ನಾಪತ್ತೆಯಾಗಿದ್ದ ಯುವಕನ ಮೃತದೇಹ ಬಾವಿಯಲ್ಲಿ ಪತ್ತೆ
ಉಪ್ಪಳ: ನಾಪತ್ತೆಯಾಗಿದ್ದ ಯುವಕ ಬಾವಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ವರ್ಕಾಡಿ ಬಟ್ಯಡ್ಕ ನಿವಾಸಿ ದಿ| ಪೂವಪ್ಪ ಬೆಳ್ಚಾಡರ ಪುತ್ರ ಗಣೇಶ್ ಬಿ (35) ಮೃತಪಟ್ಟ ವ್ಯಕ್ತಿ. ಸೆಂಟ್ರಿಂಗ್ ಕಾರ್ಮಿಕನಾಗಿದ್ದ ಇವರು ನವಂಬರ್ 20ರಂದು ಮುಂಜಾ ನೆಯಿಂದ ನಾಪತ್ತೆಯಾಗಿದ್ದರು. ನಿನ್ನೆ ಕೂಡಾ ಇವರು ಮನೆಗೆ ತಲುಪದ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ಆರಂಭಿಸಿದ್ದರು. ಈ ಮಧ್ಯೆ ನೆರೆಮನೆಯ ಬಾವಿ ಸಮೀಪ ಗಣೇಶರ ಚಪ್ಪಲಿ ಪತ್ತೆಯಾಗಿತ್ತು. ಇದರಿಂದ ಬಾವಿಯಲ್ಲಿ ಶೋಧ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಊರವರು ಮೇಲೆತ್ತಿ ಮಂಗಲ್ಪಾಡಿ ಆಸ್ಪತ್ರೆಗೆ …