ಉದ್ಯೋಗ ನೀಡುವುದಾಗಿ ನಂಬಿಸಿ 3,50,000 ರೂ. ಪಡೆದು ವಂಚನೆ ಆರೋಪ: ಇಬ್ಬರ ವಿರುದ್ಧ ಕೇಸು
ಬದಿಯಡ್ಕ: ಉದ್ಯೋಗ ಕೊಡಿಸು ವುದಾಗಿ ನಂಬಿಸಿ 3,5೦,೦೦೦ ರೂ.ವನ್ನು ಮುಂಗಡವಾಗಿ ಪಡೆದು ನಂತರ ಆ ಉದ್ಯೋಗವನ್ನಾಗಲೀ, ನೀಡಿದ ಹಣವನ್ನಾಗಲೀ ಹಿಂತಿರುಗಿಸದೆ ವಂಚನೆ ಗೈದಿರುವುದಾಗಿ ಆರೋಪಿಸಿ ಯುವಕ ನೀಡಿದ ದೂರಿನಂತೆ ಇಬ್ಬರ ವಿರುದ್ಧ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಗು ಪಳ್ಳ ಹೌಸಿನ ಜೋಯಲ್ ಡಿಸೋಜಾ (22) ಎಂಬ ಯುವಕ ನೀಡಿದ ದೂರಿನಂತೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಪ್ರತೀಶ್ ಸಿ. ಸೋಮನ್ ಮತ್ತು ನೋರ್ತ್ ದೆಹಲಿಯ ಸೋಮ್ ಪ್ರಕಾಶ್ ಎಂಬಿಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. …
Read more “ಉದ್ಯೋಗ ನೀಡುವುದಾಗಿ ನಂಬಿಸಿ 3,50,000 ರೂ. ಪಡೆದು ವಂಚನೆ ಆರೋಪ: ಇಬ್ಬರ ವಿರುದ್ಧ ಕೇಸು”