ಅಮೈ ಶ್ರೀಕೃಷ್ಣ ಭಜನಾಮಂದಿರ ರಜತ ಮಹೋತ್ಸವ: ನಿಧಿಕೂಪನ್ ಬಿಡುಗಡೆ

ಕಾಸರಗೋಡು: ಅಮೈ ಶ್ರೀ ಕೃಷ್ಣ ಭಜನಾ ಮಂದಿರದ 25ನೇ ವಾರ್ಷಿಕೋತ್ಸವವನ್ನು ಆಚರಿಸಲು ತೀರ್ಮಾನಿಸಿದು, ಧನ ಸಂಗ್ರಹಣೆಗೆ ಶ್ರೀ ಕೃಷ್ಣ ನಿಧಿ ಲಕ್ಕಿ ಕೂಪನ್ ಬಿಡುಗಡೆಯನ್ನು ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಅಸ್ರ, ಸಮಿತಿಯ ಉಪಾಧ್ಯಕ್ಷ ಕೆ.ಎನ್. ವೆಂಕಟ್ರಮಣ ಹೊಳ್ಳರಿಗೆ ನೀಡಿ ನೆರವೇರಿಸಿದರು. ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಸದಾಶಿವ ಮಲ್ಯ, ಕೋಶಾಧಿಕಾರಿ ವೇಣುಗೋಪಾಲ್, ಎ.ಕೆ ವಿಜಯ ಕೋಕಿಲ, ರಾಮಕೃಷ್ಣ ಹೊಳ್ಳ, ಜಯರಾಮ್ ಶೆಟ್ಟಿ, ಕಿಶೋರ್ ಕುಮಾರ್, ಶ್ರೀಲತಾ ಟೀಚರ್, ಸೌದಾಮಿನಿ, ಸಮಿತಿಯ ಪದಾಧಿಕಾರಿ ಗಳು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ …

ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ಶೇಡಿಕಾವು ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ನೃತ್ಯ ವೈಭವ

ಕುಂಬಳೆ: ಶೇಡಿಕಾವು ಶ್ರೀ ಅಯ್ಯಪ್ಪ ದೇವಸ್ಥಾನದ ಅಯ್ಯಪ್ಪ ದೀಪೋತ್ಸವ ಸಂದರ್ಭದಲ್ಲಿ ಡಾ. ವಾಣಿಶ್ರೀ ನೇತೃತ್ವದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯ ಸಾಹಿತ್ಯ ಗಾನ ನೃತ್ಯ ವೈಭವ ಕಾರ್ಯಕ್ರಮ ಜರಗಿತು. ವಿಶ್ವನಾಥ ಪುತ್ತಿಗೆ, ಮುರಳಿ ನೀರ್ಚಾಲ್, ಕೃಪಾಕಿರಣ, ದಿವಾಕರ ಕಾಸರಗೋಡು, ಈಶ್ವರ ಸೂರಂಬೈಲು, ಸುರೇಶ್ ಪೈಕ ಸಮೂಹಗಾನ ನೀಡಿದರು. ಸಮಿತ, ತೇಜಸ್ವಿನಿ, ಹೃತ್ವಿಕ ಸಹಿತ ವಿವಿಧ ಕಲಾವಿದರು ನೃತ್ಯ ಪ್ರದರ್ಶನಗೈದರು. ಹರಿಕಾಂತ್ ಅವರಿಂದ ರಿಂಗ್ ಡ್ಯಾನ್ಸ್, ತನುಷ ಬಲ್ಲಾಳ್‌ರಿಂದ ಯೋಗ ನೃತ್ಯ, ಪ್ರೀತಿಕಾ ಪ್ರಸಾದ್‌ರಿಂದ ರಿಂಗ್ ನೃತ್ಯ …

ಕುಂಬಳೆಯ ಹಿರಿಯ ಲಾರಿ ಚಾಲಕ ನಿಧನ

ಕುಂಬಳೆ: ಕುಂಬಳೆಯ ಹಿರಿಯ ಲಾರಿ ಚಾಲಕ ಅಬ್ದುಲ್ಲ (75) ಎಂಬವರು ನಿಧನಹೊಂದಿದರು.  ಕುಂಬಳೆ ನಿವಾಸಿಯಾದ ಇವರು ಪ್ರಸ್ತುತ ಬಂಬ್ರಾಣದಲ್ಲಿ ವಾಸಿಸುತ್ತಿದ್ದರು. ಮೃತರು ಪತ್ನಿ ಫಾತಿಮ, ಮಕ್ಕಳಾದ ಕಬೀರ್, ನೌಶಾದ್, ನೌಫಲ್, ರಶೀದ, ಸೈನಾಸ್, ಬಲ್ಕೀಸ್,  ರಾಬಿಯ, ನೌಶೀನ, ಅಳಿಯ-ಸೊಸೆಯಂದಿರಾದ ರಿಯಾನ, ಇಶಾನ, ಇಬ್ರಾಹಿಂ, ಖಮರುದ್ದೀನ್, ಜಲೀಲ್, ಅಬು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಕುಂಬಳೆ ಬದರ್ ಜುಮಾ ಮಸೀದಿ ಪರಿಸರದಲ್ಲಿ ನಡೆಸಲಾಯಿತು.

