ಕನ್ನಡ ರಾಜ್ಯೋತ್ಸವದಲ್ಲಿ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ

ಕಾಸರಗೋಡು: ಶ್ರೀ ರಾಮನಾಥ ಸಾಂಸ್ಕೃತಿಕ ಭವನ ಸಮಿತಿ ನೇತೃತ್ವದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಡಾ. ವಾಣಿಶ್ರೀ ಕಾಸರಗೋಡು ಸಾರಥ್ಯದ ಗಡಿನಾಡ ಕನ್ನಡ ಸಾಹಿತ್ಯಸಾಂಸ್ಕೃತಿಕ ಸಂಸ್ಥೆಯಿಂದ ಸಾಹಿತ್ಯ ಗಾನ ನೃತ್ಯ ವೈಭವ ಕಾರ್ಯಕ್ರಮ ಜರಗಿತು.  ಮಧುಲತಾ ಪುತ್ತೂರು, ದಿವಾಕರ ಕಾಸರಗೋಡು ಅವರಿಂದ ಗಾನ ವೈಭವ ನಡೆಯಿತು. ಡಾ. ವಾಣಿಶ್ರೀ ಪ್ರಸ್ತುತಪಡಿಸಿದರು.  ನೃತ್ಯದಲ್ಲಿ ವಿಶ್ವದಾಖಲೆ ಮಾಡಿದ ಕಲಾವಿದೆ  ರೆಮೋನ ಉದ್ಘಾಟಿಸಿದರು. ಸಂಸ್ಥೆಯ ಕಲಾವಿದರು ವಿವಿಧ ಕಾರ್ಯಕ್ರಮ ಗಳನ್ನು ಪ್ರಸ್ತುತಪಡಿಸಿದರು. ಈ ವೇಳೆ ಭಾಗವಹಿಸಿದ ಕಲಾವಿದರಿಗೆ ರಾಮ ನಾಥ ಸಾಂಸ್ಕೃತಿಕ …

ಕೇರಳ-ಕೇಂದ್ರ ವಿವಿಯಲ್ಲಿ 923 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಪೆರಿಯ: ಕೇರಳ- ಕೇಂದ್ರ ವಿವಿಯಲ್ಲಿ 9ನೇ ಪದವಿ ಪ್ರದಾನ ಸಮ್ಮೇಳನ ಜರಗಿದ್ದು, ಡಾ. ಎನ್. ಕಲೈಶೆಲ್ವಿ ಪ್ರಧಾನ ಭಾಷಣ ಮಾಡಿದರು. 2000ದಷ್ಟು ಮಂದಿ ಭಾಗವಹಿಸಿದ ಕಾರ್ಯಕ್ರಮದಲ್ಲಿ 2025ರಲ್ಲಿ ಅಧ್ಯಯನ ಪೂರ್ತಿಗೊಳಿಸಿದ 923 ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು. 36 ಮಂದಿಗೆ ಪದವಿ, 771 ಮಂದಿಗೆ ಸ್ನಾತಕೋತ್ತರ ಪದವಿ, 36 ಮಂದಿಗೆ ಪಿಎಚ್ಡಿ, 80 ಮಂದಿ ಪಿಜಿ ಡಿಪ್ಲೊಮಾ ಪದವಿ ಪಡೆದರು. ಇದರಲ್ಲಿ 750 ಮಂದಿ ನೇರವಾಗಿ ಭಾಗವಹಿಸಲು ನೋಂದಾಯಿಸಿದ್ದರು. ವಿವಿಧ ಅಧ್ಯಯನ ಇಲಾಖೆಗಳಲ್ಲಿ ಉನ್ನತ ಜಯಗಳಿಸಿದ ವಿದ್ಯಾರ್ಥಿಗಳಿಗೆ …

