ತಲಕ್ಲಾಯಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಳವು: ಹಲವು ಬೆರಳಚ್ಚು ಪತ್ತೆ
ಕಾಸರಗೋಡು: ಪರವನಡ್ಕ ತಲಕ್ಲಾಯಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನಡೆದ ಕಳವಿಗೆ ಸಂಬಂಧಿಸಿ ಬೆರಳಚ್ಚು ತಜ್ಞರು ನಡೆಸಿದ ಪರಿಶೀಲನೆಯಲ್ಲಿ ಅಲ್ಲಿಂದ ಹಲವು ಬೆರಳಚ್ಚುಗಳನ್ನು ಪತ್ತೆಹಚ್ಚಿದ್ದಾರೆ. ಶನಿವಾರದಂದು ರಾತ್ರಿ ಈ ದೇಗುಲದಲ್ಲಿ ಕಳವು ನಡೆದಿದೆ. ಅರ್ಚಕರು ನಿನ್ನೆ ಬೆಳಿಗ್ಗೆ ದೇವಸ್ಥಾನಕ್ಕೆ ಆಗಮಿಸಿದಾಗಲಷ್ಟೇ ಕಳವು ನಡೆದ ವಿಷಯ ಗಮನಕ್ಕೆ ಬಂದಿದೆ. ಈ ಬಗ್ಗೆ ಕ್ಷೇತ್ರದ ಉಪಾಧ್ಯಕ್ಷ ಕೆ. ಆನಂದ್ ನೀಡಿದ ದೂರಿನಂತೆ ಮೇಲ್ಪರಂಬ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ವಿಷಯ ತಿಳಿದ ಊರವರೂ ಭಾರೀ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಆಗಮಿಸಿದರು. …
Read more “ತಲಕ್ಲಾಯಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಳವು: ಹಲವು ಬೆರಳಚ್ಚು ಪತ್ತೆ”