ಸೀಟು ವಿಭಜನೆ ತರ್ಕ: ಕಾಸರಗೋಡು ಡಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನೇತಾರರ ಮಧ್ಯೆ ಹೊಡೆದಾಟ ; ಅಮಾನತು

ಕಾಸರಗೋಡು: ಕಾಂಗ್ರೆಸ್‌ನಲ್ಲಿ ಸೀಟು ವಿಭಜನೆ ತರ್ಕದ ಹಿನ್ನೆಲೆಯಲ್ಲಿ ಕಾಸರಗೋಡು ಡಿಸಿಸಿ ಕಚೇರಿಯಲ್ಲಿ ನೇತಾರರು ಪರಸ್ಪರ ಹೊಡೆದಾಡಿಕೊಂಡ ಘಟನೆ ನಡೆದಿದೆ. ಡಿಸಿಸಿ ಉಪಾಧ್ಯಕ್ಷ ಜೇಮ್ಸ್‌ಪಂದಮಾಕಲ್ ಹಾಗೂ ಡಿ.ಕೆ.ಟಿ.ಎಫ್ ಜಿಲ್ಲಾಧ್ಯಕ್ಷ ವಾಸು ದೇವನ್ ಪರಸ್ಪರ ಹೊಡೆದಾಡಿ ಕೊಂಡಿದ್ದಾರೆ. ಈಸ್ಟ್ ಎಳೇರಿ ಪಂಚಾಯತ್‌ನಲ್ಲಿ ಸೀಟು ವಿಭಜನೆಗೆ ಸಂಬಂಧಿಸಿ ಹೊಡೆದಾಟ ನಡೆದಿರುವು ದಾಗಿ ಹೇಳಲಾಗುತ್ತಿದೆ. ಈ ಹಿಂದೆ ಕಾಂಗ್ರೆಸ್‌ನಿಂದ ದೂರವಾದ ಜೇಮ್ಸ್ ಪಂದಮಾಕಲ್ ಡಿಡಿಎಫ್ ಎಂಬ ಸಂಘಟನೆಯನ್ನು ರೂಪೀಕರಿಸಿದ್ದರು. ಅನಂತರ ಚರ್ಚೆ ನಡೆಸಿ ಕಳೆದ ವರ್ಷ ಅವರ ಸಹಿತ ಏಳು ಮಂದಿಯನ್ನು ಕಾಂಗ್ರೆಸ್‌ಗೆ …

ಆರ್ಲಪದವು ಪರಿಸರದ ಸಿಸಿ ಟಿವಿಯಲ್ಲಿ ಕಂಡುಬಂದ ಪ್ರಾಣಿ ಚಿರತೆಯೇ? ಸ್ಥಳೀಯರಲ್ಲಿ ಮತ್ತೆ ಆತಂಕ

ಬೆಳ್ಳೂರು:  ಬೆಳ್ಳೂರು, ಎಣ್ಮಕಜೆ ಪಂಚಾಯತ್ ಗಡಿ ಪ್ರದೇಶದಲ್ಲಿ  ಚಿರತೆ ಕಂಡುಬಂದಿರುವುದು ಸ್ಥಳೀಯರಲ್ಲಿ ಮತ್ತೆ ಭೀತಿಗೆ ಕಾರಣವಾಗಿದೆ.  ಬೇಡಡ್ಕ ಪಂಚಾಯತ್‌ನ ಕೊಳತ್ತೂರಿನಿಂದ ಅರಣ್ಯ ಇಲಾಖೆ ಬೋನಿನಲ್ಲಿ ಸೆರೆಹಿಡಿದ ಚಿರತೆಯನ್ನು ಕೇರಳ-ಕರ್ನಾಟಕ ವ್ಯಾಪ್ತಿಯ ಬಂಟಾಜೆ ರಕ್ಷಿತಾರಣ್ಯ, ಪಾಣಾಜೆ, ಆರ್ಲಪದವು  ಜನವಸತಿ ಪ್ರದೇಶದಲ್ಲಿ  ತೆರೆದುಬಿಟ್ಟಿದ್ದರೆಂದು ಈ ಹಿಂದೆ ವಿವಾದ ಸೃಷ್ಟಿಯಾಗಿತ್ತು. ಈ ಪರಿಸರದಲ್ಲಿ ಕಳೆದ ಬುಧವಾರ ರಾತ್ರಿ  ಚಿರತೆಯನ್ನು ಹೋಲುವ ಪ್ರಾಣಿಯೊಂದರನ್ನು ಸ್ಥಳೀಯನಾದ ಓರ್ವರು ದೇವಸ್ಥಾನದಿಂದ ಮರಳುತ್ತಿದ್ದ ವೇಳೆ ಕಂಡಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆರ್ಲಪದವು ಬದ್ರಿಯಾ ಮಸೀದಿಯಲ್ಲಿರುವ ಸಿಸಿ ಟಿವಿಯನ್ನು ಪರಿಶೀಲಿಸಿದಾಗ  …