ಸೇವಾ ಭಾರತಿಯಿಂದ ರಕ್ತದಾನ ಶಿಬಿರ

ಬದಿಯಡ್ಕ: ಸೇವಾ ಭಾರತಿ ಬದಿಯಡ್ಕ ಇದರ ಆಶ್ರಯದಲ್ಲಿ ಕಾಸರಗೋಡು ಸರಕಾರಿ ಜನರಲ್ ಆಸ್ಪತ್ರೆಯ ಸಹಭಾಗಿತ್ವದಲ್ಲಿ ಪಳ್ಳತ್ತಡ್ಕ ಮುದ್ದುಮಂದಿರದಲ್ಲಿ ರಕ್ತದಾನ ಶಿಬಿರ ಜರಗಿತು. ಸೇವಾ ಭಾರತಿ ಅಧ್ಯಕ್ಷ ಸದಾಶಿವ ಮಾಸ್ತರ್ ಅಧ್ಯಕ್ಷತೆ ವಹಿಸಿದರು. ಜೊತೆ ಕಾರ್ಯದರ್ಶಿ ಗುರುಪ್ರಸಾದ್ ರೈ ಸ್ವಾಗತಿಸಿದರು. ಸೀತಾರಾಮ ಗುರುಸ್ವಾಮಿ, ಉದಯ ಭಟ್ ಕೋರಿಕ್ಕಾರು, ಮುದ್ದುಮಂದಿರದ ವ್ಯವಸ್ಥಾಪಕಿ ಶ್ಯಾಮಲಾ ಎಸ್.ಎನ್.ಭಟ್, ನಿವೃತ್ತ ಮುಖ್ಯೋಪಾಧ್ಯಾಯಿನಿ ಶಾಂತಾ ಕುಮಾರಿ, ಬ್ಲಡ್ ಬ್ಯಾಂಕ್‌ನ ಡಾ| ಸೌಮ್ಯ, ಉಷಾ ಪಳ್ಳತ್ತಡ್ಕ, ಸೇವಾ ಭಾರತಿ ಜಿಲ್ಲಾ ಕಾರ್ಯದರ್ಶಿ ಪ್ರತೀಕ್ ಆಳ್ವ ಪೆರಡಾಲ ಮಾತನಾಡಿದರು. …

ದೆಹಲಿ ಸ್ಫೋಟ : ಕಾರು ಮಾಲಕ ಸೆರೆ: ಎನ್‌ಐಎ ತನಿಖೆ , ಬಾಂಬರ್ ಉಮ್ಮರ್ ಮೊಹಮ್ಮದ್

ದೆಹಲಿ: ದೆಹಲಿಯ ಕೆಂಪುಕೋ ಟೆ ಬಳಿ ನಿನ್ನೆ ಸಂಜೆ 13 ಮಂದಿಯ  ಪ್ರಾಣ ಬಲಿತೆಗೆದುಕೊಂಡು ಹಲ ವಾರು ಮಂದಿ ಗಾಯಗೊಂಡ ಸ್ಫೋಟ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಏಜೆನ್ಸಿ ಕೈಗೆತ್ತಿ ಕೊಂಡಿದೆ. ಸ್ಫೋಟಗೊಂಡ i20 ಕಾರಿನ ಮಾಲಕ ಹರ್ಯಾಣ ಗ್ರಾಮದ ಮೊಹಮ್ಮದ್ ಸಲ್ಮಾನ್ ಎಂಬಾತನಾಗಿದ್ದಾನೆಂದು  ಗುರುತಿಸಲಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಮಾತ್ರವಲ್ಲ ಯುಎಪಿಎ ಕಾನೂನು ಪ್ರಕಾರ ಇದರ ತನಿಖೆ ನಡೆಸಲಾಗುತ್ತಿದೆ. ಇದೇ ವೇಳೆ ಕಾರು ಸ್ಫೋಟದ ಪ್ರಧಾನ ಆರೋಪಿ ಮೊಹ ಮ್ಮದ್ ಉಮ್ಮರ್  ಎಂಬಾತನ ಮೊದಲ ಪೋಟೋವನ್ನು …

ವಿದ್ಯಾರ್ಥಿನಿಯನ್ನು ಚುಡಾಯಿಸಿದ ಯುವಕನಿಗೆ ನಾಗರಿಕರಿಂದ ಶಾಸ್ತಿ: ಪೊಲೀಸರಿಂದ ಲಾಠಿ ಪ್ರಹಾರ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಂತೆ ಬಿಜೆಪಿ ನೇತಾರ ಸಹಿತ ಇಬ್ಬರ ಬಂಧನ

