ಮಂಜೇಶ್ವರ ಚುನಾವಣಾ ತಕರಾರು ಪ್ರಕರಣ: ಮರುಪರಿಶೀಲನಾ ಅರ್ಜಿ ಹಿಂತೆಗೆದುಕೊಂಡ ರಾಜ್ಯ ಸರಕಾರ ; ಕೆ. ಸುರೇಂದ್ರನ್ ಮತ್ತಿತರರಿಗೆ ನಿರಾಳ
ಕಾಸರಗೋಡು: ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ೨೦೨೧ರಲ್ಲಿ ನಡೆದ ಚುನಾವಣೆಯಲ್ಲಿ ಲಂಚ ನೀಡಲಾಗಿದೆಯೆಂದು ಆರೋಪಿಸಿ ಬಿಜೆಪಿ ಮಾಜಿ ರಾಜ್ಯ ಅಧ್ಯಕ್ಷ ಕೆ. ಸುರೇಂದ್ರನ್ ಮತ್ತ್ತಿತರರ ವಿರುದ್ಧ ಹೂಡಲಾಗಿದ್ದ ಪ್ರಕರಣದಲ್ಲಿ ಅವರನ್ನು ದೋಷಮುಕ್ತಗೊಳಿಸಿ ಕಾಸರಗೋಡು ಜಿಲ್ಲಾ ಸೆಶನ್ಸ್ ನ್ಯಾಯಾಲಯ ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ರಾಜ್ಯ ಸರಕಾರ ಹಿಂತೆಗೆದುಕೊಂಡಿದೆ. ಇದರಿಂದಾಗಿ ಈ ಪ್ರಕರಣದಲ್ಲಿ ಆರೋಪಿಗಳಾಗಿ ಹೆಸರಿಸಲಾಗಿದ್ದ ಕೆ. ಸುರೇಂದ್ರನ್, ಬಿಜೆಪಿಯ ಕಾಸರಗೋಡಿನ ಇತರ ಐವರು ನೇತಾರರನ್ನು ನಿರಾಳಗೊಳಿಸುವಂತೆ ಮಾಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಪಿ ಉಮೇದ್ವಾರರಾಗಿ ಮಂಜೇಶ್ವರದಲ್ಲಿ …