ಪಾಕತಜ್ಞ ನಿಧನ

ಮಂಜೇಶ್ವರ: ವರ್ಕಾಡಿ ನಲ್ಲಂಗಿಪದವು ನಿವಾಸಿ, ಪಾಕತಜ್ಞ ಗೋಪಾಲಕೃಷ್ಣಯ್ಯ (ಬಾಬಣ್ಣ 62) ನಿಧನ ಹೊಂದಿದರು. ಶನಿವಾರ ರಾತ್ರಿ ಹೃದಯಾಘಾತ ಸಂಭವಿಸಿತ್ತು. ಈ ವೇಳೆ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ಮಧ್ಯೆ ನಿಧನ ಸಂಭವಿಸಿದೆ. ಮನೆ ಪರಿಸರದಲ್ಲಿ ಹಲವಾರು ವರ್ಷಗಳಿಂದ ಕ್ಯಾಟರಿಂಗ್ ನಡೆಸುತ್ತಿದ್ದರು. ಮೃತರು ಪತ್ನಿ ಸಾವಿತ್ರಿ, ಮಕ್ಕಳಾದ ಶ್ವೇತ, ಜಯಲಕ್ಷ್ಮಿ, ಭವ್ಯ, ಅಳಿಯಂದಿರಾದ ರವೀಶ್, ಮಧು ಹೆಗ್ಡೆ, ಸಹೋದರ- ಸಹೋದರಿಯರಾದ ರಾಮ್‌ರಾವ್, ಪ್ರಕಾಶ್, ಭಾರತಿ, ಚಂದ್ರಪ್ರಕಾಶ್ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ತಂದೆ ಕಂಬಾರು ನಾರಾಯಣ್ಣ, ತಾಯಿ ರಾಜೀವಿ, ಸಹೋದರರಾದ …

ಅಬಕಾರಿ ಅಧಿಕಾರಿಗಳನ್ನು ಕಂಡು ಗಾಂಜಾ, ಸ್ಕೂಟರ್ ಉಪೇಕ್ಷಿಸಿ ಆರೋಪಿ ಪರಾರಿ

ಕಣ್ಣೂರು: ಅಬಕಾರಿ ಅಧಿಕಾರಿಗಳನ್ನು ಕಂಡು ಗಾಂಜಾ ಹಾಗೂ ಸ್ಕೂಟರನ್ನು ಉಪೇಕ್ಷಿಸಿ ಹಲವಾರು ಮಾದಕ ಪದಾರ್ಥ ಪ್ರಕರಣಗಳಲ್ಲಿ ಆರೋಪಿಯಾದ ಯುವಕ ಪರಾರಿಯಾಗಿದ್ದಾನೆ. ತಳಿಪರಂಬ್ ಏರಿಯಾತ್ ನಿವಾಸಿ ಶಮ್ಮಾಸ್ (27) ಪರಾರಿಯಾದ ಯುವಕ. ನಿನ್ನೆ ಮಧ್ಯಾಹ್ನ ಎಡಕ್ಕೊಂನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ತಳಿಪರಂಬ್ ಅಬಕಾರಿ ಇನ್ಸ್‌ಪೆಕ್ಟರ್ ಸತೀಶ್ ಹಾಗೂ ತಂಡವನ್ನು ನೋಡಿದ ಶಮ್ಮಾಸ್ ಸ್ಕೂಟರ್ ಹಾಗೂ ಗಾಂಜಾವನ್ನು ಉಪೇಕ್ಷಿಸಿ ಪರಾರಿಯಾಗಿದ್ದಾನೆ. ಸ್ಕೂಟರ್‌ನಿಂದ 204 ಗ್ರಾಂ ಗಾಂಜಾವನ್ನು ಪತ್ತೆಹಚ್ಚಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಶಮ್ಮಾಸ್‌ನ ಮನೆಗೂ ದಾಳಿ ನಡೆಸಲಾಗಿದೆ.

