ಪುಳಿಕುತ್ತಿ ಸ್ಮಶಾನದ ಅಭಿವೃದ್ಧಿ ಮರೀಚಿಕೆ: ಮೃತದೇಹಗಳ ಅಂತ್ಯಕ್ರಿಯೆಗೆ ಸಮಸ್ಯೆ

ಉಪ್ಪಳ: ಮಂಗಲ್ಪಾಡಿ ಪಂಚಾಯತ್‌ನ ಪುಳಿಕುತ್ತಿ ರುದ್ರಭೂಮಿ ಅಧಿಕಾರಿಗಳ ಅನಾಸ್ಥೆಯಿಂದ ಉಪಯೋಗಶೂನ್ಯಗೊಳ್ಳುತ್ತಿರುವುದಾಗಿ ಸ್ಥಳೀಯರು ದೂರಿದ್ದಾರೆ. ಇದರ ಅಭಿವೃದ್ಧಿಗೆ ಪಂಚಾಯತ್ 15 ಲಕ್ಷ ರೂ. ಹಾಗೂ ಬ್ಲೋಕ್ ಪಂಚಾಯತ್ 10 ಲಕ್ಷ ರೂ. ಮಂಜೂರು ಮಾಡಿದೆ ಎಂದು ಹೇಳಲಾಗುತ್ತಿದ್ದರೂ ಇದುವರೆಗೂ ಯಾವುದೇ ಕಾಮಗಾರಿ ಆರಂಭದ ಸೂಚನೆ ಲಭಿಸಿಲ್ಲ. ಪ್ರಸ್ತುತ ಈ ರುದ್ರಭೂಮಿಗೆ ತಲುಪಲು ಜನರು ಸಂಕಷ್ಟಪಡುತ್ತಿದ್ದು, ಇಲ್ಲಿ ಮೃತದೇಹವನ್ನು ದಹಿಸಲು ಸೂಕ್ತ ವ್ಯವಸ್ಥೆ ಇಲ್ಲವೆನ್ನಲಾಗಿದೆ. ಬೆಳಕು, ನೀರಿನ ವ್ಯವಸ್ಥೆಯೂ ಇಲ್ಲದೆ ಕಾಡು ಪೊದೆಗಳು ಆವರಿಸಿ ಹಂದಿ ಸಹಿತ ವಿವಿಧ ಪ್ರಾಣಿಗಳ …

ಕೇಂದ್ರ ಸರಕಾರಿ ನೌಕರರಿಂದ ಕ್ರಿಸ್ಮಸ್ ಆಚರಣೆ

ಕಾಸರಗೋಡು: ಕೇಂದ್ರ ಸರಕಾರಿ ನೌಕರರ ಕಾನ್ಫೆಡರೇಶನ್  ಕಾಸರಗೋಡು ಜಿಲ್ಲಾ ಸಮಿತಿ ಹಾಗೂ ನೇಶನಲ್ ಫೆಡರೇ ಶನ್ ಆಫ್ ಪೋಸ್ಟಲ್ ಎಂಪ್ಲೋಯೀಸ್ ಕಾಸರಗೋಡು ಡಿವಿಶನ್‌ನ ಸಂಯು ಕ್ತಾಶ್ರಯದಲ್ಲಿ  ಕೋಮುವಾದ ರಾಜಕೀಯ ವಿರುದ್ಧ ಕ್ರಿಸ್ಮಸ್ ಹಾಡಿನೊಂದಿಗೆ  ಕ್ರಿಸ್ಮಸ್ ಆಚರಿಸಲಾಯಿತು.  ಕಾಸರಗೋಡು  ಪ್ರಧಾನ ಅಂಚೆ ಕಚೇರಿ ಮುಂದೆ ನಿನ್ನೆ ಸಂಜೆ ನಡೆದ ಕಾರ್ಯಕ್ರಮವನ್ನು ಪ್ರಜಾಪ್ರಭುತ್ವ ಮಹಿಳಾ ಅಸೋಸಿಯೇಶನ್ ರಾಜ್ಯ ಕೋಶಾಧಿಕಾರಿ ಇ. ಪದ್ಮಾವತಿ ಉದ್ಘಾಟಿಸಿದರು. ಕೇಂದ್ರ ನೌಕರರ ಕೌನ್ಫೆಡರೇಶನ್ ಜಿಲ್ಲಾ ಕಾರ್ಯದರ್ಶಿ ಪಿ.ವಿ. ಶರತ್ ಅಧ್ಯಕ್ಷತೆ ವಹಿಸಿದರು. ಸಿ. ರಾಘವನ್, ಕೆ. …

