ಶೋಚನೀಯಗೊಂಡ ಉಪ್ಪಳ ರೈಲ್ವೇ ನಿಲ್ದಾಣ ರಸ್ತೆ : ಸಂಚಾರ ಸಮಸ್ಯೆ

ಉಪ್ಪಳ: ಉಪ್ಪಳ ರೈಲ್ವೇ ನಿಲ್ದಾಣ ರಸ್ತೆ ಹಲವು ವರ್ಷಗಳಿಂದ ಶೋಚನೀಯÁವಸ್ಥೆಯಲ್ಲಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಈ ರಸ್ತೆಯನ್ನು ದುರಸ್ತಿಗೊಳಿಸಲು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಉಪ್ಪಳ ಪೇಟೆಯಿಂದ ರೈಲ್ವೇ ನಿಲ್ದಾಣ ತನಕದ ಸುಮಾರು ಒಂದು ಕಿಲೋ ಮೀಟರ್ ಕಾಂಕ್ರೀಟ್ ಹಾಗೂ ಡಾಮರು ರಸ್ತೆ ಹದಗೆಟ್ಟು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪಂಚಾಯತ್ ಹಾಗೂ ರೈಲ್ವೇ ಇಲಾಖೆಗೆ ಸೇರಿದ ರಸ್ತೆಯಾಗಿದೆ ಇದು. ಇತ್ತೀಚೆಗೆ ರಸ್ತೆ ಉದ್ದಕ್ಕೂ ಚರಂಡಿಯನ್ನು ಅಭಿವೃದ್ದಿಗೊಳಿಸ ಲಾಗಿದೆ. ಈ ಪ್ರದೇಶದಲ್ಲಿ ಅಯ್ಯಪ್ಪ ಮಂದಿರ, ನೂರಾರು ಮನೆಗಳು, ವ್ಯಾಪಾರ ಸಂಸ್ಥೆಗಳು ಇದ್ದು, …

ಪೈವಳಿಕೆ ನಗರ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ನೂತನ ಕಟ್ಟಡ ಉದ್ಘಾಟನೆ

ಪೈವಳಿಕೆ: ಪೈವಳಿಕೆ ಸರಕಾರಿ ಹೈಯರ್ ಸೆಕೆಂಡರಿ ಶಾಲೆಗೆ ಕಿಫ್‌ಬಿ ನಿಧಿಯಿಂದ 3.90 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಹೊಸ ಕಟ್ಟಡವನ್ನು ಶಾಸಕ ಎಕೆಎಂ ಅಶ್ರಫ್ ಉದ್ಘಾಟಿಸಿದರು. ಮೂರು ಮಹಡಿಗಳಲ್ಲಾಗಿ ಒಟ್ಟು 13 ತರಗತಿ ಕೊಠಡಿಗಳನ್ನು ಹೊಂದಿರುವ ಈ ಕಟ್ಟಡದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ತರಗತಿಗಳು ಆರಂಭವಾಗಲಿದೆ. ಮಂಜೇಶ್ವರ ಬ್ಲೋಕ್ ಪಂ. ಅಧ್ಯಕ್ಷ ಯು.ಕೆ. ಸೈಫುಲ್ಲ ತಂಙಳ್ ಅಧ್ಯಕ್ಷತೆ ವಹಿಸುವರು. ಪಂಚಾಯತ್ ಅಧ್ಯಕ್ಷೆ ಬದ್ರುನ್ನೀಸ ಸಲೀಂ ಕಳಾಯಿ, ಬ್ಲೋಕ್ ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಮೋಹನ್ ರೈ, ಪಿಟಿಎ …

