ಬಿಜೆಪಿ ಬಜಕೂಡ್ಲು ಬೂತ್ ಸಮಿತಿ ರಚನಾ ಸಭೆ

ಪೆರ್ಲ: ಬಿಜೆಪಿ ಎಣ್ಮಕಜೆ ಪಂ. 12ನೇ ವಾರ್ಡು ಬಜಕೂಡ್ಲು 210ನೇ ಬೂತ್ ಸಮಿತಿ ಸಭೆ ಬಜಕೂಡ್ಲಿನ ಪದ್ಮನಾಭ ಸುವರ್ಣ ಅವರ ನಿವಾಸದಲ್ಲಿ ಜರುಗಿತು. ಪಂಚಾಯತ್ ಸಮಿತಿ ಅಧ್ಯಕ್ಷ ರಮಾನಂದ ಎಡಮಲೆ ಅಧ್ಯಕ್ಷತೆ ವಹಿಸಿದ್ದರು. ಮಂಡಲ ಸಮಿತಿ ಕಾರ್ಯದರ್ಶಿ ಸುಮಿತ್‌ರಾಜ್, ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ಭಟ್ ಪತ್ತಡ್ಕ, ಕ್ಯಾಂಪ್ಕೋ ಮಾಜಿ ಉಪಾಧ್ಯಕ್ಷ ಶಂ.ನಾ ಖಂಡಿಗೆ, ಮಂ ಜೇಶ್ವರ ಬ್ಲಾಕ್ ಪಂ. ಸದಸ್ಯೆ ವಿದ್ಯಾ ಕುಮಾರಿ, ಗ್ರಾಮ ಪಂ. ಸದಸ್ಯ ಕೃಷ್ಣಪ್ಪ ಬಜಕೂಡ್ಲು, ಹಿರಿಯ ಕಾರ್ಯಕರ್ತ ಸದಾಶಿವ ಭಟ್ ಹರಿನಿಲಯ, …

ಸಜಿಪ ಕುಡೂರು ತರವಾಡಿನಲ್ಲಿ ಕೃಷ್ಣ ಕಾರ್ನವರ್ ಸಹಿತ ಹಿರಿಯರಿಗೆ ಸನ್ಮಾನ

ಉಪ್ಪಳ: ತೆನೆಕುಡಿಯ [ಸಾಲಿಯಾನ್] ಕುಟುಂಬಸ್ಥರ ವಯನಾಡು ಕುಲವನ್ ವಿಷ್ಣು ಮೂರ್ತಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಸಜಿಪ ಕುಡೂರು ಇದರ ಮಾರ್ಗದರ್ಶಕ, ಶಿರಿಯ ಮಾವಿನಡಿ ಕೊಪ್ಪಳ ತರವಾಡು ಅಡ್ಕ ಶ್ರೀ ಭಗವತೀ ಕ್ಷೇತ್ರದ ಕೃಷ್ಣ ಕಾರ್ನ ವರ್‌ರಿಗೆ ಗೌರವರ್ಪಣೆ ನಡೆಯಿತು. ಇದೇ ಸಂದರ್ಭದಲ್ಲಿ ಅಡ್ಕ ಶ್ರೀ ಭಗವತೀ ಕ್ಷೇತ್ರದ ಪುಲ್ಲೂರಾಳಿ ತಂಬುರಾಟಿ ಪಾತ್ರಿ ಮೋನಪ್ಪ ಬೆಳ್ಚಪ್ಪಾಡ, ತರವಾಡಿನ ಹಿರಿಯ ಕೊಗ್ಗು ಬೆಳ್ಚಾಡ ಇವರನ್ನು ಸನ್ಮಾನಿಸ ಲಾಯಿತು. ಕಾರ್ಯಕ್ರಮದಲ್ಲಿ ತರವಾಡಿನ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು, ಉಪ್ಪಳ ಶ್ರೀ ಭಗವತೀ …

