ಕೋಟೆಕಣಿ ಕೂಡುರಸ್ತೆಯಲ್ಲಿ ಸಾರಿಗೆ ಅಡಚಣೆ ನಿತ್ಯ ಘಟನೆ: ಪ್ರಯಾಣಿಕರಲ್ಲಿ ಆತಂಕ

ಕಾಸರಗೋಡು: ಕರಂದಕ್ಕಾಡ್-ಮಧೂರು ರಸ್ತೆಯಲ್ಲಿ ಸೂರ್ಲು ಬಳಿ ಕೋಟೆಕಣಿಯ ಕೂಡು ರಸ್ತೆಯಲ್ಲಿ ಸಾರಿಗೆ ಅಡಚಣೆ ಎದುರಾಗುತ್ತಿದ್ದು, ಇದು ಕೆಲವೊಮ್ಮೆ ಅಪಘಾತಗಳಿಗೂ ಕಾರಣವಾಗುತ್ತಿದೆ. ಮೀಪುಗುರಿಯಿಂದ ಕಾಸರಗೋಡು ನಗರಕ್ಕೆ ಸಾಗುವ ವಾಹನಗಳಿಗೆ ಕೋಟೆಕಣಿ ಜಂಕ್ಷನ್‌ನ ಎತ್ತರವಾದ ಈ ಪ್ರದೇಶವು ಸಣ್ಣಪುಟ್ಟ ಅಪಘಾತಗಳಿಗೆ ಕಾರಣವಾಗುತ್ತಿದೆ. ಈ ಕೂಡು ರಸ್ತೆಗೆ ತಲುಪುವಷ್ಟರಲ್ಲಿ ವಾಹನಗಳು ದಿಢೀರ್ ನಿಲುಗಡೆಗೊಳಿಸಬೇಕಾಗುತ್ತಿದ್ದು ಈ ವೇಳೆ ಮುಂದಿರುವ ವಾಹಕ್ಕೆ ಹಿಂದಿನಿಂದ ಬರುವ ವಾಹನವು ಢಿಕ್ಕಿಯಾಗುವ ಸಾಧ್ಯತೆ ಹೆಚ್ಚಿದೆ. ಹೊಸ ಬಸ್ ನಿಲ್ದಾಣಕ್ಕೆ ಸಾಗುವ ಈ ಕೋಟೆಕಣಿ ರಸ್ತೆಯ ಅಭಿವೃದ್ಧಿ ಜೊತೆಗೆ ಈ …

ಪೈವಳಿಕೆ ಪಂಚಾಯತ್ ವಸತಿ ಯೋಜನೆ: ಸಿಪಿಎಂ ನಡೆಸಿದ ಮಾರ್ಚ್ ಕಪಟ ನಾಟಕ-ಯುಡಿಎಫ್

ಪೈವಳಿಕೆ: ಪಂಚಾಯತ್‌ನ ಲೈಫ್ ವಸತಿ ಯೋಜನೆಯಲ್ಲಿ ಫಲಾನುಭವಿಗಳಿಗೆ ಹಣ ಪಾವತಿಸಲಾಗಿಲ್ಲ ಎಂಬ ಕಾರಣಕ್ಕೆ ಸಿಪಿಎಂ ನಡೆಸಿದ ಮಾರ್ಚ್ ಹಾಗೂ ಧರಣಿ ಕಪಟ ನಾಟಕವೆಂದು ಪೈವಳಿಕೆ ಪಂಚಾಯತ್ ಯುಡಿಎಫ್ ಸಮಿತಿ ಅಧ್ಯಕ್ಷ ವಸಂತ ಕುಮಾರ್, ಸಂಚಾಲಕ ಝಡ್.ಎ. ಕಯ್ಯಾರ್ ಆರೋಪಿಸಿದ್ದಾರೆ.  ತಮ್ಮದೇ ಸರಕಾರದ ವಿರುದ್ಧ ಸಿಪಿಎಂ ಮುಷ್ಕರ ನಡೆಸಿದಂತಾಗಿದೆ ಇದು ಎಂದು ಯುಡಿಎಫ್ ಮುಖಂಡರು ತಿಳಿಸಿದ್ದಾರೆ. ಲೈಫ್ ವಸತಿ ಯೋಜನೆಯಲ್ಲಿ ಫಲಾನುಭವಿಗಳಿಗೆ ಸೂಕ್ತ ಸಮಯದಲ್ಲಿ ಆರ್ಥಿಕ ಸಹಾಯ ಒದಗಿಸಲು ಹಿಂದಿನ ಆಡಳಿತ ಸಮಿತಿಗೆ ಸಾಧ್ಯವಾಗದ ಕಾರಣ ರಾಜ್ಯ ಸರಕಾರ …

