8ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ತಿರುವನಂತಪುರ: 8ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ನೆಯ್ಯಾಟಿಂಗರ ನಾರಾಣಿ ನಿವಾಸಿ ಅನಂತು (13)ನನ್ನು ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಹಚ್ಚ ಲಾಗಿದೆ. ಕಾರಕೋಣಂ ಪಿಪಿಎಂ ಹೈಸ್ಕೂಲ್‌ನ ವಿದ್ಯಾರ್ಥಿಯಾಗಿದ್ದಾನೆ. ಮಾಹಿತಿ ತಿಳಿದು ಪೊಲೀಸರು ತಲುಪಿ ಮೃತದೇಹವನ್ನು ಅಲ್ಲಿನ ಮೆಡಿಕಲ್ ಕಾಲೇಜು ಶವಾಗಾರಕ್ಕೆ ಕೊಂಡೊಯ್ಯಲಾ ಯಿತು. ಆತ್ಮಹತ್ಯೆಗೆ ಕಾರಣ ಸ್ಪಷ್ಟವಿಲ್ಲ.

ಶಬರಿಮಲೆಯ ಆಹಾರ ಪದಾರ್ಥಗಳಲ್ಲಿ ಬದಲಾವಣೆ

ಪತ್ತನಂತಿಟ್ಟ: ಶಬರಿಮಲೆ ಸನ್ನಿಧಾನ ದಲ್ಲಿ ನೀಡುತ್ತಿರುವ ಅನ್ನ ಸಂತರ್ಪಣೆಯ ಭಕ್ಷ್ಯದಲ್ಲಿ ಬದಲಾವಣೆ ಮಾಡಲು ಚಿಂತಿಸಲಾಗಿದೆ. ಭಕ್ತರಿಗೆ ಕೇರಳೀಯ ರೀತಿಯ ಆಹಾರ ನೀಡಲಾಗುವುದು. ಹಪ್ಪಳ, ಪಾಯಸ ಸಹಿತದ ಭೋಜನ ನೀಡಲಾಗುವುದೆಂದು ತಿರುವಾಂಕೂರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಕೆ. ಜಯಕುಮಾರ್ ನುಡಿದರು. ನಾಳೆ ಅಥವಾ ನಾಡಿದ್ದು ಈ ರೀತಿಯ ಆಹಾರ ಪದಾರ್ಥಗಳನ್ನು ಜ್ಯಾರಿಗೊಳಿಸಲಾಗುವುದೆಂದು ಅವರು ನುಡಿದರು. ಇದೇ ವೇಳೆ ಭಕ್ತರ ಸಂದಣಿ ಶಬರಿಮಲೆಯಲ್ಲಿ ನಿಯಂತ್ರಣವಿದೇಯವಾಗಿದೆ. ಶಬರಿಮಲೆಯ ವಿಷಯದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಅವಲೋಕನ ನಡೆಸಲಾಗಿದೆ. ಎರುಮೇಲಿಯಲ್ಲಿ ಸ್ಪೋಟ್ ಬುಕ್ಕಿಂಗ್ …

ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ-ಸಣ್ಣಿ ಜೋಸೆಫ್

ಕಾಸರಗೋಡು: ರಾಜ್ಯವನ್ನು ಅಭಿವೃದ್ಧಿಯತ್ತ ಸಾಗಿಸಲು ಇಲ್ಲಿನ ಎಡ ರಂಗ ಸರಕಾರಕ್ಕೆ ಸಾಧ್ಯವಾಗಿಲ್ಲವೆಂದು ಕೆಪಿಸಿಸಿ ಅಧ್ಯಕ್ಷ ಸಣ್ಣಿ ಜೋಸೆಫ್ ಆರೋಪಿಸಿದ್ದಾರೆ. ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಯಂಗವಾಗಿ ಕಾಸರಗೋಡು ಪ್ರೆಸ್ ಕ್ಲಬ್ ಇಂದು ಬೆಳಿಗ್ಗೆ ಹಮ್ಮಿಕೊಂಡ ‘ಮೀಟ್‌ದ ಪ್ರೆಸ್’ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ರಾಜ್ಯದ ಎಲ್ಲಾ ವಲಯಗಳು ಸ್ತಬ್ದಗೊಂಡಿದೆ. ಕೃಷಿ ವಲಯ ನಾಶದತ್ತ ಸಾಗಿದೆ.  ವನ್ಯ ಮೃಗಗಳ ಹಾವಳಿಯಿಂದ ಜನರು ತತ್ತರಿಸಿದ್ದಾರೆ. ಎಕ್ರೆಗಟ್ಟಲೆ ಕೃಷಿ  ನಾಶಗೊಂಡಿದ್ದರೂ  ವನ್ಯ ಮೃಗಗಳ ಹಾವಳಿ ತಡೆಗಟ್ಟುವಲ್ಲಿ  ಸರಕಾರ ವಿಫಲಗೊಂಡಿದೆಯೆಂದೂ ಸಣ್ಣಿ ಜೋಸೆಫ್ ಆರೋಪಿಸಿದ್ದಾರೆ. ರಾಜ್ಯದ ವಿದ್ಯಾವಂತರು …