ಕಾರಿನಲ್ಲಿ ಸಾಗಿಸುತ್ತಿದ್ದ 29 ಲಕ್ಷ ರೂ., 97 ಗ್ರಾಂ ಚಿನ್ನ ವಶ: ಇಬ್ಬರು ಕಸ್ಟಡಿಗೆ

ಕಾಸರಗೋಡು: ನಗರದಲ್ಲಿ ಕಾಸರಗೋಡು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸರಿಯಾದ ದಾಖಲುಪತ್ರಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 29 ಲಕ್ಷ ರೂಪಾಯಿ ಹಾಗೂ 97 ಗ್ರಾಂ ಚಿನ್ನ ಪತ್ತೆಹಚ್ಚಿ ವಶಕ್ಕೆ ತೆಗೆದುಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿ ಮೂಲತಃ ಮಹಾರಾಷ್ಟ್ರ ನಿವಾಸಿಗಳಾದ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಅವರ ಹೇಳಿಕೆಗಳನ್ನು ದಾಖಲಿಸಿ ಕೊಂಡಿದ್ದಾರೆ. ಕಾಸರಗೋಡು ಪೊಲೀಸ್ ಠಾಣೆ ಪರಿಸರದಲ್ಲಿ ನಿನ್ನೆ ಸಂಜೆ ಪೊಲೀಸ್ ಕಾರ್ಯಾಚರಣೆ ನಡೆದಿದೆ. ನಗ-ನಗದು ಸಾಗಿಸುತ್ತಿದ್ದ ಬಗ್ಗೆ ಲಭಿಸಿದ ಗುಪ್ತ ಮಾಹಿತಿಯಂತೆ ಪೊಲೀಸರು ನಿನ್ನೆ ಸಂಜೆ ಠಾಣೆ ಪರಿಸರದಲ್ಲಿ ವಾಹನ ತಪಾಸಣೆಯಲ್ಲಿ …

ಕನ್ನಡ ಹೋರಾಟಗಾರ ಕೆ.ಎಂ. ಗೋಪಾಲಕೃಷ್ಣ ಭಟ್ ನಿಧನ

ಮುಳ್ಳೇರಿಯ: ಕಾರಡ್ಕ ಸಮೀಪದ ಪೊನ್ನಂಪಲ ನಿವಾಸಿ ಕೆ.ಎಂ. ಗೋಪಾಲಕೃಷ್ಣ ಭಟ್ (84) ನಿಧನ ಹೊಂದಿದರು. ಕಳೆದ ಕೆಲವು ಸಮಯದಿಂದ ಅಸೌಖ್ಯ ತಗಲಿ ಕಾಸರಗೋಡಿನ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆಯಲ್ಲಿದ್ದ ಇವರು ನಿನ್ನೆ ಮಧ್ಯಾಹ್ನ ನಿಧನ ಹೊಂದಿದ್ದಾರೆ. ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷ, ಕನ್ನಡ ಹೋರಾಟಗಾರ, ಕನ್ನಡ ಅಂಕಣ ಬರಹಗಾರರಾಗಿ ಗುರುತಿಸಿ ಕೊಂಡಿದ್ದರು.  ಕೃಷಿ, ಶಿಕ್ಷಣ, ಸಾಂ ಸ್ಕೃತಿಕ, ಧಾರ್ಮಿಕ ವಲಯಗಳಲ್ಲಿ ಸಕ್ರಿಯರಾಗಿ ದುಡಿದಿದ್ದರು. ಇವರ ಪತ್ನಿ ಭಾಗ್ಯಲಕ್ಷ್ಮಿ ಈ ಹಿಂದೆ ನಿಧನ ಹೊಂದಿದ್ದಾರೆ. ಮೃತರು ಪುತ್ರನಾದ ಕವಿ, …