ವೃಕ್ಷಮಾತೆ ಸಾಲು ಮರದ ತಿಮ್ಮಕ್ಕರಿಗೆ ಬದಿಯಡ್ಕದಲ್ಲಿ ಅಶ್ರುತರ್ಪಣ: ಕೇರಳದ ಪಠ್ಯಪುಸ್ತಕದಲ್ಲಿ ಜೀವನ ಚರಿತ್ರೆಗೆ ಆಗ್ರಹ

ಬದಿಯಡ್ಕ: ವೃಕ್ಷಮಾತೆ ಪದ್ಮಶ್ರೀ ಸಾಲುಮರದ ತಿಮ್ಮಕ್ಕರ ನಿಧನಕ್ಕೆ ಜಿ.ಕೆ. ಚಾರಿಟೇಬಲ್ ಟ್ರಸ್ಟ್ ವಾಂತಿಚ್ಚಾಲು ಇವರ ನೇತೃತ್ವದಲ್ಲಿ ಬದಿಯಡ್ಕದಲ್ಲಿ ಅಶ್ರುತರ್ಪಣ ಕಾರ್ಯಕ್ರಮ ಜರಗಿತು. ಡಾ. ಶ್ರೀನಿಧಿ ಸರಳಾಯ ಪುಷ್ಪಾರ್ಚನೆ ಗೈದು ನುಡಿನಮನ ಸಲ್ಲಿಸಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆಯ ಕಾಸರಗೋಡು ತಾಲೂಕು ಅಧ್ಯಕ್ಷ ಅಖಿಲೇಶ್ ನಗುಮುಗಂ ಅಧ್ಯಕ್ಷತೆ ವಹಿಸಿದರು. ಅವರು ಮಾತನಾಡಿ, ಸಾಲು ಮರದ ತಿಮ್ಮಕ್ಕ ಅವರ ಹೆಸರು ಸದಾ ಹಸಿರಾಗಿರುವಂತೆ ನೋಡಿಕೊ ಳ್ಳಲು ಕನ್ನೆಪ್ಪಾಡಿ ಆಶ್ರಯ ಆಶ್ರಮದಲ್ಲಿ ಗಿಡವನ್ನು ನೆಟ್ಟು ಸದಾ ಕಾಲ ಪೋ ಷಿಸುವ ಯೋಜನೆ ಹಾಕಿಕೊಳ್ಳಲಾಗಿದೆ. ಕೇರಳದ …

ಮನೆಯ ವಿದ್ಯುತ್ ಸಂಪರ್ಕ ವಿಚ್ಛೇಧಿಸಿದ ದ್ವೇಷ: 50 ಟ್ರಾನ್ಸ್‌ಫಾರ್ಮರ್‌ಗಳ ಫ್ಯೂಸ್ ನಾಶಪಡಿಸಿ ಯುವಕನಿಂದ ಪ್ರತಿಕಾರ

ಕಾಸರಗೋಡು: ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಫ್ಯೂಸ್ ತೆಗೆದ ಕೆಎಸ್‌ಇಬಿಗೆ ವಿಚಿತ್ರವಾದ ತಿರುಗೇಟು ಯುವಕ ನೀಡಿದ್ದಾನೆ. ಕಾಸರಗೋಡು ನಗರದ ವಿವಿಧ ಭಾಗಗಳ ಫ್ಯೂಸ್ ತೆಗೆದು ಯುವಕ ಇದಕ್ಕೆ ಪ್ರತಿಕಾರ ನೀಡಿದ್ದಾನೆ. ಘಟನೆಯಲ್ಲಿ ಚೂರಿ ನಿವಾಸಿಯನ್ನು ಪೊಲೀಸರು ಕಸ್ಟಡಿಗೆ ತೆಗೆದಿದ್ದಾರೆ. ನೆಲ್ಲಿಕುಂಜೆ, ಕಾಸರಗೋಡು ಸೆಕ್ಷನ್‌ಗಳ ಫ್ಯೂಸ್‌ಗಳನ್ನು ಈತ ತೆಗೆದಿದ್ದಾನೆ. ವಿದ್ಯುತ್ ಬಿಲ್ ಪಾವತಿಸದಿರುವುದಕ್ಕೆ ಮನೆಯ ಸಂಪರ್ಕವನ್ನು ಕೆಎಸ್‌ಇಬಿ ವಿಚ್ಛೇಧಿಸಿದ ದ್ವೇಷದಿಂದ ನಗರದ 50 ಟ್ರಾನ್ಸ್‌ಫಾರ್ಮರ್‌ಗಳ ಫ್ಯೂಸ್ ಯುವಕ ಹಾನಿಗೊಳಿಸಿದ್ದಾನೆ. ಇದರಿಂದಾಗಿ ವ್ಯಾಪಾರ ಸಂಸ್ಥೆಗಳು ಸಹಿತದ 8000ಕ್ಕೂ ಅಧಿಕ ಫಲಾನುಭವಿಗಳು ಎರಡು …

