ಅಂತಾರಾಜ್ಯ ಮದ್ಯ ಸಾಗಾಟ ಸೂತ್ರಧಾರ ಬಂಧನ
ಕುಂಬಳೆ: ರಾಜ್ಯಕ್ಕೆ ಹೊರಗಿನಿಂದ ಮದ್ಯ ಸಾಗಾಟ ನಡೆಸುವ ದಂಧೆಯ ಸೂತ್ರಧಾರನನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಕರ್ನಾಟಕದ ಹೊನ್ನಾವರ ಬಜಾರ್ ರೋಡ್ನ ರಾಧಾಕೃಷ್ಣ ಎಸ್ ಕಮ್ಮತ್(61) ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. 2023 ಜುಲೈ 9ರಂದು ಮಿನಿ ಲಾರಿಯಲ್ಲಿ 2484 ಲೀಟರ್ ಗೋವಾ ಮದ್ಯವನ್ನು ಕೇರಳಕ್ಕೆ ಸಾಗಿಸಿದ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದಾನೆ. ಈತನ ವಿರುದ್ಧ ಕರ್ನಾಟಕ ಹಾಗೂ ಗೋವಾದಲ್ಲಿ ಮದ್ಯ ಸಾಗಿಸಿದ ಆರೋಪದಂತೆ ಕೇಸುಗಳಿರುವುದಾಗಿ ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಮಂಜೇಶ್ವರ ಎಕ್ಸೈಸ್ ಅಬಕಾರಿ ಚೆಕ್ ಪೋಸ್ಟ್ನಲ್ಲಿ ಗೋವಾ ಮದ್ಯ ವಶಪಡಿಸಿದ …