ಕುಖ್ಯಾತ ಕಳವು ಆರೋಪಿ ತೊರಪ್ಪನ್ ಸಂತೋಷ್ ಮೇಲ್ಪರಂಬದಲ್ಲಿ ಸೆರೆ

ಕಾಸರಗೋಡು: ಕುಖ್ಯಾತ ಕಳವು ಆರೋಪಿ ತೊರಪ್ಪನ್ ಸಂತೋಷ್ ಮತ್ತೆ ಸೆರೆಗೀಡಾಗಿದ್ದಾನೆ. ಇಂದು ಮುಂಜಾನೆ ಮೇಲ್ಪರಂಬ ಹಳೆಯ ಮಿಲ್ಮಾ ಬೂತ್ ಸಮೀಪದ ಕ್ಯಾಶ್‌ಮಾರ್ಟ್ ಹೈಪರ್ ಮಾರ್ಕೆಟ್‌ನಲ್ಲಿ ಕಳವು ನಡೆಸಲು ಯತ್ನಿಸುತ್ತಿದ್ದ ವೇಳೆ ತೊರಪ್ಪನ್ ಸಂತೋಷ್‌ನನ್ನು ನಾಗರಿಕರು ಸೆರೆ ಹಿಡಿದಿದ್ದಾರೆ. ನಾಗರಿಕರ ಕೈಯಿಂದ ತಪ್ಪಿಸಿಕೊಳ್ಳಲು ಈತ ಸೂಪರ್ ಮಾರ್ಕೆಟ್ ಕಟ್ಟಡದ ಒಂದನೇ ಮಹಡಿಯಿಂದ ಕೆಳಕ್ಕೆ ಹಾರಿದ್ದಾನೆ. ಇದರಿಂದ ಕಾಲಿಗೆ ಗಾಯಗೊಂಡಿದ್ದ ಈತ ಓಡಲು ಸಾಧ್ಯವಾಗದೆ ನಾಗರಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಹಲವು ಕಳವು ಪ್ರಕರಣಗಳಲ್ಲಿ ಆರೋಪಿಯಾದ ತೊರಪ್ಪನ್ ಸಂತೋಷ್ ಕುಡಿಯಾನ್‌ಮಲ ಪೊಲೀಸ್‌ಠಾಣೆ …

ಗೃಹಿಣಿ ಆಸಿಡ್ ಸೇವಿಸಿ ಮೃತ್ಯು

ಬಂದಡ್ಕ: ಆಸಿಡ್ ಹೊಟ್ಟೆಗೆ ಸೇರಿ ಮನೆಯೊಳಗೆ ಅಸ್ವಸ್ಥ ಸ್ಥಿತಿಯಲ್ಲಿ ಕಂಡು ಬಂದ ಗೃಹಿಣಿ ಮೃತಪಟ್ಟಿದ್ದಾರೆ. ಕುತ್ತಿಕ್ಕೋಲ್ ವೆಳ್ಳಾಲ ನಿವಾಸಿ ಎ. ಕೃಷ್ಣನ್ ನಾಯರ್‌ರ ಪತ್ನಿ ಕಾರ್ತ್ಯಾಯಿನಿ ಅಮ್ಮ (65) ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತದೇಹದ ಮಹಜರಿಗಾಗಿ ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ. ಬೇಡಗಂ ಪೊಲೀಸರು ಅಸಹಜ ಸಾವಿಗೆ ಕೇಸು ದಾಖಲಿಸಿದ್ದಾರೆ. ಮೃತರು ಮಕ್ಕಳಾದ ಬಿಂದು, ಸೇತು, ವಿನಿತ, ಅಳಿಯಂದಿರಾದ ಕುಂಞಂಬು, ಅನಂತನ್, ಸೊಸೆ ಸುನಿಲ, ಸಹೋದರರಾದ ನಾರಾಯಣನ್ ನಂಬ್ಯಾರ್, ಅಂಬುಞಿ ನಂಬ್ಯಾರ್, ಬಾಲಕೃಷ್ಣನ್ ನಂಬ್ಯಾರ್, ಶ್ರೀಧರನ್ …