ಜಿಲ್ಲೆಯ ವಿವಿಧೆಡೆ ಪೊಲೀಸ್ ಕಾರ್ಯಾಚರಣೆ: ಬೃಹತ್ ಪ್ರಮಾಣದ ತಂಬಾಕು ಉತ್ಪನ್ನ ಪತ್ತೆ; ಮೂರು ಕಾರು ವಶ, ಇಬ್ಬರ ಸೆರೆ

ಕಾಸರಗೋಡು: ಜಿಲ್ಲೆಯ ವಿವಿಧೆಡೆ ಪೊಲೀಸರು ನಿನ್ನೆ ನಡೆಸಿದ ಕಾರ್ಯಾ ಚರಣೆಯಲ್ಲಿ ಭಾರೀ ಪ್ರಮಾಣದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ವಶಪಡಿಸಲಾಗಿದೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಮೂರು ಕಾರುಗಳನ್ನು ವಶಕ್ಕೆ ತೆಗೆಯಲಾಗಿದೆ. ವಿದ್ಯಾನಗರ ಪೊಲೀಸರು ನಿನ್ನೆ  ನಡೆಸಿದ ಎರಡು ಕಾರ್ಯಾಚರಣೆಗಳಲ್ಲಾಗಿ ಭಾರೀ ಪ್ರಮಾಣದ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಪತ್ತೆಹಚ್ಚಿ ವಶಪಡಿಸಿ ಕೊಂಡಿದ್ದಾರೆ. ಚೆರ್ಕಳ ಪಾಡಿ ರಸ್ತೆ ಬಳಿ ಈ ಕಾರ್ಯಾಚರಣೆ ನಡೆದಿದೆ. ಈ ಸ್ಥಳದಲ್ಲಿ ನಿನ್ನೆ ಮೊದಲು ನಡೆಸಿದ ಕಾರ್ಯಾ ಚರಣೆಯಲ್ಲಿ ಕಾರೊಂದರಲ್ಲಿ ಸಾಗಿಸುತ್ತಿದ್ದ ಕೇರಳದಲ್ಲಿ ನಿಷೇಧ ಹೇರಲಾಗಿರುವ …

ಬಿಜೆಪಿ ಪೈವಳಿಕೆ ಪಂಚಾಯತ್ ಮಾಜಿ ಸದಸ್ಯ ನಿಧನ

ಬಾಯಾರು: ಪೆರ್ವೋಡಿ ಬಾಣಪ್ಪಾಡಿ ನಿವಾಸಿ ದಿ| ಸಂಕಪ್ಪ ನಾಯಕ್‌ರವರ ಪುತ್ರ ಬಿಜೆಪಿ ಹಿರಿಯ ನೇತಾರ, ಪಂಚಾಯತ್ ಮಾಜಿ ಸದಸ್ಯ ಕಿಶೋರ್ ಕುಮಾರ್ ನಾಯಕ್ [62] ನಿಧನ ಹೊಂದಿ ದರು. ಕಳೆದ ಒಂದು ವರ್ಷದಿಂದ ಅಸೌಖ್ಯದಿಂದ ಬಳಲುತ್ತಿದ್ದ ಇವರಿಗೆ ನಿನ್ನೆ ಸಂಜೆ ಮನೆಯಲ್ಲಿ ಅಸೌಖ್ಯ ಉಲ್ಬಣಗೊಂಡು ಉಪ್ಪಳದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಅಷ್ಟರಲ್ಲಿ ನಿಧನ ಸಂಭವಿಸಿದೆ. ಕೃಷಿಕರಾಗಿದ್ದು, ಪೈವಳಿಕೆ ಪಂಚಾಯತ್ ಮಾಜಿ ಸದಸ್ಯರೂ ಅಲ್ಲದೆ ಬಾಯಾರು ಸೇವಾ ಸಹಕಾರಿ ಬ್ಯಾಂಕ್‌ನ ಮಾಜಿ ನಿರ್ದೇಶಕರಾಗಿದ್ದರು. ಮೃತರು ತಾಯಿ ಚಂದ್ರಾವತಿ.ಎಸ್ …

