ಏಳರ ಹರೆಯದ ಬಾಲಕನ ಅಪಹರಣ ಯತ್ನ: ತಂಡ ತಲುಪಿರುವುದಾಗಿ ಅಂದಾಜಿಸುವ ಕಾರಿನ ದೃಶ್ಯ ಸಿಸಿ ಕ್ಯಾಮರಾದಲ್ಲಿ ಪತ್ತೆ

ಕುಂಬಳೆ: ಸಹೋದರನಿಗೆ ಲಭಿಸುವ ಆಹಾರ ತರಲು ಅಂಗನವಾಡಿಗೆ ಹೋಗುತ್ತಿದ್ದ ಏಳರ ಹರೆಯದ ಬಾಲಕನನ್ನು ಕಾರಿನಲ್ಲಿ ತಲುಪಿದ ತಂಡ ಅಪಹರಿಸಲೆತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಎಡಿಜಿಪಿಯವರ ನಿರ್ದೇಶ ಪ್ರಕಾರ ಕುಂಬಳೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಭಾಸ್ಕರನಗರದ ಕ್ವಾರ್ಟರ್ಸ್‌ನಲ್ಲಿ ವಾಸಿಸುವ  ಕರ್ನಾಟಕದ ಹುಬ್ಬಳ್ಳಿ ನಿವಾಸಿಯಾದ  ಬಾಲಕನ ತಾಯಿ ನೀಡಿದ ದೂರಿನ ಪ್ರಕಾರ ಕೇಸು ದಾಖಲಿಸಲಾಗಿದೆ. ಕಳೆದ ಶುಕ್ರವಾರ ಮಧ್ಯಾಹ್ನ ಪ್ರಕರಣಕ್ಕೆ ಕಾರಣವಾದ ಘಟನೆ ನಡೆದಿದೆ. ತಂದೆ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಕ್ವಾರ್ಟರ್ಸ್‌ನಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳಿದ್ದರು. ತಮ್ಮನಿಗೆ ಉಚಿತವಾಗಿ …

ಯುವತಿ ನಾಪತ್ತೆ

ಕುಂಬಳೆ: ಯುವತಿ ನಾಪತ್ತೆಯಾದ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ. ಕುಂಬಳೆ ತಿಲಕನಗರದ ಸುಭೋದಯ ಎಂಬವರ ಪುತ್ರಿ ಕಾಜಲ್ (25) ಎಂಬಾಕೆ ಆಗಸ್ಟ್ 5ರಂದು ಬೆಳಿಗ್ಗೆ 10 ಗಂಟೆಗೆ ಮನೆಯಿಂದ ಹೊರ ಹೋದ ನಂತರ ಮನೆಗೆ ಹಿಂತಿರುಗಲಿಲ್ಲವೆಂದು ಆಕೆಯ ಸಹೋದರಿ ದೀಪ್ತಿ ದೂರು ನೀಡಿದ್ದು, ಅದರಂತೆ ಪೊಲೀಸರು ಮಿಸ್ಸಿಂಗ್ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ನಾಪತ್ತೆಯಾದ ಕಾಜಲ್ ವಿವಾಹಿತೆಯಾಗಿದ್ದು, ಆಕೆ ಒಂದು ಮಗುವಿನ ತಾಯಿಯೂ ಆಗಿದ್ದಾಳೆ. ನಾಪತ್ತೆಯಾದ ಬಳಿಕ ಆಕೆ ಮನೆಯವರನ್ನು ಕರೆದು ಮಗುವನ್ನು ಕರೆದೊಯ್ಯಲು ಬರುವುದಾಗಿ …