ಕೆಎಸ್‌ಟಿಎ ಮಂಜೇಶ್ವರ ಯೂನಿಟ್ ಸಮ್ಮೇಳನ, ನೂತನ ಪದಾಧಿಕಾರಿಗಳ ಆಯ್ಕೆ

ಮಂಜೇಶ್ವರ: ಕೇರಳ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ (ಕೆ.ಎಸ್.ಟಿ.ಎ) ಮಂಜೇಶ್ವರ ಯೂನಿಟ್ ಸಮ್ಮೇಳನ ನಿನ್ನೆ ಹೊಸಂಗಡಿ ವ್ಯಾಪಾರಿ ಭವನದಲ್ಲಿ ನಡೆಯಿತು. ಕೆ.ಎಸ್.ಟಿ.ಎ ಯೂನಿಟ್ ಅಧ್ಯಕ್ಷ ಗಣೇಶ್ ಪಾವೂರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ರಾಧಾಕೃಷ್ಣ. ಎಸ್. ಉದ್ಘಾಟಿಸಿದರು. ಮಂಜೇಶ್ವರ ವ್ಯಾಪಾರಿ ಏಕೋಪನ ಸಮಿತಿ ಅಧ್ಯಕ್ಷ ಬಶೀರ್, ತಾಲೂಕು ಕಾರ್ಯದರ್ಶಿ ಸತೀಶ್ ಆಚಾರ್ಯ, ವಿಶ್ವನಾಥ್ ಶೆಟ್ಟಿ ಕುತ್ತಾನಾಡಿ ಮಾತಾಡಿದರು. ಜೊತೆ ಕಾರ್ಯದರ್ಶಿ ಪ್ರೇಮಲತಾ ವರದಿ ಮಂಡಿಸಿದರು. ಪುರುಷೋತ್ತಮ ಆಚಾರ್ಯ ಲೆಕ್ಕ ಪತ್ರ ಮಂಡಿಸಿದರು. ಕೃಷ್ಣ ಕೆದುಂಬಾಡಿ, ಕಲಾವತಿ ಹೊಸಂಗಡಿ. ತಾಲೂಕು …

ಕೇರಳ ಯಾತ್ರೆ ಉದ್ಘಾಟನೆ ಸಮ್ಮೇಳನ ಪ್ರಧಾನ ವೇದಿಕೆ ನಿರ್ಮಾಣಕ್ಕೆ ಚಾಲನೆ

ಕಾಸರಗೋಡು: ಜನವರಿ 1ರಿಂದ ಕಾಸರಗೋಡಿನಿಂದ ಆರಂಭಿಸುವ ಕೇರಳ ಯಾತ್ರೆಯ ಉದ್ಘಾಟನಾ ಸಮ್ಮೇಳನ ನಡೆಯುವ ಚೆರ್ಕಳ ನೂರುಲ್ ಎಂ.ಎ. ಉಸ್ತಾದ್‌ನಗರದಲ್ಲಿ ಪ್ರಧಾನ ವೇದಿಕೆಯ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು. ಸ್ವಾಗತ ಸಮಿತಿ ಅಧ್ಯಕ್ಷ ಅಬ್ದುಲ್ ಖಾಫಿರ್ ಹಾಜಿ ಚೇರೂರು ಚಾಲನೆ ನೀಡಿದರು. ಬಿ.ಎಸ್. ಅಬ್ದುಲ್ಲ ಕುಂಞಿ ಫೈಸಿ, ಕಾಟಿಪ್ಪಾರ ಅಬ್ದುಲ್ ಖಾದರ್ ಸಖಾಫಿ, ಬಾಯಾರ್ ಸಿದ್ದಿಕ್ ಸಖಾಫಿ ಸಹಿತ ಹಲವರು ಭಾಗವಹಿಸಿದರು.