ಅನಾಥ ವೃದ್ಧೆಗೆ ನೆರಳಾದ ಪಿಂಕ್ ಪೊಲೀಸ್

ಕಾಸರಗೋಡು: ಅನಾಥರಂತಿದ್ದ ವೃದ್ದೆಗೆ ಕಾಸರಗೋಡು ಪಿಂಕ್ ಪೊಲೀಸರು ಆಶ್ರಯ ನೀಡಿದ್ದಾರೆ. ಪಾರೆಕಟ್ಟೆ ಭಾಗದಲ್ಲಿ ಸ್ಥಳೀಯರ ನೆರವಿನೊಂದಿಗೆ ಜೀವಿಸುತ್ತಿದ್ದ ೭೫ ವರ್ಷದ ವಾರಿಜ ಎಂಬ ವೃದ್ಧೆಯನ್ನು ಪಿಂಕ್ ಪೊಲೀಸರು ಸುರಕ್ಷಿತ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ. ವಾರಿಜರ ದಯನೀಯ ಸ್ಥಿತಿ ಗಮನಕ್ಕೆ ಬಂದ ಪಿಂಕ್ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತಲುಪಿ ಅವರಿಗೆ ಅಗತ್ಯದ ವೈದ್ಯ ಸಹಾಯ ಲಭ್ಯಗೊಳಿಸಿದ್ದಾರೆ. ಬಳಿಕ ಎಎಸ್‌ಐ ಶಾರದ, ಸೀನಿಯರ್ ಸಿವಿಲ್ ಪೊಲೀಸ್ ಆಫೀಸರ್ ಗೀತ, ಸಿವಿಲ್ ಪೊಲೀಸ್ ಆಫೀಸರ್‌ಗಳಾದ ರೇಷ್ಮ, ರಮ್ಯ ಎಂಬಿವರು ಅಧಿಕಾರಿಗಳೊಂದಿಗೆ ಮಾತನಾಡಿ ವಾರಿಜರನ್ನು …

ಸೋಶ್ಯಲ್ ಮೀಡಿಯಾ ಇನ್‌ಫ್ಲುವನ್ಸರ್ ಚಿನ್ನುಪಾಪು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ: ಅಭಿಮಾನಿಗಳಲ್ಲಿ ಮಡುಗಟ್ಟಿದ ದುಃಖ ; ಪೊಲೀಸ್ ತನಿಖೆ ಆರಂಭ

ಕಾಸರಗೋಡು: ಸೋಶ್ಯಲ್ ಮೀಡಿಯಾ ಇನ್‌ಫ್ಲುವೆನ್ಸರ್ ಆಗಿದ್ದ ಚಿನ್ನು ಪಾಪು ಯಾನೆ ಕೆ. ರೇಷ್ಮ (25)ರ ಅಕಾಲಿಕ ಅಗಲುವಿಕೆ ಯಿಂದ ಆಕೆಯ ಸಂಬಂಧಿಕರು, ಅಭಿಮಾನಿ ಗಳು ಹಾಗೂ ಹಿಂಬಾಲಕರಲ್ಲಿ ತೀವ್ರ ಶೋಕಸಾಗರ ಸೃಷ್ಟಿಯಾಗಿದೆ. ನಿನ್ನೆ ಮಧ್ಯಾಹ್ನ 2 ಗಂಟೆ ವೇಳೆ ಕಾಸರಗೋಡು ಆಜಾದ್‌ನಗರದ ಬಾಡಿಗೆ ಕ್ವಾರ್ಟರ್ಸ್‌ನಲ್ಲಿ ಚಿನ್ನುಪಾಪು ಯಾನೆ ರೇಷ್ಮ ನೇಣುಬಿಗಿದು ಸಾವಿ ಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಬಾಡಿಗೆ ಮನೆಯ ಬಾಗಿಲು ತೆರೆದಿಟ್ಟ ಸ್ಥಿತಿಯಲ್ಲಿತ್ತೆಂದು ಹೇಳಲಾಗುತ್ತಿದೆ. ಇದೇ ವೇಳೆ ರೇಷ್ಮಾರ ಸ್ನೇಹಿತ ಮಧೂರು ನಿವಾಸಿ ಸಂದೇಶ್ ತಲುಪಿ ಆಕೆಯನ್ನು …

