ಯುವಕ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಕುಂಬಳೆ: ಯುವಕನೋರ್ವ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಸೋಂಕಾಲು ಶಾಂತಿಗುರಿಯ ಕರುಣಾಕರ ಎಂಬವರ ಪುತ್ರ ಶಶಿಕುಮಾರ್ (19) ಮೃತ ವ್ಯಕ್ತಿ.  ಇವರು ಲೈಟ್ ಆಂಡ್ ಸೌಂಡ್ಸ್ ಸಂಸ್ಥೆಯ ನೌಕರನಾಗಿದ್ದರು. ನಿನ್ನೆ ಬೆಳಿಗ್ಗೆ ಮನೆಯಲ್ಲಿ ಇವರು ಕಾಣದ ಹಿನ್ನೆಲೆಯಲ್ಲಿ ನಡೆಸಿದ ಶೋಧ ವೇಳೆ ಮನೆಯ ಹಿಂಭಾಗದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತದೇಹವನ್ನು ಮಂಗಲ್ಪಾಡಿ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂತ್ಯ ಸಂಸ್ಕಾರ ನಡೆಸಲಾಯಿತು. ಮೃತರು ತಂದೆ, ತಾಯಿ ಸುಂದರಿ, ಸಹೋದರರಾದ ಕೌಶಿಕ್, ಸುಶಾಂತ್ ಹಾಗೂ …

ಎದೆನೋವು: ಚಿಕಿತ್ಸೆಯಲ್ಲಿದ್ದ  ವ್ಯಕ್ತಿ ನಿಧನ

ನೀರ್ಚಾಲು: ಎದೆನೋವು ಕಾಣಿಸಿ ಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ  ವ್ಯಕ್ತಿ ಮೃತಪಟ್ಟರು. ಬೇಳ ಕುಮಾರಮಂಗಲ ಲೈಫ್ ಕಾಲನಿಯ ನಿವಾಸಿ ಚಿಮ್ಮಿಣಿಯ ಡ್ಕದ ನಾರಾಯಣ ಮುಖಾರಿ (69) ಮೃತಪಟ್ಟ ವ್ಯಕ್ತಿ.ನಿನ್ನೆ ಮುಂಜಾನೆ ೪ ಗಂಟೆ ವೇಳೆ ಎದೆನೋವು ಕಾಣಿಸಿಕೊಂಡ ಇವರನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಿದರೂ ಜೀವ ರಕ್ಷಿಸಲಾಗಲಿಲ್ಲ. ಮೃತರು ಪತ್ನಿ ಜಲಜಾ, ಮಕ್ಕಳಾದ ಪ್ರವೀಣ್ ಕುಮಾರ್, ನವೀನ ಕುಮಾರಿ, ದುರ್ಗಾಪರ ಮೇಶ್ವರಿ, ಅನ್ನಪೂರ್ಣೇಶ್ವರಿ (ಬದಿ ಯಡ್ಕ ಪಂ. ಹಸಿರು ಕ್ರಿಯಾ ಸೇನೆ ಸದಸ್ಯೆ), …

ಕೋಳಿ ಅಂಕ: ಮೂವರು ಸೆರೆ; 89,510 ರೂ., ಎರಡು ಕೋಳಿಗಳ ವಶ

ಉಪ್ಪಳ: ಪಾವೂರು ಮುಡಿಮಾರ್‌ನಲ್ಲಿ  ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ.  ಕೋಳಿ ಅಂಕ ಸ್ಥಳದಿಂದ 89,510 ರೂ. ವಶಪಡಿಸಲಾಗಿದೆ. ಕೆದುಂಬಾಡಿ ನೆತ್ತಿಲಪದವು ನಿವಾಸಿ  ರೋಹಿತ್ ರಾಜ್ (30),  ಬಂಟ್ವಾಳ ಮುಡಿಪು ವಿನ ನಿತೀಶ್ (29),  ಸವಣೂರು ಪಾತೂರಿನ ದೇವದಾಸ್ (43) ಎಂಬಿವರು ಬಂಧಿತ ವ್ಯಕ್ತಿಗಳಾಗಿ ದ್ದಾರೆ. ನಿನ್ನೆ ಸಂಜೆ 4.30ರ ವೇಳೆ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭಿಸಿದ ಮಂಜೇಶ್ವರ ಎಸ್‌ಐಗಳಾದ ವೈಷ್ಣವ್ ರಾಮಚಂದ್ರನ್,ಉಮೇಶ್ ಕೆ.ಆರ್ ನೇತೃತ್ವದಲ್ಲಿ ಪೊಲೀಸರು …