ಬಸ್ ತಡೆದು ನಿಲ್ಲಿಸಿ ಚಾಲಕನಿಗೆ ಹಲ್ಲೆ: ಆರು ಮಂದಿ ವಿರುದ್ಧ ಕೇಸು 

ಕಾಸರಗೋಡು:  ರೈಲ್ವೇ ನಿಲ್ದಾಣ ಸಮೀಪ ಖಾಸಗಿ ಬಸ್ ತಡೆದು ನಿಲ್ಲಿಸಿ ಚಾಲಕನಿಗೆ ಹಲ್ಲೆಗೈದ ಘಟನೆಗೆ ಸಂಬಂಧಿಸಿ ಕಂಡರೆ ಪತ್ತೆಹಚ್ಚಬಹು ದಾದ ಆರು ಮಂದಿ ವಿರುದ್ಧ ಕಾಸರ ಗೋಡು ನಗರಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಚೆರ್ಕಳ ನಿವಾಸಿಯೂ ಶಾನು ಬಸ್‌ನ ಚಾಲಕನಾದ ಮುಹಮ್ಮದ್ ಶಿಹಾಬ್ (26)ರ ಮೇಲೆ ತಂಡ ಹಲ್ಲೆಗೈದಿದೆ. ಶುಕ್ರವಾರ ಮಧ್ಯಾಹ್ನ 12 ಗಂಟೆ ವೇಳೆ ಘಟನೆ ನಡೆದಿದೆ. ರೈಲ್ವೇ ನಿಲ್ದಾಣ ಸಮೀಪಕ್ಕೆ ಬಸ್ ತಲುಪಿದಾಗ  ಆಟೋ ನಿಲ್ದಾಣದ ಸಮೀಪದಲ್ಲಿದ್ದ  ತಂಡವೊಂದು ಬಸ್‌ಗೆ ಹತ್ತಿ ಹಲ್ಲೆಗೈದಿರುವುದಾಗಿ ಶಿಹಾಬ್ …

ಬೆದ್ರಂಪಳ್ಳ ಮಸೀದಿಯಿಂದ ಕಳವು: ತನಿಖೆ ಆರಂಭ

ಪೆರ್ಲ: ಬೆದ್ರಂಪಳ್ಳ ಬದರ್ ಜುಮಾ ಮಸೀದಿಯಿಂದ ಹಣ ಕಳವಿಗೀಡಾದ ಪ್ರಕರಣದಲ್ಲಿ   ಬದಿಯಡ್ಕ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಕೊಠಡಿಯ ಬೀಗ ಮುರಿದು ಒಳನುಗ್ಗಿದ ಕಳ್ಳರು ಕಪಾಟಿನಲ್ಲಿರಿಸಿದ್ದ 15 ಸಾವಿರ ರೂಪಾಯಿಗಳನ್ನು ದೋಚಿದ್ದಾರೆ. ಗುರುವಾರ ರಾತ್ರಿ  9 ಗಂಟೆಯಿಂದ ಶುಕ್ರವಾರ ಮುಂಜಾನೆ 5 ಗಂಟೆ ಮಧ್ಯೆ ಕಳವು ನಡೆದಿದೆ ಯೆಂದು ಅಂದಾಜಿಸಲಾಗಿದೆ. ಈ ಬಗ್ಗೆ ಬೆದ್ರಂಪಳ್ಳದ ಶಾಹುಲ್ ಹಮೀದ್ ನೀಡಿದ ದೂರಿನಂತೆ ಪೊಲೀಸರು ಕೇಸು ದಾಖಲಿಸಿದ್ದಾರೆ.

ನಗರದಿಂದ ಯುವಕನನ್ನು ಅಪಹರಿಸಿದ ಪ್ರಕರಣ ಹಿಂದೆ ಅಂತಾರಾಜ್ಯ ಜಾಲ: ಆರೋಪಿಯ ಮನೆಯಿಂದ ಬೃಹತ್ ಪ್ರಮಾಣದ ಖೋಟಾನೋಟು, ನೋಟು ಎಣಿಕೆ ಯಂತ್ರ ಪತ್ತೆ

ಕಾಸರಗೋಡು: ಡಿ. 17ರಂದು ಕಾಸರಗೋಡು ನಗರದ ಅಶ್ವಿನಿನಗರದಿಂದ ಹಾಡಹಗಲೇ ಮೇಲ್ಪರಂಬ ನಿವಾಸಿ ಹಸೀಫಾ ಎಂಬವರನ್ನು ಕಾರಿನಲ್ಲಿ ಬಂದ ತಂಡವೊಂದು ಅಪಹರಿಸಿದ ಪ್ರಕರಣದ ಆರೋಪಿಯೋರ್ವನ ಮನೆಯಲ್ಲಿ ಕಾಸರಗೋಡು ಪೊಲೀಸರು ನಡೆಸಿದ ತಪಾಸಣೆಯಲ್ಲಿ ಬೃಹತ್ ಪ್ರಮಾಣದ ಖೋಟಾನೋಟುಗಳು ಹಾಗೂ ನೋಟುಗಳನ್ನು ಎಣಿಸಲು ಉಪಯೋಗಿಸುವ ಯಂತ್ರವನ್ನು ಪತ್ತೆಹಚ್ಚಿ ವಶಕ್ಕೆ ತೆಗೆದುಕೊಂಡಿದ್ದಾರೆ. ಯುವಕನನ್ನು ಅಪಹರಿಸಿದ ಪ್ರಕರಣದ ಆರೋಪಿ ಗಳಲ್ಲೋರ್ವನಾಗಿರುವ ಚಟ್ಟಂಚಾಲ್ ಬೆಂಡಿಚ್ಚಾಲ್‌ನ ಕೆ. ವಿಜಯನ್ (55) ಎಂಬಾತನ ಚೆರ್ಕಳ ಕೋಲಾಚಿ ಯಡ್ಕದಲ್ಲಿರುವ ಮನೆಯ ಶೆಡ್‌ನಲ್ಲಿ ಈ ಖೋಟಾ ನೋಟುಗಳನ್ನು ಪತ್ತೆಹಚ್ಚಲಾಗಿದೆ. ಅಮಾನ್ಯ ನೋಟು …