ಶೇಡಿಗದ್ದೆ-ನಾರಾಯಣಮಂಗಲ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಕುಂಬಳೆ: ಶೇಡಿಗದ್ದೆ ಮುಂಗಿಲ ನಾರಾಯಣಮಂಗಲ ಕಾಂಕ್ರೀಟ್ ರಸ್ತೆಯನ್ನು ನಾಡಿಗೆ ಸಮರ್ಪಿಸ ಲಾಯಿತು. ಕಾಸರಗೋಡು ಬ್ಲೋಕ್ ಪಂಚಾಯತ್‌ನ ವಾರ್ಷಿಕ ಯೋಜನೆಯಲ್ಲಿ ಸೇರಿಸಿ ನವೀಕರಿಸಿದ ಕುಂಬಳೆ ಪಂಚಾಯತ್ ವ್ಯಾಪ್ತಿಯ ಈ ರಸ್ತೆಯನ್ನು ಶಾಸಕ ಎ.ಕೆ.ಎಂ. ಅಶ್ರಫ್ ನಾಡಿಗೆ ಸಮರ್ಪಿಸಿದರು. ಬ್ಲೋಕ್ ಪಂಚಾಯತ್ ಅಧ್ಯಕ್ಷ ಅಬ್ದುಲ್ಲ ಕುಂಞಿ ಚೆರ್ಕಳ ಅಧ್ಯಕ್ಷತೆ ವಹಿಸಿದರು. ಬ್ಲೋಕ್‌ನ ಸ್ಥಾಯೀ ಸಮಿತಿ ಅಧ್ಯಕ್ಷ ಅಶ್ರಫ್ ಕಾರ್ಲೆ ಸ್ವಾಗತಿಸಿದರು. ಕುಂಬಳೆ ಪಂಚಾಯತ್ ಅಧ್ಯಕ್ಷ ಪಿ. ಅಬ್ದುಲ್ ಖಾದರ್ , ಜಿಲ್ಲಾ ಪಂ. ಸದಸ್ಯ ಅಸೀಸ್ ಕಳತ್ತೂರು, ಮಂಜೇಶ್ವರ ಬ್ಲೋಕ್ …

ಕಾಸರಗೋಡು ಹೆಚ್ಚಿನ ಅಭಿವೃದ್ಧಿಗೆ ಸಾಧ್ಯತೆಯುಳ್ಳ ಜಿಲ್ಲೆ: ನೂತನ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್

ಕಾಸರಗೋಡು: ಕಾಸರಗೋಡು  ಅಭಿವೃದ್ಧಿಗೆ ಹೆಚ್ಚು ಸಾಧ್ಯತೆಯುಳ್ಳ ಜಿಲ್ಲೆಯಾಗಿದೆ. ಆದ್ದರಿಂದ ಭಾರೀ ಸಂತೋಷ ಹಾಗೂ ನಿರೀಕ್ಷೆಯೊಂದಿಗೆ ತಾನು ಜಿಲ್ಲಾಧಿಕಾರಿಯಾಗಿ ಇಲ್ಲಿ ಅಧಿಕಾರ ವಹಿಸುತ್ತಿದ್ದೇನೆಂದು ನೂತನ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ನುಡಿದಿದ್ದಾರೆ.  ಇಂದು ಬೆಳಿಗ್ಗೆ ಕಾಸರಗೋಡು ಸಿವಿಲ್ ಸ್ಟೇಶನ್‌ನ ಛೇಂಬರ್‌ಗೆ ತಲುಪಿದ ಅವರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡು ತ್ತಿದ್ದರು.  ಕಾಸರಗೋಡಿನಲ್ಲಿ  ಅಭಿವೃದ್ಧಿಗೆ ಹಲವು ಅವಕಾಶಗಳಿವೆ. ಅವುಗಳನ್ನೆಲ್ಲಾ ತಿಳಿದುಕೊಂಡು ಎಲ್ಲರ ಅಭಿಪ್ರಾಯ ಕೇಳಿದ ಬಳಿಕ ಯೋಜನೆ ಸಿದ್ಧಪಡಿಸಲಾಗುವುದು. ಜಿಲ್ಲೆಯ ಜನರ ಪಟ್ಟೆ   ಸಹಿತ ವಿವಿಧ  ಸಮಸ್ಯೆಗಳಿಗೆ ಪರಿಹಾರ ಕಂಡು …