ಉಸಿರಾಟ ತೊಂದರೆ: ಮೂರು ವರ್ಷದ ಬಾಲಕ ಮೃತ್ಯು

ಕಾಸರಗೋಡು: ಉಸಿರಾಟ ತೊಂದರೆಗೊಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಮೂರು ವರ್ಷದ   ಬಾಲಕ ಸಾವನ್ನಪ್ಪಿದ ಘಟನೆ  ನಡೆದಿದೆ. ಮೊಗ್ರಾಲ್ ಪುತ್ತೂರು ಮಜಲ್‌ನ ಜಗದಾಂಬ ನಿಲಯದ ಗಲ್ಫ್ ಉದ್ಯೋಗಿ ಪ್ರಶಾಂತ್ ಕುಮಾರ್-ಮಾಳವಿಕ ದಂಪತಿ ಪುತ್ರ  ಅಶ್ವಿಕ್ ಪಿ. ಸಾವನ್ನಪ್ಪಿದ ಬಾಲಕ. ಉಸಿರಾಟ ತೊಂದರೆಗೊಳಗಾದ ಬಾಲಕನನ್ನು ಈ ತಿಂಗಳ 17ರಂದು ವಿದ್ಯಾನಗರದ ಆಸ್ಪತ್ರೆಯೊಂದರಲ್ಲಿ ಮೊದಲು ಚಿಕಿತ್ಸೆ ನೀಡಲಾಗಿತ್ತು. ನಂತರ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಸಾಗಿಸಿ ಚಿಕಿತ್ಸೆ ನೀಡಿ ಬಳಿಕ ಅಲ್ಲಿಂದ ಬಿಡುಗಡೆ ಗೊಳಿಸಲಾಗಿತ್ತು.  ಮೊನ್ನೆ ರಾತ್ರಿ ಬಾಲಕನಿಗೆ ಮತ್ತೆ ಉಸಿರಾಟ ತೊಂದರೆ ಅನುಭವಗೊಂಡಾಗ …

ಬೈಕ್ ತಡೆದು ನಿಲ್ಲಿಸಿ ಸವಾರನಿಗೆ ಇರಿತ: ಇಬ್ಬರ ವಿರುದ್ಧ ಕೇಸು

ಉಪ್ಪಳ: ಕಾರಿನಲ್ಲಿ ತಲುಪಿದ ತಂಡ ಬೈಕ್ ತಡೆದು ನಿಲ್ಲಿಸಿ ಸವಾರನಿಗೆ ಇರಿದು ಗಾಯಗೊಳಿಸಿದ ಬಗ್ಗೆ ದೂರಲಾಗಿದೆ. ಉಪ್ಪಳ ಕೋಡಿಬೈಲು ನಿವಾಸಿ ಜಕರಿಯ (61) ಎಂಬವರು ಇರಿತದಿಂದ ಗಾಯಗೊಂಡಿದ್ದಾರೆ.  ಈ ಸಂಬಂಧ ಬಟ್ಯಪದವು ನಿವಾಸಿ ರಜಾಕ್ ಸಹಿತ ಇಬ್ಬರ ವಿರುದ್ಧ ಜಾಮೀನುರಹಿತ ಕೇಸು ದಾಖಲಿಸಿಕೊಂಡಿರುವುದಾಗಿ ಮಂಜೇಶ್ವರ ಪೊಲೀಸರು ತಿಳಿಸಿದ್ದಾರೆ. ನಿನ್ನೆ ಸಂಜೆ ೪ ಗಂಟೆಗೆ ಘಟನೆ ನಡೆದಿದೆ.  ಜಕರಿಯ ಬೈಕ್‌ನಲ್ಲಿ  ವರ್ಕಾಡಿ ಭಾಗದಿಂದ ಉಪ್ಪಳ ಕಡೆಗೆ ತೆರಳುತ್ತಿದ್ದಾಗ ಕಾರಿನಲ್ಲಿ ತಲುಪಿದ ರಜಾಕ್ ಸಹಿತ ಇಬ್ಬರು ತಡೆದು ನಿಲ್ಲಿಸಿ ಹಣ …