ಶಬರಿಮಲೆ ಚಿನ್ನ ಕಳವಿನ ಹಿಂದೆ ಭಾರೀ ದೊಡ್ಡ ದರೋಡೆ ತಂಡ:  ದೇವಸ್ವಂ ಮಂಡಳಿಯ ಸದಸ್ಯರತ್ತ ತನಿಖೆ

ಶಬರಿಮಲೆ: ಶಬರಿಮಲೆ ದೇಗುಲ ದಲ್ಲಿ ನಡೆದ ಚಿನ್ನ ಕಳವು ಪ್ರಕರಣದ ಹಿಂದೆ ಭಾರೀ ದೊಡ್ಡ ದರೋಡೆ ತಂಡದ ಕೈವಾಡವಿದೆ ಎಂದು ವಿಶೇಷ ತನಿಖಾ ತಂಡ ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಈಗ ನ್ಯಾಯಾಂಗ ಬಂಧನದಲ್ಲಿ ಕಳೆಯುತ್ತಿರುವ  ಚೆನ್ನೈಯ ಸ್ಮಾರ್ಟ್  ಕ್ರಿಯೇಷನ್ಸ್‌ನ ಸಿಇಒ ಪಂಕಜ್ ಭಂಡಾರಿ ಮತ್ತು ಕರ್ನಾಟಕ ಬಳ್ಳಾರಿಯ ಚಿನ್ನದಂಗಡಿ ಮಾಲಕ ಗೋವರ್ಧನ್ ಹಾಗೂ ದೇವಸ್ವಂ ಮಂಡಳಿಯ ಸಿಬ್ಬಂದಿಗಳು ಸೇರಿ ಭಾರೀ ಒಳಸಂಚು ಹೂಡಿದ್ದರೆಂಬುದು ತನಿಖೆಯಲ್ಲಿ ಸ್ಪಷ್ಟಗೊಂಡಿದೆ ಎಂದೂ ನ್ಯಾಯಾಲಯಕ್ಕೆ ಸಲ್ಲಿಸಿದ …

ಇರಿಯಣ್ಣಿಯಲ್ಲಿ ಮತ್ತೆ ನಾಯಿ ಮೇಲೆ ದಾಳಿ ನಡೆಸಿದ ಚಿರತೆ

ಬೋವಿಕ್ಕಾನ: ಅಲ್ಪ ಬಿಡುವಿನ ಬಳಿಕ ಇರಿಯಣ್ಣಿಯಲ್ಲಿ ಚಿರತೆಯ ಭೀತಿ ಹುಟ್ಟಿಕೊಂಡಿದೆ. ಶನಿವಾರ ರಾತ್ರಿ ಇರಿಯಣ್ಣಿ ಕುಣಿಯೇರಿ ಎಂಬಲ್ಲಿ ಸಾಕು ನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ದಿರುವುದಾಗಿ ದೂರಲಾಗಿದೆ. ವೆಳ್ಳಾಟ್‌ನ  ನಾರಾಯಣನ್ ಎಂಬವರ ಮನೆಯ ಸಾಕು ನಾಯಿಯನ್ನು ಚಿರತೆ ಕೊಂಡೊ ಯ್ದಿದ್ದು, ನಾಯಿಯ ಮೇಲೆ ಚಿರತೆ ದಾಳಿ ನಡೆಸುವ ದೃಶ್ಯ ಮನೆಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.  ಸಮೀಪದ ಕಾಡಿನತ್ತ ನಾಯಿಯನ್ನು ಚಿರತೆ ಕೊಂಡೊ ಯ್ದಿದೆ ಎಂದು ತಿಳಿದುಬಂ ದಿದೆ. ಇತ್ತೀಚೆಗೆ ಮುಳಿಯಾರು ಪಂಚಾ ಯತ್‌ನ ಇರಿಯಣ್ಣಿ ಯಲ್ಲಿ ಹಲವು ನಾಯಿಗಳನ್ನು …