ಜಾಂಬ್ರಿ ಗುಹಾ ಪರಿಸರದಲ್ಲಿ ಬೆಂಕಿ ಆಕಸ್ಮಿಕ

ಬೆಳ್ಳೂರು: ಗಡಿ ಪ್ರದೇಶವಾದ ಬಂಟಾಜೆ ಚೆಂಡೆತ್ತಡ್ಕ ಬಯಲಿನಲ್ಲಿ ನಿನ್ನೆ ಸಂಜೆ ಬೆಂಕಿ ಆಕಸ್ಮಿಕ ಉಂಟಾಗಿದ್ದು, ಒಣಹುಲ್ಲು ಉರಿದು ನಾಶಗೊಂಡಿದೆ. ಸ್ಥಳೀಯರು ನೀಡಿದ ಮಾಹಿತಿಯಂತೆ ಪುತ್ತೂರಿನಿಂದ ಅಗ್ನಿಶಾಮಕದಳ ತಲುಪಿ ಬೆಂಕಿ ನಂದಿಸಿದ್ದು, ಸ್ಥಳೀಯರು ಸಹಕಾರ ನೀಡಿದರು. ಪ್ರಸಿದ್ಧ ಜಾಂಬ್ರಿ ಗುಹಾ ಪ್ರದೇಶವಿದಾಗಿದ್ದು, ಕರ್ನಾಟಕದ ಬಂಟಾಜೆ ಹಾಗೂ ಕೇರಳದ ಪರಪ್ಪ ರೇಂಜ್‌ಗೆ ಒಳಗೊಂಡ ರಕ್ಷಿ ತಾರಣ್ಯವಾಗಿದೆ. ಮರಗಿಡಗಳಿಗೆ ಬೆಂಕಿ ವ್ಯಾಪಿಸುವ ಮುನ್ನ ನಂದಿಸಿದ ಕಾರಣ ಹೆಚ್ಚಿನ ಅನಾಹುತ ಸಂಭವಿಸಲಿಲ್ಲ.

ಶ್ರೀ ಕ್ಷೇತ್ರ ಧ.ಗ್ರಾ.ಯೋ. ಒಕ್ಕೂಟಗಳ ನೇತೃತ್ವದಲ್ಲಿ ಶ್ರೀ ಸತ್ಯನಾರಾಯಣ ಪೂಜೆ

ಬದಿಯಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಾಸರಗೋಡು, ಬದಿಯಡ್ಕ ವಲಯದ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ನೀರ್ಚಾಲು, ಕನ್ನೆಪ್ಪಾಡಿ, ಕಡಂಬಳ, ಮಾನ್ಯ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ನೀರ್ಚಾಲು ಇದರ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಸ್ಕೂಲಿನಲ್ಲಿ ನಡೆಯಿತು. ಶಾಲಾ ಪ್ರಬಂಧಕ ಜಯದೇವ ಖಂಡಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ …

ಇಬ್ಬರು ಪುಟ್ಟ ಮಕ್ಕಳ ಸಹಿತ ಒಂದೇ ಕುಟುಂಬದ ನಾಲ್ಕು ಮಂದಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಹೊಸದುರ್ಗ:  ಪಯ್ಯನ್ನೂರು ಬಳಿಯ ರಾಮಂತಳಿ ಎಂಬಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಮನೆಯೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಡಕ್ಕುಂಬಾಡ್ ಕೆ.ಟಿ. ಕಲಾಧರನ್ (38), ತಾಯಿ ಉಷಾ (60), ಕಲಾಧರನ್‌ರ ಮಕ್ಕಳಾದ ಹಿಮ(5), ಕಣ್ಣನ್ (2) ಎಂಬಿವರು ಮೃತಪಟ್ಟವರಾಗಿದ್ದಾರೆ.  ಉಷಾ ಹಾಗೂ ಕಲಾಧರನ್ ನೇಣು ಬಿಗಿದ ಸ್ಥಿತಿಯಲ್ಲೂ, ಮಕ್ಕಳು ಕೆಳಗೆ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಕ್ಕಳಿಗೆ ವಿಷ ನೀಡಿದ ಬಳಿಕ ಉಷಾ ಹಾಗೂ ಕಲಾಧರನ್ ನೇಣು ಬಿಗಿದು ಸಾವಿಗೀಡಾಗಿರಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ನಿನ್ನೆ ರಾತ್ರಿ 8 ಗಂಟೆ ವೇಳೆ …

ಪತ್ನಿ, ಮಗುವಿನ ಮೇಲೆ ಹಲ್ಲೆ: ವ್ಯಕ್ತಿವಿರುದ್ಧ ನರಹತ್ಯಾ ಪ್ರಕರಣ ದಾಖಲು

ಕುಂಬಳೆ: ಪತ್ನಿ ಮತ್ತು ಪುತ್ರಿಯ ಮೇಲೆ ಹಲ್ಲೆ ನಡೆಸಿ ಗಾಯಗೊಳಿಸಿದ ದೂರಿನಂತೆ  ಪತಿ ವಿರುದ್ಧ  ಕುಂಬಳೆ ಪೊಲೀಸರು ನರಹತ್ಯಾ ಯತ್ನ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕುಂಬಳೆ ಸಮೀಪದ ಎಡನಾಡು ಪೆರ್ಣೆ ಸೌಪರ್ಣಿಕಾ ನಿಲಯದ ಆಶಾ ಕುಮಾರಿ ಕೆ.ಎಸ್ (39), ಮಗಳು ನಕ್ಷಿತಾ (8) ಎಂಬಿವರ ಮೇಲೆ ಹಲ್ಲೆ  ನಡೆಸಿ ಗಾಯಗೊಳಿಸಿದ ದೂರಿನಂತೆ  ಆಶಾ ಕುಮಾರಿಯ ಪತಿ ಕಣ್ಣೂರು ಚೆರುತ್ತಾಳಂ ಕಡನ್ನಪ್ಪಳ್ಳಿ ವಲಿಯಾಂಕೋಡ್ ಕುಲಾಪುರಂ ಕೂಲಿಯಾಡನ್ ವೀಟಿಲ್ ಸುರೇಶ್ (44) ಎಂಬಾತನ ವಿರುದ್ಧ ಈ ಪ್ರಕರಣ ದಾಖಲಿಸಲಾಗಿದೆ. ಈ ತಿಂಗಳ …