ಶಬರಿಮಲೆ ತೀರ್ಥಾಟನೆ ನಾಳೆಯಿಂದ ಆರಂಭ

ಶಬರಿಮಲೆ: ಶಬರಿಮಲೆ ಶ್ರೀ ಅಯ್ಯಪ್ಪ ದೇವಸ್ಥಾನದ ತೀರ್ಥಾಟನೆ ನಾಳೆ ಆರಂಭಗೊಳ್ಳಲಿದೆ. ಅದಕ್ಕಿರುವ ಅಗತ್ಯದ ಪೂರ್ವಭಾವಿ ಸಿದ್ಧತೆಗಳು ಪೂರ್ಣಗೊಂಡಿದೆ. ನಾಳೆ ಸಂಜೆ 5 ಗಂಟೆಗೆ ತಂತ್ರಿ ವರ್ಯ ಕಂಠರರ್ ಮಹೇಶ್ ಮೋಹನ ರ್‌ರ ಸಾನಿಧ್ಯದಲ್ಲಿ ಮುಖ್ಯ ಅರ್ಚಕ ಅರುಣ್ ಕುಮಾರ್ ನಂಬೂದಿರಿ ಶಬರಿಮಲೆ ದೇಗುಲದ ಗರ್ಭಗುಡಿಯ  ಬಾಗಿಲು ತೆರೆದು ದೀಪ ಬೆಳಗಿಸುವುದರೊಂದಿಗೆ ಈ ಬಾರಿಯ ಮಂಡಲ ಕಾಲದ ತೀರ್ಥಾಟನೆಗೆ ಚಾಲನೆ ದೊರಕಲಿದೆ. ನಂತರ  ಕ್ಷೇತ್ರದ ಹೊಸ ಮುಖ್ಯ ಅರ್ಚಕರನ್ನು  ಹದಿನೆಂಟು ಮೆಟ್ಟಿಲೇರಿಸಿ ಸನ್ನಿಧಾನಕ್ಕೆ ಕರೆದೊಯ್ಯಲಾಗುವುದು. ಮಾಳಿಗಪುರಂ ದೇಗುಲದ ಅರ್ಚಕ …

ಉಗ್ರರಿಂದ ವಶಪಡಿಸಿದ ಸ್ಫೋಟಕ ಪೊಲೀಸ್ ಠಾಣೆಯಲ್ಲೇ ಸ್ಫೋಟ: ಪೊಲೀಸರು ಸೇರಿ 8 ಮಂದಿ ಸಾವು, 29 ಮಂದಿಗೆ ಗಾಯ