ಕಾಲಿಕಡವ್ ಮಾದಕ ಪದಾರ್ಥ ವಶ: ಸೂತ್ರಧಾರ ಎರ್ನಾಕುಳಂನಲ್ಲಿ ಸೆರೆ

ಕಾಸರಗೋಡು: ಕಾರಿನಲ್ಲಿ ಸಾಗಿಸುತ್ತಿದ್ದ 130 ಗ್ರಾಂ ಎಂಡಿಎಂಎ ವಶಪಡಿಸಿದ ಪ್ರಕರಣದ ಸೂತ್ರಧಾರ ಸೆರೆಯಾಗಿದ್ದಾನೆ. ಎರ್ನಾಕುಳಂ ನಿವಾಸಿಯಾದ ಆಬಿದ್ ಎಂಬಾತ ಸೆರೆಯಾದ ವ್ಯಕ್ತಿ. ಈತನನ್ನು ಚಂದೇರಕ್ಕೆ ತಲುಪಿಸಿ ಬಂಧನ ದಾಖಲಿಸಲಾಗುವುದು. ಎರ್ನಾಕುಳಂ, ಪೆರುಂಬಾವೂರ್ ಅರಕಪ್ಪೊಡಿ ನಿವಾಸಿಗಳಾದ ಪಿ.ಎ. ಅಬ್ದುಲ್ ಸಲಾಂ (27), ಕೆ.ಎಚ್. ಮುಹಮ್ಮದ್ ಹುಸೈನ್ (28), ಪಿ.ಎ. ಅಬ್ಬಾಸ್ (50) ಎಂಬಿವರನ್ನು ನಿನ್ನೆ ಬೆಳಿಗ್ಗೆ ಬಂಧಿಸಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಲಭಿಸಿದ ರಹಸ್ಯ ಮಾಹಿತಿ ಹಿನ್ನೆಲೆಯಲ್ಲಿ ಡ್ಯಾನ್ಸಾಪ್ ತಂಡ ಹಾಗೂ ಚಂದೇರ ಎಸ್‌ಐ ಮನು ಪಿ. ಚೆರಿಯಾನ್ …

ಯುವತಿ ನಾಪತ್ತೆ

ಹೊಸದುರ್ಗ: ಮನೆಯಿಂದ ಹೊರಹೋದ ಯುವತಿ ನಾಪತ್ತೆಯಾಗಿರುವುದಾಗಿ ದೂರಲಾಗಿದೆ. ವಲಿಯಪರಂಬ ಮಾವಿಲಕಡಪ್ಪುರಂ ನಿವಾಸಿಯಾದ 19ರ ಹರೆಯದ ಯುವತಿ ನಾಪತ್ತೆಯಾದವಳು. ಶನಿವಾರ ಮುಂಜಾನೆ 3 ಗಂಟೆಗೆ ಮನೆಯಿಂದ ಹೊರಹೋಗಿದ್ದು, ಆ ಬಳಿಕ ಹಿಂತಿರುಗಿಲ್ಲವೆಂದು ತಂದೆ ಚಂದೇರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಯುವತಿ ರಿಸ್ವಾನ್ ಎಂಬಾತನ ಜೊತೆಗೆ ತೆರಳಿರುವುದಾಗಿ ಶಂಕಿಸುತ್ತಿರುವುದಾಗಿ ತಂದೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಸುಬ್ರಹ್ಮಣ್ಯ ಭಟ್ ನಿಧನ

ಪೆರ್ಲ: ಕಜಂಪಾಡಿ ನರ್ಸಿಂಗ್ ಹೋಮ್‌ನ ಮಾಲಕ, ಡಾ| ಶ್ರೀಪತಿ ಭಟ್‌ರ ತಂದೆ ಕಜಂಪಾಡಿ ತರವಾಡು ಮನೆಯ ಸುಬ್ರಹ್ಮಣ್ಯ ಭಟ್ (99)ನಿನ್ನೆ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಇವರ ಪತ್ನಿ ಈ ಹಿಂದೆ ನಿಧನರಾಗಿದ್ದಾರೆ. ಮೃತರು ಇನ್ನೋರ್ವ ಪುತ್ರ ಮುಂಬೈ ಟಾಟಾ ಗ್ರೂಪ್ ನಿವೃತ್ತ ಉದ್ಯೋಗಿ ಬಾಲರಾಜ್ ಸಹಿತ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಮಂಗಲ್ಪಾಡಿ: ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ; ಡಿಫಿಯಿಂದ ಪ್ರತಿಭಟನೆ