ಪೊವ್ವಲ್ ಕ್ವಾರ್ಟರ್ಸ್‌ನಿಂದ ಕಳವು: ಚೆರ್ಕಳ ಬಾಲಡ್ಕ ನಿವಾಸಿ ಸೆರೆ

ಬೋವಿಕ್ಕಾನ: ಪೊವ್ವಲ್‌ನ ಪಿ.ಎ. ಕಾಂಪ್ಲೆಕ್ಸ್ ಕ್ವಾರ್ಟರ್ಸ್‌ನ ಬೀಗ ಮುರಿದು ಲ್ಯಾಪ್‌ಟಾಪ್, ಸಂಬಂಧಪಟ್ಟ ಉಪಕರಣಗಳನ್ನು ಕಳವುಗೈದ ಪ್ರಕರಣದಲ್ಲಿ ಆರೋಪಿ ಸೆರೆಯಾಗಿದ್ದಾನೆ. ಚೆರ್ಕಳ ಬಾಲಡ್ಕ ನಿವಾಸಿ ಹನೀಫ್ (52)ನನ್ನು ಆದೂರು ಪೊಲೀಸರು ಬಂಧಿಸಿದ್ದಾರೆ. ಕಳೆದ ತಿಂಗಳ 25ರಂದು ಬೆಳಿಗ್ಗೆ 11ರಿಂದ ರಾತ್ರಿ 11ರ ಮಧ್ಯೆ ಕಳವು ನಡೆಸಲಾಗಿತ್ತು. ಉತ್ತರ ಪ್ರದೇಶ ನಿವಾಸಿ ಹಾಗೂ ಹೋಟೆಲ್ ನೌಕರ ರಿಹಾನ್ ಅಶ್ರಫ್‌ನ ಕೊಠಡಿಯಲ್ಲಿ ಕಳವು ನಡೆಸಲಾಗಿತ್ತು. ಬೀಗ ಮುರಿದು ಒಳನುಗ್ಗಿದ ಕಳ್ಳ ಮಲಗುವ ಕೊಠಡಿಯಲ್ಲಿ ಬ್ಯಾಗ್‌ನಲ್ಲಿರಿಸಿದ್ದ ಲ್ಯಾಪ್‌ಟಾಪ್, ಚಾರ್ಜರ್, ಮೈಕ್ರೋಫೋನ್ ಎಂಬಿವು ಕಳವುಗೈದಿರುವುದಾಗಿ …

ಬೇಕಲದಲ್ಲಿ ಸೆರೆಗೀಡಾದ ಕಳವು ಆರೋಪಿಗಳು ಕಳತ್ತೂರಿನ ಮನೆಯಿಂದ ನಗ-ನಗದು ದೋಚಿದ ಪ್ರಕರಣದಲ್ಲೂ ಶಾಮೀಲು

ಕುಂಬಳೆ:  ಬೇಕಲ ಪೊಲೀಸರು ಸೆರೆಹಿಡಿದ  ಕುಖ್ಯಾತ ಕಳವು ಪ್ರಕರಣದ ಇಬ್ಬರು ಆರೋಪಿಗಳು ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಕಳತ್ತೂರು ಪಂಜಿಕಲ್ಲಿನ ಮನೆಯಿಂದ ನಗನಗದು ದೋಚಿದ ಪ್ರಕರಣದಲ್ಲೂ ಆರೋಪಿಗಳಾಗಿದ್ದಾರೆಂದು ತನಿಖೆಯಲ್ಲಿ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.  ಪಾಲಕ್ಕಾಡ್ ಚಿಟ್ಟೂರು ಆಯಿರೂರು ಕೊಳಕ್ಕರೆಪರಂಬಿಲ್ ನಿವಾಸಿ ಜಲೀಲ್ ಯಾನೆ ಶಟರ್ ಜಲೀಲ್ (36), ಕಾಸರಗೋಡು  ಆಲಂಪಾಡಿಯ ಅಬ್ದುಲ್ ಲತೀಫ್ (46) ಎಂಬಿವರನ್ನು ಬೇಕಲ ಡಿವೈಎಸ್ಪಿ ಎಂ.ಪಿ. ಆಜಾದ್‌ರ ನೇತೃತ್ವದಲ್ಲಿ ಸೆರೆಹಿಡಿಯಲಾಗಿದೆ. ಇವರನ್ನು ತನಿಖೆಗೊಳಪಡಿಸಿದಾಗ   ಕಳತ್ತೂರು ಪಂಜಿಕಲ್ಲಿನ ಯೂಸಫ್‌ರ ಮನೆಯಿಂದ 9 ಪವನ್ ಚಿನ್ನಾಭರಣ …