ಶ್ರೀನಗರ: ದೆಹಲಿಯಲ್ಲಿ ಕಾರು ಬಾಂಬ್ ಸ್ಪೋಟ ನಡೆದು  13 ಮಂ ದಿಯ ಪ್ರಾಣ ಬಲಿತೆಗೆದು ಹಲವರು ಗಾಯಗೊಂಡ ಕರಾಳತೆಯ ಭೀತಿ ಇನ್ನೂ ಮಾಸದಿರುವ ವೇಳೆಯಲ್ಲೇ ಶ್ರೀನಗರದಲ್ಲಿ ಪೊಲೀಸ್ ಠಾಣೆಯಲ್ಲಿ  ನಿನ್ನೆ ತಡರಾತ್ರಿ ಇನ್ನೊಂದು ಅತೀ ಭೀಕರ ಸ್ಫೋಟ ನಡೆದಿದೆ. ಇದರಲ್ಲಿ 9 ಮಂದಿ ಸಾವನ್ನಪ್ಪಿ ೨೯ ಮಂದಿ ಗಾಯಗೊಂಡಿದ್ದಾರೆ. ಇದರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ. ಇದ ರಿಂದಾಗಿ ಸಾವುನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಸ್ಫೋಟಕವಸ್ತುಗಳನ್ನು ಪರಿಶೀಲಿಸುತ್ತಿದ್ದ ಪೊಲೀ ಸರು ಮತ್ತು ವಿಧಿವಿಜ್ಞಾನ ತಂಡದ …

ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ: 10 ಮಂದಿ ಸೆರೆ; 14,970 ರೂ. ವಶ

ನೀರ್ಚಾಲು: ಇಲ್ಲಿಗೆ ಸಮೀಪದ ಪುದುಕೋಳಿಯಲ್ಲಿನ ಜುಗಾರಿ ದಂಧೆಯ ಕೇಂದ್ರಕ್ಕೆ ಬದಿಯಡ್ಕ ಪೊಲೀಸರು ನಿನ್ನೆ ದಾಳಿ ನಡೆಸಿದ್ದಾರೆ. ಇಲ್ಲಿಂದ 10 ಮಂದಿಯನ್ನು ಸೆರೆ ಹಿಡಿದಿದ್ದಾರೆ. ಮೊಗ್ರಾಲ್, ಮಧೂರು ಹೌಸ್ನ ಅಬ್ದುಲ್ ರಹ್ಮಾನ್ (60), ಮಞಂಪಾರೆಯ ಮುಹಮ್ಮದ್ ಹನೀಫ (52), ಚಂದ್ರAಪಾರೆಯ ಹನೀಫ್ ಜೋಸೆಫ್ (38), ಕಾಕುಂಜೆಯ ಕೆ. ನವೀನ್ (40), ಕೊಲ್ಲಂಗಾನದ ಬಾಪಿಸ್ಟ್ ಮೊಂತೇರೊ (52), ಮಾನ್ಯ ದೇವರಕೆರೆಯ ವಿಜಯನ್ (50), ಚುಕ್ಕಿನಡ್ಕದ ಮೊಹಮ್ಮದ್ ಸುಲೈಮಾನ್ (58) ಮೊದಲಾದ ಹತ್ತು ಮಂದಿಯನ್ನು ಸೆರೆ ಹಿಡಿಯಲಾಗಿದ್ದು, ಸ್ಥಳದಿಂದ 14,970 ರೂ. …

 ವಿವಿಧ ಪ್ರಕರಣ: ಕುಂಬಳೆಯಲ್ಲಿ  17 ಆರೋಪಿಗಳ ಸೆರೆ

ಕುಂಬಳೆ: ವಿವಿಧ ಪ್ರಕರಣಗಳಿಗೆ ಸಂಬಂಧಿಸಿ ತಲೆಮರೆಸಿಕೊಂಡಿರುವ ಅರೋಪಿಗಳ  ಪತ್ತೆಗಾಗಿ ಕುಂಬಳೆ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ. ಇದರಂತೆ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ 15 ಮಂದಿ ವಾರಂಟ್ ಆರೋಪಿಗಳು ಹಾಗೂ ಇಬ್ಬರು ತಲೆಮರೆಸಿಕೊಂಡ ಆರೋಪಿಗಳನ್ನು ಬಂಧಿಸಲಾಗಿದೆ. ಅಲ್ಲದೆ ಪ್ರಾಯಪೂರ್ತಿಯಾಗದ ಮಕ್ಕಳು ಚಲಾಯಿಸಿದ ನಾಲ್ಕು ದ್ವಿಚಕ್ರ ವಾಹನಗಳನ್ನು ವಶಪಡಿಸಲಾಗಿದೆ.