ಕುಂಬಳೆ: ಕಾಲೇಜು ವಿದ್ಯಾರ್ಥಿನಿ ಯನ್ನು ಹಿಂಬಾಲಿಸಿ ಆಕೆಯನ್ನು ಚುಡಾ ಯಿಸಿದ ಯುವಕನನ್ನು ನಾಗರಿಕರು ಸೆರೆಹಿಡಿದು ಶಾಸ್ತಿ ಮಾಡಿದ ಘಟನೆ ನಡೆದಿದೆ. ವಿಷಯ ತಿಳಿದು ತಲುಪಿದ ಪೊಲೀಸರು ತಂಡದ ಮೇಲೆ ಲಾಠಿ ಪ್ರಹಾರ ನಡೆಸಿ ಅವರನ್ನು ಚದುರಿಸಿದ್ದಾರೆ. ಘಟನೆಯ ಕುರಿತು ಸ್ವತಃ ಕೇಸು ದಾಖಲಿಸಿಕೊಂಡ ಪೊಲೀಸರು ಬಿಜೆಪಿ ಕಲ್ಲಿಕೋಟೆ ವಲಯ ಉಪಾಧ್ಯಕ್ಷ ವಿಜಯಕುಮಾರ್ ರೈ (45), ಮಳ್ಳಂಗೈಯ ಪ್ರಜುನಿತ್ (20) ಎಂಬಿ ವರನ್ನು ಬಂಧಿಸಿ ನೋಟೀಸ್ ನೀಡಿ ಬಿಡುಗಡೆಗೊಳಿಸಿದ್ದಾರೆ. ಇತರ ಆರೋ ಪಿಗಳನ್ನು ಶೀಘ್ರ ಬಂಧಿಸಲಾಗುವುದೆಂದು ಪೊಲೀಸರು ತಿಳಿಸಿದ್ದಾರೆ. …

ಕುಂಟಂಗೇರಡ್ಕ ನಿವಾಸಿ ರೈಲು ಢಿಕ್ಕಿ ಹೊಡೆದು ಮೃತ್ಯು

ಕುಂಬಳೆ:  ಕುಂಟಂಗೇರಡ್ಕ ನಿವಾಸಿಯಾದ ಗಲ್ಫ್ ಉದ್ಯೋಗಿ ಚೇರಂಗೈಯಲ್ಲಿ ರೈಲು ಢಿಕ್ಕಿ ಹೊಡೆದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕುಂಟಂಗೇರಡ್ಕದ ಮೊಹಿಯುದ್ದೀನ್‌ರ ಪುತ್ರ ಮುಹಮ್ಮದ್ ಅಮಾನುಲ್ಲ (61) ಮೃತ ವ್ಯಕ್ತಿ. ನಿನ್ನೆ ರಾತ್ರಿ ೮.೩೦ರ ವೇಳೆ ಕಾಸರಗೋಡು ಚೇರಂಗೈ ರೈಲ್ವೇ ಹಳಿಯಲ್ಲಿ ಇವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ವಿಷಯ ತಿಳಿದು ಕಾಸರಗೋಡು ರೈಲ್ವೇ ಪೊಲೀಸರು ಸ್ಥಳಕ್ಕೆ ತಲುಪಿ ಮೃತದೇಹ ವನ್ನು ಜನರಲ್ ಆಸ್ಪತ್ರೆಯ ಶವಾಗಾ ರಕ್ಕೆ ತಲುಪಿಸಿದ್ದಾರೆ. ಒಂದು ವರ್ಷದ ಹಿಂದೆ ಅಮಾನುಲ್ಲ ಗಲ್ಫ್‌ನಿಂದ ಊರಿಗೆ ಬಂದಿದ್ದರು. ಮರಳಿ ಹೋಗುವ …