ಮಂಜೇಶ್ವರ: ಮಂಜೇಶ್ವರ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದ ಒ.ಪಿ ವ್ಯವಸ್ಥೆ ಅಸ್ತವ್ಯಸ್ತಗೊಂಡಿದ್ದು, ಇದನ್ನು ಪ್ರತಿಭಟಿಸಿ ಡಿಫಿ ಮಂಜೇಶ್ವರ ಬ್ಲೋಕ್ ಸಮಿತಿ ನೇತೃತ್ವದಲ್ಲಿ ತಾಲೂಕು ಕಚೇರಿ ಮಾರ್ಚ್ ನಡೆಸಲಾಯಿತು. ಡಿಫಿ ಜಿಲ್ಲಾಧ್ಯಕ್ಷ ಎಂ.ವಿ. ರತೀಶ್ ಉದ್ಘಾಟಿಸಿದರು. ಬ್ಲೋಕ್ ಉಪಾಧ್ಯಕ್ಷ ಮುಹಮ್ಮದ್ ನೌಶಾದ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಜೊತೆ ಕಾರ್ಯದರ್ಶಿ ಸಾದಿಕ್ ಚೆರುಗೋಳಿ, ಬ್ಲೋಕ್ ಕೋಶಾಧಿಕಾರಿ ಮುಹಮ್ಮದ್ ಶಬೀರ್, ಉದಯ ಸಿ.ಎಚ್, ದೀಕ್ಷಿತ್ ಉಪ್ಪಳ, ವಿನಯ ಕುಮಾರ್ ಮಾತನಾಡಿದರು.ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ  ಸೋಲಾರ್ ಇ.ವಿ. ಚಾರ್ಜಿಂಗ್ ಸ್ಟೇಶನ್ ಉದ್ಘಾಟನೆಕುಂಬಳೆ: …

ಕಾಸರಗೋಡು ಬಿಲ್ಲವ ಸೇವಾಸಂಘದಿಂದ ಅಭಿನಂದನೆ

ಕಾಸರಗೋಡು: ಕಾಸರಗೋಡು ಜಿಲ್ಲಾ ಬಿಲ್ಲವ ಸೇವಾ ಸಂಘ ಆಶ್ರಯದಲ್ಲಿ ಅಭಿನಂದನೆ ಹಮ್ಮಿಕೊಳ್ಳಲಾಯಿತು. ಉಪ್ಪಳ ಅಂಬಾರು ಮಲರಾಯ ದೈವಸ್ಥಾನದ ಟ್ರಸ್ಟಿ ವೀರಪ್ಪ ಅಂಬಾರು ಉದ್ಘಾಟಿಸಿದರು. ಬಿಲ್ಲವ ಸೇವಾ ಸಂಘ ಜಿಲ್ಲಾ ಅಧ್ಯಕ್ಷ ಕೆ. ಕಮಲಾಕ್ಷ ಸುವರ್ಣ ಅಧ್ಯಕ್ಷತೆ ವಹಿಸಿದರು. ಕಳೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉನ್ನತ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು, ಸಮಾಜದ ಗಣ್ಯ ವ್ಯಕ್ತಿಗಳನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಕಾಸರಗೋಡು ನಗರಸಭಾ ಕೌನ್ಸಿಲರ್ ಕೆ.ಆರ್, ಹರೀಶ್, ಅಶೋಕ್ ಬಾಡೂರು, ಕೆ. ಸರೋಜಿನಿ, ಚಂದ್ರಶೇಖರ ಚಿಪ್ಲಿಕೋಟ, ಕೆ. ಸುರೇಶ್ ಸುವರ್ಣ, ಲವ ಮೀಪುಗುರಿ, …

ಜೀಪು ಚಾಲಕ ನಿಧನ

ಪೆರ್ಲ: ಹಿರಿಯ ಜೀಪು ಚಾಲಕ ರವೀಂದ್ರ ಶೆಟ್ಟಿ (58)ನಿಧನ ಹೊಂದಿದರು. ಮೂಲತಃ ಕರ್ನಾಟಕದ ವರಾಗಿದ್ದ ಇವರು ಎಣ್ಮಕಜೆಯ ಸೇರಾಜೆಯಲ್ಲಿ ವಾಸಿಸುತ್ತಿದ್ದರು. ನಿನ್ನೆ ಬೆಳಿಗ್ಗೆ ಕಿದೂರಿನ ತನ್ನ ಪುತ್ರಿಯ ಮನೆಯಿಂದ ಹೊರಡುತ್ತಿದ್ದ ಮಧ್ಯೆ ಕುಸಿದು ಬಿದ್ದರೆನ್ನಲಾಗಿದೆ. ತಕ್ಷಣವೇ ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲು ಸಾಧ್ಯವಾಗಿಲ್ಲ. ಮೃತರು ಪತ್ನಿ ಲತ ರೈ, ಮಕ್ಕಳಾದ ಸಿಂಚನ, ಸಂಜನ್, ಅಳಿಯ ಕಿಶೋರ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಪೊಸೋಟು ಹೆದ್ದಾರಿಯಲ್ಲಿ ಕರ್ನಾಟಕ ಸಾರಿಗೆ ಬಸ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ: ಹಲವರಿಗೆ ಗಾಯ

