ವಿಧಾನಸಭಾ ಚುನಾವಣೆ: ಜಿಲ್ಲೆಯಲ್ಲಿ ನಿಷೇಧಾಜ್ಞೆ ಜ್ಯಾರಿ
ಕಾಸರಗೋಡು: ಕೇರಳ ವಿಧಾನಸಭೆಗೆ ನಡೆಯುವ ಚುನಾವಣೆಯನ್ನು ಶಾಂತಿ ಹಾಗೂ ನ್ಯಾಯಯುತವಾಗಿ ನಡೆಸಲು ಕಾಸರಗೋಡು ಜಿಲ್ಲಾ ಮೆಜಿಸ್ಟ್ರೇಟ್ ಆಗಿರುವ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ನಿಷೇಧಾಜ್ಞೆ ಜ್ಯಾರಿಗೊಳಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ 163ನೇ ಪರಿಚ್ಚೇದ ಪ್ರಕಾರ ಈ ನಿಷೇಧಾಜ್ಞೆ ಆದೇಶ ಜ್ಯಾರಿಗೊಳಿಸಲಾಗಿದೆ. ಇದು ನಿನ್ನೆ ಸಂಜೆಯಿಂದ ಜ್ಯಾರಿಗೊಂಡಿದ್ದು ಎ. 10ರಂದು ಬೆಳಿಗ್ಗೆ ೬ಗಂಟೆತನಕ ಮುಂದುವರಿಯಲಿದೆ. ಸ್ವತಂತ್ರ ಹಾಗೂ ನ್ಯಾಯಯುತವಾದ ರೀತಿಯಲ್ಲಿ ಚುನಾವಣೆಯನ್ನು ಖಾತರಿಪಡಿಸುವ ಹಾಗೂ ಮತದಾನ ವೇಳೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ಉದ್ದೇಶದಿಂದ ಇಂತಹ ಕಠಿಣ ಕ್ರಮ …