ಬಸ್‌ನಲ್ಲಿ ಗಾಂಜಾ ಸಹಿತ ಪ್ರಯಾಣಿಸುತ್ತಿದ್ದ ವ್ಯಕ್ತಿ ಸೆರೆ

ಮಂಜೇಶ್ವರ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಗಾಂಜಾ ಸಹಿತ ಪ್ರಯಾಣಿಸುತ್ತಿದ್ದ ಓರ್ವನನ್ನು ಮಂಜೇಶ್ವರ ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಕಲ್ಲಿಕೋಟೆ ತಾಲೂಕಿನ ಪಂದಲಾಯನಿ ವಿಲ್ಲೇಜ್ ಬೀಚ್‌ರೋಡ್ ಕೊಲಾಂಡಿ ವಡಕ್ಕೇ ಪಾಂಡಿಗಶಾಲ ವಳಪ್ಪ್ ಎಂಬಲ್ಲಿನ ಅಜಿನಾಸ್ ವಿ.ಕೆ. (32) ಎಂಬಾತ ಬಂಧಿತ ವ್ಯಕ್ತಿ. ಈತನ ಕೈಯಿಂದ ೯ಗ್ರಾಂ ಗಾಂಜಾ ವಶಪಡಿಸಲಾಗಿದೆ. ಮಂಜೇಶ್ವರ ಅಬಕಾರಿ ಚೆಕ್‌ಪೋಸ್ಟ್‌ನಲ್ಲಿ ಅಬಕಾರಿ ಇನ್ಸ್‌ಪೆಕ್ಟರ್ ಜಿನು ಜೇಮ್ಸ್ ಬಿ.ಯು. ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ. ಮಂಗಳೂರು ಭಾಗದಿಂದ ಕಾಸರಗೋಡಿಗೆ ಬರುತ್ತಿದ್ದ ಬಸ್‌ನೊಳಗೆ ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿತ್ತು. ಇದರಂತೆ ಆರೋಪಿಯನ್ನು …

ಮಾದಕದ್ರವ್ಯ ಸಾಗಾಟ ಪ್ರಕರಣ :ಆರೋಪಿಗೆ ಎರಡು ವರ್ಷ ಸಜೆ, ಜುಲ್ಮಾನೆ

ಕಾಸರಗೋಡು: ಕಾರಿನಲ್ಲಿ ಮಾದಕ ದ್ರವ್ಯ ಸಾಗಿಸಿದ ಪ್ರಕರಣದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (ದ್ವಿತೀಯ)ದ ನ್ಯಾಯಾಧೀಶೆ ಕೆ. ಪ್ರಿಯಾ ಅವರು ಎರಡು ವರ್ಷ ಮೂರು ತಿಂಗಳ ಕಠಿಣ ಸಜೆ ಹಾಗೂ ೨೫,೦೦೦ ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ. ಕಣ್ಣೂರು ಮುಳಪ್ಪಿಲಂಗಾಡ್ ಕುಳಂ ಬಜಾರಿನ ರುಹೈಬ್ ಸಿ.ವಿ.(35)  ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ನಾಲ್ಕು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇ ಕಾಗಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. 2019 ಸೆಪ್ಟಂಬರ್ 6ರಂದು …