ಶಬರಿಮಲೆ ಚಿನ್ನ ಕಳವು ಪ್ರಕರಣದ ತನಿಖೆಯಲ್ಲಿ ದೊಡ್ಡ ತಿರುವು: ತಂತ್ರಿವರ್ಯರ ಹೇಳಿಕೆ ದಾಖಲಿಸಿಕೊಂಡ ಎಸ್‌ಐಟಿ

ಪಂದಳಂ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಇದೀಗ ಹೊಸ ತಿರುವು ಲಭಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಶಬರಿಮಲೆ ದೇವಸ್ಥಾನದ ತಂತ್ರಿವರ್ಯರುಗಳಾದ ಕಂಠರರ್ ರಾಜೀವರ್ ಮತ್ತು ಕಂಠರರ್ ಮೋಹನರ್‌ಗಳ ಹೇಳಿಕೆಗಳನ್ನು ಈ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ  ದಾಖಲಿಸಿಕೊಂಡಿದೆ. ಮುಜರಾಯಿ ಮಂಡಳಿಯ ಅಧಿಕಾರಿಗಳು ನೀಡಿದ ನಿರ್ದೇಶದಂತೆ ಶಬರಿಮಲೆ ದೇಗುಲದ ದ್ವಾರಪಾಲಕ ಮೂರ್ತಿಗಳು ಹಾಗೂ ಗರ್ಭಗುಡಿ ಬಾಗಿಲ ಚಿನ್ನದ ಕವಚಗಳನ್ನು ಹೊರಕ್ಕೆ ಸಾಗಿಸಲು ಅನುಮತಿ ನೀಡಲಾಗಿದೆ. ದೈವಹಿತ ನೋಡಿ ಮಾತ್ರವೇ ಯಾವುದಕ್ಕೂ ಅನುಮತಿ ನೀಡುವುದು …

ಕೆರೆಗೆ ಬಿದ್ದ ಚಿರತೆ ಗಂಡು: ಹೆಸರು ‘ಕಾಸ್ಟ್ರೋ’ ಇನ್ನು ತೃಶೂರು ಮೃಗಾಲಯದಲ್ಲಿ ವಾಸ

ಕಾಸರಗೋಡು:  ಪುಲ್ಲೂರು ಕೊಡವಲದಲ್ಲಿ ಕೆರೆಗೆ ಬಿದ್ದು ನಂತರ ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿದ  ಚಿರತೆ ಗಂಡು ಎಂದು ಇದೀಗ ಗುರುತಿಸಲಾಗಿದೆ.  ಈ ಚಿರತೆಗೆ ಅರಣ್ಯ ಪಾಲಕರು ‘ಕಾಸ್ಟ್ರೋ’ ಎಂಬ ಹೆಸರಿಟ್ಟಿ ದ್ದಾರೆ. ಈ ಚಿರv ಯನ್ನು ನಿನ್ನೆ ರಾತ್ರಿ 10.30ರ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳ ಬೆಂಗಾವಲಿನೊಂದಿಗೆ ವಿಶೇಷ ವಾಹನದಲ್ಲಿ ತೃಶೂರು ಮೃಗಾಲಯಕ್ಕೆ ಸಾಗಿಸಲಾಯಿತು. ಕಳೆದ ಭಾನುವಾರ ರಾತ್ರಿ ಪುಲ್ಲೂರು ಕೊಡವಲ ನೀರಳಂ ಕಯದ ಮಧು ಎಂಬವರ ಹಿತ್ತಿಲ ಕೆರೆಯಲ್ಲಿ ಚಿರತೆ ಬಿದ್ದಿತ್ತು.  ನಂತರ ಅರಣ್ಯ ಇಲಾಖೆಯವರು …