ಎಣ್ಮಕಜೆ ಪಂ. ನಲ್ಲಿ ಲೀಗ್ ಪದಾಧಿಕಾರಿಗಳ ರಾಜೀನಾಮೆಯನ್ನು ತಿರಸ್ಕರಿಸಿದ ಮಂಡಲ ಸಮಿತಿ: ಮುಂದುವರಿಯುತ್ತಿರುವ ವಿವಾದ

ಪೆರ್ಲ: ಎಣ್ಮಕಜೆ ಪಂಚಾಯತ್ ಮುಸ್ಲಿಂ ಲೀಗ್ ಪದಾಧಿಕಾರಿಗಳ ರಾಜೀನಾಮೆಯನ್ನು ಮಂಡಲ ಸಮಿತಿ ತಿರಸ್ಕರಿಸಿದೆ. ವಿಧಾನಸಭಾ ಚುನಾವಣೆ ಸಮೀಪದಲ್ಲೇ ಇರುವಾಗ ವಿವಾದಗಳಿಂದ ದೂರ ನಿಲ್ಲಲು ಹಾಗೂ ಸಂಘಟನೆಯನ್ನು ಬಲಪಡಿಸಲಿರುವ ಕ್ರಮಗಳಿಗೆ ಮುಂದಾಗಬೇಕೆಂದು ಪಕ್ಷದ ನೇತೃತ್ವ ಪಂಚಾಯತ್ ಪದಾಧಿಕಾರಿಗಳಲ್ಲಿ ಹಾಗೂ ಕಾರ್ಯಕರ್ತರಲ್ಲಿ ನಿರ್ದೇಶಿಸಿದೆ. 18 ಸದಸ್ಯರ ಪಂಚಾಯತ್ ಬೋರ್ಡ್‌ನಲ್ಲಿ ಕಾಂಗ್ರೆಸ್ ಹಾಗೂ ಮುಸ್ಲಿಂ ಲೀಗ್‌ಗೆ ತಲಾ ೪ರಂತೆ ಸದಸ್ಯರಿದ್ದಾರೆ. ಈ ಹಿನ್ನೆಲೆಯಲ್ಲಿ ಪಂಚಾಯತ್ ಅಧ್ಯಕ್ಷ ಸ್ಥಾನವನ್ನು ಲೀಗ್ ಆಗ್ರಹಿಸಿತ್ತು. ಆದರೆ ಆ ಹುದ್ದೆ ನೀಡಲು ಸಾಧ್ಯವಿಲ್ಲವೆಂದು, ಹಿಂದಿನ ಕಾಲದಲ್ಲಿ ನಡೆದುಕೊಂಡು …

ಕುಂಬಳೆಯಲ್ಲಿ ಬಸ್ ನಿಲ್ದಾಣ ಕಂ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಮೊದಲ ಪರಿಗಣನೆ-ಅಧ್ಯಕ್ಷ ವಿ.ಪಿ. ಅಬ್ದುಲ್ ಖಾದರ್