ಪೆರಿಯ ಕಲ್ಯೋಟ್‌ನ ಪೊದೆಗಳೆಡೆಯಲ್ಲಿ ನಕಲಿ ಕೋವಿ ಅಡಗಿಸಿಟ್ಟ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಯ ಪೆರಿಯ, ಕಲ್ಯೋಟ್‌ನ ಪೊದೆಗಳೆಡೆಯಲ್ಲಿ ಅಡಗಿಸಿಟ್ಟ ಸ್ಥಿತಿಯಲ್ಲಿ ನಕಲಿ ಕೋವಿ ಪತ್ತೆಯಾಗಿದೆ. ಹೊಸದುರ್ಗ ಅಬಕಾರಿ ಅಧಿಕಾರಿ ಮದ್ಯ ಪತ್ತೆಹಚ್ಚುವುದಕ್ಕಾಗಿ ನಡೆಸಿದ ತಪಾಸಣೆ ಮಧ್ಯೆ ಕೋವಿ ಪತ್ತೆಯಾಗಿದೆ. ಮಾಹಿತಿ ತಿಳಿದು ತಲುಪಿದ ಬೇಕಲ ಎಸ್‌ಐ ಪಿ. ಅಖಿಲ್ ಹಾಗೂ ತಂಡ ಕೋವಿಯನ್ನು ಕಸ್ಟಡಿಗೆ ತೆಗೆದು ಕೇಸು ದಾಖಲಿಸಿದ್ದಾರೆ. ಪೆರಿಯ-ಉದಯಪುರಂ ರಸ್ತೆಯ ಕಲ್ಯೋಟ್‌ನಲ್ಲಿರುವ ಇರಿಗೇಶನ್ ಇಲಾಖೆಯ ರೈನ್ ಗೇಜ್ ಸ್ಟೇಶನ್‌ನ ಉತ್ತರ ಭಾಗದ ಪೊದೆಗಳ ಮಧ್ಯೆ ನಿನ್ನೆ ಸಂಜೆ ಕೋವಿಯನ್ನು ಪತ್ತೆಹಚ್ಚ ಲಾಗಿದೆ. ಎರಡು …

ಕಾರಿನಲ್ಲಿ ಸಾಗಿಸುತ್ತಿದ್ದ 6000 ಪ್ಯಾಕೆಟ್ ಪಾನ್‌ಮಸಾಲೆ ವಶ: ಓರ್ವ ಸೆರೆ

ಮಂಜೇಶ್ವರ: ರಾಜ್ಯದಲ್ಲಿ ನಿಷೇಧ ಹೇರಲಾದ ತಂಬಾಕು ಉತ್ಪನ್ನಗಳನ್ನು ಕಾಸರಗೋಡಿಗೆ ತಲುಪಿಸಿ ಮಾರಾಟಗೈಯ್ಯುವ ದಂಧೆ ಮತ್ತೆ ತೀವ್ರಗೊಂಡಿದೆ. ನಿನ್ನೆ ಮಂಜೇಶ್ವರ ಪೊಲೀಸರು ತಲಪಾಡಿಯಲ್ಲಿ ನಡೆಸಿದ ಕಾರ್ಯಾಚರಣೆ ವೇಳೆ ಕಾರಿನಲ್ಲಿ ಸಾಗಿಸುತ್ತಿದ್ದ ೬೦೦೦ ಪ್ಯಾಕೆಟ್ ಪಾನ್‌ಮಸಾಲೆ ಪತ್ತೆಹಚ್ಚಲಾಗಿದೆ. ಈ ಸಂಬಂಧ ಕಾರಿನಲ್ಲಿದ್ದ ಕಣ್ಣೂರು ಕೊಳಚ್ಚೇರಿ ಕಂಡಪ್ಪನ್ ಕಂಬಿಲ್ ತೇರು ನೋರ್ತ್‌ನ ಅನಿರುದ್ಧನ್ ಕೆ. (53) ಎಂಬಾತನನ್ನು ಬಂಧಿಸಲಾಗಿದೆ. ನಿನ್ನೆ ಬೆಳಿಗ್ಗೆ 11 ಗಂಟೆ ವೇಳೆ ತಲಪಾಡಿ ಅರಣ್ಯ ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಮಂಗಳೂರು ಭಾಗದಿಂದ ಉಪ್ಪಳ …