ಕೈಯ್ಯಾರ್‌ನಲ್ಲಿ ಕೋಳಿ ಅಂಕ: ಎರಡು ಕೋಳಿಗಳ ಸಹಿತ ಇಬ್ಬರ ಸೆರೆ

ಕುಂಬಳೆ: ಕಯ್ಯಾರಿನ ಕೋಳಿ ಅಂಕ ಕೇಂದ್ರಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ. ಎರಡು ಕೋಳಿಗಳ ಸಹಿತ ಇಬ್ಬರನ್ನು ಕುಂಬಳೆ ಪೊಲೀಸರು ಸೆರೆ ಹಿಡಿದಿದ್ದಾರೆ. ಕಯ್ಯಾರು ಕೊಕ್ಕೆಚ್ಚಾಲ್ ನಿವಾಸಿ ಹರೀಶ್ (37), ಕಯ್ಯಾರು ನಿವಾಸಿ ಸೋಮಯ್ಯ (48) ಎಂಬಿವರನ್ನು ಕುಂಬಳೆ ಎಸ್‌ಐ ಕೆ. ಶ್ರೀಜೇಶ್ ಹಾಗೂ ತಂಡ ಸೆರೆ ಹಿಡಿದಿದೆ. ಮುಂಡತ್ತಾಯಿ ದೈವಸ್ಥಾನದ ಸಮೀಪದ ಕೋಳಿ ಅಂಕ ಕೇಂದ್ರದಿಂದ ಪೊಲೀಸರು ಇವರನ್ನು ಸೆರೆ ಹಿಡಿದಿದ್ದು, ರಹಸ್ಯ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ತಂಡ ನಿನ್ನೆ ಮಧ್ಯಾಹ್ನ ನಂತರ ದಾಳಿ ನಡೆಸಿತ್ತು.  ಈ …

ಸೇವೆಯಿಂದ ನಿವೃತ್ತನಾಗಿ ಬೆಕ್ಕುಗಳನ್ನು ಸಂರಕ್ಷಿಸಲು ಉಪ್ಪಳದಲ್ಲಿ ಬಾಡಿಗೆಗೆ ಮನೆ ಪಡೆದ ತಿರುವನಂತಪುರ ನಿವಾಸಿ

ಉಪ್ಪಳ: ಉದ್ಯೋಗದಿಂದ ನಿವೃತ್ತರಾದ ಬಳಿಕ ತಿರುವನಂತಪುರ ನಿವಾಸಿ ಸರಕಾರಿ ಕ್ವಾರ್ಟರ್ಸ್ ತೊರೆದು ಉಪ್ಪಳದಲ್ಲಿ ಮನೆಯೊಂ ದನ್ನು ಬಾಡಿಗೆಗೆ ಪಡೆದುಕೊಂಡರು. ಈಗ ಈ ಬಾಡಿಗೆ ಮನೆಯಲ್ಲಿ ಪತ್ನಿ ಹಾಗೂ ಇತರ 18 ಮಂದಿ ಮನಃಶಾಂತಿಯಿಂದ ಜೀವಿಸುತ್ತಿದ್ದಾರೆ. ಮಂಗಲ್ಪಾಡಿ ತಾಲೂಕು ಆಸ್ಪತ್ರೆಯ ಹೆಲ್ತ್ ಇನ್ಸ್‌ಪೆಕ್ಟರ್ ಆಗಿದ್ದ ಚಂದ್ರಶೇಖರನ್ ತಂಬಿ ಕಳೆದ ಫೆಬ್ರವರಿ 28ರಂದು ಸೇವೆಯಿಂದ ನಿವೃತ್ತರಾದರು. ಸೇವೆಯಿಂದ ನಿವೃತ್ತರಾದ ಬಳಿಕ ಹೆಚ್ಚಿನವರು ತಮ್ಮ ಊರಿಗೆ ತೆರಳುವುದು ಸಾಮಾನ್ಯವಾಗಿದ್ದರೂ ಇವರು ಅಂದೇ ಬಾಡಿಗೆಗೆ ಕ್ವಾರ್ಟರ್ಸ್ ಪಡೆದುಕೊಂಡು ಇಲ್ಲಿ ಉಳಿದಿದ್ದಾರೆ.  7 ವರ್ಷದ …