ಸಾಲವಾಗಿ ನೀಡಿದ ಯಂತ್ರ ಮರಳಿ ನೀಡದ ದ್ವೇಷ: ವ್ಯಕ್ತಿಯನ್ನು ಕಗ್ಗಲ್ಲಿನಿಂದ ಹೊಡೆದು ಕೊಲೆಗೈಯ್ಯಲೆತ್ನಿಸಿದ ಆರೋಪಿಗೆ ಏಳು ವರ್ಷ ಕಠಿಣ ಸಜೆ, ಜುಲ್ಮಾನೆ

ಕಾಸರಗೋಡು: ಕೊಲೆಯತ್ನ ಪ್ರಕರಣದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (3)ರ ನ್ಯಾಯಧೀಶರಾದ ಅಚಿಂತ್ಯಾ ರಾಜ್ ಉಣ್ಣಿ ಏಳು ವರ್ಷ ಕಠಿಣ ಸಜೆ ಹಾಗೂ ಒಂದು ಲಕ್ಷ ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ. ಮೂಲತಃ ಕರ್ನಾಟಕ ಶಿವಮೊಗ್ಗ ರಾಜೀವ್‌ನಗರ ನಿವಾಸಿ ಹಾಗೂ ಈಗ ಉಪ್ಪಳ ಅಂಚೆ ಕಚೇರಿ ಬಳಿ ವಾಸಿಸುತ್ತಿರುವ ವಿಜಯ ನಾಯ್ಕ (50) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ಆರು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆಯೆಂದು ತೀರ್ಪಿನಲ್ಲಿ ತಿಳಿಸಲಾಗಿದೆ.  …

ಆಂಬುಲೆನ್ಸ್ ಚಾಲಕ ಆತ್ಮಹತ್ಯೆ

ಕಾಸರಗೋಡು: ಈ ಹಿಂದೆ ಆಂಬುಲೆನ್ಸ್ ಚಾಲಕನಾಗಿದ್ದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ ಹಚ್ಚಲಾಗಿದೆ. ಕಳ್ಳಾರ್ ಅರಕ್ಕನ್‌ಕಾಡ್ ಮಣಿಕಲ್ ನಿವಾಸಿ ಎ. ನಾರಾ ಯಣನ್ (56) ಮೃತಪಟ್ಟವರು. ಮನೆಯ ಕಾರು ಪೋರ್ಚರ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಯಾಗಿದೆ. ಸಂಘಟನೆಯೊಂದರ ಆಂಬು ಲೆನ್ಸ್‌ನಲ್ಲಿ ಕಾಞಂಗಾಡ್‌ನಲ್ಲಿ ಹಲವು ಕಾಲ ಚಾಲಕನಾಗಿ ದುಡಿದಿದ್ದರು. ಮೃತರು ಪತ್ನಿ ಮಿನಿ, ಮಕ್ಕಳಾದ ಪ್ರಾರ್ಥನಾ, ಅಭಿಷೇಕ್, ಅಳಿಯ ರಾಜೇಶ್, ಸಹೋದರರಾದ ಅಶೋಕನ್, ಚಂದ್ರನ್, ಸಹೋದರಿ ನಿರ್ಮಲ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಪಿಣರಾಯಿ ವಿಜಯನ್ ಸರಕಾರ ಸ್ಥಳೀಯಾಡಳಿತ ಸಂಸ್ಥೆಗಳ ಕತ್ತು ಹಿಚುಕುತ್ತಿದೆ- ಎಂ.ಎಲ್. ಅಶ್ವಿನಿ

ಕುಂಬಳೆ: ತೀವ್ರ ಆರ್ಥಿಕ ಸಂದಿಗ್ಧತೆಯನ್ನು ಹಿಮ್ಮೆಟ್ಟಿಸಲು ಸ್ಥಳೀಯಾಡಳಿತ ಸಂಸ್ಥೆಗಳ ನಿಧಿಯನ್ನು ಕಡಿತಗೊಳಿಸಿದ ಪಿಣರಾಯಿ ಸರಕಾರದ ಕ್ರಮ ಸ್ಥಳೀಯಾಡಳಿತ ಸಂಸ್ಥೆಗಳನ್ನು ಆರ್ಥಿಕವಾಗಿ ಹಿಚುಕುತ್ತಿದೆ,  ತ್ರಿಸ್ತರ ಪಂಚಾಯತ್‌ಗಳ ಚಟುವಟಿಗಳ ತಾಳ ತಪ್ಪಿಸುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಆರೋಪಿಸಿದರು. ಬಿಜೆಪಿ ಕುಂಬಳೆ ಪಂಚಾಯತ್ ಸಮಿತಿ ಆಯೋಜಿಸಿದ ಜನ ಪಂಚಾ ಯತ್ ಸಾರ್ವಜನಿಕ ಸಭೆ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕೊರೋನಾ ಸಮಯದಲ್ಲಿ ಕೆಲಸ ಕಳೆದು ಕೊಂಡು ಹಿಂತಿರುಗಿದ  ಅನಿವಾಸಿಗಳಿಗೆ ಆರು ತಿಂಗಳ ವೇತನ ನೀಡುವುದಾಗಿ ತಿಳಿಸಿ ವಂಚಿಸಿದ ಪಿಣರಾಯಿ ಸರಕಾರ …