ಕರ್ನಾಟಕ ಮದ್ಯ ಕೈವಶವಿರಿಸಿದ ವ್ಯಕ್ತಿ ಬಂಧನ

ಕುಂಬಳೆ: ಕರ್ನಾಟಕದಲ್ಲಿ ಮಾತ್ರವೇ ಮಾರಾಟಗೈಯ್ಯ ಬಹುದಾದ ವಿದೇಶಿ ಮದ್ಯವನ್ನು ಕೈವಶವಿರಿಸಿಕೊಂಡಿದ್ದ ಓರ್ವನನ್ನು ಕುಂಬಳೆ ಅಬಕಾರಿ ಅಧಿಕಾರಿಗಳು ಸೆರೆಹಿಡಿದಿದ್ದಾರೆ. ಕೊಯಿಪ್ಪಾಡಿ ವಿಲ್ಲೇಜ್‌ನ ನಾಯ್ಕಾಪು ನಾರಾಯಣಮಂಗಲದ ಅಕ್ಷಿತ್ ಕೆ ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. ಈತನ ಕೈಯಿಂದ ೫.೪ ಲೀಟರ್ ಕರ್ನಾಟಕ ನಿರ್ಮಿತ ಮದ್ಯ ವಶಪಡಿಸಲಾಗಿದೆ. ಕುಂಬಳೆ ಅಬಕಾರಿ ರೇಂಜ್ ಪ್ರಿವೆಂಟೀವ್ ಆಫೀಸರ್ ಜಿಜಿನ್ ಎಂ.ವಿ ನೇತೃತ್ವದಲ್ಲಿ ನಿನ್ನೆ ಮಧ್ಯಾಹ್ನ 12.50ರ ವೇಳೆ ಕುಂಬಳೆ ಪೇಟೆಯಲ್ಲಿ  ಗಸ್ತು ನಡೆಸುತ್ತಿದ್ದಾಗ ಬದಿಯಡ್ಕ ರಸ್ತೆಯಲ್ಲಿರುವ  ಹೋಟೆಲ್‌ವೊಂದರ ಮುಂಭಾಗ ನಿಂತಿದ್ದ ಅಕ್ಷಿತ್‌ನನ್ನು ತಪಾಸಣೆ ನಡೆಸಿದಾಗ ಮದ್ಯ …

ಕೋಳಿ ಅಂಕ: ಏಳು ಕೋಳಿಗಳ ಸಹಿತ ಏಳು ಮಂದಿ ಸೆರೆ

ಬದಿಯಡ್ಕ: ಬೇಳದಲ್ಲಿ ಕೋಳಿಅಂಕ ನಡೆಸುತ್ತಿದ್ದ ಕೇಂದ್ರಕ್ಕೆ ಬದಿಯಡ್ಕ ಪೊಲೀಸರು ನಿನ್ನೆ ದಾಳಿ ನಡೆಸಿ ಕೋಳಿಅಂಕದಲ್ಲಿ ನಿರತರಾದ ಆರೋಪದಂತೆ ಏಳು ಮಂದಿಯನ್ನು ಬಂಧಿಸಿದ್ದಾರೆ. ಮಾತ್ರವಲ್ಲ ಕೋಳಿ ಅಂಕಕ್ಕಾಗಿ ಉಪಯೋಗಿಸುತ್ತಿದ್ದ ಏಳು ಕೋಳಿಗಳು, 3400 ರೂ. ನಗದನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೇಳ ಮತ್ತು ಪರಿಸರ ಪ್ರದೇಶದವರಾದ ಅನಿಲ್  ಕುಮಾರ್ ಬಿ (೨೮), ಉದಯ ಕುಮಾರ್ ಡಿ (40), ನಾರಾಯಣ (42), ರವಿರಾಜ್ ಪಿ (37), ನಿತೀಶ್ ಕುಮಾರ್ ಬಿ (26), ನಾರಾಯಣ ರೈ (42) ಮತ್ತು ಅಕ್ಷಯ್ ಬಿ …