ಮಂಜೇಶ್ವರ: ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಚಾಲಕ ಸಹಿತ ಹಲವು ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡು ಅಪಾಯದಿಂದ ಪಾರಾದ ಘಟನೆ ನಡೆದಿದೆ. ನಿನ್ನೆ ಮಧ್ಯಾಹ್ನ ಕಾಸರಗೋಡಿನಿಂದ ಮಂಗಳೂರು ಭಾಗಕ್ಕೆ ತೆರಳುತ್ತಿದ್ದ ಬಸ್ ರಾಷ್ಟಿಯ ಹೆದ್ದಾರಿ ಪೊಸೋಟು ಜಂಕ್ಷನ್‌ನಲ್ಲಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಅಲ್ಲಿಂದ ಇನ್ನೊಂದು ಭಾಗದ ಡಿವೈಡರ್‌ಗೆ ಡಿಕ್ಕಿ ಹೊಡೆದು ನಿಂತಿದೆ. ಈ ಅಪಘಾತದಲ್ಲಿ ಚಾಲಕ ಹಾಗೂ ಮಹಿಳೆಯರು ಸೇರಿದಂತೆ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗೊಂ ಡಿದ್ದು, …

ಪಳ್ಳತ್ತಡ್ಕ ಶಾಲೆ ಶಿಕ್ಷಕ ಗುರುಪ್ರಸಾದ್‌ರನ್ನು ಸೇವೆಯಿಂದ ಅಮಾನತುಗೊಳಿಸಿದ ಕ್ರಮ ಖಂಡನೀಯ ಶಿಕ್ಷಕ ನಡೆಸುವ ಹೋರಾಟಕ್ಕೆ ಪೂರ್ಣ ಬೆಂಬಲ-ಕೆ.ಸುರೇಂದ್ರನ್

ಕಾಸರಗೋಡು: ಫ್ರೀಡಂ ಕ್ವಿಜ್ ಹೆಸರಿನಲ್ಲಿ ಪಳ್ಳತ್ತಡ್ಕ ಎಯುಪಿ ಶಾಲೆಯ ಶಿಕ್ಷಕ ಗುರುಪ್ರಸಾದ್‌ರನ್ನು ಸೇವೆಯಿಂದ ಅಮಾನತುಗೊಳಿಸಿದ ಕ್ರಮ ಅತ್ಯಂತ ಖಂಡನೀಯವಾಗಿ ದೆಯೆಂದು ಬಿಜೆಪಿ ನೇತಾರ ಕೆ.ಸುರೇಂದ್ರನ್ ತಿಳಿಸಿದ್ದಾರೆ.  ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂ ಧಿಸಿ ಸುಧೀರ್ಘಕಾಲ ಜೈಲುಶಿಕ್ಷೆ ಅನುಭ ವಿಸಿದ್ದು, ವಿ.ಡಿ. ಸಾವರ್ಕರ್ ಅವರಾಗಿದ್ದಾ ರೆಂಬುವುದು  ಐತಿಹಾಸಿಕ ಸತ್ಯವಾಗಿದೆ. ವೀರ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರಲ್ಲವೆಂದು ಇದುವರೆಗೆ ಯಾರೂ ಹೇಳಿಲ್ಲ. ಅವರು ಸುಧೀರ್ಘ ಕಾಲ ಜೈಲಿನಲ್ಲಿದ್ದರೆಂಬ ವಿಷಯವನ್ನೂ ಯಾರೂ ನಿರಾಕರಿಸುವು ದಿಲ್ಲ. ಅವರ   ವಿರುದ್ಧ ಕಾಂಗ್ರೆಸ್ ಮತ್ತು ಎಡ-ಜಿಹಾದಿ ಪಡೆಗಳು ಹೊರಿಸಿದ …