ಬಿಜೆಪಿ ಕಾರ್ಯಕರ್ತ ನಿಧನ

ಉಪ್ಪಳ: ಮೀಂಜ ಮದಂಗಲ್ಲು ನಿವಾಸಿ ದಿ| ಕೃಷ್ಣಪ್ಪರ ಪುತ್ರ, ಬಿಜೆಪಿ ಸಕ್ರಿಯ ಕಾರ್ಯಕರ್ತ ನವೀನ (43) ನಿನ್ನೆ ಬೆಳಿಗ್ಗೆ ನಿಧನ ಹೊಂದಿ ದರು. ಮನೆಯಲ್ಲಿ ಹೃದಯÁಘಾತ ಉಂಟಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ಮಧ್ಯೆ ನಿಧನ ಹೊಂದಿದ್ದಾರೆ. ಸಾರಣೆ ಮೇಸ್ತಿç ಕೆಲಸವನ್ನು ನಿರ್ವಹಿಸುತ್ತಿದ್ದರು. ಇತ್ತೀಚೆಗೆ ನಡೆದ ತ್ರಿಸ್ತರ ಪಂಚಾ ಯತ್ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ತೊಡಗಿಸಿ ಕೊಂಡಿ ದ್ದರು. ಮದಂಗಲ್ಲು ಶ್ರೀ ಮಹಾ ಗಣಪತಿ ಭಜನಾ ಮಂದಿರದ ಸಕ್ರಿಯ ಸದಸ್ಯರಾಗಿದ್ದರು. ಮೃತರು ತಾಯಿ ದೇವಕಿ, ಪತ್ನಿ ಶಿಲ್ಪ, ಮಕ್ಕಳಾದ …

ಸಾರ್ವಕಾಲಿಕ ಗರಿಷ್ಠ ದಾಖಲೆ: ಪವನ್‌ಗೆ 1 ಲಕ್ಷ ರೂ. ಗಡಿ ದಾಟಿ ನಾಗಾಲೋಟ ಮುಂದುವರಿಸಿದ ಚಿನ್ನದ ಬೆಲೆ

ತಿರುವನಂತಪುರ:  ಚಿನ್ನದ ಬೆಲೆಯ ನಾಗಾಲೋಟ ಇನ್ನೂ ಮುಂದುವರಿದಿದೆ. ನಿನ್ನೆ ಪವನ್‌ಗೆ 99,840 ರೂ. ಆಗಿದ್ದ ಚಿನ್ನದ ಬೆಲೆಯಲ್ಲಿ ಇಂದು ಬೆಳಿಗ್ಗೆ 1,760 ರೂ.ಗಳ ಏರಿಕೆ ಉಂಟಾಗಿ   ಈಗ 1,01,600 ರೂ.ಗೇರಿ ಸಾರ್ವಕಾಲಿಕ ಗರಿಷ್ಠ ದಾಖಲೆ ನಿರ್ಮಿಸಿದೆ. ಈ ವರ್ಷ ಜನವರಿಯಲ್ಲಿ 1 ಪವನ್ ಚಿನ್ನದ ಬೆಲೆ ೫೭ ಸಾವಿರ ರೂ. ಆಗಿತ್ತು. ವರ್ಷದ ಕೊನೆಯ ತಿಂಗಳಾದ ಇಂದು ಅದು 1,01,600 ರೂ.ಗೇರಿದೆ. ಇದು ಚಿನ್ನದ ಬೆಲೆಯ ನಾಗಾಲೋಟ ಇನ್ನೂ ಮುಂದುವರಿ ಯಲಿದೆಯೆಂಬುವುದರ  ಒಂದು ಸೂಚನೆಯಾಗಿದೆ. ಜಾಗತಿಕ ಬಿಕ್ಕಟ್ಟಿನ …