ಭಾರತದಲ್ಲಿ ಸರಣಿ ದಾಳಿಗೆ ಪಾಕ್ ಉಗ್ರಗಾಮಿ ಸಂಘಟನೆ ಸ್ಕೆಚ್: ದೇಶಾದ್ಯಂತ ಜಾಗ್ರತಾ ನಿರ್ದೇಶ

ಹೊಸದಿಲ್ಲಿ: ಪಾಕಿಸ್ತಾನದ ಭಯೋತ್ಪಾದಕ ಸಂಘಟನೆಯಾದ ಲಷ್ಕರ್ ಎ  ತೋಯ್ಬಾ ಬಾಂಗ್ಲಾದೇಶ ದಲ್ಲಿ ತನ್ನ ಹೊಸ ನೆಲೆಯನ್ನು ಸ್ಥಾಪಿಸಿದ್ದು ಆ ಮೂಲಕ  ಅದನ್ನು ಕೇಂದ್ರವನ್ನಾಗಿ ಸಿಕೊಂಡು  ಭಾರತದ ಹಲವೆಡೆಗಳಲ್ಲಿ ಸರಣಿ  ಭಯೋತ್ಪಾದಕ ದಾಳಿ ನಡೆಸಲು ಹೊಸ ಯೋಜನೆಗೆ ರೂಪು ನೀಡಿದ ಬಗ್ಗೆ ಕೇಂದ್ರ ಗುಪ್ತಚರ ವಿಭಾಗಕ್ಕೆ ಮಾಹಿತಿ ಲಭಿಸಿದೆ.  ಈ ಹಿನ್ನೆಲೆಯಲ್ಲಿ ದೇಶದಾದ್ಯಂತ  ಕೇಂದ್ರ ಗೃಹ ಇಲಾಖೆ ಜಾಗ್ರತಾ ನಿರ್ದೇಶ ನೀಡಿದೆ. ಭಯೋತ್ಪಾದನಾ ಸಂಘಟನೆಯಾದ ಲಷ್ಕರ್ ಎ  ತೋಯ್ಬಾ ಭಾರತದ ಹಲವೆಡೆಗಳಲ್ಲಿ ತನ್ನ ಸ್ಲೀಪಿಂಗ್ ಸೆಲ್‌ಗಳನ್ನು ಆರಂಭಿಸಿ ಆ …

ಮೆದುಳು ಆಘಾತ : ಬೇಕರಿ ಮಾಲಕ ನಿಧನ

ಕುಂಬಳೆ: ಮೆದುಳು ಆಘಾತ ಕ್ಕೊಳಗಾಗಿ ಬೇಕರಿ ಮಾಲಕ ಮೃತಪಟ್ಟ ಘಟನೆ ನಡೆದಿದೆ. ಮೊಗ್ರಾಲ್ ನಡುಪಳ್ಳದ ಅಬ್ದುಲ್ ಅಸೀಸ್ (44) ಮೃತಪಟ್ಟ ದುರ್ದೈವಿ. ಇವರು ಮೊಗ್ರಾಲ್ ಪೇಟೆಯಲ್ಲಿರುವ ಜಾಸ್ ಬೇಕರಿಯ ಮಾಲಕನಾಗಿದ್ದರು. ನಿನ್ನೆ ಮುಂಜಾನೆ ಮಸೀದಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದಂತೆ ಇವರು ಕುಸಿದು ಬಿದ್ದಿದ್ದರು. ಕೂಡಲೇ ಮಂ ಗಳೂರಿನ ಖಾಸಗಿ ಆಸ್ಪತ್ರೆಗೆ ತಲುಪಿಸಲಾಗಿತ್ತು. ಅಲ್ಲಿ ನಡೆಸಿದ ತಪಾಸಣೆ ಯಲ್ಲಿ ಮೆದುಳು ಆಘಾತಗೊಂಡ ಬಗ್ಗೆ ತಿಳಿದುಬಂದಿದೆ. ಇದರಿಂದ ವೆಂಟಿಲೇಟರ್‌ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಿದರೂ ರಾತ್ರಿ 7 ಗಂಟೆಗೆ ನಿಧನ ಸಂಭವಿಸಿದೆ. …

