ಮಾದಕದ್ರವ್ಯ ಸಾಗಾಟ ಪ್ರಕರಣ: ಆರೋಪಿಗೆ ಸಜೆ, ಜುಲ್ಮಾನೆ
ಕಾಸರಗೋಡು: ಮಾದಕದ್ರವ್ಯ ಸಾಗಿಸಿದ ಪ್ರಕರಣದ ಆರೋಪಿಗೆ ಕಾಸರಗೋಡು ಜಿಲ್ಲಾ ಸೆಶನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಸಾನು ಎಸ್ ಪಣಿಕ್ಕರ್ ೭ ವರ್ಷ ಕಠಿಣ ಸಜೆ ಮತ್ತು 1 ಲಕ್ಷ ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ಒಂದು ವರ್ಷ ಹೆಚ್ಚುವರಿ ಕಠಿಣ ಸಜೆ ಅನುಭವಿಸ ಬೇಕಾಗಿದೆಯೆಂದು ತೀರ್ಪಿನಲ್ಲಿ ತಿಳಿಸಲಾಗಿದೆ. ಹೊಸದುರ್ಗ ಆರಂಗಾಡಿ ಅರಾಯಿಕಡವು ನಿವಾಸಿ ಅಬ್ದುಲ್ ಶೆಫೀಕ್ (39) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. 2019 ಫೆಬ್ರವರಿ 13ರಂದು ಮುಳ್ಳೇರಿಯ-ಕುಂಟಾರಿನಲ್ಲಿ ಆದೂರು ಪೊಲೀಸರು ನಡೆಸಿದ …