್ಲೆ ಸ್ವಾಗತಿಸಿದರು. ಕುಂಬಳೆ ಪಂಚಾಯತ್ ಅಧ್ಯಕ್ಷ ಪಿ. ಅಬ್ದುಲ್ ಖಾದರ್ , ಜಿಲ್ಲಾ ಪಂ. ಸದಸ್ಯ ಅಸೀಸ್ ಕಳತ್ತೂರು, ಮಂಜೇಶ್ವರ ಬ್ಲೋಕ್ …