ಮುಳ್ಳೇರಿಯದಲ್ಲಿ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವಕ್ಕೆ ಚಾಲನೆ

ಮುಳ್ಳೇರಿಯ: ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವ ಇಂದು ಬೆಳಿಗ್ಗೆ ಮುಳ್ಳೇರಿಯ ಜಿವಿಎಚ್‌ಎಸ್‌ಎಸ್‌ನಲ್ಲಿ ಆರಂಭಗೊಂಡಿತು. ಇಂದು ಬೆಳಿಗ್ಗೆ ಶಾಲಾ ಪ್ರಾಂಶುಪಾಲೆ ಸುಧಾ ಎ.ವಿ. ಧ್ವಜಾರೋಹಣ ನಡೆಸುವ ಮೂಲಕ ಕಲೋತ್ಸವಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ  ಪಿಟಿಎ ಅಧ್ಯಕ್ಷ ಸತೀಶ್, ಕಾರ್ಯಕ್ರಮದ ಜನರಲ್ ಕನ್ವೀನರ್ ಶಾಹುಲ್ ಹಮೀದ್ ಮಾಸ್ಟರ್, ವಿಎಚ್‌ಎಸ್‌ಇ ಪ್ರಾಂಶುಪಾಲ ಕುರಿಯನ್, ಎಸ್‌ಎಂಸಿ ಚೆಯರ್‌ಮೆನ್ ಮೋಹನ್ ಮೊದಲಾದವರು ಉಪಸ್ಥಿತ ರಿದ್ದರು. ಉಪಜಿಲ್ಲೆಯ 98 ಶಾಲೆಗಳಿಂದ 6000ದಷ್ಟು ಮಕ್ಕಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಂಗವಾಗಿ ನಿನ್ನೆ ಮುಳ್ಳೇರಿಯ ಪೇಟೆಯಲ್ಲಿ ಡಂಗುರ ಮೆರವಣಿಗೆ ನಡೆಯಿತು. …

ಜೀಪಿನಲ್ಲಿ ಸಾಗಿಸುತ್ತಿದ್ದ ಗಾಂಜಾ ವಶ ಪ್ರಕರಣ: ಆರೋಪಿಗಳಿಗೆ 2 ವರ್ಷ ಕಠಿಣ ಸಜೆ; 30,000 ರೂ. ದಂಡ

ಕಾಸರಗೋಡು: ಬೊಲೇರೊ ಜೀಪಿನಲ್ಲಿ ಸಾಗಿಸುತ್ತಿದ್ದ ಎರಡೂವರೆ ಕಿಲೋ ಗಾಂಜಾ ವಶಪಡಿಸಿದ ಪ್ರಕರಣದಲ್ಲಿ ಆರೋಪಿಗಳಿಗೆ ನ್ಯಾಯಾಲಯ ಎರಡು ವರ್ಷ ಕಠಿಣ ಸಜೆ ಹಾಗೂ 30,000 ರೂ. ದಂಡ ವಿಧಿಸಿದೆ. ಕಣ್ಣೂರು ಮಟ್ಟನ್ನೂರಿನ ವಾಯಂತೋಡ್ ರಫ್ಶಾನ ಕ್ವಾರ್ಟರ್ಸ್‌ನಲ್ಲಿ ವಾಸಿಸುವ ರನೀಸ್ (36), ಮಟ್ಟನ್ನೂರು ಇಲ್ಲಮೂಲ ರುಮೈಸ ಮಂಜಿಲ್‌ನ ಮಹ್‌ರೂಫ್ (36) ಎಂಬಿವರಿಗೆ ಕಾಸರಗೋಡು ಅಡಿಶನಲ್ ಡಿಸ್ಟ್ರಿಕ್ಟ್ ಆಂಡ್ ಸೆಷನ್ಸ್ ನ್ಯಾಯಾಲಯ (ಎರಡು)ದ ನ್ಯಾಯಾಧೀಶೆ ಕೆ. ಪ್ರಿಯ ಈ ಶಿಕ್ಷೆ ವಿಧಿಸಿದ್ದಾರೆ. ದಂಡ ಪಾವತಿಸದಿದ್ದಲ್ಲಿ ಆರೋಪಿಗಳು ಮೂರು ತಿಂಗಳು ಹೆಚ್ಚುವರಿ ಶಿಕ್ಷೆ …