ಕುಂಬಳೆ: ಕುಂಬಳೆಯಲ್ಲಿ ಬಸ್ ನಿಲ್ದಾಣ ಹಾಗೂ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಮೊದಲ ಪರಿಗಣನೆ ನೀಡುವುದಾಗಿ ಕುಂಬಳೆ ಪಂಚಾಯತ್‌ನ ನೂತನ ಅಧ್ಯಕ್ಷ ವಿ.ಪಿ. ಅಬ್ದುಲ್ ಖಾದರ್ ತಿಳಿಸಿ ದ್ದಾರೆ.  ಅಧ್ಯಕ್ಷರಾಗಿ   ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಇವರು ಕಾರವಲ್‌ನೊಂದಿಗೆ ಈ ಬಗ್ಗೆ ತಿಳಿಸಿದ್ದಾರೆ. ಕುಂಬಳೆ ಪೇಟೆಯ  ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು.  ಕಾಸರಗೋಡು ಹಾಗೂ ಮಂಗಳೂರು ಮಧ್ಯೆ  ಪ್ರಧಾನ ಪೇಟೆಯಾಗಿರುವ ಕುಂಬಳೆಯಲ್ಲಿ ಹಲವು  ಅಭಿವೃದ್ಧಿ ಕಾರ್ಯಗಳು ನಡೆಯಬೇಕಾಗಿದೆ. ಬಸ್ ನಿಲ್ದಾಣ, ಶಾಪಿಂಗ್ ಕಾಂಪ್ಲೆಕ್ಸ್‌ಗೆ ಪೇಟೆಯಲ್ಲಿ ಸ್ಥಳ ಲಭ್ಯವಾಗದಿದ್ದಲ್ಲಿ ಬಿಒಟಿ …

ಪೈವಳಿಕೆ, ಮೀಂಜ ಪಂಚಾಯತ್‌ನಲ್ಲಿ ಯುಡಿಎಫ್ ಅಧಿಕಾರಕ್ಕೆ: ಆಡಳಿತ ಸಮಿತಿ ಅಧಿಕಾರ ಸ್ವೀಕಾರ

ಪೈವಳಿಕೆ: ಪೈವಳಿಕೆ ಪಂಚಾಯತ್‌ನಲ್ಲಿ ಯುಡಿಎಫ್ ಅಧಿಕಾರಕ್ಕೇರಿದ್ದು, ಅಧ್ಯಕ್ಷರಾಗಿ 20ನೇ ವಾರ್ಡಿನ ಮುಸ್ಲಿಂಲೀಗ್ ಸದಸ್ಯೆ ಬದ್ರುನ್ನೀಸ ಸಲೀಮ್ ಹಾಗೂ ಉಪಾಧ್ಯಾಕ್ಷರಾಗಿ 9ನೇ ವಾರ್ಡ್ನ ಕಾಂಗ್ರೆಸ್ ಸದಸ್ಯ ರಾಘವೇಂದ್ರ ಭಟ್ ಆಯ್ಕೆಗೊಂಡಿದ್ದಾರೆ. ಪಂಚಾಯತ್ ಒಟ್ಟು 21 ವಾರ್ಡ್ಗಳನ್ನು ಹೊಂದಿದೆ. ಯುಡಿಎಫ್-9, ಬಿಜೆಪಿ-5, ಎಡರಂಗ-6, ಸ್ವತಂತ್ರ-1 ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ. ಪಂಚಾಯತ್ ಅಧ್ಯಕ್ಷ ಹಾಗೂ ಉಪಾಧ್ಯಾಕ್ಷರ ಚುನಾವಣೆಯಲ್ಲಿ ಬದ್ರುನ್ನೀಸ ಸಲೀಮ್‌ರಿಗೆ ಹಾಗೂ ರಾಘವೇಂದ್ರ ಭಟ್‌ರಿಗೆ ತಲಾ 9 ಮತಗಳು, ಬಿಜೆಪಿಯಿಂದ ಅಧ್ಯಕ್ಷರ ಸ್ಥಾನಕ್ಕೆ ಸ್ಪರ್ಧಿಸಿದ ಸುಮನ.ಜಿ ಭಟ್ ಹಾಗೂ ಉಪಾಧ್ಯಾಕ್ಷರ ಸ್ಥಾನಕ್ಕೆ ಸ್ಪರ್ಧಿಸಿದ …