ಕುಂಬಳೆಯ ಲಾಡ್ಜ್ ಕೊಠಡಿಯಲ್ಲಿ ಮಾದಕವಸ್ತು ಬಳಸುತ್ತಿದ್ದ ಮೂವರು ಬಂಧನ

ಕುಂಬಳೆ: ಕುಂಬಳೆಯ ಲಾಡ್ಜ್‌ಯೊಂದರ ಕೊಠಡಿಯಲ್ಲಿ ಮಾದಕವಸ್ತು ಉಪಯೋಗಿಸುತ್ತಿದ್ದ ಮೂವರು ಯುವಕರನ್ನು ಬಂಧಿಸಲಾಗಿದೆ. ಕುಂಬಳೆ ಶ್ರೀ ನಿತ್ಯಾನಂದ ಮಠದ ಸಮೀಪ ಬಟ್ಟುಂಞಿ ಹೌಸ್‌ನ ಸಿ.ಕೆ. ಕೇತನ್, ಕುಂಟಗೇರಡ್ಕ ಜಿಡಬ್ಲ್ಯುಎಲ್‌ಪಿ ಶಾಲೆ ಸಮೀಪದ ನಿಸಾರ್ ಮಂಜಿಲ್‌ನ ಅಬ್ದುಲ್ ನಿಸಾರ್, ಕರ್ನಾಟಕದ ಪುತ್ತೂರು ಗಾಳಿಮುಖ ನಿವಾಸಿ ಬ್ರಿಜೇಶ್ ಎಂಬಿವರನ್ನು ಕುಂಬಳೆ ಎಕ್ಸೈಸ್ ಇನ್‌ಸ್ಪೆಕ್ಟರ್ ಕೆ.ವಿ. ಶ್ರಾವಣ್ ನೇತೃತ್ವದ ತಂಡ ಬಂಧಿಸಿದೆ. ನಿನ್ನೆ ರಾತ್ರಿ 10 ಗಂಟೆಗೆ ಕುಂಬಳೆ ರೈಲ್ವೇ ನಿಲ್ದಾಣದಿಂದ ಸಿ.ಎಚ್.ಸಿ.ಗೆ ತೆರಳುವ ರಸ್ತೆಯಲ್ಲಿ ರಾಕೇಶ್ ಕಾಂಪ್ಲೆಕ್ಸ್ ಎಂಬ ಲಾಡ್ಜ್‌ನಿಂದ ಇವರನ್ನು …

ಕಿರಿಯ ವಿದ್ಯಾರ್ಥಿಗಳಿಗೆ ಹಲ್ಲೆ : ಮೊಗ್ರಾಲ್ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಅಮಾನತು

ಕಾಸರಗೋಡು:  ಮೊಗ್ರಾಲ್ ಸರಕಾರಿ ವೊಕೇಶನಲ್ ಹೈಯರ್ ಸೆಕೆಂ ಡರಿ ಶಾಲೆಯಲ್ಲಿ ಕಿರಿಯ ವಿದ್ಯಾರ್ಥಿ ಗಳಿಗೆ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ೧೦ನೇ ತರಗತಿಯ ನಾಲ್ಕು ಮಂದಿ ವಿದ್ಯಾರ್ಥಿಗಳನ್ನು ಅಮಾನ ತುಗೊಳಿಸಿ ಮುಖ್ಯೋ ಪಾಧ್ಯಾಯ   ಕ್ರಮ ಕೈಗೊಂಡಿದ್ದಾರೆ. ಈ ನಾಲ್ವರು ವಿದ್ಯಾರ್ಥಿಗಳು ೯ನೇ ತರಗತಿಯ ವಿದ್ಯಾರ್ಥಿಗಳಿಗೆ ಹಲ್ಲೆಗೈದು ಗಾಯ ಗೊಳಿಸಿರುವುದಾಗಿ ದೂರಲಾಗಿದೆ. ಈ ಬಗ್ಗೆ ಲಭಿಸಿದ ದೂರಿನಂತೆ ಕುಂಬಳೆ ಪೊಲೀಸರು ಅಮಾನತಿಗೊಳಗಾದ ನಾಲ್ವರು ವಿದ್ಯಾರ್ಥಿಗಳ ವಿರುದ್ಧ ಚೈಲ್ಡ್ ಪ್ರೊಟೆಕ್ಟ್ ಆಫೀಸರ್‌ಗೆ ಎಸ್‌ಬಿಆರ್ ( ಸೋಶ್ಯಲ್ ಬ್ಯಾಕ್ ಗ್ರೌಂಡ್ ರಿಪೋರ್ಟ್) ಸಲ್ಲಿಸುವು …