ಪೋಕ್ಸೋ ಪ್ರಕರಣ: 9 ವರ್ಷದ ಬಳಿಕ ಆರೋಪಿ ಸೆರೆ

ಕಾಸರಗೋಡು: ಪ್ರಾಯ ಪೂರ್ತಿಯಾಗದ ಬಾಲಕನಿಗೆ ಸಲಿಂಗರತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯನ್ನು 9 ವರ್ಷಗಳ ಬಳಿಕ ವಿದ್ಯಾನಗರ ಠಾಣೆ ಇನ್‌ಸ್ಪೆಕ್ಟರ್ ಕೆ.ಪಿ. ಶೈನ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಕಣ್ಣಾಪುರ ದೇಳಿ ಜಂಕ್ಷನ್‌ನ ಮುಬಾಶಿರ್ ಮಂಜಿಲ್‌ನ ಎಂ.ಎಂ. ಮುಹಮ್ಮದ್ ಮುಬಾಶಿರ್ (29) ಬಂಧಿತ ಆರೋಪಿ. ಪೋಕ್ಸೋ ಪ್ರಕರಣದಲ್ಲಿ ಸಿಲುಕಿಕೊಂಡ ಬಳಿಕ ಈತ ವಿದೇಶದಲ್ಲಿದ್ದನೆಂದೂ ಬಳಿಕ ಅಲ್ಲಿಂದ ಊರಿಗೆ ಹಿಂತಿರುಗಿದ ನಂತರ ಆತನನ್ನು ಬಂಧಿಸಲಾಗಿದೆ ಯೆಂದು ಪೊಲೀಸರು ತಿಳಿಸಿದ್ದಾರೆ. ಈ ಪೋಕ್ಸೋ ಪ್ರಕರಣದಲ್ಲಿ ಒಟ್ಟು 7 ಮಂದಿ  ಆರೋಪಿಗಳಿದ್ದು …

ರಾಜ್ಯ ಸ್ಥಳೀಯಾಡಳಿತ ಸಂಸ್ಥೆ ಚುನಾವಣಾ ಕಾವಿನಲ್ಲಿ: ಕಾಸರಗೋಡಿನಲ್ಲಿ ಡಿ. 11ರಂದು ಮತದಾನ: ಮತ ಎಣಿಕೆ ಡಿ. 13ರಂದು

ತಿರುವನಂತಪುರ: ರಾಜ್ಯ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣಾ ದಿನಾಂಕವನ್ನು ರಾಜ್ಯ ಚುನಾವಣಾಧಿಕಾರಿ ಎ. ಶಾಜಹಾನ್ ನಿನ್ನೆ ವಿದ್ಯುಕ್ತವಾಗಿ ಘೋಷಿಸಿರುವ ಬೆನ್ನಲ್ಲೇ ರಾಜ್ಯ ಚುನಾವಣಾ ಕಾವಿನತ್ತ ಸಾಗತೊಡಗಿದೆ. ಡಿಸೆಂಬರ್ 9 ಮತ್ತು 11 ಎಂಬೀ ಎರಡು ಹಂತಗಳಲ್ಲಾಗಿ ಮತದಾನ ನಡೆಯಲಿದೆ. ಡಿಸೆಂಬರ್ 13ರಂದು ಮತ ಎಣಿಕೆ ನಡೆಯಲಿದೆ. ಬೆಳಿಗ್ಗೆ 7ರಿಂದ ಸಂಜೆ 6ರ ತನಕ ಮತದಾನದ ಸಮಯ ನಿಗದಿಪಡಿಸ ಲಾಗಿದ. ಪ್ರಥಮ ಹಂತದಲ್ಲಿ ಡಿ. 9ರಂದು ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೋಟ್ಟಯಂ, ಇಡುಕ್ಕಿ ಮತ್ತು ದ್ವಿತೀಯ ಹಂತದಲ್ಲಿ ಡಿ.11 …