ಮಂಗಲ್ಪಾಡಿ ಪಂಚಾಯತ್‌ನಿಂದ ಸ್ಪರ್ಧಿಸುವ ವಿವಿಧ ಪಕ್ಷಗಳ ಅಭ್ಯರ್ಥಿಗಳು

ಉಪ್ಪಳ: ತ್ರಿಸ್ತರ ಪಂಚಾಯತ್ ಚುನಾವಣೆಗೆ ಮಂಗಲ್ಪಾಡಿ ಪಂಚಾಯತ್‌ನಿAದ ಸ್ಪರ್ಧಿಸುವ ವಿವಿಧ ರಾಜಕೀಯ ಪಕ್ಷಗಳು ಹಾಗೂ ಸ್ವತಂತ್ರ ಅಭ್ಯರ್ಥಿಗಳ ವಿವರ: 1ನೇ ವಾರ್ಡ್ ಮೂಸೋಡಿ ಕದೀಜ [ಸ್ವತಂತ್ರ], ರೇಷ್ಮ.ಕೆ. ಆರ್. [ಸ್ವತಂತ್ರ], ಸುಮಯ್ಯ.ವಿ [ಲೀಗ್], 2ನೇ ವಾರ್ಡ್ ಉಪ್ಪಳಗೇಟ್ ಗೋಲ್ಡನ್ ಅಬ್ದುಲ್ ರಹಿಮಾನ್ [ಲೀಗ್], ಅಶ್ರಫ್ [ಸ್ವತಂತ್ರ], ನಿತಿನ್ [ಬಿಜೆಪಿ], 3ನೇ ವಾರ್ಡ್ ಮುಳಿಂಜ ಮುನೀರ್ ಕೆ.ಪಿ [ಸ್ವತಂತ್ರ], ಮುಹಮ್ಮದ್ ಹನೀಫ್.ಬಿ [ಹನೀಫ್ ಬಾಬಾ] [ಲೀಗ್], ಮೊಹಮ್ಮದ್ ಇಂತ್ಯಾಸ್ [ಸ್ವತಂತ್ರ], ಹರಿನಾಥ ಭಂಡಾರಿ [ಬಿಜೆಪಿ], 4ನೇ ವಾರ್ಡ್ ಉಪ್ಪಳ …

ಡಾ. ಡಿ. ವೀರೇಂದ್ರ ಹೆಗಡೆಯವರ 78ನೇ ಹುಟ್ಟುಹಬ್ಬ: ಕನ್ನೆಪ್ಪಾಡಿ ಆಶ್ರಯ ಆಶ್ರಮದಲ್ಲಿ ವಿವಿಧ ಕಾರ್ಯಕ್ರಮ

ಬದಿಯಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆಯವರ ಜನ್ಮದಿನ ಪ್ರಯುಕ್ತ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ತಾಲೂಕು ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಆಶ್ರಯ ಆಶ್ರಮ ಕನ್ನೆಪ್ಪಾಡಿಯಲ್ಲಿ  ಹುಟ್ಟುಹಬ್ಬ ಆಚರಿಸಲಾಯಿತು. ಬೆಳಿಗ್ಗೆ ಭಜನೆ ಬಳಿಕ ಸಭೆ ನಡೆಯಿತು. ಇದೇ ವೇಳೆ ತಾಲೂಕು ಜನಜಾಗೃತಿ ವೇದಿಕೆಯಿಂದ ಕೊಡುಗೆಯಾಗಿ ನೀಡಿದ ಪುಸ್ತಕವನ್ನು ಕವಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಆಶ್ರಮದ ರಮೇಶ್ ಕಳೇರಿಯವರಿಗೆ ಹಸ್ತಾಂತರಿಸಿದರು. ಜನಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ಅಖಿಲೇಶ್ ನಗುಮುಗಂ ಅಧ್ಯಕ್ಷತೆ ವಹಿಸಿದರು. ಕಾರಡ್ಕ ವಲಯ ಅಧ್ಯಕ್ಷ …