ಅಡ್ಕತ್ತಬೈಲು ಶ್ರೀ ಬ್ರಹ್ಮಬೈದರ್ಕಳ ಗರಡಿ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಕಾಸರಗೋಡು: ಅಡ್ಕತ್ತಬೈಲು ಶ್ರೀ ಬ್ರಹ್ಮಬೈದರ್ಕಳ ಗರಡಿ ಇಲ್ಲಿನ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಬ್ರಹ್ಮಬಲಿ ಮತ್ತು ಬೈದರ್ಕಳ ನೇಮೋತ್ಸವ ಮಾರ್ಚ್ 31ರಿಂದ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ, ಉತ್ಸವ ಸಮಿತಿ ರೂಪೀಕರಣ ಕ್ಷೇತ್ರ ಸನ್ನಿಧಿಯಲ್ಲಿ ಜರಗಿತು. ನಗರಸಭೆಯ 4ನೇ ವಾರ್ಡ್ ಸದಸ್ಯ ಗುರುಪ್ರಸಾದ್ 5ನೇ ವಾರ್ಡ್ ಸದಸ್ಯ ಹರೀಶ್ ಕೆ.ಆರ್. ಅವರಿಗೆ ಆಮಂತ್ರಣ ಪತ್ರಿಕೆ ನೀಡಿ ಉದ್ಘಾಟಿಸಿದರು. ಉತ್ಸವ ಸಮಿತಿ ರೂಪೀಕರಿಸಲಾಯಿತು. ರಕ್ಷಾಧಿಕಾರಿಯಾಗಿ ವಿಷ್ಣುಪ್ರಕಾಶ್ ತಂತ್ರಿ, ಗೌರವಾಧ್ಯಕ್ಷರಾಗಿ ಭಾಸ್ಕರ ಸುವರ್ಣ ಗರಡಿಮನೆ, ನೂತನ ಅಧ್ಯಕ್ಷರಾಗಿ ಎ. …

ಅನಧಿಕೃತ ನಿರ್ಮಾಣ: ಕಾಸರಗೋಡು ನಗರಸಭಾ ಅಧ್ಯಕ್ಷೆ ಕಾನೂನು ವಿರುದ್ಧರೊಂದಿಗೆ -ಬಿಜೆಪಿ ಆರೋಪ

ಕಾಸರಗೋಡು: ಕಾಸರಗೋಡು ನಗರಸಭೆ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರ ಕಾನೂನು ವಿರುದ್ಧ ನಿಲುವನ್ನು ತನ್ನ ಜಾಯಮಾನ ಮಾಡಿಕೊಂಡಿರುವುದಾಗಿ ಬಿಜೆಪಿ ಸದಸ್ಯರು ಕೌನ್ಸಿಲ್ ಸಭೆಯಲ್ಲಿ ಆರೋಪಿಸಿದರು. ನಗರಸಭಾ ಅಧ್ಯಕ್ಷೆಯ ಈ ರೀತಿಯ ನಿಲುವುಗಳನ್ನು ಪ್ರತಿಭಟಿಸಿ ಬಿಜೆಪಿ ಸದಸ್ಯರು ಸಭೆಯಲ್ಲಿ ಎದ್ದು ನಿಂತು ಪ್ರತಿಭಟಿಸಿದರು. ಕಾಸರಗೋಡು ಹೊಸ ಬಸ್ ನಿಲ್ದಾಣದ ನಗರಸಭಾ ಕಟ್ಟಡ ಬಾಡಿಗೆಗೆ ಪಡೆದ ರಿಶಾದ್ ಕೆ.ಎಂ. ಎಂಬ ವ್ಯಕ್ತಿ ನಗರಸಭೆಯ ಅರಿವು, ಅನುವಾದ ಇಲ್ಲದೆ ಕಟ್ಟಡದ ಮುಂಭಾಗದಲ್ಲಿ ನಡೆಸಿದ ಅನಧಿಕೃತ ನಿರ್ಮಾಣವನ್ನು ಮುರಿದು ತೆಗೆಯಲಿರುವ ನಗರಸಭೆ ಕಾರ್ಯದರ್ಶಿಯ …