ತಿರುವನಂತಪುರ ಕಾರ್ಪೋರೇಶನ್ ಆಡಳಿತವನ್ನು ಜನರು ಬಿಜೆಪಿಗೆ ನೀಡಿರುವುದು ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬರಬೇಕೆಂಬ ಉದ್ದೇಶದಿಂದ-ಸಿ.ಕೆ. ಪದ್ಮನಾಭನ್

ಕಾಸರಗೋಡು: ರಾಜ್ಯದ ರಾಜಧಾನಿಯಾದ ತಿರುವನಂತಪುರ ಕಾರ್ಪೋರೇಶನ್‌ನ ಆಡಳಿತವನ್ನು ಜನರು ಬಿಜೆಪಿಗೆ ದೊರಕಿಸಿಕೊಟ್ಟಿರು ವುದು ಕೇರಳದಲ್ಲಿ ಬಿಜೆಪಿ ಆಡಳಿತ ಬರಬೇಕೆಂಬ ಉದ್ದೇಶದಿಂದಾಗಿದೆ. ರಾಜಧಾನಿ ನಗರದ ಜನರ ಆಗ್ರಹವನ್ನು ಸಾರ್ಥಕಗೊಳಿಸಲು ಕಾಸರಗೋಡು  ಸಹಿತ ಕೇರಳದಾದ್ಯಂತದ ಮತದಾರರಿಗೆ ಸಾಧ್ಯವಾಗಲಿದೆ ಯೆಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಸಿ.ಕೆ. ಪದ್ಮನಾಭನ್  ತಿಳಿಸಿದರು. ನವೀಕರಿಸಿದ ಕಾಸರಗೋಡು ಬಿಜೆಪಿ ಜಿಲ್ಲಾ ಕಮಿಟಿ ಕಚೇರಿ,ಎನ್‌ಡಿಎ ಕಾಸರಗೋಡು ಜಿಲ್ಲಾ ಸಮಿತಿ ಕಚೇರಿ ಹಾಗೂ ಶಕ್ತಿ ಕೇಂದ್ರ ಇನ್‌ಚಾರ್ಜ್ ರವರುಗಳ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಿಪಿಎಂ ಹಾಗೂ  ಸಚಿವ ಸಂಪು …

ಯುವಸಮಾಜ ದಾರಿ ತಪ್ಪದಂತೆ ಪೋಷಕರು ಎಚ್ಚರವಹಿಸಬೇಕು- ಎಡನೀರುಶ್ರೀ

ಬದಿಯಡ್ಕ: ಧರ್ಮಜೀವನ ಪದ್ಧತಿಯನ್ನು ರೂಢಿಸಿಕೊಂಡು ನಾವು ಮುನ್ನಡೆಯಬೇಕು. ಪ್ರಸ್ತುತ ಬದಲಾವಣೆಯ ಕಾಲಗತಿಯಲ್ಲಿ ಅಸ್ಥಿರತೆ ಸಹಜ ಆದರೆ ಅದನ್ನು ಒಗ್ಗೂಡಿಸುವುದೆ ಸಮಾಜೋತ್ಸವದ ಉದ್ದೇಶ. ಯುವ ಸಮಾಜ ಪಾಶ್ಚಾತ್ಯ ಸಂಸ್ಕೃತಿ ಸಂಸ್ಕಾರಗಳಿAದ ದಾರಿ ತಪ್ಪದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ನುಡಿದರು. ಅನ್ಯ ಧರ್ಮೀಯರು ನಮ್ಮ ದೌರ್ಬಲ್ಯ ಗಳನ್ನು ಉಪಯೋಗಿಸಿಕೊಂಡು ಆಕ್ರಮಣವನ್ನು ಮಾಡುತ್ತಿರುವುದು ಖಂಡನೀಯ ಎಂದವರು ನುಡಿದರು.ಬದಿಯಡ್ಕ ಶ್ರೀ ಭಾರತೀ ನಗರ ಬೋಳುಕಟ್ಟೆ ಮೈದಾನದಲ್ಲಿ ಜರಗಿದ ವಿರಾಟ್ ಹಿಂದೂ ಸಮಾ ಜೋತ್ಸವದಲ್ಲಿ …