ಜಿಲ್ಲೆಯ 18 ಪಂಚಾಯತ್‌ಗಳಲ್ಲಿ ಯುಡಿಎಫ್, 14ರಲ್ಲಿ ಎಲ್‌ಡಿಎಫ್, 5ರಲ್ಲಿ ಬಿಜೆಪಿ

ಕಾಸರಗೋಡು: ಜಿಲ್ಲೆಯ ಒಟ್ಟು 38 ಗ್ರಾಮ ಪಂಚಾಯತ್‌ಗಳ ಪೈಕಿ 37ರಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಶನಿವಾರ ನಡೆದಿದೆ. ಇದರಲ್ಲಿ 18 ಪಂಚಾಯತ್‌ಗಳಲ್ಲಿ ಯುಡಿಎಫ್, 14ರಲ್ಲಿ ಎಲ್‌ಡಿಎಫ್, ೫ರಲ್ಲಿ ಬಿಜೆಪಿ ಅಧಿಕಾರಕ್ಕೇರಿದೆ. ಯುಡಿಎಫ್‌ನಲ್ಲಿ 12 ಪಂಚಾಯತ್‌ಗಳಲ್ಲಿ ಅಧ್ಯಕ್ಷ ಸ್ಥಾನ ಮುಸ್ಲಿಂ ಲೀಗ್‌ಗೆ, 5 ಪಂ.ಗಳಲ್ಲಿ ಕಾಂಗ್ರೆಸ್‌ಗೆ ಲಭಿಸಿದೆ. ಇದೇ ವೇಳೆ ಯುಡಿಎಫ್‌ಗೆ ಬಹುಮತವುಳ್ಳ ದೇಲಂಪಾಡಿ ಪಂಚಾಯತ್‌ನಲ್ಲಿ ಸಿಪಿಎಂ ಬಂಡುಕೋರ ನೇತಾರ ಎ. ಮುಸ್ತಫ ಹಾಜಿ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಎಲ್‌ಡಿಎಫ್‌ಗೆ ಅಧಿಕಾರ ಲಭಿಸಿದ 14 ಪಂಚಾಯತ್‌ಗಳಲ್ಲೂ ಅಧ್ಯಕ್ಷ ಸ್ಥಾನ …

ಮೀಂಜದಲ್ಲಿ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ

ಮೀಯಪದವು : ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ನ 141ನೇ ಸಂಸ್ಥಾಪನಾ ದಿನವನ್ನು ಆಚರಿಸ ಲಾಯಿತು. ಮೀಂಜ ಮಂಡಲ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಮೀಯಪದವಿನ ಪಕ್ಷದ ಕಚೇರಿಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಹರ್ಷಾದ್ ವರ್ಕಾಡಿ ಕೇಕ್ ಕತ್ತರಿಸಿ ಚಾಲನೆ ನೀಡಿದರು. ಮಂಡಲ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ದಾಮೋದರ ಅಧ್ಯಕ್ಷತೆ ವಹಿಸಿದ್ದರು. ಮಂಜೇಶ್ವರ ಬ್ಲಾಕ್ ಪಂಚಾಯತ್ ಉಪಾಧ್ಯಕ್ಷೆ ಕಮಲಾಕ್ಷಿ ಕೆ, ಮೀಂಜ ಪಂಚಾಯತ್ ಉಪಾಧ್ಯಕ್ಷೆ ಉಷಾ ಪೂಂಜಾ, ಪಂಚಾಯತ್ ಸದಸ್ಯೆ ಸೌಮ್ಯ ಕಳಿಯೂರು, ವರ್ಕಾಡಿ ಸೇವಾ ಸಹಕಾರಿ ಬ್ಯಾಂಕ್ …