ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಹೃದಯದಲ್ಲಿ ಪೋಣಿಸಿದಷ್ಟು ಭಾಷೆಯ ಪ್ರೌಢತೆ ಪ್ರಜ್ವಲಿಸುತ್ತದೆ- ಬಿ.ಎಂ. ಹನೀಫ್
ಪೈವಳಿಕೆ: ಕನ್ನಡ ಭಾಷೆ, ಸಂಸ್ಕೃತಿಯ ಪ್ರೀತಿ ಹೃದಯದಲ್ಲಿ ಪೋಣಿಸಿದಷ್ಟು ಭಾಷೆಯ ಪ್ರೌಢತೆ ಪ್ರಜ್ವಲಿಸುತ್ತದೆ. ಹಡಿನಾಡು, ಹೊರ ನಾಡುಗಳಲ್ಲಿ ಇದನ್ನು ಕಾಣಬಹುದು ಎಂದು ಹಿರಿಯ ಪತ್ರಕರ್ತ ಬಿ.ಎಂ. ಹನೀಫ್ ಅಭಿಪ್ರಾಯ ವ್ಯಕ್ತಪಡಿಸಿದರು.ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಆಶ್ರಯದಲ್ಲಿ ಪೈವಳಿಕೆ ಕಾಯರ್ಕಟ್ಟೆ ಸರಕಾರಿ ಹೈಯರ್ ಸೆಕೆಂಡರಿ ಶಾಲಾ ಸಭಾಂಗಣದಲ್ಲಿ ಶನಿವಾರ ನಡೆದ ಗಡಿನಾಡ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಪ್ರಾದೇಶಿಕ ಭಾಷಾ ವೈವಿಧ್ಯತೆಯಿಂದ ಕನ್ನಡ ಭಾಷೆ ಉಳಿದಿದೆ. ಈ ನಿಟ್ಟಿನಲ್ಲಿ …