ಯುವತಿಗೆ ಚುಂಬಿಸಲೆತ್ನ:ಯುವಕ ಸೆರೆ

ಮಂಜೇಶ್ವರ: ಯುವತಿಯ ಹೆಗಲಿಗೆ ಕೈಯಿರಿಸಿ ಚುಂಬಿಸಲೆತ್ನಿಸಿದ ಆರೋಪದಂತೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕುಂಜ ತ್ತೂರು ಜಲಾಲಿಯ ಮಸೀದಿ ಸಮೀ ಪದ ಸಣ್ಣಡ್ಕ ಹೌಸ್‌ನ  ಸುನಿಲ್ ಕುಮಾರ್ (38) ಎಂಬಾತನನ್ನು ಮಂ ಜೇಶ್ವರ ಎಸ್.ಐ ವೈಷ್ಣವ್ ರಾಮಚಂದ್ರನ್ ಸೆರೆಹಿಡಿದಿದ್ದಾರೆ. ಜನವರಿ 26 ಹಾಗೂ  ಫೆಬ್ರವರಿ ೮ರಂದು  ಪ್ರಕರಣಕ್ಕೆ ಕಾರಣವಾದ ಘಟನೆ ನಡೆದಿದೆ.  ಕುಂಜತ್ತೂರು ಮಾಸ್ಕೋ ಹಾಲ್ ಸಮೀಪದ ಬಸ್ ನಿಲ್ದಾಣದಲ್ಲಿ ಜನವರಿ ೨೬ರಂದು ಮೊದಲ ಘಟನೆ ನಡೆದಿದೆ.  ಈತ ಯುವತಿಯ ಕೈಹಿಡಿದು ಚುಂಬಿಸಲೆತ್ನಿ ಸಿರುವುದಾಗಿ ದೂರಲಾಗಿದೆ. ಎರಡನೇ ಘಟನೆ …

ಶಬರಿಮಲೆ: ಇನ್ನೊಂದು ಅವ್ಯವಹಾರ ಪತ್ತೆ: ಧ್ವಜಸ್ತಂಭ ನಿರ್ಮಾಣಕ್ಕೆ ಕಾಯ್ದೆ ಉಲ್ಲಂಘಿಸಿ ಚಿನ್ನ ಸ್ವೀಕಾರ ; ಮಾಜಿ ಆಯುಕ್ತರ ಕೊರಳಿಗೆ ಉರುಳು

ಶಬರಿಮಲೆ: ಶಬರಿಮಲೆ ಚಿನ್ನ ಕಳವು ಪ್ರಕರಣದ ತನಿಖೆ ಒಂದೆಡೆ ಭರದಿಂದ ಸಾಗುತ್ತಿರುವಂತೆಯೇ ಇದರ ಜತೆಗೆ ಹೊಸ ಹೊಸ ಅವ್ಯವಹಾರಗಳು ಒಂದರ ಹಿಂದೆ ಒಂದು ಎಂಬಂತೆ ಹೊರಬರತೊಡಗಿದೆ. ಶಬರಿಮಲೆ ದೇಗುಲದ ಧ್ವಜಸ್ತಂಭ ನಿರ್ಮಾಣಕ್ಕಾಗಿ ಚಿನ್ನ ಸ್ವೀಕರಿಸಿದ ವಿಷಯದಲ್ಲಿ ಮಾಜಿ ಅಡ್ವಕೇಟ್ ಕಮಿಷನರ್ ಎ.ಎಸ್.ಪಿ ಕುರುಪ್ ಗಂಭೀರವಾದ ರೀತಿಯ ಕಾಯ್ದೆ ಉಲ್ಲಂಘನೆ ನಡೆಸಿದ್ದಾರೆಂದು ಈ ಬಗ್ಗೆ ದೇವಸ್ವಂ ವಿಜಿಲೆನ್ಸ್ ವಿಭಾಗ ತನಿಖೆ ನಡೆಸಿ ಹೈಕೋರ್ಟ್‌ಗೆ ಸಲ್ಲಿಸಿದ ವರದಿಯಲ್ಲಿ ತಿಳಿಸಲಾಗಿದೆ. ಧ್ವಜಸ್ತಂಭ ನಿರ್ಮಾಣಕ್ಕಾಗಿ ಭಕ್ತರಿಂದ ಚಿನ್ನವನ್ನು ಕಾಣಿಕೆ ರೂಪದಲ್ಲಿ ಪಡೆಯುವ ಹೊಣೆಗಾರಿಕೆಯನ್ನು …

