ಆಲ್ ಕೇರಳ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಈಸ್ಟ್ ಘಟಕ ವತಿಯಿಂದ ಗಣರಾಜ್ಯೋತ್ಸವ ಆಚರಣೆ
ಮಧೂರು: ಗಣರಾಜ್ಯೋತ್ಸ ದಂಗವಾಗಿ ಉಳಿಯ ಪರಕ್ಕಿಲ ಅಂಗನವಾಡಿ ಮಕ್ಕಳಿಗೆ ಆಲ್ ಕೇರಳ ಫೋಟೋಗ್ರಾಫರ್ಸ್ ಅಸೋಸಿ ಯೇಶನ್ ಈಸ್ಟ್ ಘಟಕದ ನೇತೃತ್ವದಲ್ಲಿ ಕುರ್ಚಿ ವಿತರಿಸಲಾಯಿತು. ವಾರ್ಡ್ ಪ್ರತಿನಿಧಿ ಶಮೀಮ ಶರೀಫ್ ಧ್ವಜಾರೋಹಣಗೈದರು. ಅಂಗನವಾಡಿ ಶಿಕ್ಷಕಿ ವಿಮಲ ಯು ಸ್ವಾಗತಿಸಿದರು. ಈಸ್ಟ್ ಯೂನಿಟ್ ಅಧ್ಯಕ್ಷ ರಾಜಶೇಖರನ್, ಕೋಶಾಧಿಕಾರಿ ಶ್ರೀಕಾಂತ್ ಶುಭ ಕೋರಿದರು. ಮನೀಶ್,ಅಜಿತ್ ಕುಮಾರ್ ಉಪಸ್ಥಿತರಿದ್ದರು. ಸಿಹಿ ತಿಂಡಿ ಹಂಚಲಾಯಿತು.