ನಿಲ್ಲಿಸಿದ್ದ ಆಂಬುಲೆನ್ಸ್ ಕಳವುಗೈದ ಯುವಕ ಸೆರೆ

ಮಂಗಳೂರು: ನಿಲ್ಲಿಸಿದ್ದ ಆಂಬುಲೆನ್ಸ್‌ನ್ನು ಕಳವುಗೈದು ಕೊಂಡೊಯ್ದ ಯುವಕನೋರ್ವ ಸೆರೆಗೀಡಾಗಿದ್ದಾನೆ. ಕಾರ್ಕಳ ನಿವಾಸಿಯಾದ ಶೋಡನ್ (22) ಎಂಬಾತ ಸೆರೆಗೀಡಾದ ವ್ಯಕ್ತಿ. ಕಡಬದ    ಶಿರಾಡಿ ನಿವಾಸಿ ಸುರೇಶ್ (46) ನೀಡಿದ ದೂರಿನಂತೆ ಶೋಡನ್‌ನನ್ನು ಬಂಧಿಸಲಾಗಿದೆ. ಈ ತಿಂಗಳ ೧೯ರಂದು  ಆಂಬುಲೆನ್ಸ್ ಕಳವಿಗೀ ಡಾಗಿದೆ.  ಅಪಘಾತವೊಂದಕ್ಕೆ ಸಂಬಂಧಿಸಿ ತುರ್ತು ಕರೆ ಬಂದ ಹಿನ್ನೆಲೆಯಲ್ಲಿ ಗುಂಡ್ಯ ಚೆಕ್ ಪೋಸ್ಟ್ ಸಮೀಪ ಆಂಬುಲೆನ್ಸ್ ನಿಲ್ಲಿಸಲಾಗಿತ್ತು.  ಬೇರೊಬ್ಬ ಚಾಲಕ ಶೀಘ್ರ ಅಲ್ಲಿಗೆ ತಲುಪುವನೆಂದು ತಿಳಿಸಿದ ಹಿನ್ನೆಲೆಯಲ್ಲಿ ಸುರೇಶ್ ಕೀಲಿಕೈಯನ್ನು ಆಂಬುಲೆನ್ಸ್‌ನೊಳಗೆ ಇರಿಸಿ ಮನೆಗೆ ಹೋಗಿದ್ದರು.    20ರಂದು …

ನಟಿಗೆ ದೌರ್ಜನ್ಯ ಪ್ರಕರಣದಲ್ಲಿ ದಿಲೀಪ್‌ರನ್ನು ಆರೋಪಮುಕ್ತಗೊಳಿಸಿದ ತೀರ್ಪಿನ ವಿರುದ್ಧ  ಅಪೀಲು ಸಲ್ಲಿಸಲು ಸರಕಾರ ಅನುಮತಿ

ಕೊಚ್ಚಿ: ನಟಿಗೆ ದೌರ್ಜನ್ಯಗೈದ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲ ಯದ  ತೀರ್ಪಿನ ವಿರುದ್ಧ ಹೈಕೋ ರ್ಟ್‌ನಲ್ಲಿ ಅಪೀಲು ಸಲ್ಲಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ.  ಡಿಜಿಪಿ ಹಾಗೂ ಸ್ಪೆಷಲ್ ಪ್ರಾಸಿಕ್ಯೂಟರ್‌ರ ಶಿಫಾರಸ್ಸನ್ನು ಅಂಗೀಕರಿಸಿ ಸರಕಾರ ಇದಕ್ಕೆ ಅಂಗೀಕಾರ ನೀಡಿದೆ. ೮ನೇ ಆರೋಪಿ ನಟ ದಿಲೀಪ್ ಸಹಿತ  4 ಮಂದಿಯನ್ನು ಆರೋಪಮುಕ್ತಗೊಳಿಸಿದ  ಎರ್ನಾಕುಳಂ ಪ್ರಿನ್ಸಿಪಲ್ ಸೆಶನ್ಸ್ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸರಕಾರ ಅಪೀಲು ಸಲ್ಲಿಸಲಿದೆ.  ಸಂತ್ರಸ್ತೆ ಮುಖ್ಯಮಂತ್ರಿಯೊಂದಿಗೆ ನಡೆಸಿದ ಸಮಾಲೋಚನೆಯ ಬೆನ್ನಲ್ಲೇ ಅಪೀಲು  ಸಲ್ಲಿಸಲಿರುವ ಕ್ರಮಗಳನ್ನು ತ್ವರಿತಗೊಳಿ ಸಲು ಸರಕಾರ ತೀರ್ಮಾನಿಸಿದೆ.  …