ಮಗಳ ಮನೆಯಲ್ಲಿ ಗೃಹಿಣಿ ಬೆಂಕಿ ಸುಟ್ಟು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಕುಂಬಳೆ: ಮಗಳ ಮನೆಗೆ ಬಂದಿದ್ದ ಗೃಹಿಣಿ ಬಾತ್‌ರೂಂನೊಳಗೆ ಬೆಂಕಿ ಸುಟ್ಟು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಾಸರಗೋಡು ಸೂರ್ಲು ನಿವಾಸಿ ಕುನ್ನಿಲ್ ಮುಹಮ್ಮದ್‌ರ ಪುತ್ರಿಯಾದ ಆಸ್ಮ (53) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರು ಸೀತಾಂಗೋಳಿ ಮುಕಾರಿಕಂಡದಲ್ಲಿರುವ ಪುತ್ರಿ ಶಂಸೀನರ ಮನೆಗೆ ನಾಲ್ಕು ದಿನಗಳ ಹಿಂದೆ ಬಂದಿದ್ದರೆನ್ನಲಾಗಿದೆ. ನಿನ್ನೆ ಅಪರಾಹ್ನ 3 ಗಂಟೆಗೆ ಇವರು ಮನೆಯ ಮೇಲಿನ ಮಹಡಿಯಲ್ಲಿರುವ ಬಾತ್‌ರೂಂನೊಳಗೆ ಬೆಂಕಿ ಸುಟ್ಟು ಸಾವಿಗೀಡಾದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆಂದು ಹೇಳಲಾಗುತ್ತಿದೆ. ಆಸ್ಮರಿಗೆ ಅಲ್ಪ ಪ್ರಮಾಣದಲ್ಲಿ ಅಸ್ವಸ್ಥತೆ ಇತ್ತೆಂದು ಹೇಳಲಾಗುತ್ತಿದೆ. ಇದರಿಂದ ಪೆಟ್ರೋಲ್ …

ಬಾಲಕಿ ಮುಂದೆ ನಗ್ನತೆ ಪ್ರದರ್ಶನ: ಆರೋಪಿ ಸೆರೆ

ಕುಂಬಳೆ: ಅಪ್ರಾಪ್ತ ಬಾಲಕಿ ಮುಂದೆ ನಗ್ನತೆ ಪ್ರದರ್ಶಿಸಿದ ಪ್ರಕರಣದಲ್ಲಿ ಪೊಲೀಸರು ಪೋಕ್ಸೋ ಕೇಸು ದಾಖಲಿಸಿಕೊಂಡಿದ್ದ ಆರೋಪಿ ಸೆರೆಗೀಡಾಗಿದ್ದಾನೆ. ರಾಜಪುರಂ ನಿವಾಸಿ ಅರ್ಶಾದ್ (35) ಎಂಬಾತ ನನ್ನು ಕುಂಬಳೆ  ಠಾಣೆ ಇನ್‌ಸ್ಪೆಕ್ಟರ್ ಟಿ.ಕೆ.ಮುಕುಂದನ್, ಎಸ್‌ಐ ಪ್ರದೀಪ್ ಕುಮಾರ್ ನೇತೃತ್ವದಲ್ಲಿ ಕರ್ನಾಟ ಕದಿಂದ ಸೆರೆಹಿಡಿಯಲಾಗಿದೆ. ಅರ್ಶಾದ್ ಕರ್ನಾಟಕದಿಂದ ಹಣ್ಣು ಹಂಪಲುಗಳನ್ನು ತಂದು ಕಾಞಂ ಗಾಡ್ ಭಾಗದಲ್ಲಿ ಮಾರಾಟಮಾಡುತ್ತಿದ್ದನು. ಕಳೆದ ಜನವರಿ ೮ರಂದು  ಕುಂಬಳೆ ಠಾಣೆ ವ್ಯಾಪ್ತಿಯ ಪ್ರದೇಶವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮುಂದೆ ಈತ ನಗ್ನತೆ ಪ್ರದರ್ಶಿಸಿರು ವುದಾಗಿ ದೂರಲಾಗಿದೆ. ಈ …

ನೀರು ದುರುಪಯೋಗಪಡಿಸದಂತೆ ತಿಳಿಸಿದ ಗೃಹಿಣಿಗೆ ನೆರೆಮನೆ ನಿವಾಸಿಗಳಿಂದ ಹಲ್ಲೆ

ಕುಂಬಳೆ: ಕುಡಿಯುವ ನೀರು ದುರುಪಯೋಗಪಡಿಸಬೇಡಿ ಎಂದು ಬುದ್ಧ್ದಿಮಾತು ಹೇಳಿದ ಗೃಹಿಣಿ ಹಾಗೂ ಅವರ ಮಗಳಿಗೆ ನೆರೆಮನೆ ನಿವಾಸಿಗಳಾದ ಮೂರು ಮಂದಿ ಹಲ್ಲೆಗೈದ ಬಗ್ಗೆ ದೂರಲಾಗಿದೆ. ಪೈವಳಿಕೆ ಆಜಾದ್‌ನಗರದ ದಿ| ಐತ್ತ ಎಂಬವರ ಪತ್ನಿ  ಶಾರದ (60) ಹಾಗೂ ಪುತ್ರಿ ಶ್ರೀಜರಿಗೆ ಹಲ್ಲೆಗೈದಿದ್ದು,  ಈ  ಪೈಕಿ ಶಾರದರನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ  ದಾಖಲಿಸಲಾಗಿದೆ. ನೆರೆ ಮನೆ ನಿವಾಸಿಗಳಾದ ಲೀಲ, ಚಂದ್ರ,ಸಜನ್ ಎಂಬಿವರು ಸೇರಿ ಹಲ್ಲೆಗೈದಿರುವುದಾಗಿ ಗಾಯಾಳುಗಳು ಆರೋಪಿಸಿದ್ದಾರೆ.  ನಿನ್ನೆ ಸಂಜೆ ಈ ಘಟನೆ ನಡೆದಿದೆ. ಪೈವಳಿಕೆ ಆಜಾದ್‌ನಗರದಲ್ಲಿ …

ಸಮಸ್ತ ಕೇರಳ ಜಂಇಯತ್ತುಲ್ ಉಲಮಾದ ನೂರನೇ ವಾರ್ಷಿಕಾಚರಣೆ ಸಮಾಪ್ತಿ: ಸಂಘಟನೆಯ ಶಕ್ತಿ ಪ್ರಕಟ- ಜಿಫ್ರಿತಂಙಳ್

ಕಾಸರಗೋಡು: ಕೇರಳದ ಉತ್ತರ ಭಾಗದಲ್ಲಿ ಜನಸಂದಣಿಯ ಹಾಲ್ಗಡಲು ಸೃಷ್ಟಿಸಿ ಸಮಸ್ತ ಕೇರಳ ಜಂಇಯತ್ತುಲ್ ಉಲಮ ಸಂಘಟನೆಯ ಶಕ್ತಿ ಹಾಗೂ ಸಾಮರ್ಥ್ಯವನ್ನು ಕೇರಳದ ಜನತೆಗೆ ದೃಢೀಕರಿಸಿದೆ. ೫ ದಿನಗಳಲ್ಲಾಗಿ ನಡೆದ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮದ ಸಮಾರೋಪ ಆದಿತ್ಯವಾರ ನಡೆಯಿತು. ಆದಿತ್ಯವಾರ ಸಂಜೆ 4 ಗಂಟೆಯ ಬಳಿಕ ಆರಂಭಗೊಂಡ ಸಾರ್ವಜನಿಕ ಸಮ್ಮೇಳನ ಸೂರ್ಯಾಸ್ತವರೆಗೆ  ಮುಂದುವರಿಯಿತು. ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್, ಪಾಣಕ್ಕಾಡ್ ಸಾದಿಖಲಿ ಶಿಹಾಬ್ ತಂಙಳ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್, ವಿಪಕ್ಷ ಮುಖಂಡ ವಿ.ಡಿ. ಸತೀಶನ್, ಕರ್ನಾಟಕ ಉಪ ಮುಖ್ಯಮಂತ್ರಿ …